Homeಕರ್ನಾಟಕವರುಣಾ: ಸೋಮಣ್ಣನವರಿಗೆ ಘೇರಾವ್, ಸಿದ್ದರಾಮಯ್ಯನವರಿಗೆ ಜೈಕಾರ

ವರುಣಾ: ಸೋಮಣ್ಣನವರಿಗೆ ಘೇರಾವ್, ಸಿದ್ದರಾಮಯ್ಯನವರಿಗೆ ಜೈಕಾರ

- Advertisement -
- Advertisement -

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಐದು ದಿನಗಳ ಕಾಲ ಪ್ರಚಾರ ಹಮ್ಮಿಕೊಂಡಿದ್ದು, ಮೊದಲ ದಿನವೇ ಪ್ರತಿಭಟನೆಯನ್ನು ಎದುರಿಸಿದ್ದಾರೆ.

ಕೆಲವು ಯುವಕರು ಸಿದ್ದರಾಮಯ್ಯನವರಿಗೆ ಜೈಕಾರ ಕೂಗಿ, ಬಿಜೆಪಿಗೆ ಧಿಕ್ಕಾರ ಎನ್ನುತ್ತಾ ಸೋಮಣ್ಣನವರಿಗೆ ಘೇರಾವ್ ಹಾಕಿರುವ ಘಟನೆ ಕ್ಷೇತ್ರದ ಭುಗತಹಳ್ಳಿಯಲ್ಲಿ ನಡೆದಿದೆ.

ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಭಾಷಣ ಮಾಡುತ್ತಿದ್ದ ವೇಳೆ ಯುವಕನೋರ್ವ, ಸಚಿವ ಸೋಮಣ್ಣ ಅವರಿಗೆ ಪ್ರಶ್ನೆ ಕೇಳಿದ್ದಾನೆ. ಭಾಷಣ ಮುಗಿಯುವವರೆಗೂ ಕಾಯುವಂತೆ ಸೋಮಣ್ಣ ಸೂಚನೆ ನೀಡಿದ್ದರು. ಬಳಿಕ ಸೋಮಣ್ಣನವರ ಭಾಷಣ ಮುಗಿಯುತ್ತಿದ್ದಂತೆ ಸಿದ್ದರಾಮಯ್ಯ ಪರ ಘೋಷಣೆ ಕೂಗಲಾಗಿದೆ. ಮತ್ತೊಂದು ಯುವಕರ ಗುಂಪು ಬಿಜೆಪಿ ಮತ್ತು ಸೋಮಣ್ಣನವರ ಪರ ಘೋಷಣೆ ಕೂಗಿದೆ. ಹೀಗಾಗಿ ಭುಗತಹಳ್ಳಿಯಲ್ಲಿ ಪ್ರಚಾರವನ್ನು ಕೈಬಿಟ್ಟು ಸೋಮಣ್ಣನವರು ಬೇರೊಂದು ಗ್ರಾಮಕ್ಕೆ ತೆರಳಿದ್ದಾರೆ.

ವರುಣಾ ವಿಧಾನಸಭಾ ಕ್ಷೇತ್ರವು ರಾಜ್ಯದ ಗಮನ ಸೆಳೆದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ವಸತಿ ಸಚಿವ ವಿ.ಸೋಮಣ್ಣನವರನ್ನು ಬಿಜೆಪಿ ಕಣಕ್ಕಿಳಿಸಿದೆ. ಹೀಗಾಗಿ ಇಬ್ಬರು ನಾಯಕರು ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಜೊತೆಗೆ ರಾಜಕಾರಣಿಗಳು ಜನರ ಆಕ್ರೋಶಕ್ಕೂ ಗುರಿಯಾಗುತ್ತಿದ್ದಾರೆ.

ಈ ಹಿಂದೆ ಏಪ್ರಿಲ್ 18ರಂದು ಸಹ ಸೋಮಣ್ಣ ವರುಣಾ ಕ್ಷೇತ್ರದ ಲಲಿತಾದ್ರಿಪುರದಲ್ಲಿ ಪ್ರಚಾರಕ್ಕೆ ಬಂದಿದ್ದ ವೇಳೆ ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದರು. ಕ್ಷೇತ್ರದಲ್ಲಿ ಏನು ಅಭಿವೃದ್ಧಿ ಮಾಡಿದ್ದೀರಿ ಎಂದು ಮತ ಕೇಳಲು ಬಂದಿದ್ದೀರಿ ಎಂದು ಪ್ರಶ್ನಿಸಿ ಗಲಾಟೆ ಮಾಡಿದ್ದರು. ಮೈಸೂರು ಕೊಡಗು ಬಿಜೆಪಿ ಸಂಸದ ಸಂಸದ ಪ್ರತಾಪ್ ಸಿಂಹ ಅವರಿಗೂ ಪ್ರತಿಭಟನೆಯ ಬಿಸಿ ತಟ್ಟಿತ್ತು. ಯುವಕನೋರ್ವ ತರಾಟೆಗೆ ತೆಗೆದುಕೊಂಡಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್ ಆಗಿತ್ತು.

ಗುರುವಾರ ಸಂಸದ ಪ್ರತಾಪ್ ಸಿಂಹ್ ಅವರು ಕುಪ್ಯ ಗ್ರಾಮದಲ್ಲಿ ಪ್ರಚಾರಕ್ಕೆ ತೆರಳಿದ್ದರು. ಈ ವೇಳೆ ಗ್ರಾಮಸ್ಥರು ಅವರಿಗೆ ಪ್ರಶ್ನೆಗಳ ಸುರಿಮಳೆಗೈದಿದ್ದರು. ಅವರ ಪ್ರಶ್ನೆಗಳಿಗೆ ಉತ್ತರ ನೀಡಲಾಗದ ಪ್ರತಾಪ ಸಿಂಹ ಕಕ್ಕಾಬಿಕ್ಕಿಯಾಗಿ ನಿಂತಿರುವ ವಿಡಿಯೋ, ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ.

”ನಾವು ಬಂದಿರುವುದೇ ಸಂವಿಧಾನ ಬದಲಾಯಿಸುವುದಕ್ಕೆ ಎಂದು ಬಿಜೆಪಿಯವರು ಹೇಳಿದ್ದೀರಿ. ಸಂವಿಧಾನ ರಚಿಸಿದ ಅಂಬೇಡ್ಕರ್ ಅಭಿಮಾನಿಗಳಾದ ನಾವು ನಿಮ್ಮನ್ನು ಹೇಗೆ ಬೆಂಬಲಿಸುವುದು?” ಎಂದು ಗ್ರಾಮಸ್ಥರು ಕೇಳಿದ್ದರು.

”ಡಾ.ಎಚ್.ಸಿ.ಮಹದೇವಪ್ಪ ಅವರಿಗೆ ನಿಮ್ಮದೇ ಸರ್ಕಾರವಿದ್ದಾಗ ರಸ್ತೆರಾಜ ಎಂದು ಬಿರುದು ಕೊಟ್ಟಿದ್ರಿ. ಈಗ ಮೈಸೂರು- ಬೆಂಗಳೂರು ದಶಪಥ ಹೆದ್ದಾರಿ ನಿರ್ಮಾಣವಾದ ಮೇಲೆ ಅವರ ವಿರುದ್ಧವೇ ಆರೋಪ ಮಾಡುತ್ತಿದ್ದೀರಿ ಇದು ಸರಿಯೇ?” ಎಂದು ಕೇಳಿ ತರಾಟೆಗೆ ತೆಗೆದುಕೊಂಡಿದ್ದರು.

ಇದನ್ನೂ ಓದಿರಿ: ‘ಲಿಂಗಾಯತ ಸಿಎಂ’ ಪ್ರಸ್ತಾಪ ತಿರಸ್ಕರಿಸಿದ ಅಮಿತ್ ಶಾ

”ಸಂಸದ ವಿ.ಶ್ರೀನಿವಾಸ ಪ್ರಸಾದ್ ಈವರೆಗೂ ನಮ್ಮೂರಿಗೆ ಬಂದೇ ಇಲ್ಲ” ಎಂದೂ ದೂರಿದ್ದರು.

ಪ್ರತಾಪ್ ಸಿಂಹ ಅವರು ಈ ಹಿಂದೆ ಸಿದ್ದರಾಮಯ್ಯ ವಿರುದ್ಧ ನೀಡಿದ್ದ ಹೇಳಿಕೆಗಳ ಬಗ್ಗೆಯೇ ಪ್ರಶ್ನೆ ಮಾಡಿದ ಗ್ರಾಮಸ್ಥರು, ”ಸಿದ್ದರಾಮಯ್ಯ ಮೈಸೂರಿಗೆ ನೀಡಿರುವ ಕೊಡುಗೆ ಏನು ಎಂದೆಲ್ಲಾ ಕೇಳಿದ್ದೀರಿ. ಅವರ ಪಕ್ಕ ಹೋಗಿ ಕುಳಿತುಕೊಳ್ಳಿ ಆಗ ಎಲ್ಲವೂ ನಿಮಗೆ ಗೊತ್ತಾಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

”ಅಕ್ಕಿ ಮೋದಿಯದು, ಚೀಲ ಸಿದ್ದರಾಮಯ್ಯ ಅವರದ್ದು ಎಂದು ಆರೋಪಿಸುತ್ತೀರಲ್ಲಾ ನೀವೇನು ಕೊಡುಗೆ ಕೊಟ್ಟಿದ್ದೀರಿ? ನಿಮ್ಮ ಸರ್ಕಾರದಲ್ಲಿ ಪ್ರತಿ ವ್ಯಕ್ತಿಗೆ 10 ಕೆ.ಜಿ. ಅಕ್ಕಿ ಕೊಡುತ್ತಿಲ್ಲವೇಕೆ? ಅಡುಗೆ ಅನಿಲ ಸಿಲಿಂಡರ್ ಬೆಲೆ ಇಷ್ಟೊಂದು ಜಾಸ್ತಿಯಾಗಿದೆಯಲ್ಲ ಏಕೆ?” ಎಂದು ಪ್ರಶ್ನಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...