Homeಕರ್ನಾಟಕವರುಣಾ: ಸೋಮಣ್ಣನವರಿಗೆ ಘೇರಾವ್, ಸಿದ್ದರಾಮಯ್ಯನವರಿಗೆ ಜೈಕಾರ

ವರುಣಾ: ಸೋಮಣ್ಣನವರಿಗೆ ಘೇರಾವ್, ಸಿದ್ದರಾಮಯ್ಯನವರಿಗೆ ಜೈಕಾರ

- Advertisement -
- Advertisement -

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಐದು ದಿನಗಳ ಕಾಲ ಪ್ರಚಾರ ಹಮ್ಮಿಕೊಂಡಿದ್ದು, ಮೊದಲ ದಿನವೇ ಪ್ರತಿಭಟನೆಯನ್ನು ಎದುರಿಸಿದ್ದಾರೆ.

ಕೆಲವು ಯುವಕರು ಸಿದ್ದರಾಮಯ್ಯನವರಿಗೆ ಜೈಕಾರ ಕೂಗಿ, ಬಿಜೆಪಿಗೆ ಧಿಕ್ಕಾರ ಎನ್ನುತ್ತಾ ಸೋಮಣ್ಣನವರಿಗೆ ಘೇರಾವ್ ಹಾಕಿರುವ ಘಟನೆ ಕ್ಷೇತ್ರದ ಭುಗತಹಳ್ಳಿಯಲ್ಲಿ ನಡೆದಿದೆ.

ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಭಾಷಣ ಮಾಡುತ್ತಿದ್ದ ವೇಳೆ ಯುವಕನೋರ್ವ, ಸಚಿವ ಸೋಮಣ್ಣ ಅವರಿಗೆ ಪ್ರಶ್ನೆ ಕೇಳಿದ್ದಾನೆ. ಭಾಷಣ ಮುಗಿಯುವವರೆಗೂ ಕಾಯುವಂತೆ ಸೋಮಣ್ಣ ಸೂಚನೆ ನೀಡಿದ್ದರು. ಬಳಿಕ ಸೋಮಣ್ಣನವರ ಭಾಷಣ ಮುಗಿಯುತ್ತಿದ್ದಂತೆ ಸಿದ್ದರಾಮಯ್ಯ ಪರ ಘೋಷಣೆ ಕೂಗಲಾಗಿದೆ. ಮತ್ತೊಂದು ಯುವಕರ ಗುಂಪು ಬಿಜೆಪಿ ಮತ್ತು ಸೋಮಣ್ಣನವರ ಪರ ಘೋಷಣೆ ಕೂಗಿದೆ. ಹೀಗಾಗಿ ಭುಗತಹಳ್ಳಿಯಲ್ಲಿ ಪ್ರಚಾರವನ್ನು ಕೈಬಿಟ್ಟು ಸೋಮಣ್ಣನವರು ಬೇರೊಂದು ಗ್ರಾಮಕ್ಕೆ ತೆರಳಿದ್ದಾರೆ.

ವರುಣಾ ವಿಧಾನಸಭಾ ಕ್ಷೇತ್ರವು ರಾಜ್ಯದ ಗಮನ ಸೆಳೆದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ವಸತಿ ಸಚಿವ ವಿ.ಸೋಮಣ್ಣನವರನ್ನು ಬಿಜೆಪಿ ಕಣಕ್ಕಿಳಿಸಿದೆ. ಹೀಗಾಗಿ ಇಬ್ಬರು ನಾಯಕರು ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಜೊತೆಗೆ ರಾಜಕಾರಣಿಗಳು ಜನರ ಆಕ್ರೋಶಕ್ಕೂ ಗುರಿಯಾಗುತ್ತಿದ್ದಾರೆ.

ಈ ಹಿಂದೆ ಏಪ್ರಿಲ್ 18ರಂದು ಸಹ ಸೋಮಣ್ಣ ವರುಣಾ ಕ್ಷೇತ್ರದ ಲಲಿತಾದ್ರಿಪುರದಲ್ಲಿ ಪ್ರಚಾರಕ್ಕೆ ಬಂದಿದ್ದ ವೇಳೆ ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದರು. ಕ್ಷೇತ್ರದಲ್ಲಿ ಏನು ಅಭಿವೃದ್ಧಿ ಮಾಡಿದ್ದೀರಿ ಎಂದು ಮತ ಕೇಳಲು ಬಂದಿದ್ದೀರಿ ಎಂದು ಪ್ರಶ್ನಿಸಿ ಗಲಾಟೆ ಮಾಡಿದ್ದರು. ಮೈಸೂರು ಕೊಡಗು ಬಿಜೆಪಿ ಸಂಸದ ಸಂಸದ ಪ್ರತಾಪ್ ಸಿಂಹ ಅವರಿಗೂ ಪ್ರತಿಭಟನೆಯ ಬಿಸಿ ತಟ್ಟಿತ್ತು. ಯುವಕನೋರ್ವ ತರಾಟೆಗೆ ತೆಗೆದುಕೊಂಡಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್ ಆಗಿತ್ತು.

ಗುರುವಾರ ಸಂಸದ ಪ್ರತಾಪ್ ಸಿಂಹ್ ಅವರು ಕುಪ್ಯ ಗ್ರಾಮದಲ್ಲಿ ಪ್ರಚಾರಕ್ಕೆ ತೆರಳಿದ್ದರು. ಈ ವೇಳೆ ಗ್ರಾಮಸ್ಥರು ಅವರಿಗೆ ಪ್ರಶ್ನೆಗಳ ಸುರಿಮಳೆಗೈದಿದ್ದರು. ಅವರ ಪ್ರಶ್ನೆಗಳಿಗೆ ಉತ್ತರ ನೀಡಲಾಗದ ಪ್ರತಾಪ ಸಿಂಹ ಕಕ್ಕಾಬಿಕ್ಕಿಯಾಗಿ ನಿಂತಿರುವ ವಿಡಿಯೋ, ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ.

”ನಾವು ಬಂದಿರುವುದೇ ಸಂವಿಧಾನ ಬದಲಾಯಿಸುವುದಕ್ಕೆ ಎಂದು ಬಿಜೆಪಿಯವರು ಹೇಳಿದ್ದೀರಿ. ಸಂವಿಧಾನ ರಚಿಸಿದ ಅಂಬೇಡ್ಕರ್ ಅಭಿಮಾನಿಗಳಾದ ನಾವು ನಿಮ್ಮನ್ನು ಹೇಗೆ ಬೆಂಬಲಿಸುವುದು?” ಎಂದು ಗ್ರಾಮಸ್ಥರು ಕೇಳಿದ್ದರು.

”ಡಾ.ಎಚ್.ಸಿ.ಮಹದೇವಪ್ಪ ಅವರಿಗೆ ನಿಮ್ಮದೇ ಸರ್ಕಾರವಿದ್ದಾಗ ರಸ್ತೆರಾಜ ಎಂದು ಬಿರುದು ಕೊಟ್ಟಿದ್ರಿ. ಈಗ ಮೈಸೂರು- ಬೆಂಗಳೂರು ದಶಪಥ ಹೆದ್ದಾರಿ ನಿರ್ಮಾಣವಾದ ಮೇಲೆ ಅವರ ವಿರುದ್ಧವೇ ಆರೋಪ ಮಾಡುತ್ತಿದ್ದೀರಿ ಇದು ಸರಿಯೇ?” ಎಂದು ಕೇಳಿ ತರಾಟೆಗೆ ತೆಗೆದುಕೊಂಡಿದ್ದರು.

ಇದನ್ನೂ ಓದಿರಿ: ‘ಲಿಂಗಾಯತ ಸಿಎಂ’ ಪ್ರಸ್ತಾಪ ತಿರಸ್ಕರಿಸಿದ ಅಮಿತ್ ಶಾ

”ಸಂಸದ ವಿ.ಶ್ರೀನಿವಾಸ ಪ್ರಸಾದ್ ಈವರೆಗೂ ನಮ್ಮೂರಿಗೆ ಬಂದೇ ಇಲ್ಲ” ಎಂದೂ ದೂರಿದ್ದರು.

ಪ್ರತಾಪ್ ಸಿಂಹ ಅವರು ಈ ಹಿಂದೆ ಸಿದ್ದರಾಮಯ್ಯ ವಿರುದ್ಧ ನೀಡಿದ್ದ ಹೇಳಿಕೆಗಳ ಬಗ್ಗೆಯೇ ಪ್ರಶ್ನೆ ಮಾಡಿದ ಗ್ರಾಮಸ್ಥರು, ”ಸಿದ್ದರಾಮಯ್ಯ ಮೈಸೂರಿಗೆ ನೀಡಿರುವ ಕೊಡುಗೆ ಏನು ಎಂದೆಲ್ಲಾ ಕೇಳಿದ್ದೀರಿ. ಅವರ ಪಕ್ಕ ಹೋಗಿ ಕುಳಿತುಕೊಳ್ಳಿ ಆಗ ಎಲ್ಲವೂ ನಿಮಗೆ ಗೊತ್ತಾಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

”ಅಕ್ಕಿ ಮೋದಿಯದು, ಚೀಲ ಸಿದ್ದರಾಮಯ್ಯ ಅವರದ್ದು ಎಂದು ಆರೋಪಿಸುತ್ತೀರಲ್ಲಾ ನೀವೇನು ಕೊಡುಗೆ ಕೊಟ್ಟಿದ್ದೀರಿ? ನಿಮ್ಮ ಸರ್ಕಾರದಲ್ಲಿ ಪ್ರತಿ ವ್ಯಕ್ತಿಗೆ 10 ಕೆ.ಜಿ. ಅಕ್ಕಿ ಕೊಡುತ್ತಿಲ್ಲವೇಕೆ? ಅಡುಗೆ ಅನಿಲ ಸಿಲಿಂಡರ್ ಬೆಲೆ ಇಷ್ಟೊಂದು ಜಾಸ್ತಿಯಾಗಿದೆಯಲ್ಲ ಏಕೆ?” ಎಂದು ಪ್ರಶ್ನಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...