Homeಕರ್ನಾಟಕವರುಣಾ: ಸೋಮಣ್ಣನವರಿಗೆ ಘೇರಾವ್, ಸಿದ್ದರಾಮಯ್ಯನವರಿಗೆ ಜೈಕಾರ

ವರುಣಾ: ಸೋಮಣ್ಣನವರಿಗೆ ಘೇರಾವ್, ಸಿದ್ದರಾಮಯ್ಯನವರಿಗೆ ಜೈಕಾರ

- Advertisement -
- Advertisement -

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಐದು ದಿನಗಳ ಕಾಲ ಪ್ರಚಾರ ಹಮ್ಮಿಕೊಂಡಿದ್ದು, ಮೊದಲ ದಿನವೇ ಪ್ರತಿಭಟನೆಯನ್ನು ಎದುರಿಸಿದ್ದಾರೆ.

ಕೆಲವು ಯುವಕರು ಸಿದ್ದರಾಮಯ್ಯನವರಿಗೆ ಜೈಕಾರ ಕೂಗಿ, ಬಿಜೆಪಿಗೆ ಧಿಕ್ಕಾರ ಎನ್ನುತ್ತಾ ಸೋಮಣ್ಣನವರಿಗೆ ಘೇರಾವ್ ಹಾಕಿರುವ ಘಟನೆ ಕ್ಷೇತ್ರದ ಭುಗತಹಳ್ಳಿಯಲ್ಲಿ ನಡೆದಿದೆ.

ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಭಾಷಣ ಮಾಡುತ್ತಿದ್ದ ವೇಳೆ ಯುವಕನೋರ್ವ, ಸಚಿವ ಸೋಮಣ್ಣ ಅವರಿಗೆ ಪ್ರಶ್ನೆ ಕೇಳಿದ್ದಾನೆ. ಭಾಷಣ ಮುಗಿಯುವವರೆಗೂ ಕಾಯುವಂತೆ ಸೋಮಣ್ಣ ಸೂಚನೆ ನೀಡಿದ್ದರು. ಬಳಿಕ ಸೋಮಣ್ಣನವರ ಭಾಷಣ ಮುಗಿಯುತ್ತಿದ್ದಂತೆ ಸಿದ್ದರಾಮಯ್ಯ ಪರ ಘೋಷಣೆ ಕೂಗಲಾಗಿದೆ. ಮತ್ತೊಂದು ಯುವಕರ ಗುಂಪು ಬಿಜೆಪಿ ಮತ್ತು ಸೋಮಣ್ಣನವರ ಪರ ಘೋಷಣೆ ಕೂಗಿದೆ. ಹೀಗಾಗಿ ಭುಗತಹಳ್ಳಿಯಲ್ಲಿ ಪ್ರಚಾರವನ್ನು ಕೈಬಿಟ್ಟು ಸೋಮಣ್ಣನವರು ಬೇರೊಂದು ಗ್ರಾಮಕ್ಕೆ ತೆರಳಿದ್ದಾರೆ.

ವರುಣಾ ವಿಧಾನಸಭಾ ಕ್ಷೇತ್ರವು ರಾಜ್ಯದ ಗಮನ ಸೆಳೆದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ವಸತಿ ಸಚಿವ ವಿ.ಸೋಮಣ್ಣನವರನ್ನು ಬಿಜೆಪಿ ಕಣಕ್ಕಿಳಿಸಿದೆ. ಹೀಗಾಗಿ ಇಬ್ಬರು ನಾಯಕರು ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಜೊತೆಗೆ ರಾಜಕಾರಣಿಗಳು ಜನರ ಆಕ್ರೋಶಕ್ಕೂ ಗುರಿಯಾಗುತ್ತಿದ್ದಾರೆ.

ಈ ಹಿಂದೆ ಏಪ್ರಿಲ್ 18ರಂದು ಸಹ ಸೋಮಣ್ಣ ವರುಣಾ ಕ್ಷೇತ್ರದ ಲಲಿತಾದ್ರಿಪುರದಲ್ಲಿ ಪ್ರಚಾರಕ್ಕೆ ಬಂದಿದ್ದ ವೇಳೆ ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದರು. ಕ್ಷೇತ್ರದಲ್ಲಿ ಏನು ಅಭಿವೃದ್ಧಿ ಮಾಡಿದ್ದೀರಿ ಎಂದು ಮತ ಕೇಳಲು ಬಂದಿದ್ದೀರಿ ಎಂದು ಪ್ರಶ್ನಿಸಿ ಗಲಾಟೆ ಮಾಡಿದ್ದರು. ಮೈಸೂರು ಕೊಡಗು ಬಿಜೆಪಿ ಸಂಸದ ಸಂಸದ ಪ್ರತಾಪ್ ಸಿಂಹ ಅವರಿಗೂ ಪ್ರತಿಭಟನೆಯ ಬಿಸಿ ತಟ್ಟಿತ್ತು. ಯುವಕನೋರ್ವ ತರಾಟೆಗೆ ತೆಗೆದುಕೊಂಡಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್ ಆಗಿತ್ತು.

ಗುರುವಾರ ಸಂಸದ ಪ್ರತಾಪ್ ಸಿಂಹ್ ಅವರು ಕುಪ್ಯ ಗ್ರಾಮದಲ್ಲಿ ಪ್ರಚಾರಕ್ಕೆ ತೆರಳಿದ್ದರು. ಈ ವೇಳೆ ಗ್ರಾಮಸ್ಥರು ಅವರಿಗೆ ಪ್ರಶ್ನೆಗಳ ಸುರಿಮಳೆಗೈದಿದ್ದರು. ಅವರ ಪ್ರಶ್ನೆಗಳಿಗೆ ಉತ್ತರ ನೀಡಲಾಗದ ಪ್ರತಾಪ ಸಿಂಹ ಕಕ್ಕಾಬಿಕ್ಕಿಯಾಗಿ ನಿಂತಿರುವ ವಿಡಿಯೋ, ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ.

”ನಾವು ಬಂದಿರುವುದೇ ಸಂವಿಧಾನ ಬದಲಾಯಿಸುವುದಕ್ಕೆ ಎಂದು ಬಿಜೆಪಿಯವರು ಹೇಳಿದ್ದೀರಿ. ಸಂವಿಧಾನ ರಚಿಸಿದ ಅಂಬೇಡ್ಕರ್ ಅಭಿಮಾನಿಗಳಾದ ನಾವು ನಿಮ್ಮನ್ನು ಹೇಗೆ ಬೆಂಬಲಿಸುವುದು?” ಎಂದು ಗ್ರಾಮಸ್ಥರು ಕೇಳಿದ್ದರು.

”ಡಾ.ಎಚ್.ಸಿ.ಮಹದೇವಪ್ಪ ಅವರಿಗೆ ನಿಮ್ಮದೇ ಸರ್ಕಾರವಿದ್ದಾಗ ರಸ್ತೆರಾಜ ಎಂದು ಬಿರುದು ಕೊಟ್ಟಿದ್ರಿ. ಈಗ ಮೈಸೂರು- ಬೆಂಗಳೂರು ದಶಪಥ ಹೆದ್ದಾರಿ ನಿರ್ಮಾಣವಾದ ಮೇಲೆ ಅವರ ವಿರುದ್ಧವೇ ಆರೋಪ ಮಾಡುತ್ತಿದ್ದೀರಿ ಇದು ಸರಿಯೇ?” ಎಂದು ಕೇಳಿ ತರಾಟೆಗೆ ತೆಗೆದುಕೊಂಡಿದ್ದರು.

ಇದನ್ನೂ ಓದಿರಿ: ‘ಲಿಂಗಾಯತ ಸಿಎಂ’ ಪ್ರಸ್ತಾಪ ತಿರಸ್ಕರಿಸಿದ ಅಮಿತ್ ಶಾ

”ಸಂಸದ ವಿ.ಶ್ರೀನಿವಾಸ ಪ್ರಸಾದ್ ಈವರೆಗೂ ನಮ್ಮೂರಿಗೆ ಬಂದೇ ಇಲ್ಲ” ಎಂದೂ ದೂರಿದ್ದರು.

ಪ್ರತಾಪ್ ಸಿಂಹ ಅವರು ಈ ಹಿಂದೆ ಸಿದ್ದರಾಮಯ್ಯ ವಿರುದ್ಧ ನೀಡಿದ್ದ ಹೇಳಿಕೆಗಳ ಬಗ್ಗೆಯೇ ಪ್ರಶ್ನೆ ಮಾಡಿದ ಗ್ರಾಮಸ್ಥರು, ”ಸಿದ್ದರಾಮಯ್ಯ ಮೈಸೂರಿಗೆ ನೀಡಿರುವ ಕೊಡುಗೆ ಏನು ಎಂದೆಲ್ಲಾ ಕೇಳಿದ್ದೀರಿ. ಅವರ ಪಕ್ಕ ಹೋಗಿ ಕುಳಿತುಕೊಳ್ಳಿ ಆಗ ಎಲ್ಲವೂ ನಿಮಗೆ ಗೊತ್ತಾಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

”ಅಕ್ಕಿ ಮೋದಿಯದು, ಚೀಲ ಸಿದ್ದರಾಮಯ್ಯ ಅವರದ್ದು ಎಂದು ಆರೋಪಿಸುತ್ತೀರಲ್ಲಾ ನೀವೇನು ಕೊಡುಗೆ ಕೊಟ್ಟಿದ್ದೀರಿ? ನಿಮ್ಮ ಸರ್ಕಾರದಲ್ಲಿ ಪ್ರತಿ ವ್ಯಕ್ತಿಗೆ 10 ಕೆ.ಜಿ. ಅಕ್ಕಿ ಕೊಡುತ್ತಿಲ್ಲವೇಕೆ? ಅಡುಗೆ ಅನಿಲ ಸಿಲಿಂಡರ್ ಬೆಲೆ ಇಷ್ಟೊಂದು ಜಾಸ್ತಿಯಾಗಿದೆಯಲ್ಲ ಏಕೆ?” ಎಂದು ಪ್ರಶ್ನಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...