Homeಕರ್ನಾಟಕವರುಣಾ: ಗೆಲುವಿನತ್ತ ಸಿದ್ದರಾಮಯ್ಯ; ಸೋಮಣ್ಣನಿಗೆ ಮುಖಭಂಗ

ವರುಣಾ: ಗೆಲುವಿನತ್ತ ಸಿದ್ದರಾಮಯ್ಯ; ಸೋಮಣ್ಣನಿಗೆ ಮುಖಭಂಗ

- Advertisement -
- Advertisement -

ಹೈವೋಲ್ಟೇಜ್‌ ಕ್ಷೇತ್ರಗಳಲ್ಲಿ ಒಂದಾದ ವರುಣಾ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಅವರು 8,000 ಮತಗಳ ಮುನ್ನಡೆ ಸಾಧಿಸಿ ಗೆಲುವಿನತ್ತ ದಾಪುಗಾಲು ಇಟ್ಟಿದ್ದಾರೆ.

ವರುಣಾ ಮತ್ತು ಚಾಮರಾಜನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಕಣಕ್ಕಿಳಿದಿದ್ದ ವಿ.ಸೋಮಣ್ಣನವರಿಗೆ ಎರಡು ಕ್ಷೇತ್ರದಲ್ಲೂ ಮುಖಭಂಗವಾಗಿದೆ. ಎರಡರಲ್ಲೂ ಹಿನ್ನಡೆ ಅನುಭವಿಸಿದ್ದಾರೆ.

ಲಿಂಗಾಯತ ಮತದಾರರು ಹೆಚ್ಚಿದ್ದಾರೆಂಬ ಕಾರಣಕ್ಕೆ ಎರಡು ಕ್ಷೇತ್ರಗಳಲ್ಲಿ ಸೋಮಣ್ಣನವರನ್ನು ಬಿಜೆಪಿ ಕಣಕ್ಕಿಳಿಸಿತ್ತು. ಆದರೆ ಜಾತಿ ಲೆಕ್ಕಾಚಾರಗಳು ತಲೆಕೆಳಗಾಗಿದ್ದು ಸಿದ್ದರಾಮಯ್ಯನವರು ಕ್ಷೇತ್ರದಲ್ಲಿ ಮಾಡಿರುವ ಕೆಲಸಗಳನ್ನು ವರುಣಾ ಮತದಾರರು ಗುರುತಿಸಿದ್ದಾರೆ. ಚಾಮರಾಜನಗರದಲ್ಲಿ ಪುಟ್ಟರಂಗಶೆಟ್ಟಿಯವರು ತಮ್ಮ ಪ್ರಾಬಲ್ಯವನ್ನು ಮತ್ತೆ ತೋರಿಸಿದ್ದು ಸತತ ನಾಲ್ಕನೇ ಬಾರಿಗೆ ಗೆಲುವಿನತ್ತ ದಾಪುಗಾಲು ಇರಿಸಿದ್ದಾರೆ.

ಸೋಮಣ್ಣನವರು ಕಾಂಗ್ರೆಸ್‌ಗೆ ಸೇರುತ್ತಾರೆಂಬ ಸುದ್ದಿ ಹಬ್ಬಿತ್ತು. ಆದರೆ ಕೊನೆಯಲ್ಲಿ ಬಿಜೆಪಿಯಲ್ಲೇ ಉಳಿದರು. ಪನಿಷ್‌ಮೆಂಟ್‌ ಎಂಬಂತೆ ವರುಣಾ ಮತ್ತು ಚಾಮರಾಜನಗರಕ್ಕೆ ನಿಲ್ಲಿಸಿದ ಬಿಜೆಪಿ ಹೈಕಮಾಂಡ್‌ – ಸೋಮಣ್ಣನವರ ರಾಜಕೀಯಕ್ಕೆ ಮುಳುವಾಗಿದೆ.

ರಾಜ್ಯ ರಾಜಕಾರಣದಲ್ಲಿ ಪ್ರಭಾವಿ ನಾಯಕರಾಗಿ ಬೆಳೆದಿರುವ ಸಿದ್ದರಾಮಯ್ಯನವರನ್ನು ವರುಣಾ ಜನತೆ ಈವರೆಗೆ ಕೈಬಿಟ್ಟಿಲ್ಲ. ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯಷ್ಟೇ ಇಲ್ಲಿ ಸದಾ ಸ್ಪರ್ಧೆ ಏರ್ಪಡುತ್ತಾ ಬಂದಿದೆ. ಜೆಡಿಎಸ್ ಪಕ್ಷ ಇಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ. 2008ರಲ್ಲಿ ನಡೆದ ಮೊದಲ ಚುನಾವಣೆಯಲ್ಲಿ ಬಿಜೆಪಿಗೆ ಹಾರಿದ್ದ ಎಲ್.ರೇವಣ್ಣಸಿದ್ದಯ್ಯ ಅವರು ಸಿದ್ದರಾಮಯ್ಯನವರ ಪ್ರತಿಸ್ಪರ್ಧಿಯಾಗಿದ್ದರು. ಆಡಳಿತ ವರ್ಗದ ಹಿನ್ನೆಲೆಯ ಎಲ್.ರೇವಣ್ಣ ಸಿದ್ದಯ್ಯನವರನ್ನು ಕ್ಷೇತ್ರದ ಜನತೆ ಕೈಹಿಡಿಯಲಿಲ್ಲ. 18,837 ಮತದಂತರದಲ್ಲಿ ಸಿದ್ದರಾಮಯ್ಯ (71,908) ಗೆದ್ದರು. 2013ರ ಚುನಾವಣೆಯ ವೇಳೆಗೆ ಬಿಜೆಪಿ ಒಡೆದುಹೋಗಿತ್ತು. ಯಡಿಯೂರಪ್ಪನವರು ಕೆಜೆಪಿಯನ್ನು ಕಟ್ಟಿದ್ದು ಬಿಜೆಪಿಯ ಮತಗಳ ವಿಭಜನೆಗೆ ಕಾರಣವಾಯಿತು. ಕೆಜೆಪಿಯಿಂದ ಸ್ಪರ್ಧಿಸಿದ್ದ ಕಾಪು ಸಿದ್ದಲಿಂಗಸ್ವಾಮಿ ಅವರು 54,744 ಮತಗಳನ್ನು ಪಡೆದರಷ್ಟೇ. 84,385 ಮತಗಳನ್ನು ಪಡೆದ ಸಿದ್ದರಾಮಯ್ಯ 29,641 ಮತಗಳ ಬೃಹತ್ ಅಂತರದಲ್ಲಿ ಗೆದ್ದು ರಾಜ್ಯದ ಮುಖ್ಯಮಂತ್ರಿಯೂ ಆದರು. 2018ರಲ್ಲಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಗೆದ್ದಿದ್ದರು. ಈ ಚುನಾವಣೆಯಲ್ಲಿ ಸಿದ್ದರಾಮಯ್ಯ ಸ್ವಕ್ಷೇತ್ರಕ್ಕೆ ಮರಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2025 ರ ಏಷ್ಯಾ ಪವರ್ ಇಂಡೆಕ್ಸ್‌: ಮೊದಲೆರಡು ಸ್ಥಾನದಲ್ಲಿ ಅಮೆರಿಕ-ಚೀನಾ, ಭಾರತಕ್ಕೆ ಮೂರನೇ ಶ್ರೇಯಾಂಕ

2025 ರ ಏಷ್ಯಾ ಪವರ್ ಇಂಡೆಕ್ಸ್‌ನಲ್ಲಿ ಭಾರತ ಮೂರನೇ ಶ್ರೇಯಾಂಕವನ್ನು ಪಡೆದುಕೊಂಡಿದೆ. ಆದರೆ, ಯುನೈಟೆಡ್ ಸ್ಟೇಟ್ಸ್-ಚೀನಾ ಕ್ರಮವಾಗಿ ಮೊದಲ ಮತ್ತು ಎರಡನೇ ಸ್ಥಾನವನ್ನು ಪಡೆದುಕೊಂಡಿವೆ ಎಂದು ಜಾಗತಿಕವಾಗಿ ಪ್ರಸಿದ್ಧವಾದ ಚಿಂತಕರ ಚಾವಡಿ ತನ್ನ...

ಸಾಮೂಹಿಕ ಶರಣಾಗತಿ ಘೋಷಿಸಿದ ಎಂಎಂಸಿ-ವಲಯ ಮಾವೋವಾದಿಗಳು; ಭದ್ರತೆ ಒದಗಿಸುವಂತೆ ಮನವಿ

ಮಹಾರಾಷ್ಟ್ರ-ಮಧ್ಯಪ್ರದೇಶ-ಛತ್ತೀಸ್‌ಗಢ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾವೋವಾದಿಗಳು ಜನವರಿ 1, 2026 ರಂದು ಸಾಮೂಹಿಕವಾಗಿ ಶರಣಾಗಲು ಸಿದ್ಧರಿರುವುದಾಗಿ ಘೋಷಿಸಿದ್ದಾರೆ. ಎಂಎಂಸಿ ವಲಯದ ವಕ್ತಾರ ಅನಂತ್ ಹೆಸರಿನಲ್ಲಿ ಹೊರಡಿಸಲಾದ ಪತ್ರದಲ್ಲಿ, ನಮ್ಮ ಗುಂಪು ವೈಯಕ್ತಿಕ ಶರಣಾಗತಿಗಳ ಬದಲಿಗೆ...

ಸಾವರ್ಕರ್ ಮಾನನಷ್ಟ ಮೊಕದ್ದಮೆ ಪ್ರಕರಣ: ಯೂಟ್ಯೂಬ್‌ನಿಂದ ರಾಹುಲ್ ಗಾಂಧಿ ಭಾಷಣ ಪ್ರದರ್ಶನದ ಮನವಿ ತಿರಸ್ಕರಿಸಿದ ಪುಣೆ ನ್ಯಾಯಾಲಯ

ಲಂಡನ್‌ನಲ್ಲಿ ನಡೆದ ಭಾಷಣದಲ್ಲಿ ಬಲಪಂಥೀಯ ನಾಯಕ ವಿನಾಯಕ ಸಾವರ್ಕರ್ ಅವರನ್ನು ಮಾನನಷ್ಟ ಮಾಡಿದ್ದಾರೆ ಎಂಬ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ನಡೆಯುತ್ತಿರುವ ಮಾನನಷ್ಟ ಮೊಕದ್ದಮೆಯ ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ, ಯೂಟ್ಯೂಬ್...

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...