Homeಕರ್ನಾಟಕವರುಣಾ: ಗೆಲುವಿನತ್ತ ಸಿದ್ದರಾಮಯ್ಯ; ಸೋಮಣ್ಣನಿಗೆ ಮುಖಭಂಗ

ವರುಣಾ: ಗೆಲುವಿನತ್ತ ಸಿದ್ದರಾಮಯ್ಯ; ಸೋಮಣ್ಣನಿಗೆ ಮುಖಭಂಗ

- Advertisement -
- Advertisement -

ಹೈವೋಲ್ಟೇಜ್‌ ಕ್ಷೇತ್ರಗಳಲ್ಲಿ ಒಂದಾದ ವರುಣಾ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಅವರು 8,000 ಮತಗಳ ಮುನ್ನಡೆ ಸಾಧಿಸಿ ಗೆಲುವಿನತ್ತ ದಾಪುಗಾಲು ಇಟ್ಟಿದ್ದಾರೆ.

ವರುಣಾ ಮತ್ತು ಚಾಮರಾಜನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಕಣಕ್ಕಿಳಿದಿದ್ದ ವಿ.ಸೋಮಣ್ಣನವರಿಗೆ ಎರಡು ಕ್ಷೇತ್ರದಲ್ಲೂ ಮುಖಭಂಗವಾಗಿದೆ. ಎರಡರಲ್ಲೂ ಹಿನ್ನಡೆ ಅನುಭವಿಸಿದ್ದಾರೆ.

ಲಿಂಗಾಯತ ಮತದಾರರು ಹೆಚ್ಚಿದ್ದಾರೆಂಬ ಕಾರಣಕ್ಕೆ ಎರಡು ಕ್ಷೇತ್ರಗಳಲ್ಲಿ ಸೋಮಣ್ಣನವರನ್ನು ಬಿಜೆಪಿ ಕಣಕ್ಕಿಳಿಸಿತ್ತು. ಆದರೆ ಜಾತಿ ಲೆಕ್ಕಾಚಾರಗಳು ತಲೆಕೆಳಗಾಗಿದ್ದು ಸಿದ್ದರಾಮಯ್ಯನವರು ಕ್ಷೇತ್ರದಲ್ಲಿ ಮಾಡಿರುವ ಕೆಲಸಗಳನ್ನು ವರುಣಾ ಮತದಾರರು ಗುರುತಿಸಿದ್ದಾರೆ. ಚಾಮರಾಜನಗರದಲ್ಲಿ ಪುಟ್ಟರಂಗಶೆಟ್ಟಿಯವರು ತಮ್ಮ ಪ್ರಾಬಲ್ಯವನ್ನು ಮತ್ತೆ ತೋರಿಸಿದ್ದು ಸತತ ನಾಲ್ಕನೇ ಬಾರಿಗೆ ಗೆಲುವಿನತ್ತ ದಾಪುಗಾಲು ಇರಿಸಿದ್ದಾರೆ.

ಸೋಮಣ್ಣನವರು ಕಾಂಗ್ರೆಸ್‌ಗೆ ಸೇರುತ್ತಾರೆಂಬ ಸುದ್ದಿ ಹಬ್ಬಿತ್ತು. ಆದರೆ ಕೊನೆಯಲ್ಲಿ ಬಿಜೆಪಿಯಲ್ಲೇ ಉಳಿದರು. ಪನಿಷ್‌ಮೆಂಟ್‌ ಎಂಬಂತೆ ವರುಣಾ ಮತ್ತು ಚಾಮರಾಜನಗರಕ್ಕೆ ನಿಲ್ಲಿಸಿದ ಬಿಜೆಪಿ ಹೈಕಮಾಂಡ್‌ – ಸೋಮಣ್ಣನವರ ರಾಜಕೀಯಕ್ಕೆ ಮುಳುವಾಗಿದೆ.

ರಾಜ್ಯ ರಾಜಕಾರಣದಲ್ಲಿ ಪ್ರಭಾವಿ ನಾಯಕರಾಗಿ ಬೆಳೆದಿರುವ ಸಿದ್ದರಾಮಯ್ಯನವರನ್ನು ವರುಣಾ ಜನತೆ ಈವರೆಗೆ ಕೈಬಿಟ್ಟಿಲ್ಲ. ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯಷ್ಟೇ ಇಲ್ಲಿ ಸದಾ ಸ್ಪರ್ಧೆ ಏರ್ಪಡುತ್ತಾ ಬಂದಿದೆ. ಜೆಡಿಎಸ್ ಪಕ್ಷ ಇಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ. 2008ರಲ್ಲಿ ನಡೆದ ಮೊದಲ ಚುನಾವಣೆಯಲ್ಲಿ ಬಿಜೆಪಿಗೆ ಹಾರಿದ್ದ ಎಲ್.ರೇವಣ್ಣಸಿದ್ದಯ್ಯ ಅವರು ಸಿದ್ದರಾಮಯ್ಯನವರ ಪ್ರತಿಸ್ಪರ್ಧಿಯಾಗಿದ್ದರು. ಆಡಳಿತ ವರ್ಗದ ಹಿನ್ನೆಲೆಯ ಎಲ್.ರೇವಣ್ಣ ಸಿದ್ದಯ್ಯನವರನ್ನು ಕ್ಷೇತ್ರದ ಜನತೆ ಕೈಹಿಡಿಯಲಿಲ್ಲ. 18,837 ಮತದಂತರದಲ್ಲಿ ಸಿದ್ದರಾಮಯ್ಯ (71,908) ಗೆದ್ದರು. 2013ರ ಚುನಾವಣೆಯ ವೇಳೆಗೆ ಬಿಜೆಪಿ ಒಡೆದುಹೋಗಿತ್ತು. ಯಡಿಯೂರಪ್ಪನವರು ಕೆಜೆಪಿಯನ್ನು ಕಟ್ಟಿದ್ದು ಬಿಜೆಪಿಯ ಮತಗಳ ವಿಭಜನೆಗೆ ಕಾರಣವಾಯಿತು. ಕೆಜೆಪಿಯಿಂದ ಸ್ಪರ್ಧಿಸಿದ್ದ ಕಾಪು ಸಿದ್ದಲಿಂಗಸ್ವಾಮಿ ಅವರು 54,744 ಮತಗಳನ್ನು ಪಡೆದರಷ್ಟೇ. 84,385 ಮತಗಳನ್ನು ಪಡೆದ ಸಿದ್ದರಾಮಯ್ಯ 29,641 ಮತಗಳ ಬೃಹತ್ ಅಂತರದಲ್ಲಿ ಗೆದ್ದು ರಾಜ್ಯದ ಮುಖ್ಯಮಂತ್ರಿಯೂ ಆದರು. 2018ರಲ್ಲಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಗೆದ್ದಿದ್ದರು. ಈ ಚುನಾವಣೆಯಲ್ಲಿ ಸಿದ್ದರಾಮಯ್ಯ ಸ್ವಕ್ಷೇತ್ರಕ್ಕೆ ಮರಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...