Homeಕರ್ನಾಟಕರಾಜ್ಯದಲ್ಲಿ ಮುಂದುವರೆದ ವರುಣಾರ್ಭಟ: ನಾಲ್ವರ ಸಾವು

ರಾಜ್ಯದಲ್ಲಿ ಮುಂದುವರೆದ ವರುಣಾರ್ಭಟ: ನಾಲ್ವರ ಸಾವು

- Advertisement -
- Advertisement -

ರಾಜ್ಯದೆಲ್ಲೆಡೆ ವರುಣಾರ್ಭಟ ಜೋರಾಗಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ. ನೆರೆ ಪರಿಸ್ಥಿತಿ ಉಂಟಾಗಿದೆ ಕೆಲವು ಗ್ರಾಮಗಳು, ರಸ್ತೆಗಳು ಜಲಾವೃತವಾಗಿದ್ದು, ಸೇತುವೆಗಳು ಮುಳುಗಡೆಯಾಗಿವೆ. ಇದರ ಪರಿಣಾಮ ಅನೇಕ ಕಡೆಗಳಲ್ಲಿ ಸಂಪರ್ಕ ಕಡಿತವಾಗಿದೆ.

ಅತಿಯಾದ ಮಳೆಯಿಂದಾಗಿ ಅವಘಡಗಳೂ ಸಂಭವಿಸಿದ್ದು, ಸೋಮವಾರ ರಾಜ್ಯದಲ್ಲಿ ಒಟ್ಟು ನಾಲ್ವರು ಮೃತಪಟ್ಟಿದ್ದಾರೆ. ಒಬ್ಬರು ಜಲಪಾತದಲ್ಲಿ ಕೊಚ್ಚಿ ಹೋಗಿದ್ದಾರೆ ಕೆಲವೆಡೆ ಮಳೆ ನೀರು ಮನೆಗಳಿಗೆ ನುಗ್ಗಿ ಅವಾಂತರ ಸೃತಿಯಾಗಿದೆ. ಇನ್ನೂ ಕೆಲವೆಡೆ ಗುಡ್ಡ ಕುಸಿತ ಸಂಭವಿಸಿದ್ದು, ವಿದ್ಯುತ್‌ ಕಂಬಗಳು ಧರೆಗುರುಳಿ, ವಿದ್ಯುತ್ ವ್ಯತ್ಯಯ ಉಂಟಾಗಿದೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಳ್ಳಾಡಿಯ ಗೋಕುಲ ದಾಸ್‌ ಪ್ರಭು (53) ಸೋಮವಾರ ಕರ್ಕುಂಜೆಯ ತೋಟಿಗೆ ಬಿದ್ದು ಮೃತಪಟ್ಟಿದ್ದಾರೆ. ಹೆಬ್ರಿ ತಾಲೂಕು ಶೇಡಿಮನೆಯ ಬಡಬೈಲು ದರಕಾಶು ಎಂಬಲ್ಲಿ ಬಾಲಕಿ ರಚನಾ (12) ಭಾನುವಾರ ಹೊಳೆಗೆ ಬಿದ್ದು ಮೃತಪಟ್ಟಿದ್ದಾಳೆ.

ಭದ್ರಾವತಿಯ ಶರತ್‌ ಕುಮಾರ್ (23) ಎಂಬುವವರು ಬೈಂದೂರು ತಾಲೂಕಿನ ಕೊಲ್ಲೂರು ಬಳಿಯ ಅರಶಿನಗುಂಡಿ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಕೊಚ್ಚಿ ಹೋಗಿದ್ದಾರೆ. ಬಂಡೆಯ ತುದಿಯಲ್ಲಿ ನಿಂತು ಜಲಪಾತ ವೀಕ್ಷಣೆ ಮಾಡುವಾಗ ಈ ದುರ್ಘಟನೆ ಸಂಭವಿಸಿದೆ. ಯುವಕನ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಕಲಬುರಗಿ ಜಿಲ್ಲೆಯ ಜೀವರ್ಗಿ ತಾಲೂಕಿನ ಬಿರಾಳ(ಬಿ)ಯಲ್ಲಿ ಎರಡು ಅಂತಸ್ತಿನ ಮನೆ ಕುಸಿದು ಬಸಮ್ಮ ಬಸವರಾಜ (35) ಮೃತಪಟ್ಟಿದ್ದಾರೆ. ಮನೆಯಲ್ಲಿ ಬಸಮ್ಮ ಹಾಗೂ ಅವರ ಪುತ್ರಿ ಅಶ್ವಿನಿ ಇದ್ದರು. ಮನೆ ಕುಸಿಯುತ್ತಿರುವ ಸಪ್ಪಳ ಕೇಳುತ್ತಿದ್ದಂತೆಯೇ ಪುತ್ರಿ ಅಶ್ವಿನಿ ಓಡಿ ಹೊರಗೆ ಬಂದಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಿದೆ. ಕೋಡಿ, ಮರವಂತೆಯಲ್ಲಿ ಕಡಲ್ಕೂರೆತ ಮುಂದುವರಿದಿದೆ. ಮಲ್ಪೆ, ಪಡುಕರೆ, ಪಡುಬಿದ್ರಿ, ಕಾಪು, ಕೋಡಿ ಸೀ ವಾಕ್‌ನಲ್ಲಿ ಅಲೆಗಳು ಹೆಚ್ಚಾಗಿದ್ದು, ಬೃಹತ್ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಹಲವೆಡೆ ಕೃಷಿ ಭೂಮಿ ಸಹಿತ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಭಾರೀ ಗಾಳಿ ಮಳೆಯಿಂದಾಗಿ ಜಿಲ್ಲೆಯಾದ್ಯಂತ ಒಟ್ಟು 41 ಮನೆಗಳಿಗೆ ಹಾನಿಯಾಗಿದೆ. 230ಕ್ಕೂ ಅಧಿಕ ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, 24 ಟ್ರಾನ್ಸ್‌ಫಾರ್ಮರ್‌ಗಳಿಗೆ ಹಾನಿಯಾಗಿದೆ. ಬೃಹತ್ ಮರಗಳು ಬುಡ ಸಹಿತ ಧರೆಗುರುಳಿವೆ. ಈ ಹಿನ್ನೆಲೆಯಲ್ಲಿ ಅಲ್ಲಲ್ಲಿ ವಿದ್ಯುತ್ ವ್ಯತ್ಯಯವಾಗಿದೆ.

ಕುಂದಾಪುರ, ಬೈಂದೂರು, ಹೆಬ್ರಿ, ಕಾರ್ಕಳ, ಶಂಕರನಾರಾಯಣ, ಈ ಕಾಪು ಭಾಗದಲ್ಲಿ ಅಪಾರ ಪ್ರಮಾಣದಲ್ಲಿ ಮೆಸ್ಕಾಂ ಇಲಾಖೆಗೆ ಹಾನಿಯಾಗಿದ್ದು, ಗ್ರಾಮಾಂತರ ಪ್ರದೇಶದಲ್ಲಿ ವಿದ್ಯುತ್ ಸಮಸ್ಯೆ ಉಂಟಾಗಿದೆ.

ಮಳೆಗೆ ನದಿಗಳು ತುಂಬಿ ಹರಿಯುತ್ತಿದ್ದು, ಹಲವಾರು ಹಳ್ಳ-ಕೊಳ್ಳಗಳಲ್ಲಿ ನೀರು ನುಗ್ಗಿದೆ. ಹಾಗಾಗಿ ಜಲಾವೃತಗೊಳ್ಳುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದ್ದು, ತಗ್ಗು ಹಾಗೂ ಅಪಾಯಕಾರಿ ಪ್ರದೇಶಗಳಿಂದ ಜನಸಾಮಾನ್ಯರು ದೂರವಿರಲು ಎಚ್ಚರಿಕೆ ನೀಡಲಾಗಿದೆ.

ಕಲಬುರಗಿಯ ಮಿಸ್ಸಾ ನಗರದ ನಿವಾಸಿ ಮಹಬೂಬ್‌ ಪಾಷಾ ಅವರ ಪುತ್ರ ಮಹಮದ್‌ ನಹೀಮ (4) ಮೃತ ಬಾಲಕ ಚಿಂಚೋಳಿ, ಚಿತ್ತಾಪುರ ಹಾಗೂ ಕಮಲಾಪುರ ತಾಲ್ಲೂಕುಗಳಲ್ಲಿ ರಾತ್ರಿ ಭಾರಿ ಮಳೆಯಾಗಿದೆ. ನೀರು ತುಂಬಿದ ಗುಂಡಿಯಲ್ಲಿ ಬಿದ್ದು ನಾಲ್ಕು ವರ್ಷದ ಬಾಲಕ ಸಮ್ಮತಪಟ್ಟಿದ್ದಾನೆ.

ಚಿಂಚೋಳಿ, ಚಿತ್ತಾಪುರ ಹಾಗೂ ಕಮಲಾಪುರ ತಾಲ್ಲೂಕುಗಳಲ್ಲಿ ರಾತ್ರಿ ಭಾರಿ ಮಳೆಯಾಗಿದೆ. ಚಿಂಚೋಳಿ ತಾಲ್ಲೂಕಿನ ದೇಗಲಮಡಿ, ಕೊಳ್ಳೂರು, ನಾಗಾಈದಲಾಯಿ ಗ್ರಾಮಗಳಲ್ಲಿ ಮನೆಗಳಿಗೆ ನೀರು ನುಗ್ಗಿದೆ.

ನಿರಂತರ ಮಳೆಗೆ. ಉತ್ತರಕನ್ನಡ ಜಿಲ್ಲೆಯ ಅಘನಾಶಿನಿ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ ಕುಮಟಾ ತಾಲ್ಲೂಕಿನ ಹೆಗಡೆ, ಮುರೂರು, ಮಣಕಿ, ದಿವಗಿ ಗ್ರಾಮಗಳು ಜಲಾವೃತಗೊಂಡಿವೆ. ಹೊನ್ನಾವರದ ಗುಂಡಬಾಳ ನದಿ ಪಾತ್ರದಲ್ಲೂ ನೆರೆ ಸ್ಥಿತಿ ಮುಂದುವರಿದಿದೆ.

ಕೊಡಗಿನ ಭಾಗಮಂಡಲದಲ್ಲಿ ತ್ರಿವೇಣಿ ಸಂಗಮ ಸಂಪೂರ್ಣ ಜಲಾವೃತಗೊಂಡಿದ್ದು, ಭಗಂಡೇಶ್ವರ ದೇಗುಲದ ಮುಖ್ಯದ್ವಾರದ ಎರಡು ಮೆಟ್ಟಿಲುಗಳವರೆಗೆ ನೀರು ಬಂದಿದೆ. ಮುಂಜಾಗ್ರತಾ ಕ್ರಮವಾಗಿ ಭಾಗಮಂಡಲದಲ್ಲಿ ಕಾಳಜಿ ಕೇಂದ್ರ ತೆರೆಯಲು ಜಿಲ್ಲಾಡಳಿತ ಸಿದ್ಧತೆ ನಡೆಸುತ್ತಿದೆ. ಎನ್‌ಆರ್ ತಂಡ ಭಾಗಮಂಡಲಕ್ಕೆ ಭೇಟಿ ನೀಡಿ, ಪರಿಸ್ಥಿತಿಯನ್ನು ಅವಲೋಕಿಸಿದ ಕೆಲವೆಡೆ ಶಾಲೆ- ಕಾಲೇಜುಗಳಿಗೆ ಇಂದು ರಜೆ ನಿರಂತರ ಮಳೆಯಾಗುತ್ತಿರುವ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಹಾಗೂ ಹಾಸನ ಜಿಲ್ಲೆಯ ಹಾಸನ, ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು ತಾಲ್ಲೂಕುಗಳಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಆಯಾ ಜಿಲ್ಲಾಡಳಿತಗಳು ಮಂಗಳವಾರ ರಜೆ ಘೋಷಿಸಿವೆ.

ಇದನ್ನೂ ಓದಿ: ಭಾರೀ ಮಳೆಗೆ ರಾಜ್ಯದ ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಣೆ: ಏನಿವು ಅಲರ್ಟ್‌ಗಳು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...