Homeಕರ್ನಾಟಕರಾಜ್ಯದಲ್ಲಿ ಮುಂದುವರೆದ ವರುಣಾರ್ಭಟ: ನಾಲ್ವರ ಸಾವು

ರಾಜ್ಯದಲ್ಲಿ ಮುಂದುವರೆದ ವರುಣಾರ್ಭಟ: ನಾಲ್ವರ ಸಾವು

- Advertisement -
- Advertisement -

ರಾಜ್ಯದೆಲ್ಲೆಡೆ ವರುಣಾರ್ಭಟ ಜೋರಾಗಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ. ನೆರೆ ಪರಿಸ್ಥಿತಿ ಉಂಟಾಗಿದೆ ಕೆಲವು ಗ್ರಾಮಗಳು, ರಸ್ತೆಗಳು ಜಲಾವೃತವಾಗಿದ್ದು, ಸೇತುವೆಗಳು ಮುಳುಗಡೆಯಾಗಿವೆ. ಇದರ ಪರಿಣಾಮ ಅನೇಕ ಕಡೆಗಳಲ್ಲಿ ಸಂಪರ್ಕ ಕಡಿತವಾಗಿದೆ.

ಅತಿಯಾದ ಮಳೆಯಿಂದಾಗಿ ಅವಘಡಗಳೂ ಸಂಭವಿಸಿದ್ದು, ಸೋಮವಾರ ರಾಜ್ಯದಲ್ಲಿ ಒಟ್ಟು ನಾಲ್ವರು ಮೃತಪಟ್ಟಿದ್ದಾರೆ. ಒಬ್ಬರು ಜಲಪಾತದಲ್ಲಿ ಕೊಚ್ಚಿ ಹೋಗಿದ್ದಾರೆ ಕೆಲವೆಡೆ ಮಳೆ ನೀರು ಮನೆಗಳಿಗೆ ನುಗ್ಗಿ ಅವಾಂತರ ಸೃತಿಯಾಗಿದೆ. ಇನ್ನೂ ಕೆಲವೆಡೆ ಗುಡ್ಡ ಕುಸಿತ ಸಂಭವಿಸಿದ್ದು, ವಿದ್ಯುತ್‌ ಕಂಬಗಳು ಧರೆಗುರುಳಿ, ವಿದ್ಯುತ್ ವ್ಯತ್ಯಯ ಉಂಟಾಗಿದೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಳ್ಳಾಡಿಯ ಗೋಕುಲ ದಾಸ್‌ ಪ್ರಭು (53) ಸೋಮವಾರ ಕರ್ಕುಂಜೆಯ ತೋಟಿಗೆ ಬಿದ್ದು ಮೃತಪಟ್ಟಿದ್ದಾರೆ. ಹೆಬ್ರಿ ತಾಲೂಕು ಶೇಡಿಮನೆಯ ಬಡಬೈಲು ದರಕಾಶು ಎಂಬಲ್ಲಿ ಬಾಲಕಿ ರಚನಾ (12) ಭಾನುವಾರ ಹೊಳೆಗೆ ಬಿದ್ದು ಮೃತಪಟ್ಟಿದ್ದಾಳೆ.

ಭದ್ರಾವತಿಯ ಶರತ್‌ ಕುಮಾರ್ (23) ಎಂಬುವವರು ಬೈಂದೂರು ತಾಲೂಕಿನ ಕೊಲ್ಲೂರು ಬಳಿಯ ಅರಶಿನಗುಂಡಿ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಕೊಚ್ಚಿ ಹೋಗಿದ್ದಾರೆ. ಬಂಡೆಯ ತುದಿಯಲ್ಲಿ ನಿಂತು ಜಲಪಾತ ವೀಕ್ಷಣೆ ಮಾಡುವಾಗ ಈ ದುರ್ಘಟನೆ ಸಂಭವಿಸಿದೆ. ಯುವಕನ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಕಲಬುರಗಿ ಜಿಲ್ಲೆಯ ಜೀವರ್ಗಿ ತಾಲೂಕಿನ ಬಿರಾಳ(ಬಿ)ಯಲ್ಲಿ ಎರಡು ಅಂತಸ್ತಿನ ಮನೆ ಕುಸಿದು ಬಸಮ್ಮ ಬಸವರಾಜ (35) ಮೃತಪಟ್ಟಿದ್ದಾರೆ. ಮನೆಯಲ್ಲಿ ಬಸಮ್ಮ ಹಾಗೂ ಅವರ ಪುತ್ರಿ ಅಶ್ವಿನಿ ಇದ್ದರು. ಮನೆ ಕುಸಿಯುತ್ತಿರುವ ಸಪ್ಪಳ ಕೇಳುತ್ತಿದ್ದಂತೆಯೇ ಪುತ್ರಿ ಅಶ್ವಿನಿ ಓಡಿ ಹೊರಗೆ ಬಂದಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಿದೆ. ಕೋಡಿ, ಮರವಂತೆಯಲ್ಲಿ ಕಡಲ್ಕೂರೆತ ಮುಂದುವರಿದಿದೆ. ಮಲ್ಪೆ, ಪಡುಕರೆ, ಪಡುಬಿದ್ರಿ, ಕಾಪು, ಕೋಡಿ ಸೀ ವಾಕ್‌ನಲ್ಲಿ ಅಲೆಗಳು ಹೆಚ್ಚಾಗಿದ್ದು, ಬೃಹತ್ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಹಲವೆಡೆ ಕೃಷಿ ಭೂಮಿ ಸಹಿತ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಭಾರೀ ಗಾಳಿ ಮಳೆಯಿಂದಾಗಿ ಜಿಲ್ಲೆಯಾದ್ಯಂತ ಒಟ್ಟು 41 ಮನೆಗಳಿಗೆ ಹಾನಿಯಾಗಿದೆ. 230ಕ್ಕೂ ಅಧಿಕ ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, 24 ಟ್ರಾನ್ಸ್‌ಫಾರ್ಮರ್‌ಗಳಿಗೆ ಹಾನಿಯಾಗಿದೆ. ಬೃಹತ್ ಮರಗಳು ಬುಡ ಸಹಿತ ಧರೆಗುರುಳಿವೆ. ಈ ಹಿನ್ನೆಲೆಯಲ್ಲಿ ಅಲ್ಲಲ್ಲಿ ವಿದ್ಯುತ್ ವ್ಯತ್ಯಯವಾಗಿದೆ.

ಕುಂದಾಪುರ, ಬೈಂದೂರು, ಹೆಬ್ರಿ, ಕಾರ್ಕಳ, ಶಂಕರನಾರಾಯಣ, ಈ ಕಾಪು ಭಾಗದಲ್ಲಿ ಅಪಾರ ಪ್ರಮಾಣದಲ್ಲಿ ಮೆಸ್ಕಾಂ ಇಲಾಖೆಗೆ ಹಾನಿಯಾಗಿದ್ದು, ಗ್ರಾಮಾಂತರ ಪ್ರದೇಶದಲ್ಲಿ ವಿದ್ಯುತ್ ಸಮಸ್ಯೆ ಉಂಟಾಗಿದೆ.

ಮಳೆಗೆ ನದಿಗಳು ತುಂಬಿ ಹರಿಯುತ್ತಿದ್ದು, ಹಲವಾರು ಹಳ್ಳ-ಕೊಳ್ಳಗಳಲ್ಲಿ ನೀರು ನುಗ್ಗಿದೆ. ಹಾಗಾಗಿ ಜಲಾವೃತಗೊಳ್ಳುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದ್ದು, ತಗ್ಗು ಹಾಗೂ ಅಪಾಯಕಾರಿ ಪ್ರದೇಶಗಳಿಂದ ಜನಸಾಮಾನ್ಯರು ದೂರವಿರಲು ಎಚ್ಚರಿಕೆ ನೀಡಲಾಗಿದೆ.

ಕಲಬುರಗಿಯ ಮಿಸ್ಸಾ ನಗರದ ನಿವಾಸಿ ಮಹಬೂಬ್‌ ಪಾಷಾ ಅವರ ಪುತ್ರ ಮಹಮದ್‌ ನಹೀಮ (4) ಮೃತ ಬಾಲಕ ಚಿಂಚೋಳಿ, ಚಿತ್ತಾಪುರ ಹಾಗೂ ಕಮಲಾಪುರ ತಾಲ್ಲೂಕುಗಳಲ್ಲಿ ರಾತ್ರಿ ಭಾರಿ ಮಳೆಯಾಗಿದೆ. ನೀರು ತುಂಬಿದ ಗುಂಡಿಯಲ್ಲಿ ಬಿದ್ದು ನಾಲ್ಕು ವರ್ಷದ ಬಾಲಕ ಸಮ್ಮತಪಟ್ಟಿದ್ದಾನೆ.

ಚಿಂಚೋಳಿ, ಚಿತ್ತಾಪುರ ಹಾಗೂ ಕಮಲಾಪುರ ತಾಲ್ಲೂಕುಗಳಲ್ಲಿ ರಾತ್ರಿ ಭಾರಿ ಮಳೆಯಾಗಿದೆ. ಚಿಂಚೋಳಿ ತಾಲ್ಲೂಕಿನ ದೇಗಲಮಡಿ, ಕೊಳ್ಳೂರು, ನಾಗಾಈದಲಾಯಿ ಗ್ರಾಮಗಳಲ್ಲಿ ಮನೆಗಳಿಗೆ ನೀರು ನುಗ್ಗಿದೆ.

ನಿರಂತರ ಮಳೆಗೆ. ಉತ್ತರಕನ್ನಡ ಜಿಲ್ಲೆಯ ಅಘನಾಶಿನಿ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ ಕುಮಟಾ ತಾಲ್ಲೂಕಿನ ಹೆಗಡೆ, ಮುರೂರು, ಮಣಕಿ, ದಿವಗಿ ಗ್ರಾಮಗಳು ಜಲಾವೃತಗೊಂಡಿವೆ. ಹೊನ್ನಾವರದ ಗುಂಡಬಾಳ ನದಿ ಪಾತ್ರದಲ್ಲೂ ನೆರೆ ಸ್ಥಿತಿ ಮುಂದುವರಿದಿದೆ.

ಕೊಡಗಿನ ಭಾಗಮಂಡಲದಲ್ಲಿ ತ್ರಿವೇಣಿ ಸಂಗಮ ಸಂಪೂರ್ಣ ಜಲಾವೃತಗೊಂಡಿದ್ದು, ಭಗಂಡೇಶ್ವರ ದೇಗುಲದ ಮುಖ್ಯದ್ವಾರದ ಎರಡು ಮೆಟ್ಟಿಲುಗಳವರೆಗೆ ನೀರು ಬಂದಿದೆ. ಮುಂಜಾಗ್ರತಾ ಕ್ರಮವಾಗಿ ಭಾಗಮಂಡಲದಲ್ಲಿ ಕಾಳಜಿ ಕೇಂದ್ರ ತೆರೆಯಲು ಜಿಲ್ಲಾಡಳಿತ ಸಿದ್ಧತೆ ನಡೆಸುತ್ತಿದೆ. ಎನ್‌ಆರ್ ತಂಡ ಭಾಗಮಂಡಲಕ್ಕೆ ಭೇಟಿ ನೀಡಿ, ಪರಿಸ್ಥಿತಿಯನ್ನು ಅವಲೋಕಿಸಿದ ಕೆಲವೆಡೆ ಶಾಲೆ- ಕಾಲೇಜುಗಳಿಗೆ ಇಂದು ರಜೆ ನಿರಂತರ ಮಳೆಯಾಗುತ್ತಿರುವ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಹಾಗೂ ಹಾಸನ ಜಿಲ್ಲೆಯ ಹಾಸನ, ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು ತಾಲ್ಲೂಕುಗಳಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಆಯಾ ಜಿಲ್ಲಾಡಳಿತಗಳು ಮಂಗಳವಾರ ರಜೆ ಘೋಷಿಸಿವೆ.

ಇದನ್ನೂ ಓದಿ: ಭಾರೀ ಮಳೆಗೆ ರಾಜ್ಯದ ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಣೆ: ಏನಿವು ಅಲರ್ಟ್‌ಗಳು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...