Homeಕರ್ನಾಟಕರಾಜ್ಯದಲ್ಲಿ ಮುಂದುವರೆದ ವರುಣಾರ್ಭಟ: ನಾಲ್ವರ ಸಾವು

ರಾಜ್ಯದಲ್ಲಿ ಮುಂದುವರೆದ ವರುಣಾರ್ಭಟ: ನಾಲ್ವರ ಸಾವು

- Advertisement -
- Advertisement -

ರಾಜ್ಯದೆಲ್ಲೆಡೆ ವರುಣಾರ್ಭಟ ಜೋರಾಗಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ. ನೆರೆ ಪರಿಸ್ಥಿತಿ ಉಂಟಾಗಿದೆ ಕೆಲವು ಗ್ರಾಮಗಳು, ರಸ್ತೆಗಳು ಜಲಾವೃತವಾಗಿದ್ದು, ಸೇತುವೆಗಳು ಮುಳುಗಡೆಯಾಗಿವೆ. ಇದರ ಪರಿಣಾಮ ಅನೇಕ ಕಡೆಗಳಲ್ಲಿ ಸಂಪರ್ಕ ಕಡಿತವಾಗಿದೆ.

ಅತಿಯಾದ ಮಳೆಯಿಂದಾಗಿ ಅವಘಡಗಳೂ ಸಂಭವಿಸಿದ್ದು, ಸೋಮವಾರ ರಾಜ್ಯದಲ್ಲಿ ಒಟ್ಟು ನಾಲ್ವರು ಮೃತಪಟ್ಟಿದ್ದಾರೆ. ಒಬ್ಬರು ಜಲಪಾತದಲ್ಲಿ ಕೊಚ್ಚಿ ಹೋಗಿದ್ದಾರೆ ಕೆಲವೆಡೆ ಮಳೆ ನೀರು ಮನೆಗಳಿಗೆ ನುಗ್ಗಿ ಅವಾಂತರ ಸೃತಿಯಾಗಿದೆ. ಇನ್ನೂ ಕೆಲವೆಡೆ ಗುಡ್ಡ ಕುಸಿತ ಸಂಭವಿಸಿದ್ದು, ವಿದ್ಯುತ್‌ ಕಂಬಗಳು ಧರೆಗುರುಳಿ, ವಿದ್ಯುತ್ ವ್ಯತ್ಯಯ ಉಂಟಾಗಿದೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಳ್ಳಾಡಿಯ ಗೋಕುಲ ದಾಸ್‌ ಪ್ರಭು (53) ಸೋಮವಾರ ಕರ್ಕುಂಜೆಯ ತೋಟಿಗೆ ಬಿದ್ದು ಮೃತಪಟ್ಟಿದ್ದಾರೆ. ಹೆಬ್ರಿ ತಾಲೂಕು ಶೇಡಿಮನೆಯ ಬಡಬೈಲು ದರಕಾಶು ಎಂಬಲ್ಲಿ ಬಾಲಕಿ ರಚನಾ (12) ಭಾನುವಾರ ಹೊಳೆಗೆ ಬಿದ್ದು ಮೃತಪಟ್ಟಿದ್ದಾಳೆ.

ಭದ್ರಾವತಿಯ ಶರತ್‌ ಕುಮಾರ್ (23) ಎಂಬುವವರು ಬೈಂದೂರು ತಾಲೂಕಿನ ಕೊಲ್ಲೂರು ಬಳಿಯ ಅರಶಿನಗುಂಡಿ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಕೊಚ್ಚಿ ಹೋಗಿದ್ದಾರೆ. ಬಂಡೆಯ ತುದಿಯಲ್ಲಿ ನಿಂತು ಜಲಪಾತ ವೀಕ್ಷಣೆ ಮಾಡುವಾಗ ಈ ದುರ್ಘಟನೆ ಸಂಭವಿಸಿದೆ. ಯುವಕನ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಕಲಬುರಗಿ ಜಿಲ್ಲೆಯ ಜೀವರ್ಗಿ ತಾಲೂಕಿನ ಬಿರಾಳ(ಬಿ)ಯಲ್ಲಿ ಎರಡು ಅಂತಸ್ತಿನ ಮನೆ ಕುಸಿದು ಬಸಮ್ಮ ಬಸವರಾಜ (35) ಮೃತಪಟ್ಟಿದ್ದಾರೆ. ಮನೆಯಲ್ಲಿ ಬಸಮ್ಮ ಹಾಗೂ ಅವರ ಪುತ್ರಿ ಅಶ್ವಿನಿ ಇದ್ದರು. ಮನೆ ಕುಸಿಯುತ್ತಿರುವ ಸಪ್ಪಳ ಕೇಳುತ್ತಿದ್ದಂತೆಯೇ ಪುತ್ರಿ ಅಶ್ವಿನಿ ಓಡಿ ಹೊರಗೆ ಬಂದಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಿದೆ. ಕೋಡಿ, ಮರವಂತೆಯಲ್ಲಿ ಕಡಲ್ಕೂರೆತ ಮುಂದುವರಿದಿದೆ. ಮಲ್ಪೆ, ಪಡುಕರೆ, ಪಡುಬಿದ್ರಿ, ಕಾಪು, ಕೋಡಿ ಸೀ ವಾಕ್‌ನಲ್ಲಿ ಅಲೆಗಳು ಹೆಚ್ಚಾಗಿದ್ದು, ಬೃಹತ್ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಹಲವೆಡೆ ಕೃಷಿ ಭೂಮಿ ಸಹಿತ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಭಾರೀ ಗಾಳಿ ಮಳೆಯಿಂದಾಗಿ ಜಿಲ್ಲೆಯಾದ್ಯಂತ ಒಟ್ಟು 41 ಮನೆಗಳಿಗೆ ಹಾನಿಯಾಗಿದೆ. 230ಕ್ಕೂ ಅಧಿಕ ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, 24 ಟ್ರಾನ್ಸ್‌ಫಾರ್ಮರ್‌ಗಳಿಗೆ ಹಾನಿಯಾಗಿದೆ. ಬೃಹತ್ ಮರಗಳು ಬುಡ ಸಹಿತ ಧರೆಗುರುಳಿವೆ. ಈ ಹಿನ್ನೆಲೆಯಲ್ಲಿ ಅಲ್ಲಲ್ಲಿ ವಿದ್ಯುತ್ ವ್ಯತ್ಯಯವಾಗಿದೆ.

ಕುಂದಾಪುರ, ಬೈಂದೂರು, ಹೆಬ್ರಿ, ಕಾರ್ಕಳ, ಶಂಕರನಾರಾಯಣ, ಈ ಕಾಪು ಭಾಗದಲ್ಲಿ ಅಪಾರ ಪ್ರಮಾಣದಲ್ಲಿ ಮೆಸ್ಕಾಂ ಇಲಾಖೆಗೆ ಹಾನಿಯಾಗಿದ್ದು, ಗ್ರಾಮಾಂತರ ಪ್ರದೇಶದಲ್ಲಿ ವಿದ್ಯುತ್ ಸಮಸ್ಯೆ ಉಂಟಾಗಿದೆ.

ಮಳೆಗೆ ನದಿಗಳು ತುಂಬಿ ಹರಿಯುತ್ತಿದ್ದು, ಹಲವಾರು ಹಳ್ಳ-ಕೊಳ್ಳಗಳಲ್ಲಿ ನೀರು ನುಗ್ಗಿದೆ. ಹಾಗಾಗಿ ಜಲಾವೃತಗೊಳ್ಳುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದ್ದು, ತಗ್ಗು ಹಾಗೂ ಅಪಾಯಕಾರಿ ಪ್ರದೇಶಗಳಿಂದ ಜನಸಾಮಾನ್ಯರು ದೂರವಿರಲು ಎಚ್ಚರಿಕೆ ನೀಡಲಾಗಿದೆ.

ಕಲಬುರಗಿಯ ಮಿಸ್ಸಾ ನಗರದ ನಿವಾಸಿ ಮಹಬೂಬ್‌ ಪಾಷಾ ಅವರ ಪುತ್ರ ಮಹಮದ್‌ ನಹೀಮ (4) ಮೃತ ಬಾಲಕ ಚಿಂಚೋಳಿ, ಚಿತ್ತಾಪುರ ಹಾಗೂ ಕಮಲಾಪುರ ತಾಲ್ಲೂಕುಗಳಲ್ಲಿ ರಾತ್ರಿ ಭಾರಿ ಮಳೆಯಾಗಿದೆ. ನೀರು ತುಂಬಿದ ಗುಂಡಿಯಲ್ಲಿ ಬಿದ್ದು ನಾಲ್ಕು ವರ್ಷದ ಬಾಲಕ ಸಮ್ಮತಪಟ್ಟಿದ್ದಾನೆ.

ಚಿಂಚೋಳಿ, ಚಿತ್ತಾಪುರ ಹಾಗೂ ಕಮಲಾಪುರ ತಾಲ್ಲೂಕುಗಳಲ್ಲಿ ರಾತ್ರಿ ಭಾರಿ ಮಳೆಯಾಗಿದೆ. ಚಿಂಚೋಳಿ ತಾಲ್ಲೂಕಿನ ದೇಗಲಮಡಿ, ಕೊಳ್ಳೂರು, ನಾಗಾಈದಲಾಯಿ ಗ್ರಾಮಗಳಲ್ಲಿ ಮನೆಗಳಿಗೆ ನೀರು ನುಗ್ಗಿದೆ.

ನಿರಂತರ ಮಳೆಗೆ. ಉತ್ತರಕನ್ನಡ ಜಿಲ್ಲೆಯ ಅಘನಾಶಿನಿ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ ಕುಮಟಾ ತಾಲ್ಲೂಕಿನ ಹೆಗಡೆ, ಮುರೂರು, ಮಣಕಿ, ದಿವಗಿ ಗ್ರಾಮಗಳು ಜಲಾವೃತಗೊಂಡಿವೆ. ಹೊನ್ನಾವರದ ಗುಂಡಬಾಳ ನದಿ ಪಾತ್ರದಲ್ಲೂ ನೆರೆ ಸ್ಥಿತಿ ಮುಂದುವರಿದಿದೆ.

ಕೊಡಗಿನ ಭಾಗಮಂಡಲದಲ್ಲಿ ತ್ರಿವೇಣಿ ಸಂಗಮ ಸಂಪೂರ್ಣ ಜಲಾವೃತಗೊಂಡಿದ್ದು, ಭಗಂಡೇಶ್ವರ ದೇಗುಲದ ಮುಖ್ಯದ್ವಾರದ ಎರಡು ಮೆಟ್ಟಿಲುಗಳವರೆಗೆ ನೀರು ಬಂದಿದೆ. ಮುಂಜಾಗ್ರತಾ ಕ್ರಮವಾಗಿ ಭಾಗಮಂಡಲದಲ್ಲಿ ಕಾಳಜಿ ಕೇಂದ್ರ ತೆರೆಯಲು ಜಿಲ್ಲಾಡಳಿತ ಸಿದ್ಧತೆ ನಡೆಸುತ್ತಿದೆ. ಎನ್‌ಆರ್ ತಂಡ ಭಾಗಮಂಡಲಕ್ಕೆ ಭೇಟಿ ನೀಡಿ, ಪರಿಸ್ಥಿತಿಯನ್ನು ಅವಲೋಕಿಸಿದ ಕೆಲವೆಡೆ ಶಾಲೆ- ಕಾಲೇಜುಗಳಿಗೆ ಇಂದು ರಜೆ ನಿರಂತರ ಮಳೆಯಾಗುತ್ತಿರುವ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಹಾಗೂ ಹಾಸನ ಜಿಲ್ಲೆಯ ಹಾಸನ, ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು ತಾಲ್ಲೂಕುಗಳಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಆಯಾ ಜಿಲ್ಲಾಡಳಿತಗಳು ಮಂಗಳವಾರ ರಜೆ ಘೋಷಿಸಿವೆ.

ಇದನ್ನೂ ಓದಿ: ಭಾರೀ ಮಳೆಗೆ ರಾಜ್ಯದ ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಣೆ: ಏನಿವು ಅಲರ್ಟ್‌ಗಳು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...