Homeಕರ್ನಾಟಕಕಾನ್ವೆಂಟುಗಳಿಗೂ ಸವಾಲೆಸೆದ ಅಂಗನವಾಡಿ ಕಾರ್ಯಕರ್ತೆ ಬಿ.ವಸಂತ

ಕಾನ್ವೆಂಟುಗಳಿಗೂ ಸವಾಲೆಸೆದ ಅಂಗನವಾಡಿ ಕಾರ್ಯಕರ್ತೆ ಬಿ.ವಸಂತ

- Advertisement -
- Advertisement -

ಎಲೆಮರೆ – 13

ಈಚೆಗೆ ಎಲ್.ಕೆ.ಜಿ. ಯು.ಕೆ.ಜಿಯನ್ನು ಅಂಗನವಾಡಿಯಲ್ಲೇ ಆರಂಭಿಸಿ ಎಂದು ಸಿ.ಐ.ಟಿ.ಯು ಸಂಘಟನೆಯು ಅಂಗನವಾಡಿ ಕಾರ್ಯಕರ್ತೆಯರ ಪರವಾಗಿ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಯಿತು. ರಾಜ್ಯವ್ಯಾಪಿ ಗಮನ ಸೆಳೆಯಿತು. ಇದೀಗ ಸರಕಾರದ ಮಟ್ಟದಲ್ಲಿ ಮಾತುಕತೆಗಳು ನಡೆಯುತ್ತಿದೆ. ಆದರೆ ಇಲ್ಲೊಬ್ಬ ಅಂಗನವಾಡಿ ಕಾರ್ಯಕರ್ತೆ ಸರಕಾರ ಅಧಿಕೃತವಾಗಿ ಎಲ್.ಕೆ.ಜಿ. ಯು.ಕೆ.ಜಿಯನ್ನು ಅಂಗನವಾಡಿಗಳಲ್ಲಿ ಆರಂಭಿಸುವ ಮುನ್ನವೇ ಕಾನ್ವೆಂಟುಗಳಿಗೂ ಸವಾಲೆಸೆಯುವಂತೆ ಅಂಗನವಾಡಿಯನ್ನು ರೂಪಿಸಿದ್ದಾರೆ. ಈಚೆಗೆ ದೇವದುರ್ಗ ಭಾಗದ 40 ಜನ ಅಂಗನವಾಡಿ ಕಾರ್ಯಕರ್ತೆಯರ ತಂಡ ಈ ಅಂಗನವಾಡಿಯನ್ನು ಭೇಟಿ ಮಾಡಿ ನಾವೂ ಹೀಗೆ ಮಾಡಬಹುದೇ ಎಂದು ಪರಿಶೀಲಿಸಿದ್ದಾರೆ. ಈ ಭಾಗದ ಶಿಶು ಅಭಿವೃದ್ಧಿ ತಾಲೂಕು ಅಧಿಕಾರಿ ಎ.ಆರ್. ಮಧುಸೂದನ ಅವರು ಈ ಅಂಗನವಾಡಿಯ ಮಾದರಿಯನ್ನು ಇಡೀ ತಾಲೂಕಿಗೆ ವಿಸ್ತರಿಸುವ ಯೋಚನೆ ಮಾಡಿದ್ದಾರೆ. ಹಾಗಾದರೆ ಇದರ ವಿಶೇಷತೆಯೇನು?

ಜೀರೋದಿಂದ ಮೂರು ನಾಲ್ಕು ವರ್ಷದ ಮಕ್ಕಳು ಚಿಲಿಪಿಲಿಗುಟ್ಟುವ ಈ ಪುಟ್ಟ ಕೋಣೆಯಲ್ಲಿ ಟೀಚರ್ ಕೇಳುವ ಪ್ರತಿ ಪ್ರಶ್ನೆಗಳಿಗೂ ಮಕ್ಕಳು ಸ್ಪರ್ಧೆಗೆ ಬಿದ್ದಂತೆ ಪಟಪಟನೆ ಉತ್ತರಿಸುತ್ತಾರೆ. ಚಕಚಕನೆ ಇಂತಿಷ್ಟು ಪ್ಲಾಸ್ಟಿಕ್ ಕಪ್‍ಗಳನ್ನು ಜೋಡಿಸುತ್ತಾ ಸೂಪರ್ ಮಿನಿಟ್ ರಿಯಾಲಿಟಿ ಶೋನ ಅಣಕು ಮಾಡಿ ಚಪ್ಪಾಳೆ ತಟ್ಟುತ್ತಾರೆ. ಬಾಸ್ಕೆಟ್‍ಬಾಲನ್ನು ನೆಟ್‍ನಲ್ಲಿ ಮಗುವೊಂದು ಎಸೆಯುವಾಗ ಉಳಿದೆಲ್ಲರೂ ಚಪ್ಪಾಳೆ ತಟ್ಟಿ ಹುರಿದುಂಬಿಸುತ್ತಾರೆ. ಗಾಂಧೀಜಿ ಎಂದ ತಕ್ಷಣ ಗಾಂಧೀಜಿಗೆ ಸಂಬಂಧಿಸಿದ ಹತ್ತಾರು ಸಂಗತಿಗಳನ್ನು ಒಬ್ಬರಾದ ನಂತರ ಒಬ್ಬರಂತೆ ಪಟಪಟನೆ ಹೇಳುತ್ತಾ ಗಾಂಧಿಯ ಜೀವನ ಕಥನವನ್ನು ಅರಳಿಸುತ್ತಾರೆ. ಸ್ವಾತಂತ್ರ್ಯ ಎಂದತಕ್ಷಣ ಈ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರ ಹೆಸರನ್ನು ಉಲಿಯುತ್ತಾರೆ. ಸೊಳ್ಳೆ ಎಂದ ತಕ್ಷಣ ಅದರ ಪರಿಚಯ ಹೇಳುತ್ತಲೆ ಅದರಿಂದ ಹರಡುವ ರೋಗಗಳಾವುವು, ಈ ರೋಗಗಳು ಹರಡದಂತೆ ಮನೆಯಲ್ಲಿ ಏನೇನು ಮುಂಜಾಗ್ರತೆ ವಹಿಸಬೇಕು ಎಂದು ಮಕ್ಕಳು ವಿವರಿಸುತ್ತಾರೆ. ಹೀಗೆ ಒಂದೊಂದು ಸಂಗತಿಯ ಬಗೆಗೂ ಸಾಮೂಹಿಕವಾಗಿ ಒಬ್ಬರಾದನಂತರ ಒಬ್ಬರಂತೆ ಉತ್ತರದ ಸರಪಳಿ ಹೆಣೆಯುವ ಈ ಮಕ್ಕಳು ಇಂಟರ್‍ನ್ಯಾಷನಲ್ ಎಂದು ಕರೆದುಕೊಳ್ಳುವ ಯಾವುದೇ ಖಾಸಗಿ ಕಾನ್ವೆಂಟ್ ಸ್ಕೂಲಿನಲ್ಲಿ ಓದುತ್ತಿಲ್ಲ. ಹತ್ತಾರು ಅವಕಾಶಗಳಿರುವ ಸರಕಾರಿ ಶಾಲೆಯ ಮಕ್ಕಳೂ ಅಲ್ಲ. ಬಳ್ಳಾರಿ ಜಿಲ್ಲೆ ಕೊಟ್ಟೂರು ತಾಲೂಕಿನ ಕೂಡ್ಲಿಗಿಯಿಂದ ಪಶ್ಚಿಮಕ್ಕೆ 10 ಕಿಲೋಮೀಟರ್ ದೂರದಲ್ಲಿರುವ ಗಜಾಪುರದ ಅಂಗನವಾಡಿ ಬಿ ಕೇಂದ್ರದ ಮಕ್ಕಳು.

ಹೌದು ಅಂಗನವಾಡಿ ಕಾರ್ಯಕರ್ತೆ ಇಷ್ಟೆಲ್ಲಾ ಪ್ರಯೋಗ ಮಾಡಿದ್ದಾರಾ? ಎಂದು ನೀವು ಈ ಪುಟ್ಟ ಶಾಲೆಯನ್ನು ಪ್ರವೇಶಿಸಿದರೆ, ಹುಬ್ಬೇರಿಸುವಂತೆ ಈ ಅಂಗನವಾಡಿ ಹತ್ತಾರು ಹೊಸ ಹೊಸ ಪ್ರಯೋಗಗಳ ಕಲಿಕಾ ಸಾಮಗ್ರಿಗಳ ಅಕ್ಷಯ ಪಾತ್ರೆಯಂತೆ ಗಮನ ಸೆಳೆಯುತ್ತದೆ. ಮಕ್ಕಳ ಸೃಜನಶೀಲತೆಯನ್ನು ಅವರದೇ ಪರಿಸರದಲ್ಲಿ ಬಳಸಿ ಬಿಸಾಡಿದ, ಮಕ್ಕಳಿಂದಲೇ ಸಂಗ್ರಹಿಸಿದ ವಸ್ತುಗಳನ್ನು ಬಳಸಿಯೇ ತಯಾರಿಸಲಾಗಿದೆ. ಮನೆಗಳಲ್ಲಿ ಲಭ್ಯವಿರುವ ಬೀಜಗಳನ್ನು ಕಲೆ ಹಾಕಿ ಸಂಗ್ರಹ ಮಾಡಲಾಗಿದೆ. ಒಂದೊಂದು ಬೀಜವನ್ನು ತೋರಿಸಿದಾಗಲೂ ಆ ಬೀಜದ ಬೆಳೆ, ಹಣ್ಣು, ಕಾಯಿ, ಬೆಳೆಯುವ ಕಾಲಮಾನ, ಬೆಳೆಯ ಅವಧಿ ಇತ್ಯಾದಿಗಳನ್ನು ಮಕ್ಕಳು ಹೇಳುತ್ತಾರೆ.

ಪ್ರತಿದಿನ ಹನ್ನೊಂದು ಗಂಟೆಯ ಹೊತ್ತಿಗೆ ಒಬ್ಬ ಮಗು ಶಾಲೆಯಿಂದ ಹೊರಗಡೆ ಬಂದು ವಾತಾವರಣವನ್ನು ಅವಲೋಕಿಸಿ, ಮಕ್ಕಳಿಗೆ ಈ ದಿನದ ಹವಾಮಾನ ಹೇಗಿದೆ ಎಂದು ವಿವರಿಸುತ್ತದೆ. ಪ್ರತೀ ಮಕ್ಕಳಿಗೂ ಅವರದೇ ಆದ ಒಂದು ಚೀಲವಿದೆ. ಆ ಮಗು ಒಂದು ವಾರದಲ್ಲಿ ಬರೆಯುವ ಡ್ರಾಯಿಂಗ್, ಬರಹದ ಪುಟಗಳನ್ನು ಆಯಾ ಮಗುವಿನ ಚೀಲದಲ್ಲಿ ಶೇಖರಿಸಲಾಗುತ್ತದೆ. ವಾರಕ್ಕೊಮ್ಮೆ ಪೋಷಕರನ್ನು ಕರೆಸಿ ಆಯಾ ಮಕ್ಕಳ ವಾರದ ಚಟುವಟಿಕೆಯನ್ನು ವಿವರಿಸಲಾಗುತ್ತದೆ. ಕನ್ನಡ ಇಂಗ್ಲಿಷ್ ಅಂಕೆಸಂಖ್ಯೆಯ ಅಕ್ಷರಗಳನ್ನು ಗುರುತಿಸುತ್ತಲೇ ಓದುವ ಪ್ರಯತ್ನ ಮಾಡುವ ಮಕ್ಕಳನ್ನು ನೋಡಿ ಪ್ರತಿ ತಂದೆತಾಯಿ ಅಥವಾ ಪೋಷಕರಿಗೆ ತಮ್ಮ ಮಗು ಏನೇನು ಕಲಿಯುತ್ತಿದೆ ಎನ್ನುವ ಸ್ಪಷ್ಟತೆ ಸಿಕ್ಕು ಖುಷಿಗೊಳ್ಳುತ್ತಾರೆ.

ಹಳ್ಳಿಯಲ್ಲಿ ಬಳಸಿ ಬಿಸಾಡುವ ಅನೇಕ ಚಿಕ್ಕಪುಟ್ಟ ವಸ್ತುಗಳೆಲ್ಲಾ ಕಲಿಕಾ ಸಾಮಗ್ರಿಗಳಾಗಿ ಅಂಗನವಾಡಿ ಸೇರುತ್ತವೆ. ದಿನಬಳಕೆಯ ವಸ್ತುಗಳ ಖಾಲಿ ಸಾಮಾನುಗಳಿಂದ ಆಯಾ ಸಾಮಗ್ರಿಯ ಬಳಕೆಯ ಬಗ್ಗೆ ಕಲಿತ ಮಕ್ಕಳು ಅದನ್ನು ಮನೆಯಲ್ಲಿ ತಂದೆತಾಯಿಯರಿಗೆ ವಿವರಿಸುತ್ತಾರೆ. ಪ್ರತೀ ವಾರ ಒಂದು ವಿಷಯ ಆಯ್ದುಕೊಂಡು ಆ ವಿಷಯದ ಬಗ್ಗೆ ಚಿತ್ರಗಳನ್ನು ತೋರಿಸುತ್ತಾ ಅವುಗಳ ಲಕ್ಷಣಗಳನ್ನು ವಿವರಿಸುತ್ತಾ ಹೋಗುತ್ತಾರೆ. ಒಂದು ಚಿತ್ರವನ್ನು ತೋರಿಸಿದ ತಕ್ಷಣ ಮಕ್ಕಳು ಆ ಚಿತ್ರಕ್ಕೊಂದು ಕತೆ ಕಟ್ಟುತ್ತಾರೆ. ಮೋಡ, ಹವಾಮಾನ, ಹೊಲಗಳಲ್ಲಿ ಬೆಳೆಯುವ ಬೆಳೆಗಳು, ಸುತ್ತಮುತ್ತಣ ಪರಿಸರ ಎಲ್ಲದರ ಬಗ್ಗೆಯೂ ಮಕ್ಕಳು ಮಾತನಾಡುತ್ತಾರೆ. ಖಾಲಿ ರಟ್ಟಿದ ಬಾಕ್ಸ್‍ಗಳನ್ನು ಬಳಸಿ ಮನೆ, ಆಸ್ಪತ್ರೆ, ಶಾಲೆಯ ಮಾದರಿಗಳನ್ನು ತಯಾರಿಸಿ ಸ್ವಚ್ಛ ಹಳ್ಳಿಯೊಂದರ ಚಿತ್ರಣವನ್ನು ಕಣ್ಣಮುಂದೆ ತರುತ್ತಾರೆ. ತೂಗುಹಾಕಿದ ಚೀಲಗಳ ಬಣ್ಣವನ್ನು ಗುರುತಿಸಿ ಆಯಾ ಬಣ್ಣದ ಹತ್ತಾರು ಸಂಗತಿಗಳನ್ನು ಜೋಡಿಸಿ ಹೇಳುತ್ತಾರೆ. ಹೀಗೆ ಮಕ್ಕಳ ಗ್ರಹಿಕೆಯನ್ನು ಸೂಕ್ಷ್ಮಗೊಳಿಸಲಾಗಿದೆ. ಮಕ್ಕಳು ಪ್ರತಿಯೊಂದರ ಬಗ್ಗೆಯೂ ತಿಳಿದುಕೊಳ್ಳುವ ಕುತೂಹಲಿಗಳಾಗಿದ್ದಾರೆ. ಸಮಗ್ರ ಬಾಲವಿಕಾಸ ಯೋಜನೆಯ ಪೂರ್ವ ಪ್ರಾಥಮಿಕ ಶಿಕ್ಷಣದ ಉದ್ದೇಶ ಇಲ್ಲಿ ಸಾಕಾರಗೊಂಡಿದೆ. ಇದನ್ನು ಅವಿರತ ಶ್ರಮಿಸಿ ರೂಪಿಸಿದವರು ಇಲ್ಲಿನ ಅಂಗನವಾಡಿ ಕಾರ್ಯಕರ್ತೆ ಬಿ.ವಸಂತ.

ಅಂಗನವಾಡಿ ಕಾರ್ಯಕರ್ತೆಯಾಗಿ ಕಳೆದ ಏಳು ವರ್ಷದಿಂದ ಕೆಲಸ ಮಾಡುವ ವಸಂತ ಅವರು ತನಗಿರುವ ಅಂಗವೈಕಲ್ಯವನ್ನು ಮರೆತು ಮಕ್ಕಳ ಜತೆ ಮಕ್ಕಳಂತೆಯೇ ಬೆರೆಯುತ್ತಾರೆ. ನಾಳೆ ಮಕ್ಕಳಿಗೆ ಯಾವ ಪ್ರಯೋಗ ಮಾಡಬೇಕು, ಹೊಸದೇನನ್ನು ಕಲಿಸಬೇಕು ಎನ್ನುವ ಯೋಚನೆಯೇ ಅವರನ್ನು ಕ್ರಿಯಾಶೀಲವಾಗಿಟ್ಟಿದೆ. `ನನಗಿನ್ನೂ ತುಂಬಾ ಕನಸುಗಳಿವೆ ಸರ್, ನಮ್ಮ ಇಲಾಖೆ ಮತ್ತು ಊರಿನ ಗ್ರಾಮಸ್ಥರಿಂದ ಒಳ್ಳೆಯ ಪ್ರೋತ್ಸಾಹವಿದೆ. ಆದರೆ ಈ ತರಹದ ಪ್ರಯೋಗಗಳಿಗೆ ಇಲಾಖೆಯಿಂದ ಹಣ ಕೊಡುವ ನಿಯಮವಿಲ್ಲ. ಹಾಗಾಗಿ ಅಗತ್ಯವಿದ್ದ ಹಣವನ್ನು ನಾವೇ ಕೈಯಿಂದ ಹಾಕಬೇಕು. ಅಥವಾ ಹಣವಿಲ್ಲದೆ ಪುಕ್ಕಟೆಯಾಗಿ ಸಿಗುವ ವಸ್ತುಗಳನ್ನೆ ಬಳಸಿ ಪ್ರಯೋಗಗಳನ್ನು ಮಾಡಬೇಕು’ ಎನ್ನುತ್ತಾರೆ.

ಪತ್ರಕರ್ತರಾದ ಗಜಾಪುರದ ಭೀಮಣ್ಣ `ಇಲ್ಲಿ ಆಟದ ಜೊತೆಗೆ ಮಕ್ಕಳ ಕಲಿಕೆ ವಿಶಿಷ್ಟವಾಗಿದೆ. ಈ ಕೇಂದ್ರ ಇತರೆ ಅಂಗನವಾಡಿಗಳಿಗೆ ಮಾದರಿಯಂತಿದೆ’ ಎನ್ನುತ್ತಾರೆ. `ನಾವು ಬಡವರು ಕಾನ್ವೆಂಟಿಗೆ ಕಳಿಸೋವಷ್ಟು ದುಡ್ಡಿಲ್ಲ ತನ್ನ ಮಗಳು ಕಾನ್ವೆಂಟಿಗೆ ಹೋಗುವ ಮಕ್ಕಳಿಗಿಂತ ಚೆನ್ನಾಗಿ ಓದ್ತಾಳೆ’ ಎಂದು ಅಂಗನವಾಡಿಯಲ್ಲಿರುವ ತನ್ನ ಮಗಳ ಬಗ್ಗೆ ಭಾಗ್ಯಮ್ಮ ಹೆಮ್ಮೆಯ ಮಾತುಗಳನ್ನಾಡುತ್ತಾರೆ. ಶಿಶು ಅಭಿವೃದ್ಧಿ ತಾಲೂಕು ಅಧಿಕಾರಿ ಎ.ಆರ್. ಮಧುಸೂದನ ಅವರು ` ಅಂಗನವಾಡಿ ಕಾರ್ಯಕರ್ತೆ ವಸಂತ ಅವರು ಪೂರ್ವ ಪ್ರಾಥಮಿಕ ಮಕ್ಕಳ ಶಿಕ್ಷಣವನ್ನು ಕಲಿಕಾ ಸಾಮಗ್ರಿಗಳನ್ನು ಬಳಸಿ, ಹಲವು ಹೊಸ ಪ್ರಯೋಗಗಳನ್ನು ಮಾಡಿ ಪರಿಣಾಮಕಾರಿಯಾಗಿ ಕಲಿಸುತ್ತಿದ್ದಾರೆ. ಈ ಮಾದರಿಯನ್ನು ತಾಲೂಕಿನ ಇತರೆ ಅಂಗನವಾಡಿಗಳಲ್ಲಿ ಅಳವಡಿಸಿಕೊಳ್ಳಲು ತಿಳಿಸಿದ್ದೇವೆ’ ಎನ್ನುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...