Homeಕರ್ನಾಟಕಕಾನ್ವೆಂಟುಗಳಿಗೂ ಸವಾಲೆಸೆದ ಅಂಗನವಾಡಿ ಕಾರ್ಯಕರ್ತೆ ಬಿ.ವಸಂತ

ಕಾನ್ವೆಂಟುಗಳಿಗೂ ಸವಾಲೆಸೆದ ಅಂಗನವಾಡಿ ಕಾರ್ಯಕರ್ತೆ ಬಿ.ವಸಂತ

- Advertisement -
- Advertisement -

ಎಲೆಮರೆ – 13

ಈಚೆಗೆ ಎಲ್.ಕೆ.ಜಿ. ಯು.ಕೆ.ಜಿಯನ್ನು ಅಂಗನವಾಡಿಯಲ್ಲೇ ಆರಂಭಿಸಿ ಎಂದು ಸಿ.ಐ.ಟಿ.ಯು ಸಂಘಟನೆಯು ಅಂಗನವಾಡಿ ಕಾರ್ಯಕರ್ತೆಯರ ಪರವಾಗಿ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಯಿತು. ರಾಜ್ಯವ್ಯಾಪಿ ಗಮನ ಸೆಳೆಯಿತು. ಇದೀಗ ಸರಕಾರದ ಮಟ್ಟದಲ್ಲಿ ಮಾತುಕತೆಗಳು ನಡೆಯುತ್ತಿದೆ. ಆದರೆ ಇಲ್ಲೊಬ್ಬ ಅಂಗನವಾಡಿ ಕಾರ್ಯಕರ್ತೆ ಸರಕಾರ ಅಧಿಕೃತವಾಗಿ ಎಲ್.ಕೆ.ಜಿ. ಯು.ಕೆ.ಜಿಯನ್ನು ಅಂಗನವಾಡಿಗಳಲ್ಲಿ ಆರಂಭಿಸುವ ಮುನ್ನವೇ ಕಾನ್ವೆಂಟುಗಳಿಗೂ ಸವಾಲೆಸೆಯುವಂತೆ ಅಂಗನವಾಡಿಯನ್ನು ರೂಪಿಸಿದ್ದಾರೆ. ಈಚೆಗೆ ದೇವದುರ್ಗ ಭಾಗದ 40 ಜನ ಅಂಗನವಾಡಿ ಕಾರ್ಯಕರ್ತೆಯರ ತಂಡ ಈ ಅಂಗನವಾಡಿಯನ್ನು ಭೇಟಿ ಮಾಡಿ ನಾವೂ ಹೀಗೆ ಮಾಡಬಹುದೇ ಎಂದು ಪರಿಶೀಲಿಸಿದ್ದಾರೆ. ಈ ಭಾಗದ ಶಿಶು ಅಭಿವೃದ್ಧಿ ತಾಲೂಕು ಅಧಿಕಾರಿ ಎ.ಆರ್. ಮಧುಸೂದನ ಅವರು ಈ ಅಂಗನವಾಡಿಯ ಮಾದರಿಯನ್ನು ಇಡೀ ತಾಲೂಕಿಗೆ ವಿಸ್ತರಿಸುವ ಯೋಚನೆ ಮಾಡಿದ್ದಾರೆ. ಹಾಗಾದರೆ ಇದರ ವಿಶೇಷತೆಯೇನು?

ಜೀರೋದಿಂದ ಮೂರು ನಾಲ್ಕು ವರ್ಷದ ಮಕ್ಕಳು ಚಿಲಿಪಿಲಿಗುಟ್ಟುವ ಈ ಪುಟ್ಟ ಕೋಣೆಯಲ್ಲಿ ಟೀಚರ್ ಕೇಳುವ ಪ್ರತಿ ಪ್ರಶ್ನೆಗಳಿಗೂ ಮಕ್ಕಳು ಸ್ಪರ್ಧೆಗೆ ಬಿದ್ದಂತೆ ಪಟಪಟನೆ ಉತ್ತರಿಸುತ್ತಾರೆ. ಚಕಚಕನೆ ಇಂತಿಷ್ಟು ಪ್ಲಾಸ್ಟಿಕ್ ಕಪ್‍ಗಳನ್ನು ಜೋಡಿಸುತ್ತಾ ಸೂಪರ್ ಮಿನಿಟ್ ರಿಯಾಲಿಟಿ ಶೋನ ಅಣಕು ಮಾಡಿ ಚಪ್ಪಾಳೆ ತಟ್ಟುತ್ತಾರೆ. ಬಾಸ್ಕೆಟ್‍ಬಾಲನ್ನು ನೆಟ್‍ನಲ್ಲಿ ಮಗುವೊಂದು ಎಸೆಯುವಾಗ ಉಳಿದೆಲ್ಲರೂ ಚಪ್ಪಾಳೆ ತಟ್ಟಿ ಹುರಿದುಂಬಿಸುತ್ತಾರೆ. ಗಾಂಧೀಜಿ ಎಂದ ತಕ್ಷಣ ಗಾಂಧೀಜಿಗೆ ಸಂಬಂಧಿಸಿದ ಹತ್ತಾರು ಸಂಗತಿಗಳನ್ನು ಒಬ್ಬರಾದ ನಂತರ ಒಬ್ಬರಂತೆ ಪಟಪಟನೆ ಹೇಳುತ್ತಾ ಗಾಂಧಿಯ ಜೀವನ ಕಥನವನ್ನು ಅರಳಿಸುತ್ತಾರೆ. ಸ್ವಾತಂತ್ರ್ಯ ಎಂದತಕ್ಷಣ ಈ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರ ಹೆಸರನ್ನು ಉಲಿಯುತ್ತಾರೆ. ಸೊಳ್ಳೆ ಎಂದ ತಕ್ಷಣ ಅದರ ಪರಿಚಯ ಹೇಳುತ್ತಲೆ ಅದರಿಂದ ಹರಡುವ ರೋಗಗಳಾವುವು, ಈ ರೋಗಗಳು ಹರಡದಂತೆ ಮನೆಯಲ್ಲಿ ಏನೇನು ಮುಂಜಾಗ್ರತೆ ವಹಿಸಬೇಕು ಎಂದು ಮಕ್ಕಳು ವಿವರಿಸುತ್ತಾರೆ. ಹೀಗೆ ಒಂದೊಂದು ಸಂಗತಿಯ ಬಗೆಗೂ ಸಾಮೂಹಿಕವಾಗಿ ಒಬ್ಬರಾದನಂತರ ಒಬ್ಬರಂತೆ ಉತ್ತರದ ಸರಪಳಿ ಹೆಣೆಯುವ ಈ ಮಕ್ಕಳು ಇಂಟರ್‍ನ್ಯಾಷನಲ್ ಎಂದು ಕರೆದುಕೊಳ್ಳುವ ಯಾವುದೇ ಖಾಸಗಿ ಕಾನ್ವೆಂಟ್ ಸ್ಕೂಲಿನಲ್ಲಿ ಓದುತ್ತಿಲ್ಲ. ಹತ್ತಾರು ಅವಕಾಶಗಳಿರುವ ಸರಕಾರಿ ಶಾಲೆಯ ಮಕ್ಕಳೂ ಅಲ್ಲ. ಬಳ್ಳಾರಿ ಜಿಲ್ಲೆ ಕೊಟ್ಟೂರು ತಾಲೂಕಿನ ಕೂಡ್ಲಿಗಿಯಿಂದ ಪಶ್ಚಿಮಕ್ಕೆ 10 ಕಿಲೋಮೀಟರ್ ದೂರದಲ್ಲಿರುವ ಗಜಾಪುರದ ಅಂಗನವಾಡಿ ಬಿ ಕೇಂದ್ರದ ಮಕ್ಕಳು.

ಹೌದು ಅಂಗನವಾಡಿ ಕಾರ್ಯಕರ್ತೆ ಇಷ್ಟೆಲ್ಲಾ ಪ್ರಯೋಗ ಮಾಡಿದ್ದಾರಾ? ಎಂದು ನೀವು ಈ ಪುಟ್ಟ ಶಾಲೆಯನ್ನು ಪ್ರವೇಶಿಸಿದರೆ, ಹುಬ್ಬೇರಿಸುವಂತೆ ಈ ಅಂಗನವಾಡಿ ಹತ್ತಾರು ಹೊಸ ಹೊಸ ಪ್ರಯೋಗಗಳ ಕಲಿಕಾ ಸಾಮಗ್ರಿಗಳ ಅಕ್ಷಯ ಪಾತ್ರೆಯಂತೆ ಗಮನ ಸೆಳೆಯುತ್ತದೆ. ಮಕ್ಕಳ ಸೃಜನಶೀಲತೆಯನ್ನು ಅವರದೇ ಪರಿಸರದಲ್ಲಿ ಬಳಸಿ ಬಿಸಾಡಿದ, ಮಕ್ಕಳಿಂದಲೇ ಸಂಗ್ರಹಿಸಿದ ವಸ್ತುಗಳನ್ನು ಬಳಸಿಯೇ ತಯಾರಿಸಲಾಗಿದೆ. ಮನೆಗಳಲ್ಲಿ ಲಭ್ಯವಿರುವ ಬೀಜಗಳನ್ನು ಕಲೆ ಹಾಕಿ ಸಂಗ್ರಹ ಮಾಡಲಾಗಿದೆ. ಒಂದೊಂದು ಬೀಜವನ್ನು ತೋರಿಸಿದಾಗಲೂ ಆ ಬೀಜದ ಬೆಳೆ, ಹಣ್ಣು, ಕಾಯಿ, ಬೆಳೆಯುವ ಕಾಲಮಾನ, ಬೆಳೆಯ ಅವಧಿ ಇತ್ಯಾದಿಗಳನ್ನು ಮಕ್ಕಳು ಹೇಳುತ್ತಾರೆ.

ಪ್ರತಿದಿನ ಹನ್ನೊಂದು ಗಂಟೆಯ ಹೊತ್ತಿಗೆ ಒಬ್ಬ ಮಗು ಶಾಲೆಯಿಂದ ಹೊರಗಡೆ ಬಂದು ವಾತಾವರಣವನ್ನು ಅವಲೋಕಿಸಿ, ಮಕ್ಕಳಿಗೆ ಈ ದಿನದ ಹವಾಮಾನ ಹೇಗಿದೆ ಎಂದು ವಿವರಿಸುತ್ತದೆ. ಪ್ರತೀ ಮಕ್ಕಳಿಗೂ ಅವರದೇ ಆದ ಒಂದು ಚೀಲವಿದೆ. ಆ ಮಗು ಒಂದು ವಾರದಲ್ಲಿ ಬರೆಯುವ ಡ್ರಾಯಿಂಗ್, ಬರಹದ ಪುಟಗಳನ್ನು ಆಯಾ ಮಗುವಿನ ಚೀಲದಲ್ಲಿ ಶೇಖರಿಸಲಾಗುತ್ತದೆ. ವಾರಕ್ಕೊಮ್ಮೆ ಪೋಷಕರನ್ನು ಕರೆಸಿ ಆಯಾ ಮಕ್ಕಳ ವಾರದ ಚಟುವಟಿಕೆಯನ್ನು ವಿವರಿಸಲಾಗುತ್ತದೆ. ಕನ್ನಡ ಇಂಗ್ಲಿಷ್ ಅಂಕೆಸಂಖ್ಯೆಯ ಅಕ್ಷರಗಳನ್ನು ಗುರುತಿಸುತ್ತಲೇ ಓದುವ ಪ್ರಯತ್ನ ಮಾಡುವ ಮಕ್ಕಳನ್ನು ನೋಡಿ ಪ್ರತಿ ತಂದೆತಾಯಿ ಅಥವಾ ಪೋಷಕರಿಗೆ ತಮ್ಮ ಮಗು ಏನೇನು ಕಲಿಯುತ್ತಿದೆ ಎನ್ನುವ ಸ್ಪಷ್ಟತೆ ಸಿಕ್ಕು ಖುಷಿಗೊಳ್ಳುತ್ತಾರೆ.

ಹಳ್ಳಿಯಲ್ಲಿ ಬಳಸಿ ಬಿಸಾಡುವ ಅನೇಕ ಚಿಕ್ಕಪುಟ್ಟ ವಸ್ತುಗಳೆಲ್ಲಾ ಕಲಿಕಾ ಸಾಮಗ್ರಿಗಳಾಗಿ ಅಂಗನವಾಡಿ ಸೇರುತ್ತವೆ. ದಿನಬಳಕೆಯ ವಸ್ತುಗಳ ಖಾಲಿ ಸಾಮಾನುಗಳಿಂದ ಆಯಾ ಸಾಮಗ್ರಿಯ ಬಳಕೆಯ ಬಗ್ಗೆ ಕಲಿತ ಮಕ್ಕಳು ಅದನ್ನು ಮನೆಯಲ್ಲಿ ತಂದೆತಾಯಿಯರಿಗೆ ವಿವರಿಸುತ್ತಾರೆ. ಪ್ರತೀ ವಾರ ಒಂದು ವಿಷಯ ಆಯ್ದುಕೊಂಡು ಆ ವಿಷಯದ ಬಗ್ಗೆ ಚಿತ್ರಗಳನ್ನು ತೋರಿಸುತ್ತಾ ಅವುಗಳ ಲಕ್ಷಣಗಳನ್ನು ವಿವರಿಸುತ್ತಾ ಹೋಗುತ್ತಾರೆ. ಒಂದು ಚಿತ್ರವನ್ನು ತೋರಿಸಿದ ತಕ್ಷಣ ಮಕ್ಕಳು ಆ ಚಿತ್ರಕ್ಕೊಂದು ಕತೆ ಕಟ್ಟುತ್ತಾರೆ. ಮೋಡ, ಹವಾಮಾನ, ಹೊಲಗಳಲ್ಲಿ ಬೆಳೆಯುವ ಬೆಳೆಗಳು, ಸುತ್ತಮುತ್ತಣ ಪರಿಸರ ಎಲ್ಲದರ ಬಗ್ಗೆಯೂ ಮಕ್ಕಳು ಮಾತನಾಡುತ್ತಾರೆ. ಖಾಲಿ ರಟ್ಟಿದ ಬಾಕ್ಸ್‍ಗಳನ್ನು ಬಳಸಿ ಮನೆ, ಆಸ್ಪತ್ರೆ, ಶಾಲೆಯ ಮಾದರಿಗಳನ್ನು ತಯಾರಿಸಿ ಸ್ವಚ್ಛ ಹಳ್ಳಿಯೊಂದರ ಚಿತ್ರಣವನ್ನು ಕಣ್ಣಮುಂದೆ ತರುತ್ತಾರೆ. ತೂಗುಹಾಕಿದ ಚೀಲಗಳ ಬಣ್ಣವನ್ನು ಗುರುತಿಸಿ ಆಯಾ ಬಣ್ಣದ ಹತ್ತಾರು ಸಂಗತಿಗಳನ್ನು ಜೋಡಿಸಿ ಹೇಳುತ್ತಾರೆ. ಹೀಗೆ ಮಕ್ಕಳ ಗ್ರಹಿಕೆಯನ್ನು ಸೂಕ್ಷ್ಮಗೊಳಿಸಲಾಗಿದೆ. ಮಕ್ಕಳು ಪ್ರತಿಯೊಂದರ ಬಗ್ಗೆಯೂ ತಿಳಿದುಕೊಳ್ಳುವ ಕುತೂಹಲಿಗಳಾಗಿದ್ದಾರೆ. ಸಮಗ್ರ ಬಾಲವಿಕಾಸ ಯೋಜನೆಯ ಪೂರ್ವ ಪ್ರಾಥಮಿಕ ಶಿಕ್ಷಣದ ಉದ್ದೇಶ ಇಲ್ಲಿ ಸಾಕಾರಗೊಂಡಿದೆ. ಇದನ್ನು ಅವಿರತ ಶ್ರಮಿಸಿ ರೂಪಿಸಿದವರು ಇಲ್ಲಿನ ಅಂಗನವಾಡಿ ಕಾರ್ಯಕರ್ತೆ ಬಿ.ವಸಂತ.

ಅಂಗನವಾಡಿ ಕಾರ್ಯಕರ್ತೆಯಾಗಿ ಕಳೆದ ಏಳು ವರ್ಷದಿಂದ ಕೆಲಸ ಮಾಡುವ ವಸಂತ ಅವರು ತನಗಿರುವ ಅಂಗವೈಕಲ್ಯವನ್ನು ಮರೆತು ಮಕ್ಕಳ ಜತೆ ಮಕ್ಕಳಂತೆಯೇ ಬೆರೆಯುತ್ತಾರೆ. ನಾಳೆ ಮಕ್ಕಳಿಗೆ ಯಾವ ಪ್ರಯೋಗ ಮಾಡಬೇಕು, ಹೊಸದೇನನ್ನು ಕಲಿಸಬೇಕು ಎನ್ನುವ ಯೋಚನೆಯೇ ಅವರನ್ನು ಕ್ರಿಯಾಶೀಲವಾಗಿಟ್ಟಿದೆ. `ನನಗಿನ್ನೂ ತುಂಬಾ ಕನಸುಗಳಿವೆ ಸರ್, ನಮ್ಮ ಇಲಾಖೆ ಮತ್ತು ಊರಿನ ಗ್ರಾಮಸ್ಥರಿಂದ ಒಳ್ಳೆಯ ಪ್ರೋತ್ಸಾಹವಿದೆ. ಆದರೆ ಈ ತರಹದ ಪ್ರಯೋಗಗಳಿಗೆ ಇಲಾಖೆಯಿಂದ ಹಣ ಕೊಡುವ ನಿಯಮವಿಲ್ಲ. ಹಾಗಾಗಿ ಅಗತ್ಯವಿದ್ದ ಹಣವನ್ನು ನಾವೇ ಕೈಯಿಂದ ಹಾಕಬೇಕು. ಅಥವಾ ಹಣವಿಲ್ಲದೆ ಪುಕ್ಕಟೆಯಾಗಿ ಸಿಗುವ ವಸ್ತುಗಳನ್ನೆ ಬಳಸಿ ಪ್ರಯೋಗಗಳನ್ನು ಮಾಡಬೇಕು’ ಎನ್ನುತ್ತಾರೆ.

ಪತ್ರಕರ್ತರಾದ ಗಜಾಪುರದ ಭೀಮಣ್ಣ `ಇಲ್ಲಿ ಆಟದ ಜೊತೆಗೆ ಮಕ್ಕಳ ಕಲಿಕೆ ವಿಶಿಷ್ಟವಾಗಿದೆ. ಈ ಕೇಂದ್ರ ಇತರೆ ಅಂಗನವಾಡಿಗಳಿಗೆ ಮಾದರಿಯಂತಿದೆ’ ಎನ್ನುತ್ತಾರೆ. `ನಾವು ಬಡವರು ಕಾನ್ವೆಂಟಿಗೆ ಕಳಿಸೋವಷ್ಟು ದುಡ್ಡಿಲ್ಲ ತನ್ನ ಮಗಳು ಕಾನ್ವೆಂಟಿಗೆ ಹೋಗುವ ಮಕ್ಕಳಿಗಿಂತ ಚೆನ್ನಾಗಿ ಓದ್ತಾಳೆ’ ಎಂದು ಅಂಗನವಾಡಿಯಲ್ಲಿರುವ ತನ್ನ ಮಗಳ ಬಗ್ಗೆ ಭಾಗ್ಯಮ್ಮ ಹೆಮ್ಮೆಯ ಮಾತುಗಳನ್ನಾಡುತ್ತಾರೆ. ಶಿಶು ಅಭಿವೃದ್ಧಿ ತಾಲೂಕು ಅಧಿಕಾರಿ ಎ.ಆರ್. ಮಧುಸೂದನ ಅವರು ` ಅಂಗನವಾಡಿ ಕಾರ್ಯಕರ್ತೆ ವಸಂತ ಅವರು ಪೂರ್ವ ಪ್ರಾಥಮಿಕ ಮಕ್ಕಳ ಶಿಕ್ಷಣವನ್ನು ಕಲಿಕಾ ಸಾಮಗ್ರಿಗಳನ್ನು ಬಳಸಿ, ಹಲವು ಹೊಸ ಪ್ರಯೋಗಗಳನ್ನು ಮಾಡಿ ಪರಿಣಾಮಕಾರಿಯಾಗಿ ಕಲಿಸುತ್ತಿದ್ದಾರೆ. ಈ ಮಾದರಿಯನ್ನು ತಾಲೂಕಿನ ಇತರೆ ಅಂಗನವಾಡಿಗಳಲ್ಲಿ ಅಳವಡಿಸಿಕೊಳ್ಳಲು ತಿಳಿಸಿದ್ದೇವೆ’ ಎನ್ನುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...