Homeಕರ್ನಾಟಕಕಾನ್ವೆಂಟುಗಳಿಗೂ ಸವಾಲೆಸೆದ ಅಂಗನವಾಡಿ ಕಾರ್ಯಕರ್ತೆ ಬಿ.ವಸಂತ

ಕಾನ್ವೆಂಟುಗಳಿಗೂ ಸವಾಲೆಸೆದ ಅಂಗನವಾಡಿ ಕಾರ್ಯಕರ್ತೆ ಬಿ.ವಸಂತ

- Advertisement -
- Advertisement -

ಎಲೆಮರೆ – 13

ಈಚೆಗೆ ಎಲ್.ಕೆ.ಜಿ. ಯು.ಕೆ.ಜಿಯನ್ನು ಅಂಗನವಾಡಿಯಲ್ಲೇ ಆರಂಭಿಸಿ ಎಂದು ಸಿ.ಐ.ಟಿ.ಯು ಸಂಘಟನೆಯು ಅಂಗನವಾಡಿ ಕಾರ್ಯಕರ್ತೆಯರ ಪರವಾಗಿ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಯಿತು. ರಾಜ್ಯವ್ಯಾಪಿ ಗಮನ ಸೆಳೆಯಿತು. ಇದೀಗ ಸರಕಾರದ ಮಟ್ಟದಲ್ಲಿ ಮಾತುಕತೆಗಳು ನಡೆಯುತ್ತಿದೆ. ಆದರೆ ಇಲ್ಲೊಬ್ಬ ಅಂಗನವಾಡಿ ಕಾರ್ಯಕರ್ತೆ ಸರಕಾರ ಅಧಿಕೃತವಾಗಿ ಎಲ್.ಕೆ.ಜಿ. ಯು.ಕೆ.ಜಿಯನ್ನು ಅಂಗನವಾಡಿಗಳಲ್ಲಿ ಆರಂಭಿಸುವ ಮುನ್ನವೇ ಕಾನ್ವೆಂಟುಗಳಿಗೂ ಸವಾಲೆಸೆಯುವಂತೆ ಅಂಗನವಾಡಿಯನ್ನು ರೂಪಿಸಿದ್ದಾರೆ. ಈಚೆಗೆ ದೇವದುರ್ಗ ಭಾಗದ 40 ಜನ ಅಂಗನವಾಡಿ ಕಾರ್ಯಕರ್ತೆಯರ ತಂಡ ಈ ಅಂಗನವಾಡಿಯನ್ನು ಭೇಟಿ ಮಾಡಿ ನಾವೂ ಹೀಗೆ ಮಾಡಬಹುದೇ ಎಂದು ಪರಿಶೀಲಿಸಿದ್ದಾರೆ. ಈ ಭಾಗದ ಶಿಶು ಅಭಿವೃದ್ಧಿ ತಾಲೂಕು ಅಧಿಕಾರಿ ಎ.ಆರ್. ಮಧುಸೂದನ ಅವರು ಈ ಅಂಗನವಾಡಿಯ ಮಾದರಿಯನ್ನು ಇಡೀ ತಾಲೂಕಿಗೆ ವಿಸ್ತರಿಸುವ ಯೋಚನೆ ಮಾಡಿದ್ದಾರೆ. ಹಾಗಾದರೆ ಇದರ ವಿಶೇಷತೆಯೇನು?

ಜೀರೋದಿಂದ ಮೂರು ನಾಲ್ಕು ವರ್ಷದ ಮಕ್ಕಳು ಚಿಲಿಪಿಲಿಗುಟ್ಟುವ ಈ ಪುಟ್ಟ ಕೋಣೆಯಲ್ಲಿ ಟೀಚರ್ ಕೇಳುವ ಪ್ರತಿ ಪ್ರಶ್ನೆಗಳಿಗೂ ಮಕ್ಕಳು ಸ್ಪರ್ಧೆಗೆ ಬಿದ್ದಂತೆ ಪಟಪಟನೆ ಉತ್ತರಿಸುತ್ತಾರೆ. ಚಕಚಕನೆ ಇಂತಿಷ್ಟು ಪ್ಲಾಸ್ಟಿಕ್ ಕಪ್‍ಗಳನ್ನು ಜೋಡಿಸುತ್ತಾ ಸೂಪರ್ ಮಿನಿಟ್ ರಿಯಾಲಿಟಿ ಶೋನ ಅಣಕು ಮಾಡಿ ಚಪ್ಪಾಳೆ ತಟ್ಟುತ್ತಾರೆ. ಬಾಸ್ಕೆಟ್‍ಬಾಲನ್ನು ನೆಟ್‍ನಲ್ಲಿ ಮಗುವೊಂದು ಎಸೆಯುವಾಗ ಉಳಿದೆಲ್ಲರೂ ಚಪ್ಪಾಳೆ ತಟ್ಟಿ ಹುರಿದುಂಬಿಸುತ್ತಾರೆ. ಗಾಂಧೀಜಿ ಎಂದ ತಕ್ಷಣ ಗಾಂಧೀಜಿಗೆ ಸಂಬಂಧಿಸಿದ ಹತ್ತಾರು ಸಂಗತಿಗಳನ್ನು ಒಬ್ಬರಾದ ನಂತರ ಒಬ್ಬರಂತೆ ಪಟಪಟನೆ ಹೇಳುತ್ತಾ ಗಾಂಧಿಯ ಜೀವನ ಕಥನವನ್ನು ಅರಳಿಸುತ್ತಾರೆ. ಸ್ವಾತಂತ್ರ್ಯ ಎಂದತಕ್ಷಣ ಈ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರ ಹೆಸರನ್ನು ಉಲಿಯುತ್ತಾರೆ. ಸೊಳ್ಳೆ ಎಂದ ತಕ್ಷಣ ಅದರ ಪರಿಚಯ ಹೇಳುತ್ತಲೆ ಅದರಿಂದ ಹರಡುವ ರೋಗಗಳಾವುವು, ಈ ರೋಗಗಳು ಹರಡದಂತೆ ಮನೆಯಲ್ಲಿ ಏನೇನು ಮುಂಜಾಗ್ರತೆ ವಹಿಸಬೇಕು ಎಂದು ಮಕ್ಕಳು ವಿವರಿಸುತ್ತಾರೆ. ಹೀಗೆ ಒಂದೊಂದು ಸಂಗತಿಯ ಬಗೆಗೂ ಸಾಮೂಹಿಕವಾಗಿ ಒಬ್ಬರಾದನಂತರ ಒಬ್ಬರಂತೆ ಉತ್ತರದ ಸರಪಳಿ ಹೆಣೆಯುವ ಈ ಮಕ್ಕಳು ಇಂಟರ್‍ನ್ಯಾಷನಲ್ ಎಂದು ಕರೆದುಕೊಳ್ಳುವ ಯಾವುದೇ ಖಾಸಗಿ ಕಾನ್ವೆಂಟ್ ಸ್ಕೂಲಿನಲ್ಲಿ ಓದುತ್ತಿಲ್ಲ. ಹತ್ತಾರು ಅವಕಾಶಗಳಿರುವ ಸರಕಾರಿ ಶಾಲೆಯ ಮಕ್ಕಳೂ ಅಲ್ಲ. ಬಳ್ಳಾರಿ ಜಿಲ್ಲೆ ಕೊಟ್ಟೂರು ತಾಲೂಕಿನ ಕೂಡ್ಲಿಗಿಯಿಂದ ಪಶ್ಚಿಮಕ್ಕೆ 10 ಕಿಲೋಮೀಟರ್ ದೂರದಲ್ಲಿರುವ ಗಜಾಪುರದ ಅಂಗನವಾಡಿ ಬಿ ಕೇಂದ್ರದ ಮಕ್ಕಳು.

ಹೌದು ಅಂಗನವಾಡಿ ಕಾರ್ಯಕರ್ತೆ ಇಷ್ಟೆಲ್ಲಾ ಪ್ರಯೋಗ ಮಾಡಿದ್ದಾರಾ? ಎಂದು ನೀವು ಈ ಪುಟ್ಟ ಶಾಲೆಯನ್ನು ಪ್ರವೇಶಿಸಿದರೆ, ಹುಬ್ಬೇರಿಸುವಂತೆ ಈ ಅಂಗನವಾಡಿ ಹತ್ತಾರು ಹೊಸ ಹೊಸ ಪ್ರಯೋಗಗಳ ಕಲಿಕಾ ಸಾಮಗ್ರಿಗಳ ಅಕ್ಷಯ ಪಾತ್ರೆಯಂತೆ ಗಮನ ಸೆಳೆಯುತ್ತದೆ. ಮಕ್ಕಳ ಸೃಜನಶೀಲತೆಯನ್ನು ಅವರದೇ ಪರಿಸರದಲ್ಲಿ ಬಳಸಿ ಬಿಸಾಡಿದ, ಮಕ್ಕಳಿಂದಲೇ ಸಂಗ್ರಹಿಸಿದ ವಸ್ತುಗಳನ್ನು ಬಳಸಿಯೇ ತಯಾರಿಸಲಾಗಿದೆ. ಮನೆಗಳಲ್ಲಿ ಲಭ್ಯವಿರುವ ಬೀಜಗಳನ್ನು ಕಲೆ ಹಾಕಿ ಸಂಗ್ರಹ ಮಾಡಲಾಗಿದೆ. ಒಂದೊಂದು ಬೀಜವನ್ನು ತೋರಿಸಿದಾಗಲೂ ಆ ಬೀಜದ ಬೆಳೆ, ಹಣ್ಣು, ಕಾಯಿ, ಬೆಳೆಯುವ ಕಾಲಮಾನ, ಬೆಳೆಯ ಅವಧಿ ಇತ್ಯಾದಿಗಳನ್ನು ಮಕ್ಕಳು ಹೇಳುತ್ತಾರೆ.

ಪ್ರತಿದಿನ ಹನ್ನೊಂದು ಗಂಟೆಯ ಹೊತ್ತಿಗೆ ಒಬ್ಬ ಮಗು ಶಾಲೆಯಿಂದ ಹೊರಗಡೆ ಬಂದು ವಾತಾವರಣವನ್ನು ಅವಲೋಕಿಸಿ, ಮಕ್ಕಳಿಗೆ ಈ ದಿನದ ಹವಾಮಾನ ಹೇಗಿದೆ ಎಂದು ವಿವರಿಸುತ್ತದೆ. ಪ್ರತೀ ಮಕ್ಕಳಿಗೂ ಅವರದೇ ಆದ ಒಂದು ಚೀಲವಿದೆ. ಆ ಮಗು ಒಂದು ವಾರದಲ್ಲಿ ಬರೆಯುವ ಡ್ರಾಯಿಂಗ್, ಬರಹದ ಪುಟಗಳನ್ನು ಆಯಾ ಮಗುವಿನ ಚೀಲದಲ್ಲಿ ಶೇಖರಿಸಲಾಗುತ್ತದೆ. ವಾರಕ್ಕೊಮ್ಮೆ ಪೋಷಕರನ್ನು ಕರೆಸಿ ಆಯಾ ಮಕ್ಕಳ ವಾರದ ಚಟುವಟಿಕೆಯನ್ನು ವಿವರಿಸಲಾಗುತ್ತದೆ. ಕನ್ನಡ ಇಂಗ್ಲಿಷ್ ಅಂಕೆಸಂಖ್ಯೆಯ ಅಕ್ಷರಗಳನ್ನು ಗುರುತಿಸುತ್ತಲೇ ಓದುವ ಪ್ರಯತ್ನ ಮಾಡುವ ಮಕ್ಕಳನ್ನು ನೋಡಿ ಪ್ರತಿ ತಂದೆತಾಯಿ ಅಥವಾ ಪೋಷಕರಿಗೆ ತಮ್ಮ ಮಗು ಏನೇನು ಕಲಿಯುತ್ತಿದೆ ಎನ್ನುವ ಸ್ಪಷ್ಟತೆ ಸಿಕ್ಕು ಖುಷಿಗೊಳ್ಳುತ್ತಾರೆ.

ಹಳ್ಳಿಯಲ್ಲಿ ಬಳಸಿ ಬಿಸಾಡುವ ಅನೇಕ ಚಿಕ್ಕಪುಟ್ಟ ವಸ್ತುಗಳೆಲ್ಲಾ ಕಲಿಕಾ ಸಾಮಗ್ರಿಗಳಾಗಿ ಅಂಗನವಾಡಿ ಸೇರುತ್ತವೆ. ದಿನಬಳಕೆಯ ವಸ್ತುಗಳ ಖಾಲಿ ಸಾಮಾನುಗಳಿಂದ ಆಯಾ ಸಾಮಗ್ರಿಯ ಬಳಕೆಯ ಬಗ್ಗೆ ಕಲಿತ ಮಕ್ಕಳು ಅದನ್ನು ಮನೆಯಲ್ಲಿ ತಂದೆತಾಯಿಯರಿಗೆ ವಿವರಿಸುತ್ತಾರೆ. ಪ್ರತೀ ವಾರ ಒಂದು ವಿಷಯ ಆಯ್ದುಕೊಂಡು ಆ ವಿಷಯದ ಬಗ್ಗೆ ಚಿತ್ರಗಳನ್ನು ತೋರಿಸುತ್ತಾ ಅವುಗಳ ಲಕ್ಷಣಗಳನ್ನು ವಿವರಿಸುತ್ತಾ ಹೋಗುತ್ತಾರೆ. ಒಂದು ಚಿತ್ರವನ್ನು ತೋರಿಸಿದ ತಕ್ಷಣ ಮಕ್ಕಳು ಆ ಚಿತ್ರಕ್ಕೊಂದು ಕತೆ ಕಟ್ಟುತ್ತಾರೆ. ಮೋಡ, ಹವಾಮಾನ, ಹೊಲಗಳಲ್ಲಿ ಬೆಳೆಯುವ ಬೆಳೆಗಳು, ಸುತ್ತಮುತ್ತಣ ಪರಿಸರ ಎಲ್ಲದರ ಬಗ್ಗೆಯೂ ಮಕ್ಕಳು ಮಾತನಾಡುತ್ತಾರೆ. ಖಾಲಿ ರಟ್ಟಿದ ಬಾಕ್ಸ್‍ಗಳನ್ನು ಬಳಸಿ ಮನೆ, ಆಸ್ಪತ್ರೆ, ಶಾಲೆಯ ಮಾದರಿಗಳನ್ನು ತಯಾರಿಸಿ ಸ್ವಚ್ಛ ಹಳ್ಳಿಯೊಂದರ ಚಿತ್ರಣವನ್ನು ಕಣ್ಣಮುಂದೆ ತರುತ್ತಾರೆ. ತೂಗುಹಾಕಿದ ಚೀಲಗಳ ಬಣ್ಣವನ್ನು ಗುರುತಿಸಿ ಆಯಾ ಬಣ್ಣದ ಹತ್ತಾರು ಸಂಗತಿಗಳನ್ನು ಜೋಡಿಸಿ ಹೇಳುತ್ತಾರೆ. ಹೀಗೆ ಮಕ್ಕಳ ಗ್ರಹಿಕೆಯನ್ನು ಸೂಕ್ಷ್ಮಗೊಳಿಸಲಾಗಿದೆ. ಮಕ್ಕಳು ಪ್ರತಿಯೊಂದರ ಬಗ್ಗೆಯೂ ತಿಳಿದುಕೊಳ್ಳುವ ಕುತೂಹಲಿಗಳಾಗಿದ್ದಾರೆ. ಸಮಗ್ರ ಬಾಲವಿಕಾಸ ಯೋಜನೆಯ ಪೂರ್ವ ಪ್ರಾಥಮಿಕ ಶಿಕ್ಷಣದ ಉದ್ದೇಶ ಇಲ್ಲಿ ಸಾಕಾರಗೊಂಡಿದೆ. ಇದನ್ನು ಅವಿರತ ಶ್ರಮಿಸಿ ರೂಪಿಸಿದವರು ಇಲ್ಲಿನ ಅಂಗನವಾಡಿ ಕಾರ್ಯಕರ್ತೆ ಬಿ.ವಸಂತ.

ಅಂಗನವಾಡಿ ಕಾರ್ಯಕರ್ತೆಯಾಗಿ ಕಳೆದ ಏಳು ವರ್ಷದಿಂದ ಕೆಲಸ ಮಾಡುವ ವಸಂತ ಅವರು ತನಗಿರುವ ಅಂಗವೈಕಲ್ಯವನ್ನು ಮರೆತು ಮಕ್ಕಳ ಜತೆ ಮಕ್ಕಳಂತೆಯೇ ಬೆರೆಯುತ್ತಾರೆ. ನಾಳೆ ಮಕ್ಕಳಿಗೆ ಯಾವ ಪ್ರಯೋಗ ಮಾಡಬೇಕು, ಹೊಸದೇನನ್ನು ಕಲಿಸಬೇಕು ಎನ್ನುವ ಯೋಚನೆಯೇ ಅವರನ್ನು ಕ್ರಿಯಾಶೀಲವಾಗಿಟ್ಟಿದೆ. `ನನಗಿನ್ನೂ ತುಂಬಾ ಕನಸುಗಳಿವೆ ಸರ್, ನಮ್ಮ ಇಲಾಖೆ ಮತ್ತು ಊರಿನ ಗ್ರಾಮಸ್ಥರಿಂದ ಒಳ್ಳೆಯ ಪ್ರೋತ್ಸಾಹವಿದೆ. ಆದರೆ ಈ ತರಹದ ಪ್ರಯೋಗಗಳಿಗೆ ಇಲಾಖೆಯಿಂದ ಹಣ ಕೊಡುವ ನಿಯಮವಿಲ್ಲ. ಹಾಗಾಗಿ ಅಗತ್ಯವಿದ್ದ ಹಣವನ್ನು ನಾವೇ ಕೈಯಿಂದ ಹಾಕಬೇಕು. ಅಥವಾ ಹಣವಿಲ್ಲದೆ ಪುಕ್ಕಟೆಯಾಗಿ ಸಿಗುವ ವಸ್ತುಗಳನ್ನೆ ಬಳಸಿ ಪ್ರಯೋಗಗಳನ್ನು ಮಾಡಬೇಕು’ ಎನ್ನುತ್ತಾರೆ.

ಪತ್ರಕರ್ತರಾದ ಗಜಾಪುರದ ಭೀಮಣ್ಣ `ಇಲ್ಲಿ ಆಟದ ಜೊತೆಗೆ ಮಕ್ಕಳ ಕಲಿಕೆ ವಿಶಿಷ್ಟವಾಗಿದೆ. ಈ ಕೇಂದ್ರ ಇತರೆ ಅಂಗನವಾಡಿಗಳಿಗೆ ಮಾದರಿಯಂತಿದೆ’ ಎನ್ನುತ್ತಾರೆ. `ನಾವು ಬಡವರು ಕಾನ್ವೆಂಟಿಗೆ ಕಳಿಸೋವಷ್ಟು ದುಡ್ಡಿಲ್ಲ ತನ್ನ ಮಗಳು ಕಾನ್ವೆಂಟಿಗೆ ಹೋಗುವ ಮಕ್ಕಳಿಗಿಂತ ಚೆನ್ನಾಗಿ ಓದ್ತಾಳೆ’ ಎಂದು ಅಂಗನವಾಡಿಯಲ್ಲಿರುವ ತನ್ನ ಮಗಳ ಬಗ್ಗೆ ಭಾಗ್ಯಮ್ಮ ಹೆಮ್ಮೆಯ ಮಾತುಗಳನ್ನಾಡುತ್ತಾರೆ. ಶಿಶು ಅಭಿವೃದ್ಧಿ ತಾಲೂಕು ಅಧಿಕಾರಿ ಎ.ಆರ್. ಮಧುಸೂದನ ಅವರು ` ಅಂಗನವಾಡಿ ಕಾರ್ಯಕರ್ತೆ ವಸಂತ ಅವರು ಪೂರ್ವ ಪ್ರಾಥಮಿಕ ಮಕ್ಕಳ ಶಿಕ್ಷಣವನ್ನು ಕಲಿಕಾ ಸಾಮಗ್ರಿಗಳನ್ನು ಬಳಸಿ, ಹಲವು ಹೊಸ ಪ್ರಯೋಗಗಳನ್ನು ಮಾಡಿ ಪರಿಣಾಮಕಾರಿಯಾಗಿ ಕಲಿಸುತ್ತಿದ್ದಾರೆ. ಈ ಮಾದರಿಯನ್ನು ತಾಲೂಕಿನ ಇತರೆ ಅಂಗನವಾಡಿಗಳಲ್ಲಿ ಅಳವಡಿಸಿಕೊಳ್ಳಲು ತಿಳಿಸಿದ್ದೇವೆ’ ಎನ್ನುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...