Homeಕರ್ನಾಟಕಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ಅವ್ಯವಹಾರ: ಸಿಬಿಐ ತನಿಖೆಗೆ ಆದೇಶ

ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ಅವ್ಯವಹಾರ: ಸಿಬಿಐ ತನಿಖೆಗೆ ಆದೇಶ

- Advertisement -
- Advertisement -

ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್, ವಸಿಷ್ಠ ಬ್ಯಾಂಕ್‌ ಮತ್ತು ಗುರು ಸಾರ್ವಭೌಮ ಬ್ಯಾಂಕ್‌ಗಳಲ್ಲಿ ನಡೆದ ಹಗರಣವನ್ನು ಸಿಬಿಐ ತನಿಖೆಗೆ ರಾಜ್ಯ ಸರಕಾರ ಒಪ್ಪಿಸಿದೆ.

ಕಳೆದ ಸರಕಾರದ ಅವಧಿಯಲ್ಲಿ ಪ್ರತಿಪಕ್ಷದ ನಾಯಕರಾಗಿದ್ದಾಗ ಸಿದ್ದರಾಮಯ್ಯ ಅವರು ಈ ವಿಚಾರದಲ್ಲಿ ಬ್ಯಾಂಕ್‌ಗಳಿಂದ ಠೇವಣಿದಾರರಿಗೆ ಆಗಿರುವ ನಷ್ಟ ಮತ್ತು ವಂಚನೆಯ ವಿರುದ್ಧ ಸದನದ ಒಳಗೆ ಮತ್ತು ಹೊರಗೆ ಪ್ರತಿಭಟನೆ ಮಾಡಿ ಸೂಕ್ತ ತನಿಖೆ ನಡೆಸಿ ಬ್ಯಾಂಕಿನ ಗ್ರಾಹಕರಿಗೆ ನ್ಯಾಯ ಒದಗಿಸಲು ಆಗ್ರಹಿಸಿದ್ದರು. ಇದೀಗ ಪ್ರರಕಣವನ್ನು ಸಿಎಂ ಸಿದ್ದರಾಮಯ್ಯ ಸಿಬಿಐ ತನಿಖೆಗೆ ಒಪ್ಪಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಠೇವಣಿ ಹಣ ಕಳೆದುಕೊಂಡವರ ಹತಾಶೆ, ಸಂಕಟವನ್ನು ಕಣ್ಣಾರೆ ಕಂಡಿದ್ದೇನೆ. ಈ ಕಾರಣಕ್ಕಾಗಿ ಸೂಕ್ತ ತನಿಖೆ ನಡೆದು, ಎಲ್ಲ ಸಂತ್ರಸ್ತರಿಗೂ ನ್ಯಾಯ ಸಿಗಲಿ ಎಂಬ ಉದ್ದೇಶದಿಂದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ಬಡ್ಡಿಯ ಆಮಿಷವೊಡ್ಡಿ ಜನರಿಂದ ಠೇವಣಿ ಪಡೆದು ವಂಚಿಸಿದ ಆರೋಪ ಕೇಳಿ ಬಂದಿತ್ತು. ಹೆಚ್ಚಿನ ಬಡ್ಡಿ ಆಸೆಗೆ ಸಾವಿರಾರು ಗ್ರಾಹಕರು ಈ ಸಂಸ್ಥೆಯಲ್ಲಿ ನೂರಾರು ಕೋಟಿ ರೂ.ಠೇವಣಿ ಇಟ್ಟಿದ್ದರು. ಸಾಲಗಾರರು, ಸಂಸ್ಥೆಯ ಆಡಳಿತ ಮಂಡಳಿ ಮತ್ತು ಉದ್ಯೋಗಿಗಳೊಂದಿಗೆ ಶಾಮೀಲಾಗಿ ಭಾರೀ ಮೊತ್ತದ ಸಾಲ ಪಡೆದು ಮರು ಪಾವತಿಸದೆ ವಂಚಿಸಿರುವ ಆರೋಪ ಕೇಳಿ ಬಂದಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಬಡ್ಡಿ ಠೇವಣಿದಾರರ ರಕ್ಷಣಾ ಕಾಯಿದೆ-2004 ಮತ್ತು ಐಪಿಸಿಯ ವಿವಿಧ ಸೆಕ್ಷನ್‌ಗಳಡಿಯಲ್ಲಿ ಸಂಸ್ಥೆ ಹಾಗೂ ಇತರರ ವಿರುದ್ಧ ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದರು. ಈ ಮೊದಲು ಸಂಸ್ಥೆಯ ಅಧ್ಯಕ್ಷರು ಸೇರಿದಂತೆ 4 ಮಂದಿಯನ್ನು ಬಂಧಿಸಲಾಗಿತ್ತು. ಬಳಿಕ ಇ.ಡಿ. ಅಧಿಕಾರಿಗಳು 2020ರಲ್ಲಿ ಪಿಎಂಎಲ್‌ಎಯಡಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದು, ಬ್ಯಾಂಕ್‌ಗೆ ಸೇರಿದ 114.19 ಕೋಟಿ ರೂ.ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿದೆ. ಜೊತೆಗೆ ಸಂಸ್ಥೆಯ ಖಾತೆಯಲ್ಲಿದ್ದ 3.15 ಕೋಟಿ ರೂ. ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.

ಇನ್ನು ಬೆಂಗಳೂರಿನ ಹನುಮಂತ ನಗರದಲ್ಲಿರುವ ವಸಿಷ್ಠ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಿಂದ 450 ರಿಂದ 500 ಕೋಟಿ ವಂಚನೆ ನಡೆದಿದೆ. ಬ್ಯಾಂಕ್‌ನ ಅಧ್ಯಕ್ಷರ ಕುಟುಂಬಕ್ಕೆ 100 ಕೋಟಿಗೂ ಹೆಚ್ಚಿನ ಸಾಲ ನೀಡಲಾಗಿದೆ. ಬ್ಯಾಂಕ್ ಅಧ್ಯಕ್ಷರ ಮಗನ ಹೆಸರಿನಲ್ಲಿ ಅನೇಕ ರೀತಿಯ ಲೋನ್‌ಗಳನ್ನು ನೀಡಲಾಗಿದೆ. ನೂರಾರು ಕೋಟಿ ಲೋನ್ ನೀಡಿದರೂ ಯಾವುದೇ ದಾಖಲೆಗಳನ್ನು ಪಡೆದಿಲ್ಲ ಎಂದು ಗ್ರಾಹಕರು ಆರೋಪಿಸಿದ್ದಾರೆ.

ಇದನ್ನು ಓದಿ: ನ್ಯಾಯಾಲಯದಲ್ಲಿ ಅಂಬೇಡ್ಕರ್‌ಗೂ ಮೊದಲು ಮನು ಪ್ರತಿಮೆ ಏಕೆ ಸ್ಥಾಪಿಸಲಾಯಿತು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...