Homeಕರ್ನಾಟಕಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ಅವ್ಯವಹಾರ: ಸಿಬಿಐ ತನಿಖೆಗೆ ಆದೇಶ

ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ಅವ್ಯವಹಾರ: ಸಿಬಿಐ ತನಿಖೆಗೆ ಆದೇಶ

- Advertisement -
- Advertisement -

ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್, ವಸಿಷ್ಠ ಬ್ಯಾಂಕ್‌ ಮತ್ತು ಗುರು ಸಾರ್ವಭೌಮ ಬ್ಯಾಂಕ್‌ಗಳಲ್ಲಿ ನಡೆದ ಹಗರಣವನ್ನು ಸಿಬಿಐ ತನಿಖೆಗೆ ರಾಜ್ಯ ಸರಕಾರ ಒಪ್ಪಿಸಿದೆ.

ಕಳೆದ ಸರಕಾರದ ಅವಧಿಯಲ್ಲಿ ಪ್ರತಿಪಕ್ಷದ ನಾಯಕರಾಗಿದ್ದಾಗ ಸಿದ್ದರಾಮಯ್ಯ ಅವರು ಈ ವಿಚಾರದಲ್ಲಿ ಬ್ಯಾಂಕ್‌ಗಳಿಂದ ಠೇವಣಿದಾರರಿಗೆ ಆಗಿರುವ ನಷ್ಟ ಮತ್ತು ವಂಚನೆಯ ವಿರುದ್ಧ ಸದನದ ಒಳಗೆ ಮತ್ತು ಹೊರಗೆ ಪ್ರತಿಭಟನೆ ಮಾಡಿ ಸೂಕ್ತ ತನಿಖೆ ನಡೆಸಿ ಬ್ಯಾಂಕಿನ ಗ್ರಾಹಕರಿಗೆ ನ್ಯಾಯ ಒದಗಿಸಲು ಆಗ್ರಹಿಸಿದ್ದರು. ಇದೀಗ ಪ್ರರಕಣವನ್ನು ಸಿಎಂ ಸಿದ್ದರಾಮಯ್ಯ ಸಿಬಿಐ ತನಿಖೆಗೆ ಒಪ್ಪಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಠೇವಣಿ ಹಣ ಕಳೆದುಕೊಂಡವರ ಹತಾಶೆ, ಸಂಕಟವನ್ನು ಕಣ್ಣಾರೆ ಕಂಡಿದ್ದೇನೆ. ಈ ಕಾರಣಕ್ಕಾಗಿ ಸೂಕ್ತ ತನಿಖೆ ನಡೆದು, ಎಲ್ಲ ಸಂತ್ರಸ್ತರಿಗೂ ನ್ಯಾಯ ಸಿಗಲಿ ಎಂಬ ಉದ್ದೇಶದಿಂದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ಬಡ್ಡಿಯ ಆಮಿಷವೊಡ್ಡಿ ಜನರಿಂದ ಠೇವಣಿ ಪಡೆದು ವಂಚಿಸಿದ ಆರೋಪ ಕೇಳಿ ಬಂದಿತ್ತು. ಹೆಚ್ಚಿನ ಬಡ್ಡಿ ಆಸೆಗೆ ಸಾವಿರಾರು ಗ್ರಾಹಕರು ಈ ಸಂಸ್ಥೆಯಲ್ಲಿ ನೂರಾರು ಕೋಟಿ ರೂ.ಠೇವಣಿ ಇಟ್ಟಿದ್ದರು. ಸಾಲಗಾರರು, ಸಂಸ್ಥೆಯ ಆಡಳಿತ ಮಂಡಳಿ ಮತ್ತು ಉದ್ಯೋಗಿಗಳೊಂದಿಗೆ ಶಾಮೀಲಾಗಿ ಭಾರೀ ಮೊತ್ತದ ಸಾಲ ಪಡೆದು ಮರು ಪಾವತಿಸದೆ ವಂಚಿಸಿರುವ ಆರೋಪ ಕೇಳಿ ಬಂದಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಬಡ್ಡಿ ಠೇವಣಿದಾರರ ರಕ್ಷಣಾ ಕಾಯಿದೆ-2004 ಮತ್ತು ಐಪಿಸಿಯ ವಿವಿಧ ಸೆಕ್ಷನ್‌ಗಳಡಿಯಲ್ಲಿ ಸಂಸ್ಥೆ ಹಾಗೂ ಇತರರ ವಿರುದ್ಧ ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದರು. ಈ ಮೊದಲು ಸಂಸ್ಥೆಯ ಅಧ್ಯಕ್ಷರು ಸೇರಿದಂತೆ 4 ಮಂದಿಯನ್ನು ಬಂಧಿಸಲಾಗಿತ್ತು. ಬಳಿಕ ಇ.ಡಿ. ಅಧಿಕಾರಿಗಳು 2020ರಲ್ಲಿ ಪಿಎಂಎಲ್‌ಎಯಡಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದು, ಬ್ಯಾಂಕ್‌ಗೆ ಸೇರಿದ 114.19 ಕೋಟಿ ರೂ.ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿದೆ. ಜೊತೆಗೆ ಸಂಸ್ಥೆಯ ಖಾತೆಯಲ್ಲಿದ್ದ 3.15 ಕೋಟಿ ರೂ. ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.

ಇನ್ನು ಬೆಂಗಳೂರಿನ ಹನುಮಂತ ನಗರದಲ್ಲಿರುವ ವಸಿಷ್ಠ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಿಂದ 450 ರಿಂದ 500 ಕೋಟಿ ವಂಚನೆ ನಡೆದಿದೆ. ಬ್ಯಾಂಕ್‌ನ ಅಧ್ಯಕ್ಷರ ಕುಟುಂಬಕ್ಕೆ 100 ಕೋಟಿಗೂ ಹೆಚ್ಚಿನ ಸಾಲ ನೀಡಲಾಗಿದೆ. ಬ್ಯಾಂಕ್ ಅಧ್ಯಕ್ಷರ ಮಗನ ಹೆಸರಿನಲ್ಲಿ ಅನೇಕ ರೀತಿಯ ಲೋನ್‌ಗಳನ್ನು ನೀಡಲಾಗಿದೆ. ನೂರಾರು ಕೋಟಿ ಲೋನ್ ನೀಡಿದರೂ ಯಾವುದೇ ದಾಖಲೆಗಳನ್ನು ಪಡೆದಿಲ್ಲ ಎಂದು ಗ್ರಾಹಕರು ಆರೋಪಿಸಿದ್ದಾರೆ.

ಇದನ್ನು ಓದಿ: ನ್ಯಾಯಾಲಯದಲ್ಲಿ ಅಂಬೇಡ್ಕರ್‌ಗೂ ಮೊದಲು ಮನು ಪ್ರತಿಮೆ ಏಕೆ ಸ್ಥಾಪಿಸಲಾಯಿತು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...