Homeಮುಖಪುಟಡೀಸೆಲ್ ಮೇಲಿನ ವ್ಯಾಟ್ ಕಡಿತ; ದೆಹಲಿಯಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 8 ರೂ. ಇಳಿಕೆ

ಡೀಸೆಲ್ ಮೇಲಿನ ವ್ಯಾಟ್ ಕಡಿತ; ದೆಹಲಿಯಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 8 ರೂ. ಇಳಿಕೆ

ಕೇಂದ್ರ ಸರ್ಕಾರ ಪೆಟ್ರೋಲ್ ಮೇಲೆ 32.98 ರೂ ಹಾಗೂ ಡೀಸೆಲ್ ಮೇಲೆ 31.83 ಸುಂಕ ವಿಧಿಸುತ್ತದೆ.

- Advertisement -
- Advertisement -

ಕೊರೊನಾ ಬಿಕ್ಕಟ್ಟಿನಿಂದಾದ ಆರ್ಥಿಕ ಹೊರೆ ತಗ್ಗಿಸುವ ಉದ್ದೇಶಕ್ಕಾಗಿ ಡೀಸೆಲ್ ಮೇಲೆ ಶೇ. 30 ರಷ್ಟು ವ್ಯಾಟ್ ತೆರಿಗೆ ವಿಧಿಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈಗ ವ್ಯಾಟ್ ತೆರಿಗೆಯನ್ನು ಶೇ. 16.75 ಕ್ಕೆ ಇಳಿಸಿದ್ದಾರೆ.

ಇದರಿಂದಾಗಿ ದೆಹಲಿಯಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 8.36 ರೂಪಾಯಿಯಷ್ಟು ಕಡಿಮೆ ಆಗಲಿದೆ. ಲೀಟರ್‌ಗೆ 82 ರೂ ಇದ್ದ ಡೀಸೆಲ್ ಬೆಲೆ ವ್ಯಾಟ್ ಕಡಿತದಿಂದಾಗಿ 73.64ಕ್ಕೆ ಇಳಿಕೆಯಾಗಲಿದೆ.

ದೆಹಲಿಯ ಉದ್ಯಮಿಗಳು ಮತ್ತು ವರ್ತಕರ ಬೇಡಿಕೆ ಮೇರೆಗೆ ವ್ಯಾಟ್ ಇಳಿಕೆಯ ಈ ಕ್ರಮ ಕೈಗೊಳ್ಳಲಾಗಿದೆ. ಡೀಸೆಲ್ ಬೆಲೆ ಇಳಿಕೆಯಿಂದ ದೆಹಲಿಯ ಆರ್ಥಿಕತೆಗೆ ಪುಷ್ಟಿ ಸಿಗುತ್ತದೆ ಎಂದು ಕೇಜ್ರಿವಾಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಭಾರತದಲ್ಲಿ ಮೊದಲಿಂದಲೂ ಡೀಸೆಲ್‌ಗೆ ಕಡಿಮೆ ಸುಂಕ ವಿಧಿಸಲಾಗುತ್ತಿದೆ. ಇದರಿಂದಾಗಿ ಡೀಸೆಲ್ ಯಾವಾಗಲೂ ಪೆಟ್ರೋಲ್‌ಗಿಂತಲೂ ಬೆಲೆ ಕಡಿಮೆ ಇರುತ್ತಿತ್ತು. ಆದರೆ, ಕೊರೋನಾ ಸಂಕಷ್ಟದ ಪರಿಸ್ಥಿತಿಯಲ್ಲಿ ಆರ್ಥಿಕತೆ ಸುಧಾರಿಸಲು ಮತ್ತು ಮಾಲಿನ್ಯಕಾರಕ ಡಿಸೆಲ್ಗೆ ಕಡಿವಾಣ ಹಾಕುವ ಉದ್ದೇಶದಿಂದ ದೆಹಲಿ ಸರ್ಕಾರ ಡೀಸೆಲ್ ಮೇಲೆ ವ್ಯಾಟ್ ತೆರಿಗೆಯನ್ನು ಶೇ. 30ರಷ್ಟು ಹೇರಲು ನಿರ್ಧರಿಸಿತ್ತು.


ಇದನ್ನೂ ಓದಿ: ದೆಹಲಿಯಲ್ಲಿ ಮುಸ್ಲಿಂ ವೈದ್ಯೆಯ ಮೇಲೆ RSS ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆಯೇ?


ಇದರಿಂದಾಗಿ ದೆಹಲಿಯಲ್ಲಿ ಪೆಟ್ರೋಲ್‌‌ಗಿಂತ ಡೀಸೆಲ್ ದುಬಾರಿಯಾಗಿತ್ತು. ಕಳೆದ ತಿಂಗಳ 18 ದಿನಗಳಲ್ಲಿ ಪೆಟ್ರೋಲ್ ಬೆಲೆ 8.50 ರೂ ಏರಿಕೆಯಾದರೆ, ಡೀಸೆಲ್ 10.48 ರೂ ಬೆಲೆ ಹೆಚ್ಚಳ ಕಂಡಿತ್ತು. ಸರ್ಕಾರದ ಈ ಕ್ರಮಕ್ಕೆ ಹಲವು ಕಡೆಗಳಿಂದ ವಿರೋಧ ವ್ಯಕ್ತವಾಗಿತ್ತು.

ಇಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಸೇರಲಾಗಿದ್ದ ಸಂಪುಟ ಸಭೆಯಲ್ಲಿ ಡೀಸೆಲ್ ಮೇಲಿನ ವ್ಯಾಟ್ ಇಳಿಕೆ ಮಾಡುವ ನಿರ್ಧಾರಕ್ಕೆ ಬರಲಾಗಿದೆ.

ರಾಜ್ಯ ಸರ್ಕಾರಗಳೂ ಕೂಡ ವ್ಯಾಟ್‌ ಅನ್ನು ಹೆಚ್ಚುವರಿಯಾಗಿ ವಿಧಿಸುತ್ತವೆ. ಹೀಗಾಗಿ ರಾಜ್ಯದಿಂದ ರಾಜ್ಯಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ವ್ಯತ್ಯಾಸ ಇರುತ್ತದೆ.

ಡೀಸೆಲ್ ಮತ್ತು ಪೆಟ್ರೋಲ್‌ಗೆ ಕೇಂದ್ರ ಸರ್ಕಾರ ಈಗ ಸರಿ ಸುಮಾರು ಒಂದೇ ಮೊತ್ತದ ತೆರಿಗೆ ವಿಧಿಸುತ್ತದೆ. ಪೆಟ್ರೋಲ್ ಮೇಲೆ ಕೇಂದ್ರ ಸರ್ಕಾರದ ಸುಂಕ 32.98 ರೂ ಇದ್ದು, ಡೀಸೆಲ್ ಮೇಲೆ 31.83 ಸುಂಕ ವಿಧಿಸುತ್ತದೆ.


ಓದಿ: ಭೀಮಾ ಕೋರೆಗಾಂವ್ ಪ್ರಕರಣ: ದೆಹಲಿ ಪ್ರಾಧ್ಯಾಪಕನ ಬಂಧನ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...