Homeಮುಖಪುಟಡೀಸೆಲ್ ಮೇಲಿನ ವ್ಯಾಟ್ ಕಡಿತ; ದೆಹಲಿಯಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 8 ರೂ. ಇಳಿಕೆ

ಡೀಸೆಲ್ ಮೇಲಿನ ವ್ಯಾಟ್ ಕಡಿತ; ದೆಹಲಿಯಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 8 ರೂ. ಇಳಿಕೆ

ಕೇಂದ್ರ ಸರ್ಕಾರ ಪೆಟ್ರೋಲ್ ಮೇಲೆ 32.98 ರೂ ಹಾಗೂ ಡೀಸೆಲ್ ಮೇಲೆ 31.83 ಸುಂಕ ವಿಧಿಸುತ್ತದೆ.

- Advertisement -
- Advertisement -

ಕೊರೊನಾ ಬಿಕ್ಕಟ್ಟಿನಿಂದಾದ ಆರ್ಥಿಕ ಹೊರೆ ತಗ್ಗಿಸುವ ಉದ್ದೇಶಕ್ಕಾಗಿ ಡೀಸೆಲ್ ಮೇಲೆ ಶೇ. 30 ರಷ್ಟು ವ್ಯಾಟ್ ತೆರಿಗೆ ವಿಧಿಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈಗ ವ್ಯಾಟ್ ತೆರಿಗೆಯನ್ನು ಶೇ. 16.75 ಕ್ಕೆ ಇಳಿಸಿದ್ದಾರೆ.

ಇದರಿಂದಾಗಿ ದೆಹಲಿಯಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 8.36 ರೂಪಾಯಿಯಷ್ಟು ಕಡಿಮೆ ಆಗಲಿದೆ. ಲೀಟರ್‌ಗೆ 82 ರೂ ಇದ್ದ ಡೀಸೆಲ್ ಬೆಲೆ ವ್ಯಾಟ್ ಕಡಿತದಿಂದಾಗಿ 73.64ಕ್ಕೆ ಇಳಿಕೆಯಾಗಲಿದೆ.

ದೆಹಲಿಯ ಉದ್ಯಮಿಗಳು ಮತ್ತು ವರ್ತಕರ ಬೇಡಿಕೆ ಮೇರೆಗೆ ವ್ಯಾಟ್ ಇಳಿಕೆಯ ಈ ಕ್ರಮ ಕೈಗೊಳ್ಳಲಾಗಿದೆ. ಡೀಸೆಲ್ ಬೆಲೆ ಇಳಿಕೆಯಿಂದ ದೆಹಲಿಯ ಆರ್ಥಿಕತೆಗೆ ಪುಷ್ಟಿ ಸಿಗುತ್ತದೆ ಎಂದು ಕೇಜ್ರಿವಾಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಭಾರತದಲ್ಲಿ ಮೊದಲಿಂದಲೂ ಡೀಸೆಲ್‌ಗೆ ಕಡಿಮೆ ಸುಂಕ ವಿಧಿಸಲಾಗುತ್ತಿದೆ. ಇದರಿಂದಾಗಿ ಡೀಸೆಲ್ ಯಾವಾಗಲೂ ಪೆಟ್ರೋಲ್‌ಗಿಂತಲೂ ಬೆಲೆ ಕಡಿಮೆ ಇರುತ್ತಿತ್ತು. ಆದರೆ, ಕೊರೋನಾ ಸಂಕಷ್ಟದ ಪರಿಸ್ಥಿತಿಯಲ್ಲಿ ಆರ್ಥಿಕತೆ ಸುಧಾರಿಸಲು ಮತ್ತು ಮಾಲಿನ್ಯಕಾರಕ ಡಿಸೆಲ್ಗೆ ಕಡಿವಾಣ ಹಾಕುವ ಉದ್ದೇಶದಿಂದ ದೆಹಲಿ ಸರ್ಕಾರ ಡೀಸೆಲ್ ಮೇಲೆ ವ್ಯಾಟ್ ತೆರಿಗೆಯನ್ನು ಶೇ. 30ರಷ್ಟು ಹೇರಲು ನಿರ್ಧರಿಸಿತ್ತು.


ಇದನ್ನೂ ಓದಿ: ದೆಹಲಿಯಲ್ಲಿ ಮುಸ್ಲಿಂ ವೈದ್ಯೆಯ ಮೇಲೆ RSS ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆಯೇ?


ಇದರಿಂದಾಗಿ ದೆಹಲಿಯಲ್ಲಿ ಪೆಟ್ರೋಲ್‌‌ಗಿಂತ ಡೀಸೆಲ್ ದುಬಾರಿಯಾಗಿತ್ತು. ಕಳೆದ ತಿಂಗಳ 18 ದಿನಗಳಲ್ಲಿ ಪೆಟ್ರೋಲ್ ಬೆಲೆ 8.50 ರೂ ಏರಿಕೆಯಾದರೆ, ಡೀಸೆಲ್ 10.48 ರೂ ಬೆಲೆ ಹೆಚ್ಚಳ ಕಂಡಿತ್ತು. ಸರ್ಕಾರದ ಈ ಕ್ರಮಕ್ಕೆ ಹಲವು ಕಡೆಗಳಿಂದ ವಿರೋಧ ವ್ಯಕ್ತವಾಗಿತ್ತು.

ಇಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಸೇರಲಾಗಿದ್ದ ಸಂಪುಟ ಸಭೆಯಲ್ಲಿ ಡೀಸೆಲ್ ಮೇಲಿನ ವ್ಯಾಟ್ ಇಳಿಕೆ ಮಾಡುವ ನಿರ್ಧಾರಕ್ಕೆ ಬರಲಾಗಿದೆ.

ರಾಜ್ಯ ಸರ್ಕಾರಗಳೂ ಕೂಡ ವ್ಯಾಟ್‌ ಅನ್ನು ಹೆಚ್ಚುವರಿಯಾಗಿ ವಿಧಿಸುತ್ತವೆ. ಹೀಗಾಗಿ ರಾಜ್ಯದಿಂದ ರಾಜ್ಯಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ವ್ಯತ್ಯಾಸ ಇರುತ್ತದೆ.

ಡೀಸೆಲ್ ಮತ್ತು ಪೆಟ್ರೋಲ್‌ಗೆ ಕೇಂದ್ರ ಸರ್ಕಾರ ಈಗ ಸರಿ ಸುಮಾರು ಒಂದೇ ಮೊತ್ತದ ತೆರಿಗೆ ವಿಧಿಸುತ್ತದೆ. ಪೆಟ್ರೋಲ್ ಮೇಲೆ ಕೇಂದ್ರ ಸರ್ಕಾರದ ಸುಂಕ 32.98 ರೂ ಇದ್ದು, ಡೀಸೆಲ್ ಮೇಲೆ 31.83 ಸುಂಕ ವಿಧಿಸುತ್ತದೆ.


ಓದಿ: ಭೀಮಾ ಕೋರೆಗಾಂವ್ ಪ್ರಕರಣ: ದೆಹಲಿ ಪ್ರಾಧ್ಯಾಪಕನ ಬಂಧನ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...