Homeಮುಖಪುಟಕೇರಳದ ರಾಹುಲ್ ರ್ಯಾಲಿಯಲ್ಲಿ ಪಾಕ್ ಧ್ವಜ ಹಾರಾಡಿದ್ದು ಸುಳ್ಳು ಸುದ್ದಿ

ಕೇರಳದ ರಾಹುಲ್ ರ್ಯಾಲಿಯಲ್ಲಿ ಪಾಕ್ ಧ್ವಜ ಹಾರಾಡಿದ್ದು ಸುಳ್ಳು ಸುದ್ದಿ

- Advertisement -
- Advertisement -

ಹಸಿರು ಹಾರಿದರೆ ಅದು ಪಾಕ್ ಧ್ವಜ! ಸಂಘಿಗಳ ಬಹುಕಾಲದ ಹುನ್ನಾರ
ಇದು ಇವತ್ತು ನಿನ್ನೆಯದಲ್ಲ, ಸಂಘದ ಅಂಗಸಂಸ್ಥೆಗಳು ಸುಮಾರು ಎರಡು ದಶಕಗಳಿಂದ ನಡೆಸಿಕೊಂಡು ಬಂದಿರುವ ಪ್ರಪಗಂಡಾ. ಯಾವುದಾದರೂ ರ್ಯಾಲಿಯಲ್ಲಿ ಹಸಿರು ಬಾವುಟ ಕಂಡರೆ ಸಾಕು, ಅಲ್ಲಿ ಪಾಕ್ ಧ್ವಜ/ಇಸ್ಲಾಮಿಕ್ ಧ್ವಜ ಹಾರಾಡಿದವು ಎಂದೆಲ್ಲ ಸುದ್ದಿ ಹಬ್ಬಿಸುವುದು. ಸಾಮಾಜಿಕ ಜಾಲತಾಣಗಳ ಬಳಕೆ ಹೆಚ್ಚಾದ ಮೇಲೆ ಅಂತಹ ಫೋಟೊ, ವಿಡಿಯೋಗಳ ಮೂಲಕ ರಾಜಕೀಯವಾಗಿ ಮುಗ್ಧರಾದವರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತ ಬರಲಾಗಿದೆ. ಕಾಂಗ್ರೆಸ್ ವಿರುದ್ಧವೇ ಈ ‘ಅಸ್ತ್ರ’ ಜಾಸ್ತಿ ಬಳಕೆಯಾಗಿದೆ, ಜೊತೆಗೆ ಮಮತಾ ಬ್ಯಾನರ್ಜಿಯವರನ್ನೂ ಬಿಟ್ಟಿಲ್ಲ.
ಈಗ ರಾಹುಲ್ ಗಾಂಧಿ ಕೇರಳದ ವಯನಾಡಿನಲ್ಲಿ ನಾಮಪತ್ರ ಸಲ್ಲಿಸುವ ಮುನ್ನ ನಡೆಸಿದ ರ್ಯಾಲಿ ವಿಚಾರದಲ್ಲೂ ಭಕ್ತರಲ್ಲಿ ಮತ್ತೆ ‘ಹಸಿರು ಕಾಮಾಲೆ’ ಕಾಣಿಸಿಕೊಂಡಿದೆ. ಇದು ಮರುಕಳಿಸುತ್ತಲೇ ಹೋಗಬಹುದಾದ್ದರಿಂದ ಪಾಕ್ ಧ್ವಜ, ಐಯುಎಂಎಲ್ ಪಕ್ಷದ ಧ್ವಜ ಮತ್ತು ಇಸ್ಲಾಮಿಕ್ ಬ್ಯಾನರ್‍ಗಳ ಕುರಿತ ಪ್ರಾಥಮಿಕ ತಿಳವಳಿಕೆಯನ್ನು ಇಲ್ಲಿ ನೀಡುತ್ತಿದ್ದೇವೆ.
ಮಿಥ್ಯ: ಏಪ್ರಿಲ್ 4ರಂದು ವಯನಾಡಿನಲ್ಲಿ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಸುವ ಮುನ್ನ ನಡೆದ ರ್ಯಾಲಿಯಲ್ಲಿ ಪಾಕ್ ಧ್ವಜಗಳು ಹಾರಾಡಿವೆ. ಇಸ್ಲಾಮಿಕ್ ಧ್ವಜಗಳೂ ಕಂಡಿವೆ. ಭಯೋತ್ಪಾದಕ ಜಿನ್ನಾ ಒಂದು ಕಾಶ್ಮೀರ ಮಾಡಿ ಹೋದ, ರಾಹುಲ್ 500 ಕಾಶ್ಮೀರಗಳನ್ನು ಸೃಷ್ಟಿಸಿ, ದೇಶ ಒಡೆಯಲಿದ್ದಾರೆ…. ಈಗಲಾದರೂ ಜಿಹಾದಿ ಪ್ರಿಯ ಕಾಂಗ್ರೆಸ್ ಅನ್ನು ಅರ್ಥ ಮಾಡಿಕೊಳ್ಳಿ ಎಂದು ಹಲವಾರು ಟ್ವಿಟ್ಟರ್ ಹ್ಯಾಂಡಲ್‍ಗಳಿಂದ ಸುದ್ದಿ ಹುಟ್ಟುತ್ತದೆ. ವಯನಾಡ್ ರ್ಯಾಲಿಯ ಫೋಟೊ, ವಿಡಿಯೋಗಳಲ್ಲಿ ಹಸಿರು ಧ್ವಜಗಳನ್ನು ಉಲ್ಲೇಖಿಸಿ ಈ ‘ಅಪಾದನೆ’ ಮಾಡಲಾಗಿದೆ. ಭಕ್ತರು ಇದನ್ನು ರಿಟ್ವೀಟ್ ಮಾಡುತ್ತಲೇ ಇದ್ದಾರೆ. ಫೇಸ್‍ಬುಕ್, ವ್ಯಾಟ್ಸಾಪ್‍ಗಳಿಗೂ ಇದು ಹರಡಿದೆ.


ಸತ್ಯ: ಇದು ಮೊದಲೇನಲ್ಲ. ಕೇರಳದ ‘ಇಂಡಿಯನ್ ಯುನಿಯನ್ ಮುಸ್ಲಿಂ ಲೀಗ್’ (ಐಯುಎಂಎಲ್) ಪಕ್ಷದ ಧ್ವಜ ಕಂಡಾಗಲೆಲ್ಲ ಇಂತಹ ಸುಳ್ಳು ಅಪಾದನೆ ಮಾಡುತ್ತ ಬರಲಾಗಿದೆ. ಐಯುಎಂಎಲ್ ಕೇರಳದಲ್ಲಿ ಅದು ಗಣನೀಯ ಬೇಸ್ ಹೊಂದಿದೆ. ಮೊನ್ನೆ ರ್ಯಾಲಿಯಲ್ಲಿ ಕಂಡಿದ್ದು ಇದೇ ಪಕ್ಷದ ಧ್ವಜ ಮತ್ತು ಬ್ಯಾನರ್ ಅವು ಖಂಡಿತ ಪಾಕ್ ಧ್ವಜಗಳೂ ಅಲ್ಲ, ಇಸ್ಲಾಮಿಕ್ ಧ್ವಜಗಳೂ ಅಲ್ಲ. ಜೊತೆಗೆ ಕಾಂಗ್ರೆಸ್ ಧ್ವಜಗಳಂತೂ ಅಲ್ಲವೇ ಅಲ್ಲ.
ಪಾಕ್ ಧ್ವಜದಲ್ಲಿ ಅರ್ಧಚಂದ್ರ ಮತ್ತು ನಕ್ಷತ್ರಗಳು ಮಧ್ಯಭಾಗದಲ್ಲಿ ಇದ್ದರೆ, ಅವು ಐಯುಎಂಎಲ್ ಧ್ವಜ/ಬ್ಯಾನರಿನಲ್ಲಿ ಎಡಮೂಲೆ ಟಾಪ್‍ನಲ್ಲಿವೆ. ಪಾಕ್ ಧ್ವಜದಲ್ಲಿ ಎಡಕ್ಕೆ ಬಿಳಿ ಪಟ್ಟೆ ಇರುತ್ತದೆ. ಸಾಮಾನ್ಯವಾಗಿ ಮುಸ್ಲಿಮರು ಧಾರ್ಮಿಕ ಧ್ವಜ ಎಂಬರ್ಥದಲ್ಲಿ ಬಳಸುವ ಬ್ಯಾನರ್‍ನಲ್ಲಿ ಈ ಬಿಳಿ ಪಟ್ಟೆ ಇರುವುದಿಲ್ಲ. ಅಂದು ರ್ಯಾಲಿಯಲ್ಲಿ ಹಾರಾಡಿದ್ದು ಐಯುಎಂಎಲ್ ಪಕ್ಷದ ಧ್ವಜಗಳಷ್ಟೇ.

ಇನ್ನೊಂದು ಕಡೆ ನಟಿ ಕೊಯ್ನ ಮಿತ್ರ ಒಂದು ಟ್ವೀಟ್ ಮಾಡಿದ್ದು, ಅಲ್ಲಿ ಬರೀ ಹಸಿರು ಧ್ವಜಗಳ ಚಿತ್ರವಿದೆ. ಇದು ವಯನಾಡ್ ರ್ಯಾಲಿಗೆ ಸಂಬಂಧವೇ ಇಲ್ಲದ ಚಿತ್ರ. ಐಯುಎಂಎಲ್ ಪಕ್ಷದ ಮಾಜಿ ಸಚಿವ ಕುನಾಲ್‍ಕುಟ್ಟಿ 2016ರಲ್ಲಿ ನಡೆಸಿದ ರ್ಯಾಲಿಯ ಚಿತ್ರವದು. ಅಲ್ಲಿ ಸಹಜವಾಗಿ ಐಯುಎಂಎಲ್ ಧ್ವಜಗಳೇ ಇವೆ.
(ಆಧಾರ: ಅಲ್ಟ್‍ನ್ಯೂಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...