Homeಮುಖಪುಟಕೇರಳದ ರಾಹುಲ್ ರ್ಯಾಲಿಯಲ್ಲಿ ಪಾಕ್ ಧ್ವಜ ಹಾರಾಡಿದ್ದು ಸುಳ್ಳು ಸುದ್ದಿ

ಕೇರಳದ ರಾಹುಲ್ ರ್ಯಾಲಿಯಲ್ಲಿ ಪಾಕ್ ಧ್ವಜ ಹಾರಾಡಿದ್ದು ಸುಳ್ಳು ಸುದ್ದಿ

- Advertisement -
- Advertisement -

ಹಸಿರು ಹಾರಿದರೆ ಅದು ಪಾಕ್ ಧ್ವಜ! ಸಂಘಿಗಳ ಬಹುಕಾಲದ ಹುನ್ನಾರ
ಇದು ಇವತ್ತು ನಿನ್ನೆಯದಲ್ಲ, ಸಂಘದ ಅಂಗಸಂಸ್ಥೆಗಳು ಸುಮಾರು ಎರಡು ದಶಕಗಳಿಂದ ನಡೆಸಿಕೊಂಡು ಬಂದಿರುವ ಪ್ರಪಗಂಡಾ. ಯಾವುದಾದರೂ ರ್ಯಾಲಿಯಲ್ಲಿ ಹಸಿರು ಬಾವುಟ ಕಂಡರೆ ಸಾಕು, ಅಲ್ಲಿ ಪಾಕ್ ಧ್ವಜ/ಇಸ್ಲಾಮಿಕ್ ಧ್ವಜ ಹಾರಾಡಿದವು ಎಂದೆಲ್ಲ ಸುದ್ದಿ ಹಬ್ಬಿಸುವುದು. ಸಾಮಾಜಿಕ ಜಾಲತಾಣಗಳ ಬಳಕೆ ಹೆಚ್ಚಾದ ಮೇಲೆ ಅಂತಹ ಫೋಟೊ, ವಿಡಿಯೋಗಳ ಮೂಲಕ ರಾಜಕೀಯವಾಗಿ ಮುಗ್ಧರಾದವರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತ ಬರಲಾಗಿದೆ. ಕಾಂಗ್ರೆಸ್ ವಿರುದ್ಧವೇ ಈ ‘ಅಸ್ತ್ರ’ ಜಾಸ್ತಿ ಬಳಕೆಯಾಗಿದೆ, ಜೊತೆಗೆ ಮಮತಾ ಬ್ಯಾನರ್ಜಿಯವರನ್ನೂ ಬಿಟ್ಟಿಲ್ಲ.
ಈಗ ರಾಹುಲ್ ಗಾಂಧಿ ಕೇರಳದ ವಯನಾಡಿನಲ್ಲಿ ನಾಮಪತ್ರ ಸಲ್ಲಿಸುವ ಮುನ್ನ ನಡೆಸಿದ ರ್ಯಾಲಿ ವಿಚಾರದಲ್ಲೂ ಭಕ್ತರಲ್ಲಿ ಮತ್ತೆ ‘ಹಸಿರು ಕಾಮಾಲೆ’ ಕಾಣಿಸಿಕೊಂಡಿದೆ. ಇದು ಮರುಕಳಿಸುತ್ತಲೇ ಹೋಗಬಹುದಾದ್ದರಿಂದ ಪಾಕ್ ಧ್ವಜ, ಐಯುಎಂಎಲ್ ಪಕ್ಷದ ಧ್ವಜ ಮತ್ತು ಇಸ್ಲಾಮಿಕ್ ಬ್ಯಾನರ್‍ಗಳ ಕುರಿತ ಪ್ರಾಥಮಿಕ ತಿಳವಳಿಕೆಯನ್ನು ಇಲ್ಲಿ ನೀಡುತ್ತಿದ್ದೇವೆ.
ಮಿಥ್ಯ: ಏಪ್ರಿಲ್ 4ರಂದು ವಯನಾಡಿನಲ್ಲಿ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಸುವ ಮುನ್ನ ನಡೆದ ರ್ಯಾಲಿಯಲ್ಲಿ ಪಾಕ್ ಧ್ವಜಗಳು ಹಾರಾಡಿವೆ. ಇಸ್ಲಾಮಿಕ್ ಧ್ವಜಗಳೂ ಕಂಡಿವೆ. ಭಯೋತ್ಪಾದಕ ಜಿನ್ನಾ ಒಂದು ಕಾಶ್ಮೀರ ಮಾಡಿ ಹೋದ, ರಾಹುಲ್ 500 ಕಾಶ್ಮೀರಗಳನ್ನು ಸೃಷ್ಟಿಸಿ, ದೇಶ ಒಡೆಯಲಿದ್ದಾರೆ…. ಈಗಲಾದರೂ ಜಿಹಾದಿ ಪ್ರಿಯ ಕಾಂಗ್ರೆಸ್ ಅನ್ನು ಅರ್ಥ ಮಾಡಿಕೊಳ್ಳಿ ಎಂದು ಹಲವಾರು ಟ್ವಿಟ್ಟರ್ ಹ್ಯಾಂಡಲ್‍ಗಳಿಂದ ಸುದ್ದಿ ಹುಟ್ಟುತ್ತದೆ. ವಯನಾಡ್ ರ್ಯಾಲಿಯ ಫೋಟೊ, ವಿಡಿಯೋಗಳಲ್ಲಿ ಹಸಿರು ಧ್ವಜಗಳನ್ನು ಉಲ್ಲೇಖಿಸಿ ಈ ‘ಅಪಾದನೆ’ ಮಾಡಲಾಗಿದೆ. ಭಕ್ತರು ಇದನ್ನು ರಿಟ್ವೀಟ್ ಮಾಡುತ್ತಲೇ ಇದ್ದಾರೆ. ಫೇಸ್‍ಬುಕ್, ವ್ಯಾಟ್ಸಾಪ್‍ಗಳಿಗೂ ಇದು ಹರಡಿದೆ.


ಸತ್ಯ: ಇದು ಮೊದಲೇನಲ್ಲ. ಕೇರಳದ ‘ಇಂಡಿಯನ್ ಯುನಿಯನ್ ಮುಸ್ಲಿಂ ಲೀಗ್’ (ಐಯುಎಂಎಲ್) ಪಕ್ಷದ ಧ್ವಜ ಕಂಡಾಗಲೆಲ್ಲ ಇಂತಹ ಸುಳ್ಳು ಅಪಾದನೆ ಮಾಡುತ್ತ ಬರಲಾಗಿದೆ. ಐಯುಎಂಎಲ್ ಕೇರಳದಲ್ಲಿ ಅದು ಗಣನೀಯ ಬೇಸ್ ಹೊಂದಿದೆ. ಮೊನ್ನೆ ರ್ಯಾಲಿಯಲ್ಲಿ ಕಂಡಿದ್ದು ಇದೇ ಪಕ್ಷದ ಧ್ವಜ ಮತ್ತು ಬ್ಯಾನರ್ ಅವು ಖಂಡಿತ ಪಾಕ್ ಧ್ವಜಗಳೂ ಅಲ್ಲ, ಇಸ್ಲಾಮಿಕ್ ಧ್ವಜಗಳೂ ಅಲ್ಲ. ಜೊತೆಗೆ ಕಾಂಗ್ರೆಸ್ ಧ್ವಜಗಳಂತೂ ಅಲ್ಲವೇ ಅಲ್ಲ.
ಪಾಕ್ ಧ್ವಜದಲ್ಲಿ ಅರ್ಧಚಂದ್ರ ಮತ್ತು ನಕ್ಷತ್ರಗಳು ಮಧ್ಯಭಾಗದಲ್ಲಿ ಇದ್ದರೆ, ಅವು ಐಯುಎಂಎಲ್ ಧ್ವಜ/ಬ್ಯಾನರಿನಲ್ಲಿ ಎಡಮೂಲೆ ಟಾಪ್‍ನಲ್ಲಿವೆ. ಪಾಕ್ ಧ್ವಜದಲ್ಲಿ ಎಡಕ್ಕೆ ಬಿಳಿ ಪಟ್ಟೆ ಇರುತ್ತದೆ. ಸಾಮಾನ್ಯವಾಗಿ ಮುಸ್ಲಿಮರು ಧಾರ್ಮಿಕ ಧ್ವಜ ಎಂಬರ್ಥದಲ್ಲಿ ಬಳಸುವ ಬ್ಯಾನರ್‍ನಲ್ಲಿ ಈ ಬಿಳಿ ಪಟ್ಟೆ ಇರುವುದಿಲ್ಲ. ಅಂದು ರ್ಯಾಲಿಯಲ್ಲಿ ಹಾರಾಡಿದ್ದು ಐಯುಎಂಎಲ್ ಪಕ್ಷದ ಧ್ವಜಗಳಷ್ಟೇ.

ಇನ್ನೊಂದು ಕಡೆ ನಟಿ ಕೊಯ್ನ ಮಿತ್ರ ಒಂದು ಟ್ವೀಟ್ ಮಾಡಿದ್ದು, ಅಲ್ಲಿ ಬರೀ ಹಸಿರು ಧ್ವಜಗಳ ಚಿತ್ರವಿದೆ. ಇದು ವಯನಾಡ್ ರ್ಯಾಲಿಗೆ ಸಂಬಂಧವೇ ಇಲ್ಲದ ಚಿತ್ರ. ಐಯುಎಂಎಲ್ ಪಕ್ಷದ ಮಾಜಿ ಸಚಿವ ಕುನಾಲ್‍ಕುಟ್ಟಿ 2016ರಲ್ಲಿ ನಡೆಸಿದ ರ್ಯಾಲಿಯ ಚಿತ್ರವದು. ಅಲ್ಲಿ ಸಹಜವಾಗಿ ಐಯುಎಂಎಲ್ ಧ್ವಜಗಳೇ ಇವೆ.
(ಆಧಾರ: ಅಲ್ಟ್‍ನ್ಯೂಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...