Homeಮುಖಪುಟಕೇರಳದ ರಾಹುಲ್ ರ್ಯಾಲಿಯಲ್ಲಿ ಪಾಕ್ ಧ್ವಜ ಹಾರಾಡಿದ್ದು ಸುಳ್ಳು ಸುದ್ದಿ

ಕೇರಳದ ರಾಹುಲ್ ರ್ಯಾಲಿಯಲ್ಲಿ ಪಾಕ್ ಧ್ವಜ ಹಾರಾಡಿದ್ದು ಸುಳ್ಳು ಸುದ್ದಿ

- Advertisement -
- Advertisement -

ಹಸಿರು ಹಾರಿದರೆ ಅದು ಪಾಕ್ ಧ್ವಜ! ಸಂಘಿಗಳ ಬಹುಕಾಲದ ಹುನ್ನಾರ
ಇದು ಇವತ್ತು ನಿನ್ನೆಯದಲ್ಲ, ಸಂಘದ ಅಂಗಸಂಸ್ಥೆಗಳು ಸುಮಾರು ಎರಡು ದಶಕಗಳಿಂದ ನಡೆಸಿಕೊಂಡು ಬಂದಿರುವ ಪ್ರಪಗಂಡಾ. ಯಾವುದಾದರೂ ರ್ಯಾಲಿಯಲ್ಲಿ ಹಸಿರು ಬಾವುಟ ಕಂಡರೆ ಸಾಕು, ಅಲ್ಲಿ ಪಾಕ್ ಧ್ವಜ/ಇಸ್ಲಾಮಿಕ್ ಧ್ವಜ ಹಾರಾಡಿದವು ಎಂದೆಲ್ಲ ಸುದ್ದಿ ಹಬ್ಬಿಸುವುದು. ಸಾಮಾಜಿಕ ಜಾಲತಾಣಗಳ ಬಳಕೆ ಹೆಚ್ಚಾದ ಮೇಲೆ ಅಂತಹ ಫೋಟೊ, ವಿಡಿಯೋಗಳ ಮೂಲಕ ರಾಜಕೀಯವಾಗಿ ಮುಗ್ಧರಾದವರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತ ಬರಲಾಗಿದೆ. ಕಾಂಗ್ರೆಸ್ ವಿರುದ್ಧವೇ ಈ ‘ಅಸ್ತ್ರ’ ಜಾಸ್ತಿ ಬಳಕೆಯಾಗಿದೆ, ಜೊತೆಗೆ ಮಮತಾ ಬ್ಯಾನರ್ಜಿಯವರನ್ನೂ ಬಿಟ್ಟಿಲ್ಲ.
ಈಗ ರಾಹುಲ್ ಗಾಂಧಿ ಕೇರಳದ ವಯನಾಡಿನಲ್ಲಿ ನಾಮಪತ್ರ ಸಲ್ಲಿಸುವ ಮುನ್ನ ನಡೆಸಿದ ರ್ಯಾಲಿ ವಿಚಾರದಲ್ಲೂ ಭಕ್ತರಲ್ಲಿ ಮತ್ತೆ ‘ಹಸಿರು ಕಾಮಾಲೆ’ ಕಾಣಿಸಿಕೊಂಡಿದೆ. ಇದು ಮರುಕಳಿಸುತ್ತಲೇ ಹೋಗಬಹುದಾದ್ದರಿಂದ ಪಾಕ್ ಧ್ವಜ, ಐಯುಎಂಎಲ್ ಪಕ್ಷದ ಧ್ವಜ ಮತ್ತು ಇಸ್ಲಾಮಿಕ್ ಬ್ಯಾನರ್‍ಗಳ ಕುರಿತ ಪ್ರಾಥಮಿಕ ತಿಳವಳಿಕೆಯನ್ನು ಇಲ್ಲಿ ನೀಡುತ್ತಿದ್ದೇವೆ.
ಮಿಥ್ಯ: ಏಪ್ರಿಲ್ 4ರಂದು ವಯನಾಡಿನಲ್ಲಿ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಸುವ ಮುನ್ನ ನಡೆದ ರ್ಯಾಲಿಯಲ್ಲಿ ಪಾಕ್ ಧ್ವಜಗಳು ಹಾರಾಡಿವೆ. ಇಸ್ಲಾಮಿಕ್ ಧ್ವಜಗಳೂ ಕಂಡಿವೆ. ಭಯೋತ್ಪಾದಕ ಜಿನ್ನಾ ಒಂದು ಕಾಶ್ಮೀರ ಮಾಡಿ ಹೋದ, ರಾಹುಲ್ 500 ಕಾಶ್ಮೀರಗಳನ್ನು ಸೃಷ್ಟಿಸಿ, ದೇಶ ಒಡೆಯಲಿದ್ದಾರೆ…. ಈಗಲಾದರೂ ಜಿಹಾದಿ ಪ್ರಿಯ ಕಾಂಗ್ರೆಸ್ ಅನ್ನು ಅರ್ಥ ಮಾಡಿಕೊಳ್ಳಿ ಎಂದು ಹಲವಾರು ಟ್ವಿಟ್ಟರ್ ಹ್ಯಾಂಡಲ್‍ಗಳಿಂದ ಸುದ್ದಿ ಹುಟ್ಟುತ್ತದೆ. ವಯನಾಡ್ ರ್ಯಾಲಿಯ ಫೋಟೊ, ವಿಡಿಯೋಗಳಲ್ಲಿ ಹಸಿರು ಧ್ವಜಗಳನ್ನು ಉಲ್ಲೇಖಿಸಿ ಈ ‘ಅಪಾದನೆ’ ಮಾಡಲಾಗಿದೆ. ಭಕ್ತರು ಇದನ್ನು ರಿಟ್ವೀಟ್ ಮಾಡುತ್ತಲೇ ಇದ್ದಾರೆ. ಫೇಸ್‍ಬುಕ್, ವ್ಯಾಟ್ಸಾಪ್‍ಗಳಿಗೂ ಇದು ಹರಡಿದೆ.


ಸತ್ಯ: ಇದು ಮೊದಲೇನಲ್ಲ. ಕೇರಳದ ‘ಇಂಡಿಯನ್ ಯುನಿಯನ್ ಮುಸ್ಲಿಂ ಲೀಗ್’ (ಐಯುಎಂಎಲ್) ಪಕ್ಷದ ಧ್ವಜ ಕಂಡಾಗಲೆಲ್ಲ ಇಂತಹ ಸುಳ್ಳು ಅಪಾದನೆ ಮಾಡುತ್ತ ಬರಲಾಗಿದೆ. ಐಯುಎಂಎಲ್ ಕೇರಳದಲ್ಲಿ ಅದು ಗಣನೀಯ ಬೇಸ್ ಹೊಂದಿದೆ. ಮೊನ್ನೆ ರ್ಯಾಲಿಯಲ್ಲಿ ಕಂಡಿದ್ದು ಇದೇ ಪಕ್ಷದ ಧ್ವಜ ಮತ್ತು ಬ್ಯಾನರ್ ಅವು ಖಂಡಿತ ಪಾಕ್ ಧ್ವಜಗಳೂ ಅಲ್ಲ, ಇಸ್ಲಾಮಿಕ್ ಧ್ವಜಗಳೂ ಅಲ್ಲ. ಜೊತೆಗೆ ಕಾಂಗ್ರೆಸ್ ಧ್ವಜಗಳಂತೂ ಅಲ್ಲವೇ ಅಲ್ಲ.
ಪಾಕ್ ಧ್ವಜದಲ್ಲಿ ಅರ್ಧಚಂದ್ರ ಮತ್ತು ನಕ್ಷತ್ರಗಳು ಮಧ್ಯಭಾಗದಲ್ಲಿ ಇದ್ದರೆ, ಅವು ಐಯುಎಂಎಲ್ ಧ್ವಜ/ಬ್ಯಾನರಿನಲ್ಲಿ ಎಡಮೂಲೆ ಟಾಪ್‍ನಲ್ಲಿವೆ. ಪಾಕ್ ಧ್ವಜದಲ್ಲಿ ಎಡಕ್ಕೆ ಬಿಳಿ ಪಟ್ಟೆ ಇರುತ್ತದೆ. ಸಾಮಾನ್ಯವಾಗಿ ಮುಸ್ಲಿಮರು ಧಾರ್ಮಿಕ ಧ್ವಜ ಎಂಬರ್ಥದಲ್ಲಿ ಬಳಸುವ ಬ್ಯಾನರ್‍ನಲ್ಲಿ ಈ ಬಿಳಿ ಪಟ್ಟೆ ಇರುವುದಿಲ್ಲ. ಅಂದು ರ್ಯಾಲಿಯಲ್ಲಿ ಹಾರಾಡಿದ್ದು ಐಯುಎಂಎಲ್ ಪಕ್ಷದ ಧ್ವಜಗಳಷ್ಟೇ.

ಇನ್ನೊಂದು ಕಡೆ ನಟಿ ಕೊಯ್ನ ಮಿತ್ರ ಒಂದು ಟ್ವೀಟ್ ಮಾಡಿದ್ದು, ಅಲ್ಲಿ ಬರೀ ಹಸಿರು ಧ್ವಜಗಳ ಚಿತ್ರವಿದೆ. ಇದು ವಯನಾಡ್ ರ್ಯಾಲಿಗೆ ಸಂಬಂಧವೇ ಇಲ್ಲದ ಚಿತ್ರ. ಐಯುಎಂಎಲ್ ಪಕ್ಷದ ಮಾಜಿ ಸಚಿವ ಕುನಾಲ್‍ಕುಟ್ಟಿ 2016ರಲ್ಲಿ ನಡೆಸಿದ ರ್ಯಾಲಿಯ ಚಿತ್ರವದು. ಅಲ್ಲಿ ಸಹಜವಾಗಿ ಐಯುಎಂಎಲ್ ಧ್ವಜಗಳೇ ಇವೆ.
(ಆಧಾರ: ಅಲ್ಟ್‍ನ್ಯೂಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...