Homeಮುಖಪುಟಕೇರಳದ ರಾಹುಲ್ ರ್ಯಾಲಿಯಲ್ಲಿ ಪಾಕ್ ಧ್ವಜ ಹಾರಾಡಿದ್ದು ಸುಳ್ಳು ಸುದ್ದಿ

ಕೇರಳದ ರಾಹುಲ್ ರ್ಯಾಲಿಯಲ್ಲಿ ಪಾಕ್ ಧ್ವಜ ಹಾರಾಡಿದ್ದು ಸುಳ್ಳು ಸುದ್ದಿ

- Advertisement -
- Advertisement -

ಹಸಿರು ಹಾರಿದರೆ ಅದು ಪಾಕ್ ಧ್ವಜ! ಸಂಘಿಗಳ ಬಹುಕಾಲದ ಹುನ್ನಾರ
ಇದು ಇವತ್ತು ನಿನ್ನೆಯದಲ್ಲ, ಸಂಘದ ಅಂಗಸಂಸ್ಥೆಗಳು ಸುಮಾರು ಎರಡು ದಶಕಗಳಿಂದ ನಡೆಸಿಕೊಂಡು ಬಂದಿರುವ ಪ್ರಪಗಂಡಾ. ಯಾವುದಾದರೂ ರ್ಯಾಲಿಯಲ್ಲಿ ಹಸಿರು ಬಾವುಟ ಕಂಡರೆ ಸಾಕು, ಅಲ್ಲಿ ಪಾಕ್ ಧ್ವಜ/ಇಸ್ಲಾಮಿಕ್ ಧ್ವಜ ಹಾರಾಡಿದವು ಎಂದೆಲ್ಲ ಸುದ್ದಿ ಹಬ್ಬಿಸುವುದು. ಸಾಮಾಜಿಕ ಜಾಲತಾಣಗಳ ಬಳಕೆ ಹೆಚ್ಚಾದ ಮೇಲೆ ಅಂತಹ ಫೋಟೊ, ವಿಡಿಯೋಗಳ ಮೂಲಕ ರಾಜಕೀಯವಾಗಿ ಮುಗ್ಧರಾದವರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತ ಬರಲಾಗಿದೆ. ಕಾಂಗ್ರೆಸ್ ವಿರುದ್ಧವೇ ಈ ‘ಅಸ್ತ್ರ’ ಜಾಸ್ತಿ ಬಳಕೆಯಾಗಿದೆ, ಜೊತೆಗೆ ಮಮತಾ ಬ್ಯಾನರ್ಜಿಯವರನ್ನೂ ಬಿಟ್ಟಿಲ್ಲ.
ಈಗ ರಾಹುಲ್ ಗಾಂಧಿ ಕೇರಳದ ವಯನಾಡಿನಲ್ಲಿ ನಾಮಪತ್ರ ಸಲ್ಲಿಸುವ ಮುನ್ನ ನಡೆಸಿದ ರ್ಯಾಲಿ ವಿಚಾರದಲ್ಲೂ ಭಕ್ತರಲ್ಲಿ ಮತ್ತೆ ‘ಹಸಿರು ಕಾಮಾಲೆ’ ಕಾಣಿಸಿಕೊಂಡಿದೆ. ಇದು ಮರುಕಳಿಸುತ್ತಲೇ ಹೋಗಬಹುದಾದ್ದರಿಂದ ಪಾಕ್ ಧ್ವಜ, ಐಯುಎಂಎಲ್ ಪಕ್ಷದ ಧ್ವಜ ಮತ್ತು ಇಸ್ಲಾಮಿಕ್ ಬ್ಯಾನರ್‍ಗಳ ಕುರಿತ ಪ್ರಾಥಮಿಕ ತಿಳವಳಿಕೆಯನ್ನು ಇಲ್ಲಿ ನೀಡುತ್ತಿದ್ದೇವೆ.
ಮಿಥ್ಯ: ಏಪ್ರಿಲ್ 4ರಂದು ವಯನಾಡಿನಲ್ಲಿ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಸುವ ಮುನ್ನ ನಡೆದ ರ್ಯಾಲಿಯಲ್ಲಿ ಪಾಕ್ ಧ್ವಜಗಳು ಹಾರಾಡಿವೆ. ಇಸ್ಲಾಮಿಕ್ ಧ್ವಜಗಳೂ ಕಂಡಿವೆ. ಭಯೋತ್ಪಾದಕ ಜಿನ್ನಾ ಒಂದು ಕಾಶ್ಮೀರ ಮಾಡಿ ಹೋದ, ರಾಹುಲ್ 500 ಕಾಶ್ಮೀರಗಳನ್ನು ಸೃಷ್ಟಿಸಿ, ದೇಶ ಒಡೆಯಲಿದ್ದಾರೆ…. ಈಗಲಾದರೂ ಜಿಹಾದಿ ಪ್ರಿಯ ಕಾಂಗ್ರೆಸ್ ಅನ್ನು ಅರ್ಥ ಮಾಡಿಕೊಳ್ಳಿ ಎಂದು ಹಲವಾರು ಟ್ವಿಟ್ಟರ್ ಹ್ಯಾಂಡಲ್‍ಗಳಿಂದ ಸುದ್ದಿ ಹುಟ್ಟುತ್ತದೆ. ವಯನಾಡ್ ರ್ಯಾಲಿಯ ಫೋಟೊ, ವಿಡಿಯೋಗಳಲ್ಲಿ ಹಸಿರು ಧ್ವಜಗಳನ್ನು ಉಲ್ಲೇಖಿಸಿ ಈ ‘ಅಪಾದನೆ’ ಮಾಡಲಾಗಿದೆ. ಭಕ್ತರು ಇದನ್ನು ರಿಟ್ವೀಟ್ ಮಾಡುತ್ತಲೇ ಇದ್ದಾರೆ. ಫೇಸ್‍ಬುಕ್, ವ್ಯಾಟ್ಸಾಪ್‍ಗಳಿಗೂ ಇದು ಹರಡಿದೆ.


ಸತ್ಯ: ಇದು ಮೊದಲೇನಲ್ಲ. ಕೇರಳದ ‘ಇಂಡಿಯನ್ ಯುನಿಯನ್ ಮುಸ್ಲಿಂ ಲೀಗ್’ (ಐಯುಎಂಎಲ್) ಪಕ್ಷದ ಧ್ವಜ ಕಂಡಾಗಲೆಲ್ಲ ಇಂತಹ ಸುಳ್ಳು ಅಪಾದನೆ ಮಾಡುತ್ತ ಬರಲಾಗಿದೆ. ಐಯುಎಂಎಲ್ ಕೇರಳದಲ್ಲಿ ಅದು ಗಣನೀಯ ಬೇಸ್ ಹೊಂದಿದೆ. ಮೊನ್ನೆ ರ್ಯಾಲಿಯಲ್ಲಿ ಕಂಡಿದ್ದು ಇದೇ ಪಕ್ಷದ ಧ್ವಜ ಮತ್ತು ಬ್ಯಾನರ್ ಅವು ಖಂಡಿತ ಪಾಕ್ ಧ್ವಜಗಳೂ ಅಲ್ಲ, ಇಸ್ಲಾಮಿಕ್ ಧ್ವಜಗಳೂ ಅಲ್ಲ. ಜೊತೆಗೆ ಕಾಂಗ್ರೆಸ್ ಧ್ವಜಗಳಂತೂ ಅಲ್ಲವೇ ಅಲ್ಲ.
ಪಾಕ್ ಧ್ವಜದಲ್ಲಿ ಅರ್ಧಚಂದ್ರ ಮತ್ತು ನಕ್ಷತ್ರಗಳು ಮಧ್ಯಭಾಗದಲ್ಲಿ ಇದ್ದರೆ, ಅವು ಐಯುಎಂಎಲ್ ಧ್ವಜ/ಬ್ಯಾನರಿನಲ್ಲಿ ಎಡಮೂಲೆ ಟಾಪ್‍ನಲ್ಲಿವೆ. ಪಾಕ್ ಧ್ವಜದಲ್ಲಿ ಎಡಕ್ಕೆ ಬಿಳಿ ಪಟ್ಟೆ ಇರುತ್ತದೆ. ಸಾಮಾನ್ಯವಾಗಿ ಮುಸ್ಲಿಮರು ಧಾರ್ಮಿಕ ಧ್ವಜ ಎಂಬರ್ಥದಲ್ಲಿ ಬಳಸುವ ಬ್ಯಾನರ್‍ನಲ್ಲಿ ಈ ಬಿಳಿ ಪಟ್ಟೆ ಇರುವುದಿಲ್ಲ. ಅಂದು ರ್ಯಾಲಿಯಲ್ಲಿ ಹಾರಾಡಿದ್ದು ಐಯುಎಂಎಲ್ ಪಕ್ಷದ ಧ್ವಜಗಳಷ್ಟೇ.

ಇನ್ನೊಂದು ಕಡೆ ನಟಿ ಕೊಯ್ನ ಮಿತ್ರ ಒಂದು ಟ್ವೀಟ್ ಮಾಡಿದ್ದು, ಅಲ್ಲಿ ಬರೀ ಹಸಿರು ಧ್ವಜಗಳ ಚಿತ್ರವಿದೆ. ಇದು ವಯನಾಡ್ ರ್ಯಾಲಿಗೆ ಸಂಬಂಧವೇ ಇಲ್ಲದ ಚಿತ್ರ. ಐಯುಎಂಎಲ್ ಪಕ್ಷದ ಮಾಜಿ ಸಚಿವ ಕುನಾಲ್‍ಕುಟ್ಟಿ 2016ರಲ್ಲಿ ನಡೆಸಿದ ರ್ಯಾಲಿಯ ಚಿತ್ರವದು. ಅಲ್ಲಿ ಸಹಜವಾಗಿ ಐಯುಎಂಎಲ್ ಧ್ವಜಗಳೇ ಇವೆ.
(ಆಧಾರ: ಅಲ್ಟ್‍ನ್ಯೂಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...