Homeಮುಖಪುಟಕೇರಳದ ರಾಹುಲ್ ರ್ಯಾಲಿಯಲ್ಲಿ ಪಾಕ್ ಧ್ವಜ ಹಾರಾಡಿದ್ದು ಸುಳ್ಳು ಸುದ್ದಿ

ಕೇರಳದ ರಾಹುಲ್ ರ್ಯಾಲಿಯಲ್ಲಿ ಪಾಕ್ ಧ್ವಜ ಹಾರಾಡಿದ್ದು ಸುಳ್ಳು ಸುದ್ದಿ

- Advertisement -
- Advertisement -

ಹಸಿರು ಹಾರಿದರೆ ಅದು ಪಾಕ್ ಧ್ವಜ! ಸಂಘಿಗಳ ಬಹುಕಾಲದ ಹುನ್ನಾರ
ಇದು ಇವತ್ತು ನಿನ್ನೆಯದಲ್ಲ, ಸಂಘದ ಅಂಗಸಂಸ್ಥೆಗಳು ಸುಮಾರು ಎರಡು ದಶಕಗಳಿಂದ ನಡೆಸಿಕೊಂಡು ಬಂದಿರುವ ಪ್ರಪಗಂಡಾ. ಯಾವುದಾದರೂ ರ್ಯಾಲಿಯಲ್ಲಿ ಹಸಿರು ಬಾವುಟ ಕಂಡರೆ ಸಾಕು, ಅಲ್ಲಿ ಪಾಕ್ ಧ್ವಜ/ಇಸ್ಲಾಮಿಕ್ ಧ್ವಜ ಹಾರಾಡಿದವು ಎಂದೆಲ್ಲ ಸುದ್ದಿ ಹಬ್ಬಿಸುವುದು. ಸಾಮಾಜಿಕ ಜಾಲತಾಣಗಳ ಬಳಕೆ ಹೆಚ್ಚಾದ ಮೇಲೆ ಅಂತಹ ಫೋಟೊ, ವಿಡಿಯೋಗಳ ಮೂಲಕ ರಾಜಕೀಯವಾಗಿ ಮುಗ್ಧರಾದವರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತ ಬರಲಾಗಿದೆ. ಕಾಂಗ್ರೆಸ್ ವಿರುದ್ಧವೇ ಈ ‘ಅಸ್ತ್ರ’ ಜಾಸ್ತಿ ಬಳಕೆಯಾಗಿದೆ, ಜೊತೆಗೆ ಮಮತಾ ಬ್ಯಾನರ್ಜಿಯವರನ್ನೂ ಬಿಟ್ಟಿಲ್ಲ.
ಈಗ ರಾಹುಲ್ ಗಾಂಧಿ ಕೇರಳದ ವಯನಾಡಿನಲ್ಲಿ ನಾಮಪತ್ರ ಸಲ್ಲಿಸುವ ಮುನ್ನ ನಡೆಸಿದ ರ್ಯಾಲಿ ವಿಚಾರದಲ್ಲೂ ಭಕ್ತರಲ್ಲಿ ಮತ್ತೆ ‘ಹಸಿರು ಕಾಮಾಲೆ’ ಕಾಣಿಸಿಕೊಂಡಿದೆ. ಇದು ಮರುಕಳಿಸುತ್ತಲೇ ಹೋಗಬಹುದಾದ್ದರಿಂದ ಪಾಕ್ ಧ್ವಜ, ಐಯುಎಂಎಲ್ ಪಕ್ಷದ ಧ್ವಜ ಮತ್ತು ಇಸ್ಲಾಮಿಕ್ ಬ್ಯಾನರ್‍ಗಳ ಕುರಿತ ಪ್ರಾಥಮಿಕ ತಿಳವಳಿಕೆಯನ್ನು ಇಲ್ಲಿ ನೀಡುತ್ತಿದ್ದೇವೆ.
ಮಿಥ್ಯ: ಏಪ್ರಿಲ್ 4ರಂದು ವಯನಾಡಿನಲ್ಲಿ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಸುವ ಮುನ್ನ ನಡೆದ ರ್ಯಾಲಿಯಲ್ಲಿ ಪಾಕ್ ಧ್ವಜಗಳು ಹಾರಾಡಿವೆ. ಇಸ್ಲಾಮಿಕ್ ಧ್ವಜಗಳೂ ಕಂಡಿವೆ. ಭಯೋತ್ಪಾದಕ ಜಿನ್ನಾ ಒಂದು ಕಾಶ್ಮೀರ ಮಾಡಿ ಹೋದ, ರಾಹುಲ್ 500 ಕಾಶ್ಮೀರಗಳನ್ನು ಸೃಷ್ಟಿಸಿ, ದೇಶ ಒಡೆಯಲಿದ್ದಾರೆ…. ಈಗಲಾದರೂ ಜಿಹಾದಿ ಪ್ರಿಯ ಕಾಂಗ್ರೆಸ್ ಅನ್ನು ಅರ್ಥ ಮಾಡಿಕೊಳ್ಳಿ ಎಂದು ಹಲವಾರು ಟ್ವಿಟ್ಟರ್ ಹ್ಯಾಂಡಲ್‍ಗಳಿಂದ ಸುದ್ದಿ ಹುಟ್ಟುತ್ತದೆ. ವಯನಾಡ್ ರ್ಯಾಲಿಯ ಫೋಟೊ, ವಿಡಿಯೋಗಳಲ್ಲಿ ಹಸಿರು ಧ್ವಜಗಳನ್ನು ಉಲ್ಲೇಖಿಸಿ ಈ ‘ಅಪಾದನೆ’ ಮಾಡಲಾಗಿದೆ. ಭಕ್ತರು ಇದನ್ನು ರಿಟ್ವೀಟ್ ಮಾಡುತ್ತಲೇ ಇದ್ದಾರೆ. ಫೇಸ್‍ಬುಕ್, ವ್ಯಾಟ್ಸಾಪ್‍ಗಳಿಗೂ ಇದು ಹರಡಿದೆ.


ಸತ್ಯ: ಇದು ಮೊದಲೇನಲ್ಲ. ಕೇರಳದ ‘ಇಂಡಿಯನ್ ಯುನಿಯನ್ ಮುಸ್ಲಿಂ ಲೀಗ್’ (ಐಯುಎಂಎಲ್) ಪಕ್ಷದ ಧ್ವಜ ಕಂಡಾಗಲೆಲ್ಲ ಇಂತಹ ಸುಳ್ಳು ಅಪಾದನೆ ಮಾಡುತ್ತ ಬರಲಾಗಿದೆ. ಐಯುಎಂಎಲ್ ಕೇರಳದಲ್ಲಿ ಅದು ಗಣನೀಯ ಬೇಸ್ ಹೊಂದಿದೆ. ಮೊನ್ನೆ ರ್ಯಾಲಿಯಲ್ಲಿ ಕಂಡಿದ್ದು ಇದೇ ಪಕ್ಷದ ಧ್ವಜ ಮತ್ತು ಬ್ಯಾನರ್ ಅವು ಖಂಡಿತ ಪಾಕ್ ಧ್ವಜಗಳೂ ಅಲ್ಲ, ಇಸ್ಲಾಮಿಕ್ ಧ್ವಜಗಳೂ ಅಲ್ಲ. ಜೊತೆಗೆ ಕಾಂಗ್ರೆಸ್ ಧ್ವಜಗಳಂತೂ ಅಲ್ಲವೇ ಅಲ್ಲ.
ಪಾಕ್ ಧ್ವಜದಲ್ಲಿ ಅರ್ಧಚಂದ್ರ ಮತ್ತು ನಕ್ಷತ್ರಗಳು ಮಧ್ಯಭಾಗದಲ್ಲಿ ಇದ್ದರೆ, ಅವು ಐಯುಎಂಎಲ್ ಧ್ವಜ/ಬ್ಯಾನರಿನಲ್ಲಿ ಎಡಮೂಲೆ ಟಾಪ್‍ನಲ್ಲಿವೆ. ಪಾಕ್ ಧ್ವಜದಲ್ಲಿ ಎಡಕ್ಕೆ ಬಿಳಿ ಪಟ್ಟೆ ಇರುತ್ತದೆ. ಸಾಮಾನ್ಯವಾಗಿ ಮುಸ್ಲಿಮರು ಧಾರ್ಮಿಕ ಧ್ವಜ ಎಂಬರ್ಥದಲ್ಲಿ ಬಳಸುವ ಬ್ಯಾನರ್‍ನಲ್ಲಿ ಈ ಬಿಳಿ ಪಟ್ಟೆ ಇರುವುದಿಲ್ಲ. ಅಂದು ರ್ಯಾಲಿಯಲ್ಲಿ ಹಾರಾಡಿದ್ದು ಐಯುಎಂಎಲ್ ಪಕ್ಷದ ಧ್ವಜಗಳಷ್ಟೇ.

ಇನ್ನೊಂದು ಕಡೆ ನಟಿ ಕೊಯ್ನ ಮಿತ್ರ ಒಂದು ಟ್ವೀಟ್ ಮಾಡಿದ್ದು, ಅಲ್ಲಿ ಬರೀ ಹಸಿರು ಧ್ವಜಗಳ ಚಿತ್ರವಿದೆ. ಇದು ವಯನಾಡ್ ರ್ಯಾಲಿಗೆ ಸಂಬಂಧವೇ ಇಲ್ಲದ ಚಿತ್ರ. ಐಯುಎಂಎಲ್ ಪಕ್ಷದ ಮಾಜಿ ಸಚಿವ ಕುನಾಲ್‍ಕುಟ್ಟಿ 2016ರಲ್ಲಿ ನಡೆಸಿದ ರ್ಯಾಲಿಯ ಚಿತ್ರವದು. ಅಲ್ಲಿ ಸಹಜವಾಗಿ ಐಯುಎಂಎಲ್ ಧ್ವಜಗಳೇ ಇವೆ.
(ಆಧಾರ: ಅಲ್ಟ್‍ನ್ಯೂಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ಕದನ ವಿರಾಮ : ಎರಡು ವರ್ಷಗಳ ಬಳಿಕ ಬೆಥ್ಲೆಹೆಮ್‌ನಲ್ಲಿ ಮರುಕಳಿಸಿದ ಕ್ರಿಸ್‌ಮಸ್ ಸಂಭ್ರಮ

ಗಾಝಾದಲ್ಲಿ ಕದನ ವಿರಾಮ ಜಾರಿಯಾಗಿರುವ ಹಿನ್ನೆಲೆ, ಎರಡು ವರ್ಷಗಳ ನಂತರ ಈ ಬಾರಿ ಯೇಸು ಕ್ರಿಸ್ತನ ಜನ್ಮಸ್ಥಳ ಜೆರುಸಲೇಂನ ಬೆಥ್ಲೆಹೆಮ್‌ನಲ್ಲಿ ಕ್ರಿಸ್‌ಮಸ್‌ ಸಂಭ್ರಮಾಚರಣೆ ಮರುಕಳಿಸಿದೆ. ಶನಿವಾರ (ಡಿಸೆಂಬರ್ 6) ಬೆಥ್ಲೆಹೆಮ್‌ನ ಮ್ಯಾಂಗರ್ ಸ್ಕ್ವೇರ್‌ನಲ್ಲಿರುವ ಚರ್ಚ್...

ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟು : ಜೆಪಿಸಿ ವಿಚಾರಣೆ ಕೋರಿ ಪ್ರಧಾನಿಗೆ ಪತ್ರ ಬರೆದ ಸಂಸದ ಜಾನ್ ಬ್ರಿಟ್ಟಾಸ್

ಇಂಡಿಗೋ ವಿಮಾನಗಳ ಹಾರಾಟ ವ್ಯತ್ಯಯದಿಂದ ಉಂಟಾದ ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟಿನ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವಿಚಾರಣೆ ಅಥವಾ ನ್ಯಾಯಾಂಗ ತನಿಖೆ ಮಾಡಿಸುವಂತೆ ಕೋರಿ ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್ ಪ್ರಧಾನಿ...

ಒಳಮೀಸಲಾತಿ : ಶೇ.17ರ ಪ್ರಮಾಣದಲ್ಲೇ ಮುಂದುವರಿಯಲು ಸರ್ಕಾರ ತೀರ್ಮಾನ?

ಒಳಮೀಸಲಾತಿಗೆ ಸಂಬಂಧಿಸಿದಂತೆ ಉಂಟಾಗಿರುವ ಕಗ್ಗಂಟನ್ನು ಎದುರಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಶೇಕಡ 17ರ ಮೀಸಲಾತಿ ಪ್ರಮಾಣದಲ್ಲೇ ಮುಂದುವರಿಯಲು ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ಶನಿವಾರ ಸಂಜೆ (ಡಿಸೆಂಬರ್ 6) ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ಗೋವಾ ನೈಟ್ ಕ್ಲಬ್‌ನಲ್ಲಿ ಸಿಲಿಂಡರ್ ಸ್ಫೋಟ; 25 ಮಂದಿ ಸಾವು

ಉತ್ತರ ಗೋವಾದ ನೈಟ್‌ ಕ್ಲಬ್‌ವೊಂದರಲ್ಲಿ ಶನಿವಾರ (ಡಿಸೆಂಬರ್ 6) ತಡರಾತ್ರಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಕನಿಷ್ಠ 25 ಜನರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ಕ್ಲಬ್‌ನ ಅಡುಗೆ ಸಿಬ್ಬಂದಿಯಾಗಿದ್ದು,...

ಮೈಸೂರು| ಒಳಮೀಸಲಾತಿ ಹೋರಾಟ ಹತ್ತಿಕ್ಕಲು ನಿಷೇಧಾಜ್ಞೆ ಹೇರಿದ ಕಾಂಗ್ರೆಸ್ ಸರ್ಕಾರ

ಪೂರ್ಣ ಪ್ರಮಾಣದ ಒಳಮೀಸಲಾತಿ ಜಾರಿಗೆ ಆಗ್ರಹಿಸಿ 'ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ' ನಡೆಸುತ್ತಿದ್ದ ಹೋರಾಟಕ್ಕೆ ಜಿಲ್ಲಾ ಪೊಲೀಸರು ಅನುಮತಿ ನಿರಾಕರಿಸಿದ್ದು, ಸಿದ್ದರಾಮನಹುಂಡಿಯಿಂದ ಮೈಸೂರಿಗೆ ಇಂದು ಪಾದಯಾತ್ರೆ ಆರಂಭಿಸಿದ ಹೋರಾಟಗಾರರನ್ನು...

‘ನಕಲಿ ಬ್ಯಾಂಕ್ ಗ್ಯಾರಂಟಿ’ ಪ್ರಕರಣ : ರಿಲಯನ್ಸ್ ಪವರ್, ಇತರ ಸಂಸ್ಥೆಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ ಇಡಿ

ರಿಲಯನ್ಸ್ ಪವರ್ ಕಂಪನಿಯು ಭಾರತೀಯ ಸೌರಶಕ್ತಿ ನಿಗಮಕ್ಕೆ (ಎಸ್‌ಇಸಿಐ) ಟೆಂಡರ್ ಪಡೆಯಲು ಸಲ್ಲಿಸಿದ 68 ಕೋಟಿ ರೂಪಾಯಿಗಳ ನಕಲಿ ಬ್ಯಾಂಕ್ ಗ್ಯಾರಂಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಪವರ್ ಲಿಮಿಟೆಡ್ ಮತ್ತು ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್‌ನ...

ಉತ್ತರ ಪ್ರದೇಶ| ಬಾಬರಿ ಮಸೀದಿ ಮೇಲಿನ ದಾಳಿಗೆ 33 ವರ್ಷ; ಅಯೋಧ್ಯೆ-ವಾರಣಾಸಿಯಲ್ಲಿ ಬಿಗಿ ಭದ್ರತೆ

ಬಾಬರಿ ಮಸೀದಿ ಧ್ವಂಸವಾಗಿ 33ನೇ ವರ್ಷ ತುಂಬುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಅಯೋಧ್ಯೆ ಮತ್ತು ಉತ್ತರ ಪ್ರದೇಶದ ಇತರ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಜಾಗರೂಕರಾಗಿದ್ದು, ಎಲ್ಲಾ ಮಾರ್ಗಗಳಲ್ಲಿ ವಾಹನಗಳ ಸಂಪೂರ್ಣ ತಪಾಸಣೆ ನಡೆಸುತ್ತಿವೆ. ಈ ಕುರಿತು...

ನ್ಯಾಷನಲ್ ಹೆರಾಲ್ಡ್‌ಗೆ ದೇಣಿಗೆ: ‘ಡಿಕೆ’ ಸಹೋದರರಿಗೆ ಇಡಿ-ದೆಹಲಿ ಪೊಲೀಸರಿಂದ ಸಮನ್ಸ್

ನ್ಯಾಷನಲ್ ಹೆರಾಲ್ಡ್ ಮತ್ತು ಯಂಗ್ ಇಂಡಿಯಾ ಸಂಸ್ಥೆಗಳಿಗೆ ನೀಡಿದ ದೇಣಿಗೆಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕೈಗೊಂಡಿರುವ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮತ್ತು ಜಾರಿ ನಿರ್ದೇಶನಾಲಯವು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು...

ಇಂಡಿಗೋ ಹಾರಾಟದಲ್ಲಿ ಐದನೇ ದಿನವೂ ವ್ಯತ್ಯಯ: ವಿಮಾನ ದರಕ್ಕೆ ತಾತ್ಕಾಲಿಕ ಮಿತಿ ವಿಧಿಸಿದ ಕೇಂದ್ರ

ಇಂಡಿಗೋದ ದೇಶೀಯ ಕಾರ್ಯಾಚರಣೆಗಳು ಸತತ ಐದನೇ ದಿನವೂ ಅಸ್ತವ್ಯಸ್ತಗೊಂಡಿದ್ದರಿಂದ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಶನಿವಾರ (ಡಿಸೆಂಬರ್ 6) ವಿಮಾನ ಟಿಕೆಟ್ ದರಗಳ ಮೇಲೆ ತಾತ್ಕಾಲಿಕ ಮಿತಿಯನ್ನು ವಿಧಿಸಿದೆ. ನಿಗದಿತ ಮಾನದಂಡಗಳ ಯಾವುದೇ...

ಪಶ್ಚಿಮ ಬಂಗಾಳ| ಎಸ್‌ಐಆರ್‌ನಲ್ಲಿ ಹೆಸರು ನೋಂದಾಯಿಸಲು ನಿರಾಕರಿಸಿದ 79 ಬುಡಕಟ್ಟು ಜನಾಂಗಗಳು

ಪಶ್ಚಿಮ ಬಂಗಾಳದ ಬಂಕುರಾದ ಮುಚಿಕಟಾ ಮತ್ತು ವೆದುವಾಶೋಲ್ ಗ್ರಾಮಗಳ ಬುಡಕಟ್ಟು ಜನಾಂಗದವರು 'ಸಮಾಜ್ವಾದ್ ಅಂತರ-ರಾಜ್ಯ ಮಾಝಿ ಸರ್ಕಾರ್'ಗೆ ನಿಷ್ಠೆಯನ್ನು ಉಲ್ಲೇಖಿಸಿ, ಚುನಾವಣಾ ಆಯೋಗ್ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಭಾಗವಹಿಸಲು ನಿರಾಕರಿಸಿದ್ದಾರೆ...