Homeಮುಖಪುಟಕೇರಳದ ರಾಹುಲ್ ರ್ಯಾಲಿಯಲ್ಲಿ ಪಾಕ್ ಧ್ವಜ ಹಾರಾಡಿದ್ದು ಸುಳ್ಳು ಸುದ್ದಿ

ಕೇರಳದ ರಾಹುಲ್ ರ್ಯಾಲಿಯಲ್ಲಿ ಪಾಕ್ ಧ್ವಜ ಹಾರಾಡಿದ್ದು ಸುಳ್ಳು ಸುದ್ದಿ

- Advertisement -
- Advertisement -

ಹಸಿರು ಹಾರಿದರೆ ಅದು ಪಾಕ್ ಧ್ವಜ! ಸಂಘಿಗಳ ಬಹುಕಾಲದ ಹುನ್ನಾರ
ಇದು ಇವತ್ತು ನಿನ್ನೆಯದಲ್ಲ, ಸಂಘದ ಅಂಗಸಂಸ್ಥೆಗಳು ಸುಮಾರು ಎರಡು ದಶಕಗಳಿಂದ ನಡೆಸಿಕೊಂಡು ಬಂದಿರುವ ಪ್ರಪಗಂಡಾ. ಯಾವುದಾದರೂ ರ್ಯಾಲಿಯಲ್ಲಿ ಹಸಿರು ಬಾವುಟ ಕಂಡರೆ ಸಾಕು, ಅಲ್ಲಿ ಪಾಕ್ ಧ್ವಜ/ಇಸ್ಲಾಮಿಕ್ ಧ್ವಜ ಹಾರಾಡಿದವು ಎಂದೆಲ್ಲ ಸುದ್ದಿ ಹಬ್ಬಿಸುವುದು. ಸಾಮಾಜಿಕ ಜಾಲತಾಣಗಳ ಬಳಕೆ ಹೆಚ್ಚಾದ ಮೇಲೆ ಅಂತಹ ಫೋಟೊ, ವಿಡಿಯೋಗಳ ಮೂಲಕ ರಾಜಕೀಯವಾಗಿ ಮುಗ್ಧರಾದವರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತ ಬರಲಾಗಿದೆ. ಕಾಂಗ್ರೆಸ್ ವಿರುದ್ಧವೇ ಈ ‘ಅಸ್ತ್ರ’ ಜಾಸ್ತಿ ಬಳಕೆಯಾಗಿದೆ, ಜೊತೆಗೆ ಮಮತಾ ಬ್ಯಾನರ್ಜಿಯವರನ್ನೂ ಬಿಟ್ಟಿಲ್ಲ.
ಈಗ ರಾಹುಲ್ ಗಾಂಧಿ ಕೇರಳದ ವಯನಾಡಿನಲ್ಲಿ ನಾಮಪತ್ರ ಸಲ್ಲಿಸುವ ಮುನ್ನ ನಡೆಸಿದ ರ್ಯಾಲಿ ವಿಚಾರದಲ್ಲೂ ಭಕ್ತರಲ್ಲಿ ಮತ್ತೆ ‘ಹಸಿರು ಕಾಮಾಲೆ’ ಕಾಣಿಸಿಕೊಂಡಿದೆ. ಇದು ಮರುಕಳಿಸುತ್ತಲೇ ಹೋಗಬಹುದಾದ್ದರಿಂದ ಪಾಕ್ ಧ್ವಜ, ಐಯುಎಂಎಲ್ ಪಕ್ಷದ ಧ್ವಜ ಮತ್ತು ಇಸ್ಲಾಮಿಕ್ ಬ್ಯಾನರ್‍ಗಳ ಕುರಿತ ಪ್ರಾಥಮಿಕ ತಿಳವಳಿಕೆಯನ್ನು ಇಲ್ಲಿ ನೀಡುತ್ತಿದ್ದೇವೆ.
ಮಿಥ್ಯ: ಏಪ್ರಿಲ್ 4ರಂದು ವಯನಾಡಿನಲ್ಲಿ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಸುವ ಮುನ್ನ ನಡೆದ ರ್ಯಾಲಿಯಲ್ಲಿ ಪಾಕ್ ಧ್ವಜಗಳು ಹಾರಾಡಿವೆ. ಇಸ್ಲಾಮಿಕ್ ಧ್ವಜಗಳೂ ಕಂಡಿವೆ. ಭಯೋತ್ಪಾದಕ ಜಿನ್ನಾ ಒಂದು ಕಾಶ್ಮೀರ ಮಾಡಿ ಹೋದ, ರಾಹುಲ್ 500 ಕಾಶ್ಮೀರಗಳನ್ನು ಸೃಷ್ಟಿಸಿ, ದೇಶ ಒಡೆಯಲಿದ್ದಾರೆ…. ಈಗಲಾದರೂ ಜಿಹಾದಿ ಪ್ರಿಯ ಕಾಂಗ್ರೆಸ್ ಅನ್ನು ಅರ್ಥ ಮಾಡಿಕೊಳ್ಳಿ ಎಂದು ಹಲವಾರು ಟ್ವಿಟ್ಟರ್ ಹ್ಯಾಂಡಲ್‍ಗಳಿಂದ ಸುದ್ದಿ ಹುಟ್ಟುತ್ತದೆ. ವಯನಾಡ್ ರ್ಯಾಲಿಯ ಫೋಟೊ, ವಿಡಿಯೋಗಳಲ್ಲಿ ಹಸಿರು ಧ್ವಜಗಳನ್ನು ಉಲ್ಲೇಖಿಸಿ ಈ ‘ಅಪಾದನೆ’ ಮಾಡಲಾಗಿದೆ. ಭಕ್ತರು ಇದನ್ನು ರಿಟ್ವೀಟ್ ಮಾಡುತ್ತಲೇ ಇದ್ದಾರೆ. ಫೇಸ್‍ಬುಕ್, ವ್ಯಾಟ್ಸಾಪ್‍ಗಳಿಗೂ ಇದು ಹರಡಿದೆ.


ಸತ್ಯ: ಇದು ಮೊದಲೇನಲ್ಲ. ಕೇರಳದ ‘ಇಂಡಿಯನ್ ಯುನಿಯನ್ ಮುಸ್ಲಿಂ ಲೀಗ್’ (ಐಯುಎಂಎಲ್) ಪಕ್ಷದ ಧ್ವಜ ಕಂಡಾಗಲೆಲ್ಲ ಇಂತಹ ಸುಳ್ಳು ಅಪಾದನೆ ಮಾಡುತ್ತ ಬರಲಾಗಿದೆ. ಐಯುಎಂಎಲ್ ಕೇರಳದಲ್ಲಿ ಅದು ಗಣನೀಯ ಬೇಸ್ ಹೊಂದಿದೆ. ಮೊನ್ನೆ ರ್ಯಾಲಿಯಲ್ಲಿ ಕಂಡಿದ್ದು ಇದೇ ಪಕ್ಷದ ಧ್ವಜ ಮತ್ತು ಬ್ಯಾನರ್ ಅವು ಖಂಡಿತ ಪಾಕ್ ಧ್ವಜಗಳೂ ಅಲ್ಲ, ಇಸ್ಲಾಮಿಕ್ ಧ್ವಜಗಳೂ ಅಲ್ಲ. ಜೊತೆಗೆ ಕಾಂಗ್ರೆಸ್ ಧ್ವಜಗಳಂತೂ ಅಲ್ಲವೇ ಅಲ್ಲ.
ಪಾಕ್ ಧ್ವಜದಲ್ಲಿ ಅರ್ಧಚಂದ್ರ ಮತ್ತು ನಕ್ಷತ್ರಗಳು ಮಧ್ಯಭಾಗದಲ್ಲಿ ಇದ್ದರೆ, ಅವು ಐಯುಎಂಎಲ್ ಧ್ವಜ/ಬ್ಯಾನರಿನಲ್ಲಿ ಎಡಮೂಲೆ ಟಾಪ್‍ನಲ್ಲಿವೆ. ಪಾಕ್ ಧ್ವಜದಲ್ಲಿ ಎಡಕ್ಕೆ ಬಿಳಿ ಪಟ್ಟೆ ಇರುತ್ತದೆ. ಸಾಮಾನ್ಯವಾಗಿ ಮುಸ್ಲಿಮರು ಧಾರ್ಮಿಕ ಧ್ವಜ ಎಂಬರ್ಥದಲ್ಲಿ ಬಳಸುವ ಬ್ಯಾನರ್‍ನಲ್ಲಿ ಈ ಬಿಳಿ ಪಟ್ಟೆ ಇರುವುದಿಲ್ಲ. ಅಂದು ರ್ಯಾಲಿಯಲ್ಲಿ ಹಾರಾಡಿದ್ದು ಐಯುಎಂಎಲ್ ಪಕ್ಷದ ಧ್ವಜಗಳಷ್ಟೇ.

ಇನ್ನೊಂದು ಕಡೆ ನಟಿ ಕೊಯ್ನ ಮಿತ್ರ ಒಂದು ಟ್ವೀಟ್ ಮಾಡಿದ್ದು, ಅಲ್ಲಿ ಬರೀ ಹಸಿರು ಧ್ವಜಗಳ ಚಿತ್ರವಿದೆ. ಇದು ವಯನಾಡ್ ರ್ಯಾಲಿಗೆ ಸಂಬಂಧವೇ ಇಲ್ಲದ ಚಿತ್ರ. ಐಯುಎಂಎಲ್ ಪಕ್ಷದ ಮಾಜಿ ಸಚಿವ ಕುನಾಲ್‍ಕುಟ್ಟಿ 2016ರಲ್ಲಿ ನಡೆಸಿದ ರ್ಯಾಲಿಯ ಚಿತ್ರವದು. ಅಲ್ಲಿ ಸಹಜವಾಗಿ ಐಯುಎಂಎಲ್ ಧ್ವಜಗಳೇ ಇವೆ.
(ಆಧಾರ: ಅಲ್ಟ್‍ನ್ಯೂಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...