Homeಮುಖಪುಟವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ 'ವಿಬಿ-ಜಿ ರಾಮ್ ಜಿ ಮಸೂದೆ' ಅಂಗೀಕಾರ

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

- Advertisement -
- Advertisement -

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ ‘ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು.

ಈ ಮಸೂದೆ 2005ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಜಾರಿಗೆ ತಂದಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ-ನರೇಗಾ) ಮತ್ತು ಯೋಜನೆಯ ಹೆಸರು ಮತ್ತು ನಿಬಂಧನೆಗಳನ್ನು ಬದಲಿಸಲಿದೆ.

ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಪ್ರತಿಪಕ್ಷಗಳ ಸಂಸದರು ಸದನದ ಬಾವಿಗಿಳಿದು ಪ್ರತಿಭಟಿಸಿದರು. ಈ ವೇಳೆ ಸ್ಪೀಕರ್ ಸದನವನ್ನು ಮುಂದೂಡಿದರು.

ಮಸೂದೆಯನ್ನು ಪರಿಗಣನೆ ಮತ್ತು ಅಂಗೀಕಾರಕ್ಕಾಗಿ ಮಂಡಿಸಿದ, ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, “ಈ ಶಾಸನವು ಗ್ರಾಮೀಣ ಜನರಿಗೆ ಉದ್ಯೋಗವನ್ನು ಖಚಿತಪಡಿಸುತ್ತದೆ ಮತ್ತು ಮಹಾತ್ಮ ಗಾಂಧಿಯವರ ಸ್ವಾವಲಂಬಿ ಗ್ರಾಮಗಳ ದೃಷ್ಟಿಕೋನವನ್ನು ಈಡೇರಿಸಲು ಸಹಾಯ ಮಾಡುತ್ತದೆ ಎಂದು ಹೇಳಿದರು. ವಿಬಿ-ಜಿ ರಾಮ್ ಜಿ ಮಸೂದೆಯು ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಯನ್ನು ಖಚಿತಪಡಿಸುತ್ತದೆ, ಅವುಗಳನ್ನು ಬಡತನ ಮುಕ್ತಗೊಳಿಸುತ್ತದೆ ಮತ್ತು ಅವುಗಳ ಬೆಳವಣಿಗೆಯ ಪ್ರಯಾಣಕ್ಕೆ ಇಂಧನ ನೀಡುತ್ತದೆ” ಎಂದು ಸಮರ್ಥಿಸಿಕೊಂಡರು.

ವಿಪಕ್ಷಗಳ ಸದಸ್ಯರು ಕಾಯ್ದೆ ಮತ್ತು ಯೋಜನೆಯಿಂದ ಮಹಾತ್ಮ ಗಾಂಧಿಯ ಹೆಸರು ಕೈಬಿಟ್ಟು ಮರುನಾಮಕರಣ ಮಾಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು ಸರ್ಕಾರ ಗಾಂಧಿಯವರ ಪರಂಪರೆಯನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದರು. ನರೇಗಾ ಎಂಬ ಹೆಸರು ತೆಗೆದುಹಾಕಿ ಯೋಜನೆಗೆ ಮರುನಾಮಕರಣ ಮಾಡುವ ಮೂಲಕ ಮಸೂದೆಯು ರಾಮರಾಜ್ಯದ ಕಲ್ಪನೆಯನ್ನು ಅಕ್ಷರಶಃ ನಾಶಪಡಿಸುತ್ತಿದೆ ಎಂದು ಹೇಳಿದರು.

ಯೋಜನೆಯಿಂದ ಗಾಂಧಿಯವರ ಹೆಸರನ್ನು ತೆಗೆದುಹಾಕುವ ಮೂಲಕ ಸರ್ಕಾರ ಮಹಾತ್ಮ ಗಾಂಧಿ ಮತ್ತು ರವೀಂದ್ರನಾಥ ಟ್ಯಾಗೋರ್ ಅವರನ್ನು ‘ಅವಮಾನಿಸಿದೆ. ಸರ್ಕಾರ “ನ ಕಿಸಿ ಕಾ ಸಾಥ್, ನ ಕಿಸಿ ಕಾ ವಿಕಾಸ್, ನ ರಹೀಮ್ ಕಾ, ನ ರಾಮ್ ಕಾ” ದಲ್ಲಿ ನಂಬಿಕೆ ಇಟ್ಟಿದೆ ಎಂಬುವುದನ್ನು ಈ ಮಸೂದೆ ತೋರಿಸಿದೆ ಎಂದರು.

ಮಸೂದೆಯನ್ನು ವಿರೋಧಿಸಿದ ಅವರು, 2005ರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯು ಗ್ರಾಮೀಣ ಭಾರತದ ಜೀವನೋಪಾಯ ಭದ್ರತೆಯ ಪರಿಕಲ್ಪನೆಯಲ್ಲಿ ಕ್ರಾಂತಿಯನ್ನುಂಟು ಮಾಡಿದೆ ಎಂದು ಹೇಳಿದರು.

ಕಾಂಗ್ರೆಸ್ ಸಂಸದ ಜೈ ಪ್ರಕಾಶ್, ರಾಷ್ಟ್ರಪಿತನ ಹೆಸರನ್ನು ಶಾಸನದಿಂದ ತೆಗೆದುಹಾಕುವುದು ‘ಅತಿದೊಡ್ಡ ಅಪರಾಧ’ ಎಂದು ಹೇಳಿದರು. ಪ್ರಸ್ತಾವಿತ ಕಾನೂನು ರಾಜ್ಯಗಳಿಗೆ ಹೊಸ ಆರ್ಥಿಕ ಹೊರೆಯನ್ನು ಹೇರುತ್ತದೆ. ಗ್ರಾಮ ಸಭೆಗಳಂತಹ ತಳಮಟ್ಟದ ಸಂಸ್ಥೆಗಳಿಗೆ ಯೋಜನೆಯಡಿ ಕೆಲಸಗಳನ್ನು ನಿರ್ಧರಿಸುವ ಹಕ್ಕನ್ನು ಕಸಿದುಕೊಳ್ಳುತ್ತದೆ ಎಂದು ಹೇಳಿದರು. ಮಸೂದೆ ಬಡವರ ವಿರೋಧಿ, ದಲಿತ ವಿರೋಧಿ ಶ್ರೀಮಂತರ ಪರ ಎಂದರು.

ಮಸೂದೆಯ ಮೇಲಿನ ಚರ್ಚೆ ಬುಧವಾರ ನಡೆಯಲಿದೆ ಎಂದು ಸ್ಪೀಕರ್ ಓಂ ಬಿರ್ಲಾ ಈ ಹಿಂದೆ ಹೇಳಿದ್ದರು. ಗುರುವಾರ ಸಚಿವರು ಅದಕ್ಕೆ ಉತ್ತರ ನೀಡಿ ನಂತರ ಅದನ್ನು ಅಂಗೀಕಾರಕ್ಕೆ ತೆಗೆದುಕೊಳ್ಳಲಾಯಿತು.

ಮಸೂದೆಯನ್ನು ಸಮರ್ಥಿಸಿಕೊಂಡ ಬಿಜೆಪಿ ಸಂಸದ ಬ್ರಿಜ್‌ಮೋಹನ್ ಅಗರ್ವಾಲ್, ಈ ಹಿಂದಿನ ಕಾಂಗ್ರೆಸ್ ಸರ್ಕಾರ ನರೇಗಾ ಯೋಜನೆಯನ್ನು ‘ಗುಂಡಿ ತೋಡಿ ಗುಂಡಿ ಮುಚ್ಚುವುದಕ್ಕೆ’ ಸೀಮಿತಗೊಳಿಸಿತ್ತು. ಅದು ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸುವಲ್ಲಿ ವಿಫಲವಾಗಿತ್ತು ಮತ್ತು ದೊಡ್ಡ ಪ್ರಮಾಣದ ಭ್ರಷ್ಟಾಚಾರಕ್ಕೆ ಕಾರಣವಾಗಿತ್ತು. ಹೊಸ ಕಾನೂನಿನಲ್ಲಿ ‘ರಾಮ್’ ಎಂದು ಸೇರಿಸುವುದರಿಂದ ಭ್ರಷ್ಟಾಚಾರವನ್ನು ತಡೆಯಬಹುದು ಎಂದು ಅಗರ್ವಾಲ್ ಹೇಳಿದರು.

ಮಸೂದೆಯ ಪ್ರಕಾರ, ಕಾಯ್ದೆ ಜಾರಿಗೆ ಬಂದ ಆರು ತಿಂಗಳೊಳಗೆ ರಾಜ್ಯಗಳು ಹೊಸ ಕಾನೂನಿಗೆ ಅನುಗುಣವಾಗಿ ಯೋಜನೆಗಳನ್ನು ರೂಪಿಸಬೇಕಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...