Homeಮುಖಪುಟವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ 'ವಿಬಿ-ಜಿ ರಾಮ್ ಜಿ ಮಸೂದೆ' ಅಂಗೀಕಾರ

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

- Advertisement -
- Advertisement -

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ ‘ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು.

ಈ ಮಸೂದೆ 2005ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಜಾರಿಗೆ ತಂದಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ-ನರೇಗಾ) ಮತ್ತು ಯೋಜನೆಯ ಹೆಸರು ಮತ್ತು ನಿಬಂಧನೆಗಳನ್ನು ಬದಲಿಸಲಿದೆ.

ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಪ್ರತಿಪಕ್ಷಗಳ ಸಂಸದರು ಸದನದ ಬಾವಿಗಿಳಿದು ಪ್ರತಿಭಟಿಸಿದರು. ಈ ವೇಳೆ ಸ್ಪೀಕರ್ ಸದನವನ್ನು ಮುಂದೂಡಿದರು.

ಮಸೂದೆಯನ್ನು ಪರಿಗಣನೆ ಮತ್ತು ಅಂಗೀಕಾರಕ್ಕಾಗಿ ಮಂಡಿಸಿದ, ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, “ಈ ಶಾಸನವು ಗ್ರಾಮೀಣ ಜನರಿಗೆ ಉದ್ಯೋಗವನ್ನು ಖಚಿತಪಡಿಸುತ್ತದೆ ಮತ್ತು ಮಹಾತ್ಮ ಗಾಂಧಿಯವರ ಸ್ವಾವಲಂಬಿ ಗ್ರಾಮಗಳ ದೃಷ್ಟಿಕೋನವನ್ನು ಈಡೇರಿಸಲು ಸಹಾಯ ಮಾಡುತ್ತದೆ ಎಂದು ಹೇಳಿದರು. ವಿಬಿ-ಜಿ ರಾಮ್ ಜಿ ಮಸೂದೆಯು ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಯನ್ನು ಖಚಿತಪಡಿಸುತ್ತದೆ, ಅವುಗಳನ್ನು ಬಡತನ ಮುಕ್ತಗೊಳಿಸುತ್ತದೆ ಮತ್ತು ಅವುಗಳ ಬೆಳವಣಿಗೆಯ ಪ್ರಯಾಣಕ್ಕೆ ಇಂಧನ ನೀಡುತ್ತದೆ” ಎಂದು ಸಮರ್ಥಿಸಿಕೊಂಡರು.

ವಿಪಕ್ಷಗಳ ಸದಸ್ಯರು ಕಾಯ್ದೆ ಮತ್ತು ಯೋಜನೆಯಿಂದ ಮಹಾತ್ಮ ಗಾಂಧಿಯ ಹೆಸರು ಕೈಬಿಟ್ಟು ಮರುನಾಮಕರಣ ಮಾಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು ಸರ್ಕಾರ ಗಾಂಧಿಯವರ ಪರಂಪರೆಯನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದರು. ನರೇಗಾ ಎಂಬ ಹೆಸರು ತೆಗೆದುಹಾಕಿ ಯೋಜನೆಗೆ ಮರುನಾಮಕರಣ ಮಾಡುವ ಮೂಲಕ ಮಸೂದೆಯು ರಾಮರಾಜ್ಯದ ಕಲ್ಪನೆಯನ್ನು ಅಕ್ಷರಶಃ ನಾಶಪಡಿಸುತ್ತಿದೆ ಎಂದು ಹೇಳಿದರು.

ಯೋಜನೆಯಿಂದ ಗಾಂಧಿಯವರ ಹೆಸರನ್ನು ತೆಗೆದುಹಾಕುವ ಮೂಲಕ ಸರ್ಕಾರ ಮಹಾತ್ಮ ಗಾಂಧಿ ಮತ್ತು ರವೀಂದ್ರನಾಥ ಟ್ಯಾಗೋರ್ ಅವರನ್ನು ‘ಅವಮಾನಿಸಿದೆ. ಸರ್ಕಾರ “ನ ಕಿಸಿ ಕಾ ಸಾಥ್, ನ ಕಿಸಿ ಕಾ ವಿಕಾಸ್, ನ ರಹೀಮ್ ಕಾ, ನ ರಾಮ್ ಕಾ” ದಲ್ಲಿ ನಂಬಿಕೆ ಇಟ್ಟಿದೆ ಎಂಬುವುದನ್ನು ಈ ಮಸೂದೆ ತೋರಿಸಿದೆ ಎಂದರು.

ಮಸೂದೆಯನ್ನು ವಿರೋಧಿಸಿದ ಅವರು, 2005ರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯು ಗ್ರಾಮೀಣ ಭಾರತದ ಜೀವನೋಪಾಯ ಭದ್ರತೆಯ ಪರಿಕಲ್ಪನೆಯಲ್ಲಿ ಕ್ರಾಂತಿಯನ್ನುಂಟು ಮಾಡಿದೆ ಎಂದು ಹೇಳಿದರು.

ಕಾಂಗ್ರೆಸ್ ಸಂಸದ ಜೈ ಪ್ರಕಾಶ್, ರಾಷ್ಟ್ರಪಿತನ ಹೆಸರನ್ನು ಶಾಸನದಿಂದ ತೆಗೆದುಹಾಕುವುದು ‘ಅತಿದೊಡ್ಡ ಅಪರಾಧ’ ಎಂದು ಹೇಳಿದರು. ಪ್ರಸ್ತಾವಿತ ಕಾನೂನು ರಾಜ್ಯಗಳಿಗೆ ಹೊಸ ಆರ್ಥಿಕ ಹೊರೆಯನ್ನು ಹೇರುತ್ತದೆ. ಗ್ರಾಮ ಸಭೆಗಳಂತಹ ತಳಮಟ್ಟದ ಸಂಸ್ಥೆಗಳಿಗೆ ಯೋಜನೆಯಡಿ ಕೆಲಸಗಳನ್ನು ನಿರ್ಧರಿಸುವ ಹಕ್ಕನ್ನು ಕಸಿದುಕೊಳ್ಳುತ್ತದೆ ಎಂದು ಹೇಳಿದರು. ಮಸೂದೆ ಬಡವರ ವಿರೋಧಿ, ದಲಿತ ವಿರೋಧಿ ಶ್ರೀಮಂತರ ಪರ ಎಂದರು.

ಮಸೂದೆಯ ಮೇಲಿನ ಚರ್ಚೆ ಬುಧವಾರ ನಡೆಯಲಿದೆ ಎಂದು ಸ್ಪೀಕರ್ ಓಂ ಬಿರ್ಲಾ ಈ ಹಿಂದೆ ಹೇಳಿದ್ದರು. ಗುರುವಾರ ಸಚಿವರು ಅದಕ್ಕೆ ಉತ್ತರ ನೀಡಿ ನಂತರ ಅದನ್ನು ಅಂಗೀಕಾರಕ್ಕೆ ತೆಗೆದುಕೊಳ್ಳಲಾಯಿತು.

ಮಸೂದೆಯನ್ನು ಸಮರ್ಥಿಸಿಕೊಂಡ ಬಿಜೆಪಿ ಸಂಸದ ಬ್ರಿಜ್‌ಮೋಹನ್ ಅಗರ್ವಾಲ್, ಈ ಹಿಂದಿನ ಕಾಂಗ್ರೆಸ್ ಸರ್ಕಾರ ನರೇಗಾ ಯೋಜನೆಯನ್ನು ‘ಗುಂಡಿ ತೋಡಿ ಗುಂಡಿ ಮುಚ್ಚುವುದಕ್ಕೆ’ ಸೀಮಿತಗೊಳಿಸಿತ್ತು. ಅದು ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸುವಲ್ಲಿ ವಿಫಲವಾಗಿತ್ತು ಮತ್ತು ದೊಡ್ಡ ಪ್ರಮಾಣದ ಭ್ರಷ್ಟಾಚಾರಕ್ಕೆ ಕಾರಣವಾಗಿತ್ತು. ಹೊಸ ಕಾನೂನಿನಲ್ಲಿ ‘ರಾಮ್’ ಎಂದು ಸೇರಿಸುವುದರಿಂದ ಭ್ರಷ್ಟಾಚಾರವನ್ನು ತಡೆಯಬಹುದು ಎಂದು ಅಗರ್ವಾಲ್ ಹೇಳಿದರು.

ಮಸೂದೆಯ ಪ್ರಕಾರ, ಕಾಯ್ದೆ ಜಾರಿಗೆ ಬಂದ ಆರು ತಿಂಗಳೊಳಗೆ ರಾಜ್ಯಗಳು ಹೊಸ ಕಾನೂನಿಗೆ ಅನುಗುಣವಾಗಿ ಯೋಜನೆಗಳನ್ನು ರೂಪಿಸಬೇಕಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...