Homeಮುಖಪುಟವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ 'ವಿಬಿ-ಜಿ ರಾಮ್ ಜಿ ಮಸೂದೆ' ಅಂಗೀಕಾರ

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

- Advertisement -
- Advertisement -

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ ‘ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು.

ಈ ಮಸೂದೆ 2005ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಜಾರಿಗೆ ತಂದಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ-ನರೇಗಾ) ಮತ್ತು ಯೋಜನೆಯ ಹೆಸರು ಮತ್ತು ನಿಬಂಧನೆಗಳನ್ನು ಬದಲಿಸಲಿದೆ.

ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಪ್ರತಿಪಕ್ಷಗಳ ಸಂಸದರು ಸದನದ ಬಾವಿಗಿಳಿದು ಪ್ರತಿಭಟಿಸಿದರು. ಈ ವೇಳೆ ಸ್ಪೀಕರ್ ಸದನವನ್ನು ಮುಂದೂಡಿದರು.

ಮಸೂದೆಯನ್ನು ಪರಿಗಣನೆ ಮತ್ತು ಅಂಗೀಕಾರಕ್ಕಾಗಿ ಮಂಡಿಸಿದ, ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, “ಈ ಶಾಸನವು ಗ್ರಾಮೀಣ ಜನರಿಗೆ ಉದ್ಯೋಗವನ್ನು ಖಚಿತಪಡಿಸುತ್ತದೆ ಮತ್ತು ಮಹಾತ್ಮ ಗಾಂಧಿಯವರ ಸ್ವಾವಲಂಬಿ ಗ್ರಾಮಗಳ ದೃಷ್ಟಿಕೋನವನ್ನು ಈಡೇರಿಸಲು ಸಹಾಯ ಮಾಡುತ್ತದೆ ಎಂದು ಹೇಳಿದರು. ವಿಬಿ-ಜಿ ರಾಮ್ ಜಿ ಮಸೂದೆಯು ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಯನ್ನು ಖಚಿತಪಡಿಸುತ್ತದೆ, ಅವುಗಳನ್ನು ಬಡತನ ಮುಕ್ತಗೊಳಿಸುತ್ತದೆ ಮತ್ತು ಅವುಗಳ ಬೆಳವಣಿಗೆಯ ಪ್ರಯಾಣಕ್ಕೆ ಇಂಧನ ನೀಡುತ್ತದೆ” ಎಂದು ಸಮರ್ಥಿಸಿಕೊಂಡರು.

ವಿಪಕ್ಷಗಳ ಸದಸ್ಯರು ಕಾಯ್ದೆ ಮತ್ತು ಯೋಜನೆಯಿಂದ ಮಹಾತ್ಮ ಗಾಂಧಿಯ ಹೆಸರು ಕೈಬಿಟ್ಟು ಮರುನಾಮಕರಣ ಮಾಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು ಸರ್ಕಾರ ಗಾಂಧಿಯವರ ಪರಂಪರೆಯನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದರು. ನರೇಗಾ ಎಂಬ ಹೆಸರು ತೆಗೆದುಹಾಕಿ ಯೋಜನೆಗೆ ಮರುನಾಮಕರಣ ಮಾಡುವ ಮೂಲಕ ಮಸೂದೆಯು ರಾಮರಾಜ್ಯದ ಕಲ್ಪನೆಯನ್ನು ಅಕ್ಷರಶಃ ನಾಶಪಡಿಸುತ್ತಿದೆ ಎಂದು ಹೇಳಿದರು.

ಯೋಜನೆಯಿಂದ ಗಾಂಧಿಯವರ ಹೆಸರನ್ನು ತೆಗೆದುಹಾಕುವ ಮೂಲಕ ಸರ್ಕಾರ ಮಹಾತ್ಮ ಗಾಂಧಿ ಮತ್ತು ರವೀಂದ್ರನಾಥ ಟ್ಯಾಗೋರ್ ಅವರನ್ನು ‘ಅವಮಾನಿಸಿದೆ. ಸರ್ಕಾರ “ನ ಕಿಸಿ ಕಾ ಸಾಥ್, ನ ಕಿಸಿ ಕಾ ವಿಕಾಸ್, ನ ರಹೀಮ್ ಕಾ, ನ ರಾಮ್ ಕಾ” ದಲ್ಲಿ ನಂಬಿಕೆ ಇಟ್ಟಿದೆ ಎಂಬುವುದನ್ನು ಈ ಮಸೂದೆ ತೋರಿಸಿದೆ ಎಂದರು.

ಮಸೂದೆಯನ್ನು ವಿರೋಧಿಸಿದ ಅವರು, 2005ರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯು ಗ್ರಾಮೀಣ ಭಾರತದ ಜೀವನೋಪಾಯ ಭದ್ರತೆಯ ಪರಿಕಲ್ಪನೆಯಲ್ಲಿ ಕ್ರಾಂತಿಯನ್ನುಂಟು ಮಾಡಿದೆ ಎಂದು ಹೇಳಿದರು.

ಕಾಂಗ್ರೆಸ್ ಸಂಸದ ಜೈ ಪ್ರಕಾಶ್, ರಾಷ್ಟ್ರಪಿತನ ಹೆಸರನ್ನು ಶಾಸನದಿಂದ ತೆಗೆದುಹಾಕುವುದು ‘ಅತಿದೊಡ್ಡ ಅಪರಾಧ’ ಎಂದು ಹೇಳಿದರು. ಪ್ರಸ್ತಾವಿತ ಕಾನೂನು ರಾಜ್ಯಗಳಿಗೆ ಹೊಸ ಆರ್ಥಿಕ ಹೊರೆಯನ್ನು ಹೇರುತ್ತದೆ. ಗ್ರಾಮ ಸಭೆಗಳಂತಹ ತಳಮಟ್ಟದ ಸಂಸ್ಥೆಗಳಿಗೆ ಯೋಜನೆಯಡಿ ಕೆಲಸಗಳನ್ನು ನಿರ್ಧರಿಸುವ ಹಕ್ಕನ್ನು ಕಸಿದುಕೊಳ್ಳುತ್ತದೆ ಎಂದು ಹೇಳಿದರು. ಮಸೂದೆ ಬಡವರ ವಿರೋಧಿ, ದಲಿತ ವಿರೋಧಿ ಶ್ರೀಮಂತರ ಪರ ಎಂದರು.

ಮಸೂದೆಯ ಮೇಲಿನ ಚರ್ಚೆ ಬುಧವಾರ ನಡೆಯಲಿದೆ ಎಂದು ಸ್ಪೀಕರ್ ಓಂ ಬಿರ್ಲಾ ಈ ಹಿಂದೆ ಹೇಳಿದ್ದರು. ಗುರುವಾರ ಸಚಿವರು ಅದಕ್ಕೆ ಉತ್ತರ ನೀಡಿ ನಂತರ ಅದನ್ನು ಅಂಗೀಕಾರಕ್ಕೆ ತೆಗೆದುಕೊಳ್ಳಲಾಯಿತು.

ಮಸೂದೆಯನ್ನು ಸಮರ್ಥಿಸಿಕೊಂಡ ಬಿಜೆಪಿ ಸಂಸದ ಬ್ರಿಜ್‌ಮೋಹನ್ ಅಗರ್ವಾಲ್, ಈ ಹಿಂದಿನ ಕಾಂಗ್ರೆಸ್ ಸರ್ಕಾರ ನರೇಗಾ ಯೋಜನೆಯನ್ನು ‘ಗುಂಡಿ ತೋಡಿ ಗುಂಡಿ ಮುಚ್ಚುವುದಕ್ಕೆ’ ಸೀಮಿತಗೊಳಿಸಿತ್ತು. ಅದು ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸುವಲ್ಲಿ ವಿಫಲವಾಗಿತ್ತು ಮತ್ತು ದೊಡ್ಡ ಪ್ರಮಾಣದ ಭ್ರಷ್ಟಾಚಾರಕ್ಕೆ ಕಾರಣವಾಗಿತ್ತು. ಹೊಸ ಕಾನೂನಿನಲ್ಲಿ ‘ರಾಮ್’ ಎಂದು ಸೇರಿಸುವುದರಿಂದ ಭ್ರಷ್ಟಾಚಾರವನ್ನು ತಡೆಯಬಹುದು ಎಂದು ಅಗರ್ವಾಲ್ ಹೇಳಿದರು.

ಮಸೂದೆಯ ಪ್ರಕಾರ, ಕಾಯ್ದೆ ಜಾರಿಗೆ ಬಂದ ಆರು ತಿಂಗಳೊಳಗೆ ರಾಜ್ಯಗಳು ಹೊಸ ಕಾನೂನಿಗೆ ಅನುಗುಣವಾಗಿ ಯೋಜನೆಗಳನ್ನು ರೂಪಿಸಬೇಕಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...