Homeಮುಖಪುಟವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು 'ಗ್ರಾಮ ವಿರೋಧಿ': ರಾಹುಲ್ ಗಾಂಧಿ

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

- Advertisement -
- Advertisement -

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶುಕ್ರವಾರ ಆರೋಪಿಸಿದ್ದಾರೆ. 

ಇದೇ ವೇಳೆ ಹೊಸದಾಗಿ ಅಂಗೀಕರಿಸಲಾದ ವಿಬಿ-ಜಿ RAM ಜಿ ಶಾಸನವು “ಗ್ರಾಮ ವಿರೋಧಿ” ಮತ್ತು “ರಾಜ್ಯ ವಿರೋಧಿ” ಎಂದು ಅವರು ಕರೆದಿದ್ದಾರೆ. 

ತಮ್ಮ ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ಮಾಡಿರುವ ಗಾಂಧಿಯವರು, ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗಾಗಿ ವಿಕ್ಷಿತ್ ಭಾರತ್ ಗ್ಯಾರಂಟಿ ಮಸೂದೆಯು MGNREGA ಯ ಪರಿಷ್ಕರಣೆಯಲ್ಲ, ಬದಲಾಗಿ ಅದರ ಮೂಲ ತತ್ವಗಳಗಳ ದುರ್ಬಲಗೊಳಿಸುವಿಕೆಯಾಗಿದೆ ಎಂದು ಹೇಳಿದ್ದಾರೆ. 

“ನಿನ್ನೆ ರಾತ್ರಿ, ಮೋದಿ ಸರ್ಕಾರವು ಇಪ್ಪತ್ತು ವರ್ಷಗಳ MGNREGA ವನ್ನು ಒಂದೇ ದಿನದಲ್ಲಿ ಕೆಡವಿತು” ಎಂದು ಹೇಳಿರುವ ಅವರು ಇದು ಹಕ್ಕು ಆಧಾರಿತ, ಬೇಡಿಕೆ ಆಧಾರಿತ ಖಾತರಿಯನ್ನು ಕೆಡವುತ್ತದೆ ಮತ್ತು ಅದನ್ನು ದೆಹಲಿಯಿಂದ ನಿಯಂತ್ರಿಸಲ್ಪಡುವ ಪಡಿತರ ಯೋಜನೆಯನ್ನಾಗಿ ಪರಿವರ್ತಿಸುತ್ತದೆ. ಇದು ರಾಜ್ಯ ವಿರೋಧಿ ಮತ್ತು ಯೋಜಿತವಾಗಿ ಗ್ರಾಮ ವಿರೋಧಿಯಾಗಿದೆ. ಎಂದಿದ್ದಾರೆ. 

ಲೋಕಸಭೆಯ ವಿರೋಧ ಪಕ್ಷದ ನಾಯಕರೂ ಸಹ MGNREGA ಗ್ರಾಮೀಣ ಕಾರ್ಮಿಕರಿಗೆ ಚೌಕಾಸಿ ಮಾಡುವ ಶಕ್ತಿಯನ್ನು ನೀಡಿದೆ ಎಂದು ಹೇಳಿದರು.

“ನಿಜವಾದ ಆಯ್ಕೆಗಳೊಂದಿಗೆ, ಶೋಷಣೆ ಮತ್ತು ಸಂಕಷ್ಟದ ವಲಸೆ ಕಡಿಮೆಯಾಯಿತು, ವೇತನ ಹೆಚ್ಚಾಯಿತು, ಕೆಲಸದ ಪರಿಸ್ಥಿತಿಗಳು ಸುಧಾರಿಸಿದವು, ಇವೆಲ್ಲವೂ ಗ್ರಾಮೀಣ ಮೂಲಸೌಕರ್ಯಗಳನ್ನು ನಿರ್ಮಿಸುವ ಮತ್ತು ಪುನರುಜ್ಜೀವನಗೊಳಿಸುವ ಸಮಯದಲ್ಲಿ ನಡೆದವು. ಆ ಹತೋಟಿಯೇ ಈ ಸರ್ಕಾರ ಮುರಿಯಲು ಬಯಸುತ್ತಿದೆ” ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. 

ಕೆಲಸಕ್ಕೆ ಮಿತಿ ಹೇರುವ ಮೂಲಕ ಮತ್ತು ಅದನ್ನು ನಿರಾಕರಿಸಲು ಹೆಚ್ಚಿನ ಮಾರ್ಗಗಳನ್ನು ಸೃಷ್ಟಿಸುವ ಮೂಲಕ, ವಿಬಿ-ಜಿ RAM ಜಿ ಮಸೂದೆಯು ಗ್ರಾಮೀಣ ಬಡವರು ಹೊಂದಿದ್ದ ಒಂದು ಸಾಧನವನ್ನು ದುರ್ಬಲಗೊಳಿಸುತ್ತದೆ ಎಂದು ಅವರು ಹೇಳಿದ್ದಾರೆ. 

“ಕೋವಿಡ್ ಸಮಯದಲ್ಲಿ MGNREGA ಎಂದರೆ ಏನೆಂದು ನಾವು ನೋಡಿದ್ದೇವೆ. ಆರ್ಥಿಕತೆ ಸ್ಥಗಿತಗೊಂಡು ಜೀವನೋಪಾಯ ಕುಸಿದಾಗ, ಅದು ಲಕ್ಷಾಂತರ ಜನರು ಹಸಿವು ಮತ್ತು ಸಾಲಕ್ಕೆ ಸಿಲುಕದಂತೆ ತಡೆಯಿತು” ಎಂದು ಗಾಂಧಿ ಹೇಳಿಕೊಂಡಿದ್ದಾರೆ. 

“ಇದು ವರ್ಷದಿಂದ ವರ್ಷಕ್ಕೆ ಮಹಿಳೆಯರಿಗೆ ಹೆಚ್ಚು ಸಹಕಾರಿಯಾಗಿತ್ತು. ಇದರಿಂದ ಅವರ ಕೊಡುಗೆಯನ್ನು ಹೆಚ್ಚಿಸುತ್ತಿತ್ತು ಎಂದು ಅವರು ಹೇಳಿದ್ದಾರೆ. 

“ನೀವು ಉದ್ಯೋಗ ಕಾರ್ಯಕ್ರಮವನ್ನು ಪಡಿತರ ಮಾಡುವಾಗ, ಮಹಿಳೆಯರು, ದಲಿತರು, ಆದಿವಾಸಿಗಳು, ಭೂಹೀನ ಕಾರ್ಮಿಕರು ಮತ್ತು ಬಡ ಒಬಿಸಿ ಸಮುದಾಯಗಳನ್ನು ಮೊದಲು ಹೊರಹಾಕಲು ಇಚ್ಛಿಸುತ್ತೀರಾ ಎಂದು ಅವರು ಆರೋಪಿಸಿದರು. 

ಮಸೂದೆಯನ್ನು ಅಂಗೀಕರಿಸಿದ ರೀತಿಯನ್ನು ಟೀಕಿಸಿದ ರಾಹುಲ್, ಮಸೂದೆಯ ಬಗ್ಗೆ ಸರಿಯಾದ ರೀತಿಯಲ್ಲಿ ಪರಿಶೀಲನೆಯಿಲ್ಲದೆ ವಿರೋಧಗಳ ನಡುವೆಯೇ ಸಂಸತ್ತಿನಲ್ಲಿ ಮಸೂದೆಯನ್ನು ಮಂಡಿಸಲಾಗಿದೆ ಎಂದು ಆರೋಪಿಸಿದರು. ಇದರಿಂದ ಗ್ರಾಮೀಣ ಜೀವನೋಪಾಯದ ಮೇಲೆ ದೂರಗಾಮಿ ಪರಿಣಾಮ ಬೀರಿದ್ದರೂ, ಮಸೂದೆಯನ್ನು ಸ್ಥಾಯಿ ಸಮಿತಿಗೆ ಉಲ್ಲೇಖಿಸಬೇಕೆಂಬ ವಿರೋಧ ಪಕ್ಷದ ಬೇಡಿಕೆಯನ್ನು ತಿರಸ್ಕರಿಸಲಾಗಿದೆ ಎಂದು ಗಾಂಧಿ ಹೇಳಿದರು.

“ಗ್ರಾಮೀಣ ಸಾಮಾಜಿಕ ಒಪ್ಪಂದವನ್ನು ಮರುಹೊಂದಿಸುವ ಕಾನೂನನ್ನು ತಜ್ಞರ ಸಮಾಲೋಚನೆ ಮತ್ತು ಸಾರ್ವಜನಿಕ ವಿಚಾರಣೆಗಳಿಲ್ಲದೆ ಆತುರದಿಂದ ಜಾರಿಗೆ ತರಬಾರದು” ಎಂದು ಅವರು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅಧಿಕಾರ ಕೇಂದ್ರೀಕರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ ರಾಹುಲ್ ಗಾಂಧಿ, ಗ್ರಾಮೀಣ ಭಾರತದ, ವಿಶೇಷವಾಗಿ ದಲಿತರು, ಒಬಿಸಿಗಳು ಮತ್ತು ಆದಿವಾಸಿಗಳಲ್ಲಿ ಕಾರ್ಮಿಕರನ್ನು ದುರ್ಬಲಗೊಳಿಸುವುದು ಮತ್ತು ಚೌಕಾಸಿ ಮಾಡುವ ಶಕ್ತಿಯನ್ನು ದುರ್ಬಲಗೊಳಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಆರೋಪಿಸಿದರು, ಆದರೆ ಈ ಕ್ರಮವನ್ನು ಸುಧಾರಣೆಯೆಂದು ಬಿಂಬಿಸಿದರು.

MGNREGA ವಿಶ್ವದ ಅತ್ಯಂತ ಯಶಸ್ವಿ ಬಡತನ ನಿರ್ಮೂಲನೆ ಮತ್ತು ಸಬಲೀಕರಣ ಕಾರ್ಯಕ್ರಮಗಳಲ್ಲಿ ಒಂದಾಗಿದೆ ಎಂದು ಕರೆದ ಗಾಂಧಿ, ಕಾಂಗ್ರೆಸ್ ಹೊಸ ಕಾನೂನನ್ನು ವಿರೋಧಿಸುತ್ತದೆ ಎಂದು ಹೇಳಿದರು.

“ಈ ಕ್ರಮವನ್ನು ಸೋಲಿಸಲು ಮತ್ತು ಕಾನೂನನ್ನು ಹಿಂತೆಗೆದುಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ನಾವು ಕಾರ್ಮಿಕರು, ಪಂಚಾಯತ್‌ಗಳು ಮತ್ತು ರಾಜ್ಯಗಳೊಂದಿಗೆ ನಿಲ್ಲುತ್ತೇವೆ” ಎಂದು ಅವರು ಹೇಳಿದರು.

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ ‘ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು.

ಈ ಮಸೂದೆ 2005ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಜಾರಿಗೆ ತಂದಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ-ನರೇಗಾ) ಮತ್ತು ಯೋಜನೆಯ ಹೆಸರು ಮತ್ತು ನಿಬಂಧನೆಗಳನ್ನು ಬದಲಿಸಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...