Homeಮುಖಪುಟವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು 'ಗ್ರಾಮ ವಿರೋಧಿ': ರಾಹುಲ್ ಗಾಂಧಿ

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

- Advertisement -
- Advertisement -

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶುಕ್ರವಾರ ಆರೋಪಿಸಿದ್ದಾರೆ. 

ಇದೇ ವೇಳೆ ಹೊಸದಾಗಿ ಅಂಗೀಕರಿಸಲಾದ ವಿಬಿ-ಜಿ RAM ಜಿ ಶಾಸನವು “ಗ್ರಾಮ ವಿರೋಧಿ” ಮತ್ತು “ರಾಜ್ಯ ವಿರೋಧಿ” ಎಂದು ಅವರು ಕರೆದಿದ್ದಾರೆ. 

ತಮ್ಮ ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ಮಾಡಿರುವ ಗಾಂಧಿಯವರು, ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗಾಗಿ ವಿಕ್ಷಿತ್ ಭಾರತ್ ಗ್ಯಾರಂಟಿ ಮಸೂದೆಯು MGNREGA ಯ ಪರಿಷ್ಕರಣೆಯಲ್ಲ, ಬದಲಾಗಿ ಅದರ ಮೂಲ ತತ್ವಗಳಗಳ ದುರ್ಬಲಗೊಳಿಸುವಿಕೆಯಾಗಿದೆ ಎಂದು ಹೇಳಿದ್ದಾರೆ. 

“ನಿನ್ನೆ ರಾತ್ರಿ, ಮೋದಿ ಸರ್ಕಾರವು ಇಪ್ಪತ್ತು ವರ್ಷಗಳ MGNREGA ವನ್ನು ಒಂದೇ ದಿನದಲ್ಲಿ ಕೆಡವಿತು” ಎಂದು ಹೇಳಿರುವ ಅವರು ಇದು ಹಕ್ಕು ಆಧಾರಿತ, ಬೇಡಿಕೆ ಆಧಾರಿತ ಖಾತರಿಯನ್ನು ಕೆಡವುತ್ತದೆ ಮತ್ತು ಅದನ್ನು ದೆಹಲಿಯಿಂದ ನಿಯಂತ್ರಿಸಲ್ಪಡುವ ಪಡಿತರ ಯೋಜನೆಯನ್ನಾಗಿ ಪರಿವರ್ತಿಸುತ್ತದೆ. ಇದು ರಾಜ್ಯ ವಿರೋಧಿ ಮತ್ತು ಯೋಜಿತವಾಗಿ ಗ್ರಾಮ ವಿರೋಧಿಯಾಗಿದೆ. ಎಂದಿದ್ದಾರೆ. 

ಲೋಕಸಭೆಯ ವಿರೋಧ ಪಕ್ಷದ ನಾಯಕರೂ ಸಹ MGNREGA ಗ್ರಾಮೀಣ ಕಾರ್ಮಿಕರಿಗೆ ಚೌಕಾಸಿ ಮಾಡುವ ಶಕ್ತಿಯನ್ನು ನೀಡಿದೆ ಎಂದು ಹೇಳಿದರು.

“ನಿಜವಾದ ಆಯ್ಕೆಗಳೊಂದಿಗೆ, ಶೋಷಣೆ ಮತ್ತು ಸಂಕಷ್ಟದ ವಲಸೆ ಕಡಿಮೆಯಾಯಿತು, ವೇತನ ಹೆಚ್ಚಾಯಿತು, ಕೆಲಸದ ಪರಿಸ್ಥಿತಿಗಳು ಸುಧಾರಿಸಿದವು, ಇವೆಲ್ಲವೂ ಗ್ರಾಮೀಣ ಮೂಲಸೌಕರ್ಯಗಳನ್ನು ನಿರ್ಮಿಸುವ ಮತ್ತು ಪುನರುಜ್ಜೀವನಗೊಳಿಸುವ ಸಮಯದಲ್ಲಿ ನಡೆದವು. ಆ ಹತೋಟಿಯೇ ಈ ಸರ್ಕಾರ ಮುರಿಯಲು ಬಯಸುತ್ತಿದೆ” ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. 

ಕೆಲಸಕ್ಕೆ ಮಿತಿ ಹೇರುವ ಮೂಲಕ ಮತ್ತು ಅದನ್ನು ನಿರಾಕರಿಸಲು ಹೆಚ್ಚಿನ ಮಾರ್ಗಗಳನ್ನು ಸೃಷ್ಟಿಸುವ ಮೂಲಕ, ವಿಬಿ-ಜಿ RAM ಜಿ ಮಸೂದೆಯು ಗ್ರಾಮೀಣ ಬಡವರು ಹೊಂದಿದ್ದ ಒಂದು ಸಾಧನವನ್ನು ದುರ್ಬಲಗೊಳಿಸುತ್ತದೆ ಎಂದು ಅವರು ಹೇಳಿದ್ದಾರೆ. 

“ಕೋವಿಡ್ ಸಮಯದಲ್ಲಿ MGNREGA ಎಂದರೆ ಏನೆಂದು ನಾವು ನೋಡಿದ್ದೇವೆ. ಆರ್ಥಿಕತೆ ಸ್ಥಗಿತಗೊಂಡು ಜೀವನೋಪಾಯ ಕುಸಿದಾಗ, ಅದು ಲಕ್ಷಾಂತರ ಜನರು ಹಸಿವು ಮತ್ತು ಸಾಲಕ್ಕೆ ಸಿಲುಕದಂತೆ ತಡೆಯಿತು” ಎಂದು ಗಾಂಧಿ ಹೇಳಿಕೊಂಡಿದ್ದಾರೆ. 

“ಇದು ವರ್ಷದಿಂದ ವರ್ಷಕ್ಕೆ ಮಹಿಳೆಯರಿಗೆ ಹೆಚ್ಚು ಸಹಕಾರಿಯಾಗಿತ್ತು. ಇದರಿಂದ ಅವರ ಕೊಡುಗೆಯನ್ನು ಹೆಚ್ಚಿಸುತ್ತಿತ್ತು ಎಂದು ಅವರು ಹೇಳಿದ್ದಾರೆ. 

“ನೀವು ಉದ್ಯೋಗ ಕಾರ್ಯಕ್ರಮವನ್ನು ಪಡಿತರ ಮಾಡುವಾಗ, ಮಹಿಳೆಯರು, ದಲಿತರು, ಆದಿವಾಸಿಗಳು, ಭೂಹೀನ ಕಾರ್ಮಿಕರು ಮತ್ತು ಬಡ ಒಬಿಸಿ ಸಮುದಾಯಗಳನ್ನು ಮೊದಲು ಹೊರಹಾಕಲು ಇಚ್ಛಿಸುತ್ತೀರಾ ಎಂದು ಅವರು ಆರೋಪಿಸಿದರು. 

ಮಸೂದೆಯನ್ನು ಅಂಗೀಕರಿಸಿದ ರೀತಿಯನ್ನು ಟೀಕಿಸಿದ ರಾಹುಲ್, ಮಸೂದೆಯ ಬಗ್ಗೆ ಸರಿಯಾದ ರೀತಿಯಲ್ಲಿ ಪರಿಶೀಲನೆಯಿಲ್ಲದೆ ವಿರೋಧಗಳ ನಡುವೆಯೇ ಸಂಸತ್ತಿನಲ್ಲಿ ಮಸೂದೆಯನ್ನು ಮಂಡಿಸಲಾಗಿದೆ ಎಂದು ಆರೋಪಿಸಿದರು. ಇದರಿಂದ ಗ್ರಾಮೀಣ ಜೀವನೋಪಾಯದ ಮೇಲೆ ದೂರಗಾಮಿ ಪರಿಣಾಮ ಬೀರಿದ್ದರೂ, ಮಸೂದೆಯನ್ನು ಸ್ಥಾಯಿ ಸಮಿತಿಗೆ ಉಲ್ಲೇಖಿಸಬೇಕೆಂಬ ವಿರೋಧ ಪಕ್ಷದ ಬೇಡಿಕೆಯನ್ನು ತಿರಸ್ಕರಿಸಲಾಗಿದೆ ಎಂದು ಗಾಂಧಿ ಹೇಳಿದರು.

“ಗ್ರಾಮೀಣ ಸಾಮಾಜಿಕ ಒಪ್ಪಂದವನ್ನು ಮರುಹೊಂದಿಸುವ ಕಾನೂನನ್ನು ತಜ್ಞರ ಸಮಾಲೋಚನೆ ಮತ್ತು ಸಾರ್ವಜನಿಕ ವಿಚಾರಣೆಗಳಿಲ್ಲದೆ ಆತುರದಿಂದ ಜಾರಿಗೆ ತರಬಾರದು” ಎಂದು ಅವರು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅಧಿಕಾರ ಕೇಂದ್ರೀಕರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ ರಾಹುಲ್ ಗಾಂಧಿ, ಗ್ರಾಮೀಣ ಭಾರತದ, ವಿಶೇಷವಾಗಿ ದಲಿತರು, ಒಬಿಸಿಗಳು ಮತ್ತು ಆದಿವಾಸಿಗಳಲ್ಲಿ ಕಾರ್ಮಿಕರನ್ನು ದುರ್ಬಲಗೊಳಿಸುವುದು ಮತ್ತು ಚೌಕಾಸಿ ಮಾಡುವ ಶಕ್ತಿಯನ್ನು ದುರ್ಬಲಗೊಳಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಆರೋಪಿಸಿದರು, ಆದರೆ ಈ ಕ್ರಮವನ್ನು ಸುಧಾರಣೆಯೆಂದು ಬಿಂಬಿಸಿದರು.

MGNREGA ವಿಶ್ವದ ಅತ್ಯಂತ ಯಶಸ್ವಿ ಬಡತನ ನಿರ್ಮೂಲನೆ ಮತ್ತು ಸಬಲೀಕರಣ ಕಾರ್ಯಕ್ರಮಗಳಲ್ಲಿ ಒಂದಾಗಿದೆ ಎಂದು ಕರೆದ ಗಾಂಧಿ, ಕಾಂಗ್ರೆಸ್ ಹೊಸ ಕಾನೂನನ್ನು ವಿರೋಧಿಸುತ್ತದೆ ಎಂದು ಹೇಳಿದರು.

“ಈ ಕ್ರಮವನ್ನು ಸೋಲಿಸಲು ಮತ್ತು ಕಾನೂನನ್ನು ಹಿಂತೆಗೆದುಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ನಾವು ಕಾರ್ಮಿಕರು, ಪಂಚಾಯತ್‌ಗಳು ಮತ್ತು ರಾಜ್ಯಗಳೊಂದಿಗೆ ನಿಲ್ಲುತ್ತೇವೆ” ಎಂದು ಅವರು ಹೇಳಿದರು.

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ ‘ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು.

ಈ ಮಸೂದೆ 2005ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಜಾರಿಗೆ ತಂದಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ-ನರೇಗಾ) ಮತ್ತು ಯೋಜನೆಯ ಹೆಸರು ಮತ್ತು ನಿಬಂಧನೆಗಳನ್ನು ಬದಲಿಸಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...