Homeಮುಖಪುಟವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು 'ಗ್ರಾಮ ವಿರೋಧಿ': ರಾಹುಲ್ ಗಾಂಧಿ

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

- Advertisement -
- Advertisement -

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶುಕ್ರವಾರ ಆರೋಪಿಸಿದ್ದಾರೆ. 

ಇದೇ ವೇಳೆ ಹೊಸದಾಗಿ ಅಂಗೀಕರಿಸಲಾದ ವಿಬಿ-ಜಿ RAM ಜಿ ಶಾಸನವು “ಗ್ರಾಮ ವಿರೋಧಿ” ಮತ್ತು “ರಾಜ್ಯ ವಿರೋಧಿ” ಎಂದು ಅವರು ಕರೆದಿದ್ದಾರೆ. 

ತಮ್ಮ ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ಮಾಡಿರುವ ಗಾಂಧಿಯವರು, ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗಾಗಿ ವಿಕ್ಷಿತ್ ಭಾರತ್ ಗ್ಯಾರಂಟಿ ಮಸೂದೆಯು MGNREGA ಯ ಪರಿಷ್ಕರಣೆಯಲ್ಲ, ಬದಲಾಗಿ ಅದರ ಮೂಲ ತತ್ವಗಳಗಳ ದುರ್ಬಲಗೊಳಿಸುವಿಕೆಯಾಗಿದೆ ಎಂದು ಹೇಳಿದ್ದಾರೆ. 

“ನಿನ್ನೆ ರಾತ್ರಿ, ಮೋದಿ ಸರ್ಕಾರವು ಇಪ್ಪತ್ತು ವರ್ಷಗಳ MGNREGA ವನ್ನು ಒಂದೇ ದಿನದಲ್ಲಿ ಕೆಡವಿತು” ಎಂದು ಹೇಳಿರುವ ಅವರು ಇದು ಹಕ್ಕು ಆಧಾರಿತ, ಬೇಡಿಕೆ ಆಧಾರಿತ ಖಾತರಿಯನ್ನು ಕೆಡವುತ್ತದೆ ಮತ್ತು ಅದನ್ನು ದೆಹಲಿಯಿಂದ ನಿಯಂತ್ರಿಸಲ್ಪಡುವ ಪಡಿತರ ಯೋಜನೆಯನ್ನಾಗಿ ಪರಿವರ್ತಿಸುತ್ತದೆ. ಇದು ರಾಜ್ಯ ವಿರೋಧಿ ಮತ್ತು ಯೋಜಿತವಾಗಿ ಗ್ರಾಮ ವಿರೋಧಿಯಾಗಿದೆ. ಎಂದಿದ್ದಾರೆ. 

ಲೋಕಸಭೆಯ ವಿರೋಧ ಪಕ್ಷದ ನಾಯಕರೂ ಸಹ MGNREGA ಗ್ರಾಮೀಣ ಕಾರ್ಮಿಕರಿಗೆ ಚೌಕಾಸಿ ಮಾಡುವ ಶಕ್ತಿಯನ್ನು ನೀಡಿದೆ ಎಂದು ಹೇಳಿದರು.

“ನಿಜವಾದ ಆಯ್ಕೆಗಳೊಂದಿಗೆ, ಶೋಷಣೆ ಮತ್ತು ಸಂಕಷ್ಟದ ವಲಸೆ ಕಡಿಮೆಯಾಯಿತು, ವೇತನ ಹೆಚ್ಚಾಯಿತು, ಕೆಲಸದ ಪರಿಸ್ಥಿತಿಗಳು ಸುಧಾರಿಸಿದವು, ಇವೆಲ್ಲವೂ ಗ್ರಾಮೀಣ ಮೂಲಸೌಕರ್ಯಗಳನ್ನು ನಿರ್ಮಿಸುವ ಮತ್ತು ಪುನರುಜ್ಜೀವನಗೊಳಿಸುವ ಸಮಯದಲ್ಲಿ ನಡೆದವು. ಆ ಹತೋಟಿಯೇ ಈ ಸರ್ಕಾರ ಮುರಿಯಲು ಬಯಸುತ್ತಿದೆ” ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. 

ಕೆಲಸಕ್ಕೆ ಮಿತಿ ಹೇರುವ ಮೂಲಕ ಮತ್ತು ಅದನ್ನು ನಿರಾಕರಿಸಲು ಹೆಚ್ಚಿನ ಮಾರ್ಗಗಳನ್ನು ಸೃಷ್ಟಿಸುವ ಮೂಲಕ, ವಿಬಿ-ಜಿ RAM ಜಿ ಮಸೂದೆಯು ಗ್ರಾಮೀಣ ಬಡವರು ಹೊಂದಿದ್ದ ಒಂದು ಸಾಧನವನ್ನು ದುರ್ಬಲಗೊಳಿಸುತ್ತದೆ ಎಂದು ಅವರು ಹೇಳಿದ್ದಾರೆ. 

“ಕೋವಿಡ್ ಸಮಯದಲ್ಲಿ MGNREGA ಎಂದರೆ ಏನೆಂದು ನಾವು ನೋಡಿದ್ದೇವೆ. ಆರ್ಥಿಕತೆ ಸ್ಥಗಿತಗೊಂಡು ಜೀವನೋಪಾಯ ಕುಸಿದಾಗ, ಅದು ಲಕ್ಷಾಂತರ ಜನರು ಹಸಿವು ಮತ್ತು ಸಾಲಕ್ಕೆ ಸಿಲುಕದಂತೆ ತಡೆಯಿತು” ಎಂದು ಗಾಂಧಿ ಹೇಳಿಕೊಂಡಿದ್ದಾರೆ. 

“ಇದು ವರ್ಷದಿಂದ ವರ್ಷಕ್ಕೆ ಮಹಿಳೆಯರಿಗೆ ಹೆಚ್ಚು ಸಹಕಾರಿಯಾಗಿತ್ತು. ಇದರಿಂದ ಅವರ ಕೊಡುಗೆಯನ್ನು ಹೆಚ್ಚಿಸುತ್ತಿತ್ತು ಎಂದು ಅವರು ಹೇಳಿದ್ದಾರೆ. 

“ನೀವು ಉದ್ಯೋಗ ಕಾರ್ಯಕ್ರಮವನ್ನು ಪಡಿತರ ಮಾಡುವಾಗ, ಮಹಿಳೆಯರು, ದಲಿತರು, ಆದಿವಾಸಿಗಳು, ಭೂಹೀನ ಕಾರ್ಮಿಕರು ಮತ್ತು ಬಡ ಒಬಿಸಿ ಸಮುದಾಯಗಳನ್ನು ಮೊದಲು ಹೊರಹಾಕಲು ಇಚ್ಛಿಸುತ್ತೀರಾ ಎಂದು ಅವರು ಆರೋಪಿಸಿದರು. 

ಮಸೂದೆಯನ್ನು ಅಂಗೀಕರಿಸಿದ ರೀತಿಯನ್ನು ಟೀಕಿಸಿದ ರಾಹುಲ್, ಮಸೂದೆಯ ಬಗ್ಗೆ ಸರಿಯಾದ ರೀತಿಯಲ್ಲಿ ಪರಿಶೀಲನೆಯಿಲ್ಲದೆ ವಿರೋಧಗಳ ನಡುವೆಯೇ ಸಂಸತ್ತಿನಲ್ಲಿ ಮಸೂದೆಯನ್ನು ಮಂಡಿಸಲಾಗಿದೆ ಎಂದು ಆರೋಪಿಸಿದರು. ಇದರಿಂದ ಗ್ರಾಮೀಣ ಜೀವನೋಪಾಯದ ಮೇಲೆ ದೂರಗಾಮಿ ಪರಿಣಾಮ ಬೀರಿದ್ದರೂ, ಮಸೂದೆಯನ್ನು ಸ್ಥಾಯಿ ಸಮಿತಿಗೆ ಉಲ್ಲೇಖಿಸಬೇಕೆಂಬ ವಿರೋಧ ಪಕ್ಷದ ಬೇಡಿಕೆಯನ್ನು ತಿರಸ್ಕರಿಸಲಾಗಿದೆ ಎಂದು ಗಾಂಧಿ ಹೇಳಿದರು.

“ಗ್ರಾಮೀಣ ಸಾಮಾಜಿಕ ಒಪ್ಪಂದವನ್ನು ಮರುಹೊಂದಿಸುವ ಕಾನೂನನ್ನು ತಜ್ಞರ ಸಮಾಲೋಚನೆ ಮತ್ತು ಸಾರ್ವಜನಿಕ ವಿಚಾರಣೆಗಳಿಲ್ಲದೆ ಆತುರದಿಂದ ಜಾರಿಗೆ ತರಬಾರದು” ಎಂದು ಅವರು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅಧಿಕಾರ ಕೇಂದ್ರೀಕರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ ರಾಹುಲ್ ಗಾಂಧಿ, ಗ್ರಾಮೀಣ ಭಾರತದ, ವಿಶೇಷವಾಗಿ ದಲಿತರು, ಒಬಿಸಿಗಳು ಮತ್ತು ಆದಿವಾಸಿಗಳಲ್ಲಿ ಕಾರ್ಮಿಕರನ್ನು ದುರ್ಬಲಗೊಳಿಸುವುದು ಮತ್ತು ಚೌಕಾಸಿ ಮಾಡುವ ಶಕ್ತಿಯನ್ನು ದುರ್ಬಲಗೊಳಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಆರೋಪಿಸಿದರು, ಆದರೆ ಈ ಕ್ರಮವನ್ನು ಸುಧಾರಣೆಯೆಂದು ಬಿಂಬಿಸಿದರು.

MGNREGA ವಿಶ್ವದ ಅತ್ಯಂತ ಯಶಸ್ವಿ ಬಡತನ ನಿರ್ಮೂಲನೆ ಮತ್ತು ಸಬಲೀಕರಣ ಕಾರ್ಯಕ್ರಮಗಳಲ್ಲಿ ಒಂದಾಗಿದೆ ಎಂದು ಕರೆದ ಗಾಂಧಿ, ಕಾಂಗ್ರೆಸ್ ಹೊಸ ಕಾನೂನನ್ನು ವಿರೋಧಿಸುತ್ತದೆ ಎಂದು ಹೇಳಿದರು.

“ಈ ಕ್ರಮವನ್ನು ಸೋಲಿಸಲು ಮತ್ತು ಕಾನೂನನ್ನು ಹಿಂತೆಗೆದುಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ನಾವು ಕಾರ್ಮಿಕರು, ಪಂಚಾಯತ್‌ಗಳು ಮತ್ತು ರಾಜ್ಯಗಳೊಂದಿಗೆ ನಿಲ್ಲುತ್ತೇವೆ” ಎಂದು ಅವರು ಹೇಳಿದರು.

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ ‘ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು.

ಈ ಮಸೂದೆ 2005ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಜಾರಿಗೆ ತಂದಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ-ನರೇಗಾ) ಮತ್ತು ಯೋಜನೆಯ ಹೆಸರು ಮತ್ತು ನಿಬಂಧನೆಗಳನ್ನು ಬದಲಿಸಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....