HomeಮುಖಪುಟMGNREGA ಬದಲು VB-G Ram G : ರಾಜ್ಯಗಳ ಮೇಲೆ 40 ಶೇಕಡ ಆರ್ಥಿಕ ಹೊರೆ

MGNREGA ಬದಲು VB-G Ram G : ರಾಜ್ಯಗಳ ಮೇಲೆ 40 ಶೇಕಡ ಆರ್ಥಿಕ ಹೊರೆ

ಯೋಜನೆಯಿಂದ ಮಹಾತ್ಮಾ ಗಾಂಧಿ ಹೆಸರು ಮಾಯ!

- Advertisement -
- Advertisement -

ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ 2005ರಲ್ಲಿ ಜಾರಿಗೆ ತಂದ ಮಹತ್ವಕಾಂಕ್ಷೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ) ಮತ್ತು ಅದರಡಿ ರೂಪಿಸಲಾದ ನರೇಗಾ ಯೋಜನೆಯ ಹೆಸರನ್ನು ಬದಲಿಸಲು ಕೇಂದ್ರ ಸರ್ಕಾರ ಮುಂದಾಗಿದೆ.

ನರೇಗಾ ಕಾಯ್ದೆಯ ಹೆಸರು ಬದಲಿಸುವ ವಿಕಸಿತ್ ಭಾರತ್ – ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 ಅನ್ನು (ವಿಬಿ–ಜಿ ರಾಮ್ ಜಿ ಮಸೂದೆ) ಈ ವಾರ ಲೋಕಸಭೆಯಲ್ಲಿ ಮಂಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಕಾಯ್ದೆಯ ಅಡಿ ನರೇಗಾ ಯೋಜನೆಯ ಹೆಸರನ್ನು ‘ಪೂಜ್ಯ ಬಾಪು ಗ್ರಾಮೀಣ್ ರೋಜ್‌ಗಾರ್ ಯೋಜನಾ’ ಎಂದು ಬದಲಿಸಲು ಪ್ರಸ್ತಾಪಿಸಲಾಗಿದೆ.

ಹೊಸ ಕಾನೂನು ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಒಂದು ಹಣಕಾಸು ವರ್ಷದಲ್ಲಿ ಪ್ರಸ್ತುತ ಖಾತರಿಪಡಿಸಿರುವ ವೇತನ ಸಹಿತ ಕೆಲಸ ದಿನಗಳನ್ನು 100 ರಿಂದ 125ಕ್ಕೆ ಹೆಚ್ಚಿಸಲಿದೆ. ಆದರೆ, ಇದೇ ವೇಳೆ ಕಾಯ್ದೆಯು ರಾಜ್ಯಗಳ ಮೇಲೆ ಹೆಚ್ಚಿನ ಆರ್ಥಿಕ ಹೊರೆ ಹೊರಿಸಲಿದೆ. ರಾಜ್ಯಗಳು ಯೋಜನೆಯ ಆರ್ಥಿಕ ಜವಾಬ್ದಾರಿಯಲ್ಲಿ ಹೆಚ್ಚಿನ ಪಾಲನ್ನು ಭರಿಸಬೇಕಾಗುತ್ತದೆ.

ಕೇಂದ್ರ ಸರ್ಕಾರ ಪ್ರತಿ ರಾಜ್ಯಕ್ಕೆ ಯೋಜನೆಯಡಿ ಸಿಗುವ ಹಣದ ಮೊತ್ತವನ್ನು ಮುಂಗಡವಾಗಿ ನಿರ್ಧರಿಸುವುದು ಹೊಸ ಕಾನೂನಿನ ಇನ್ನೊಂದು ನಿಬಂಧನೆಯಾಗಿದೆ. ಇದು ‘ನಿಯಮಾತ್ಮಕ’ (normative) ಆಧಾರದ ಮೇಲೆ ಇರುತ್ತದೆ. ಅಂದರೆ, ಕೆಲವು ನಿಗದಿತ ನಿಯತಾಂಕಗಳು (ಉದಾ: ಜನಸಂಖ್ಯೆ, ಬಡತನ ಮಟ್ಟ, ಇತ್ಯಾದಿ) ಆಧರಿಸಿ ಎಂದು ವರದಿಗಳು ಹೇಳಿವೆ.

ಪ್ರಸ್ತಾವಿತ ಮಸೂದೆಯ ಪ್ರಕಾರ, ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳು ಯೋಜನೆಯ ಆರ್ಥಿಕ ವೆಚ್ಚವನ್ನು 60:40 ಅನುಪಾತದಲ್ಲಿ ಭರಿಸಲಿವೆ. ಉತ್ತರಾಖಂಡ, ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ ಸೇರಿದಂತೆ ಈಶಾನ್ಯ ಮತ್ತು ಹಿಮಾಲಯನ್ ರಾಜ್ಯಗಳಿಗೆ, ಕೇಂದ್ರ ಮತ್ತು ರಾಜ್ಯಗಳ ನಡುವೆ ಹಣಕಾಸಿನ ಹಂಚಿಕೆಯು 90:10 ಅನುಪಾತದಲ್ಲಿ ಇರುತ್ತದೆ.

ಪ್ರಸ್ತುತ ಅಸ್ತಿತ್ವದಲ್ಲಿರುವ ನರೇಗಾ ಯೋಜನೆಯಲ್ಲಿ ಅನಕುಶಲ ಕೈಕೆಲಸದ ಕೂಲಿಯನ್ನು ಸಂಪೂರ್ಣವಾಗಿ (ಶೇ.100) ಕೇಂದ್ರ ಸರ್ಕಾರ ಭರಿಸುತ್ತಿದೆ. ವಸ್ತು ವೆಚ್ಚದಲ್ಲಿ (material costs) ಕೇಂದ್ರ ಸರ್ಕಾರ ಶೇಕಡ 75 ಮತ್ತು ರಾಜ್ಯಗಳು ಶೇಕಡ 25 ಪಾಲನ್ನು ಹೊಂದಿವೆ. ಕುಶಲ ಮತ್ತು ಅರೆಕುಶಲ ಕೆಲಸಗಾರರ ಕೂಲಿಯಲ್ಲಿ ಶೇಕಡ 75ರಷ್ಟು ಕೇಂದ್ರ ಭರಿಸುತ್ತಿದೆ. ಹೊಸ ಮಸೂದೆಯು ಹಣಕಾಸಿನ ಹಂಚಿಕೆಯನ್ನು ಬದಲಾಯಿಸುತ್ತದೆಯಾದರೂ, ನರೇಗಾ ಕಾಯ್ದೆಯ ಸೆಕ್ಷನ್ 6ರ ಅಡಿಯಲ್ಲಿ ಸೂಚಿಸಲಾದ ಅಸ್ತಿತ್ವದಲ್ಲಿರುವ ವೇತನ ದರಗಳನ್ನು ಹಾಗೆಯೇ ಉಳಿಸಿಕೊಳ್ಳಲಿದೆ ಎಂದು ವರದಿಯಾಗಿದೆ.

ಪ್ರಸ್ತಾವಿತ ಮಸೂದೆಯು ಯೋಜನೆಯ ಮೇಲ್ವಿಚಾರಣೆ, ಪರಿಶೀಲನೆ ಮತ್ತು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕೇಂದ್ರ ಗ್ರಾಮೀಣ ಉದ್ಯೋಗ ಖಾತರಿ ಮಂಡಳಿ ಮತ್ತು ರಾಜ್ಯ ಗ್ರಾಮೀಣ ಉದ್ಯೋಗ ಖಾತರಿ ಮಂಡಳಿಗಳ ರಚನೆಗೆ ಅವಕಾಶ ನೀಡುತ್ತದೆ. ಇದರ ಜೊತೆಗೆ, ಪ್ರಮಾಣಿತ ಹಂಚಿಕೆಗಳು (Normative Allocation) ಏಕಪಕ್ಷೀಯ (One Sided) ಮತ್ತು ಇತರ ಕಾರ್ಯಾಚರಣೆಯ ಸಮಸ್ಯೆಗಳಿಗೆ ಸಂಬಂಧಿಸಿದ ವಿಷಯಗಳನ್ನು ಶಿಫಾರಸು ಮಾಡಲು ಕೇಂದ್ರ ಮತ್ತು ರಾಜ್ಯ ಮಟ್ಟದಲ್ಲಿ ಸ್ಟೀರಿಂಗ್ ಸಮಿತಿಗಳನ್ನು ಸ್ಥಾಪಿಸಲು ಅನುವು ಮಾಡಿಕೊಡುತ್ತದೆ.

ಮತ್ತೊಂದು ಪ್ರಮುಖ ನಿಬಂಧನೆಯೆಂದರೆ, ರಾಜ್ಯಗಳಿಗೆ ಕೃಷಿ ಋತುಗಳ ಗರಿಷ್ಠ ಅವಧಿಯಲ್ಲಿ ಯೋಜನೆಯ ಅನುಷ್ಠಾನವನ್ನು ತಾತ್ಕಾಲಿಕವಾಗಿ ನಿಲ್ಲಿಸಲು ಅವಕಾಶ ನೀಡುತ್ತದೆ. ಕೃಷಿ ಕಾರ್ಮಿಕರ ಸಮರ್ಪಕ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು, ಯೋಜನೆಯಡಿಯಲ್ಲಿ ಕೆಲಸಗಳನ್ನು ಕೈಗೊಳ್ಳದ ಬಿತ್ತನೆ ಮತ್ತು ಕೊಯ್ಲು ಋತುಗಳನ್ನು ಒಳಗೊಂಡ ನಿರ್ದಿಷ್ಟ ಅವಧಿಗಳನ್ನು ತಿಳಿಸಲು ಮಸೂದೆ ರಾಜ್ಯಗಳಿಗೆ ಅಧಿಕಾರ ನೀಡುತ್ತದೆ.

ಮಹಿಳೆಯರು, ವೃದ್ಧರು, ಅಂಗವಿಕಲರು ಮತ್ತು ದುರ್ಬಲಗೊಳಿಸುವ ಕಾಯಿಲೆಗಳಿಂದ ಬಳಲುತ್ತಿರುವವರು ಸೇರಿದಂತೆ ದುರ್ಬಲ ಗುಂಪುಗಳಿಗೆ ಸೂಕ್ತವಾದ ಕೆಲಸದ ವರ್ಗಗಳಲ್ಲಿ ಭಾಗವಹಿಸಲು ಅನುವು ಮಾಡಿಕೊಡಲು ವಿಶೇಷ ದರಗಳ ವೇಳಾಪಟ್ಟಿಯನ್ನು ಮಸೂದೆ ಪ್ರಸ್ತಾಪಿಸುತ್ತದೆ.

ಇದಲ್ಲದೆ, ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಉದ್ಯೋಗ ಒದಗಿಸದಿದ್ದರೆ ದೈನಂದಿನ ನಿರುದ್ಯೋಗ ಭತ್ಯೆಯ ನಿಬಂಧನೆಯನ್ನು ಮಸೂದೆ ಉಳಿಸಿಕೊಂಡಿದೆ. ನಿರುದ್ಯೋಗ ಭತ್ಯೆ ಮತ್ತು ವಿಳಂಬ ಪರಿಹಾರದ ವೆಚ್ಚವನ್ನು ರಾಜ್ಯ ಸರ್ಕಾರಗಳು ಭರಿಸುತ್ತವೆ. ಕೆಲಸಗಾರರ ಹಾಜರಾತಿ ಪಟ್ಟಿ ಮುಚ್ಚಿದ 15 ದಿನಗಳ ಒಳಗೆ ವೇತನವನ್ನು ಪಾವತಿಸದ ಸಂದರ್ಭಗಳಲ್ಲಿ, ಹದಿನಾರನೇ ದಿನದಿಂದ ಪಾವತಿಸದ ವೇತನದ 0.05 ಪ್ರತಿಶತದಷ್ಟು ದರದಲ್ಲಿ ಪರಿಹಾರವನ್ನು ಪಡೆಯಲು ಕಾರ್ಮಿಕರಿಗೆ ಅರ್ಹತೆ ಇರುತ್ತದೆ.

ಪ್ರಸ್ತಾವಿತ ಮಸೂದೆ ಬಗ್ಗೆ ಪ್ರತಿಕ್ರಿಯಿಸಿರುವ ಸಿಪಿಐ (ಎಂ) ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್, “ಸರ್ಕಾರವು ಹಕ್ಕು ಆಧಾರಿತ ಖಾತರಿ ಕಾನೂನಿನ ಆತ್ಮವನ್ನು ತೆಗೆದುಹಾಕಿ, ಸರ್ಕಾರಗಳು ಮತ್ತು ಕಾರ್ಮಿಕರ ವಿರುದ್ಧ ಸಿದ್ದಪಡಿಸಲಾದ ಷರತ್ತುಬದ್ಧ, ಕೇಂದ್ರ ನಿಯಂತ್ರಿತ ಯೋಜನೆಯನ್ನು ಜಾರಿಗೆ ತರುತ್ತಿದೆ” ಎಂದು ಹೇಳಿದ್ದಾರೆ.

“125 ಕೆಲಸದ ದಿನಗಳು’ ಎಂಬುವುದು ಹೆಡ್‌ಲೈನ್ ಮಾತ್ರ. ಇದು ಆಕರ್ಷಣೆಗೆ ಒಡ್ಡುವ ಸುದ್ದಿಯಾದರೆ, 60:40 ಎಂಬುದು ಸಣ್ಣ ಅಕ್ಷರಗಳಲ್ಲಿರುವ ನಿಜವಾದ ವಿವರವಾಗಿದೆ. ನರೇಗಾ ಯೋಜನೆಯಲ್ಲಿ ಅನಕುಶಲ ಕೆಲಸಗಳ ಕೂಲಿಯನ್ನು ಸಂಪೂರ್ಣವಾಗಿ ಕೇಂದ್ರ ಸರ್ಕಾರವೇ ಭರಿಸುತ್ತಿತ್ತು. ಆದರೆ, ಹೊಸ ಯೋಜನೆಯು ತೆಗೆದು ಹಾಕಿ ರಾಜ್ಯಗಳು ಶೇ.40ರಷ್ಟು ಹೊರೆ ಹೊರರುವಂತೆ ಮಾಡಲಿದೆ. ಇದರಿಂದ ರಾಜ್ಯಗಳು ಈಗ ಸುಮಾರು 50,000 ಕೋಟಿ ರೂಪಾಯಿಗಳಿಗಿಂತ ಹೆಚ್ಚು ಹಣ ಖರ್ಚು ಮಾಡಬೇಕಾಗುತ್ತದೆ. ಕೇರಳ ರಾಜ್ಯ ಏಕಾಏಕಿ ಹೆಚ್ಚುವರಿ 2,000 ದಿಂದ 2,500 ಕೋಟಿ ರೂಪಾಯಿಗಳ ಹೊರೆ ಹೊರಬೇಕಾಗುತ್ತದೆ. ಇದು ಸುಧಾರಣೆಯಲ್ಲ, ಬದಲಿಗೆ ರಾಜ್ಯಗಳ ಮೇಲೆ ಗುಪ್ತವಾಗಿ ಹಣದ ಹೊರೆ ಹೇರುವ ತಂತ್ರವಾಗಿದೆ. ರಾಜ್ಯಗಳು ಹೆಚ್ಚು ಹಣ ಖರ್ಚು ಮಾಡಬೇಕು, ಕೇಂದ್ರ ಸರ್ಕಾರ ಹೊಣೆಗಾರಿಕೆಯಿಂದ ದೂರ ಸರಿದು ನಿಂತುಕೊಂಡು ಕೀರ್ತಿ ಮಾತ್ರ ಪಡೆಯಬೇಕು ಎಂಬುವುದು ಹೊಸ ಒಕ್ಕೂಟ ವ್ಯವಸ್ಥೆ” ಎಂದು ಜಾನ್ ಬ್ರಿಟ್ಟಾಸ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

“ನರೇಗಾ ಬೇಡಿಕೆ ಆಧಾರಿತವಾಗಿದೆ. ಒಬ್ಬ ಕೆಲಸಗಾರ ಕೆಲಸ ಕೇಳಿದರೆ ಕೇಂದ್ರ ಸರ್ಕಾರವೇ ಕೂಲಿ ಪಾವತಿಸಬೇಕಿತ್ತು. ಆದರೆ, ಹೊಸ ಯೋಜನೆಯು ಇದನ್ನು ಬದಲಾಯಿಸಿ ಕೇಂದ್ರ ಸರ್ಕಾರ ಮುಂಗಡ ಹಣ ಹಂಚಿಕೆ ನಿಯಮಗಳು ಮತ್ತು ಮಿತಿಗಳನ್ನು ನಿಗದಿಪಡಿಸುತ್ತದೆ. ಇದರ ಪ್ರಕಾರ, ಹಣ ಮುಗಿದರೆ ಜನರ ಹಕ್ಕುಗಳೂ ಮುಗಿದಂತೆ. ಹಾಗಾಗಿ, ಇದು ಕಾನೂನುಬದ್ಧ ಉದ್ಯೋಗ ಖಾತ್ರಿಯನ್ನು ರಾಜ್ಯಗಳ ವೆಚ್ಚದಲ್ಲಿ ನಿರ್ವಹಣೆ ಮಾಡಿ ಕೇಂದ್ರ ಸರ್ಕಾರ ಪುಕ್ಕಟೆ ಪ್ರಚಾರ ಪಡೆಯುವ ಯೋಜನೆಯಾಗಿ ಕನಿಷ್ಠ ಮಟ್ಟಕ್ಕೆ ಇಳಿಸಲಾಗಿದೆ” ಎಂದು ಜಾನ್ ಬ್ರಿಟ್ಟಾಸ್ ಟೀಕಿಸಿದ್ದಾರೆ.

“ಹೊಸ ಕಾನೂನು ಪಂಚಾಯತ್‌ಗಳು ನಿರ್ಧಾರ ತೆಗೆದುಕೊಳ್ಳುವ ಅಧಿಕಾರವನ್ನು ಕಡೆಗಣಿಸಲಿದೆ. ಗ್ರಾಮೀಣ ಕಾರ್ಮಿಕರನ್ನು ಡ್ಯಾಶ್ ಬೋರ್ಡ್‌ಗೆ ಸೀಮಿತಗೊಳಿಸಲಿದೆ. ನರೇಗಾ ಯೋಜನೆಯು ಸ್ಥಳೀಯ ಅಗತ್ಯಗಳ ಆಧಾರದ ಮೇಲೆ ಕೆಲಸಗಳನ್ನು ಯೋಜಿಸಲು ಗ್ರಾಮ ಸಭೆಗಳು ಮತ್ತು ಪಂಚಾಯತ್‌ಗಳಿಗೆ ಅಧಿಕಾರ ನೀಡಿತ್ತು. ಆದರೆ, ಹೊಸ ಯೋಜನೆ ಜಿಐಎಸ್‌ ಉಪಕರಣಗಳು, ಪಿಎಂ ಗತಿಶಕ್ತಿ ಲೇಯರ್‌ಗಳು ಮತ್ತು ಕೇಂದ್ರೀಯ ಡಿಜಿಟಲ್ ಸ್ಟ್ಯಾಕ್‌ಗಳನ್ನು ಕಡ್ಡಾಯಗೊಳಿಸುತ್ತದೆ. ಸ್ಥಳೀಯ ಆದ್ಯತೆಗಳನ್ನು ವಿಕಸಿತ ಭಾರತ್ ರಾಷ್ಟ್ರೀಯ ಗ್ರಾಮೀಣ ಮೂಲಸೌಕರ್ಯ ಸ್ಟ್ಯಾಕ್ ಮೂಲಕ ಫಿಲ್ಟರ್ ಮಾಡಲಾಗುತ್ತದೆ. ಇದು ಬಯೋಮೆಟ್ರಿಕ್, ಜಿಯೋ-ಟ್ಯಾಗಿಂಗ್, ಡ್ಯಾಶ್‌ಬೋರ್ಡ್‌ಗಳು ಮತ್ತು ಎಐ ಆಡಿಟ್‌ಗಳನ್ನು ಕಾನೂನುಬದ್ಧಗೊಳಿಸುತ್ತದೆ. ಈ ಮೂಲಕ ಲಕ್ಷಾಂತರ ಗ್ರಾಮೀಣ ಕಾರ್ಮಿಕರಿಗೆ ತಾಂತ್ರಿಕ ಸಮಸ್ಯೆಗಳನ್ನು ಉಂಟು ಮಾಡಲಿದೆ. ಅವರನ್ನು ಯೋಜನೆಯಿಂದ ಹೊರಗಟ್ಟಲಿದೆ” ಎಂದಿದ್ದಾರೆ.

“ಹೊಸ ಕಾನೂನು ಯೋಜನೆಯ ವಿಕೇಂದ್ರೀಕರಣವನ್ನು ಕೇಂದ್ರೀಕರಿಸಲಿದೆ. ಜನರು ಡೇಟಾ ಪಾಯಿಂಟ್‌ಗಳಾಗುತ್ತಾರೆ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

“ಹೊಸ ಕಾನೂನಿನ ಇನ್ನೊಂದು ಕೆಟ್ಟ ನಿಬಂಧನೆ ಎಂದರೆ, ಕೃಷಿ ಋತುಗಳ ಹೆಸರಿನಲ್ಲಿ ಪ್ರತಿ ವರ್ಷ 60 ದಿನಗಳವರೆಗೆ ಕೆಲಸವನ್ನು ಸ್ಥಗಿತಗೊಳಿಸುವುದು” ಎಂದಿರುವ ಬ್ರಿಟ್ಟಾಸ್, “ಇದು ಉದ್ಯೋಗ ಖಾತರಿಯೇ..ಇಲ್ಲ ಕಾರ್ಮಿಕರ ನಿಯಂತ್ರಣವೇ?” ಎಂದು ಪ್ರಶ್ನಿಸಿದ್ದಾರೆ. “ಈ ನಿಬಂಧನೆಯ ಮೂಲಕ ಕಾರ್ಮಿಕರಿಗೆ ಕೆಲಸ ಮಾಡಬೇಡಿ, ಹಣ ಸಂಪಾದಿಸಬೇಡಿ, ಕಾಯಿರಿ ಎಂದು ಹೇಳಲಾಗುತ್ತದೆ. ಖಾಸಗಿ ಜಮೀನುಗಳಿಗೆ ಕಾರ್ಮಿಕರನ್ನು ತಳ್ಳಲು ಸಾರ್ವಜನಿಕ ಕೆಲಸಗಳನ್ನು ನಿಲ್ಲಿಸುವುದು ಕಲ್ಯಾಣವಲ್ಲ, ಇದು ಸರ್ಕಾರವೇ ಕಾರ್ಮಿಕರನ್ನು ಪೂರೈಸಿದಂತೆ. ಇದು ಕಾರ್ಮಿಕರ ವೇತನ, ಆಯ್ಕೆ ಮತ್ತು ಘನತೆಯನ್ನು ಕಸಿದುಕೊಳ್ಳುತ್ತದೆ” ಎಂದಿದ್ದಾರೆ.

ವಿಬಿ–ಜಿ ರಾಮ್ ಜಿ ಎಂದರೆ ಕೇಂದ್ರದ ನಿಯಂತ್ರಣ, ರಾಜ್ಯದ ಹಣ ಮತ್ತು ‍‍‍ಷರತ್ತುಗಳ ಮೂಲಕ ಜನರ ಹಕ್ಕುಗಳನ್ನು ನಿಯಂತ್ರಿಸುವುದಾಗಿದೆ. ಇದು ಕಾರ್ಮಿಕರ ಮೇಲೆ ಹೆಚ್ಚಿನ ಹೊರೆಯನ್ನು ಹೊರಿಸುತ್ತದೆಯೇ ಹೊರತು, ನರೇಗಾ ಯೋಜನೆಯನ್ನು ಸುಧಾರಿಸುವುದಿಲ್ಲ. ಆರ್ಥಿಕ, ಸಾಂಸ್ಥಿಕ ಮತ್ತು ನೈತಿಕವಾಗಿ ನರೇಗಾ ಯೋಜನೆಯನ್ನು ಹಾಳು ಮಾಡುತ್ತದೆ. ರಾಮ್ ಹೆಸರಿನಲ್ಲಿ, ರಾಜ್ಯಗಳು ಮತ್ತು ಬಡವರನ್ನು ದಂಡಿಸಲಾಗುತ್ತಿದೆ. ಹಕ್ಕು, ಅಧಿಕಾರವನ್ನು ಕಸಿದುಕೊಳ್ಳಲಾಗುತ್ತಿದೆ. ಆರ್ಥಿಕ ಹೊರೆಯನ್ನು ರಾಜ್ಯಗಳ ಮೇಲೆ ಹೊರಿಸಿ ಜವಾಬ್ದಾರಿಯಿಂದ ನುಣುಚಿಕೊಳ್ಳಲಾಗುತ್ತಿದೆ ಎಂದು ಜಾನ್ ಬ್ರಿಟ್ಟಾಸ್ ಹೇಳಿದ್ದಾರೆ.

ರಾಜ್ಯಗಳ ಮೇಲೆ ಹೆಚ್ಚಿನ ಹೊರೆ- ಬಿಜೆಪಿ ಮಿತ್ರ ಪಕ್ಷ ಟಿಡಿಪಿ

ಪ್ರಸ್ತಾವಿತ ಕಾನೂನಿನ ಬಗ್ಗೆ ಎನ್‌ಡಿಎ ಒಕ್ಕೂಟದ ಬಿಜೆಪಿ ಮಿತ್ರ ಪಕ್ಷ ಟಿಡಿಪಿ ಪ್ರತಿಕ್ರಿಯೆ ನೀಡಿದೆ. ಈ ಕುರಿತು ಇಂಡಿಯನ್ ಎಕ್ಸ್‌ಪ್ರೆಸ್ ಜೊತೆ ಮಾತನಾಡಿರುವ ಆಂಧ್ರ ಪ್ರದೇಶದ ಹಣಕಾಸು, ಯೋಜನೆ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪಯ್ಯಾವುಲ ಕೇಶವ್, “ಪ್ರಸ್ತಾವಿತ ಕಾನೂನನ್ನು ನಾವು ಒಪ್ಪುತ್ತೇವೆ. ಆದರೆ, ಅದರಲ್ಲಿನ ಹಣಕಾಸಿನ ಹಂಚಿಕೆಯ ಕುರಿತ ನಿಯಮಗಳು ರಾಜ್ಯಗಳ ಮೇಲೆ ಹೆಚ್ಚಿನ ಹೊರೆ ಹೊರಿಸುವಂತಿದೆ. ಹಾಗಾಗಿ, ನಾವು ಕಾನೂನನ್ನು ಪರಿಶೀಲಿಸಬೇಕಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರ ಹಿಂಸಾಚಾರ: ಸೋರಿಕೆಯಾದ ಸಂಪೂರ್ಣ ಆಡಿಯೋ ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಿಲ್ಲ ಎಂದು ಪ್ರಶ್ನಿಸಿದ ಸುಪ್ರೀಂ ಕೋರ್ಟ್

ನವದೆಹಲಿ: 2023ರ ಜನಾಂಗೀಯ ಹಿಂಸಾಚಾರದಲ್ಲಿ ಮಣಿಪುರದ ಮಾಜಿ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ಪಾತ್ರವನ್ನು ಸೂಚಿಸಿರುವ ಅರ್ಜಿಯಲ್ಲಿ ಲಭ್ಯವಿರುವ ಸಂಪೂರ್ಣ ಸೋರಿಕೆಯಾದ ಆಡಿಯೋ ತುಣುಕುಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಲಿಲ್ಲ ಎಂದು...

ಎಸ್‌ಐಆರ್‌ ಭಯಕ್ಕೆ ಮತ್ತೊಂದು ಬಲಿ: ಬಂಗಾಳದಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ, ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಗೆ ಸಂಬಂಧಿಸಿದ ಭಯದಿಂದ ವೃದ್ಧನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತರನ್ನು ರಣಘಾಟ್‌ನ...

ಕೇರಳ: ಕೊಲ್ಲಂ ಕಾರ್ಪೊರೇಷನ್‌ನಲ್ಲಿ 25 ವರ್ಷಗಳ ಎಲ್‌ಡಿಎಫ್‌ ಆಳ್ವಿಕೆ ಕೊನೆಗೊಳಿಸಿದ ಯುಡಿಎಫ್

2025 ರ ಕೇರಳ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶಗಳು ರಾಜ್ಯದಲ್ಲಿ ಅತ್ಯಂತ ಅಚ್ಚರಿಯ ರಾಜಕೀಯ ಫಲಿತಾಂಶಳನ್ನು ನೀಡಿವೆ. ಅದರಲ್ಲಿ, ಕೊಲ್ಲಂ ಕಾರ್ಪೊರೇಷನ್‌ನಲ್ಲಿ ಎಡಪಂಥೀಯ ಪ್ರಜಾಸತ್ತಾತ್ಮಕ ರಂಗದ ನಿರಂತರ 25 ವರ್ಷಗಳ ನಿಯಂತ್ರಣವನ್ನು ಯುನೈಟೆಡ್...

‘ಇಂಡಿಯಾ ಬಣಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ’: ಕಾಂಗ್ರೆಸ್‌ನ ‘ವೋಟ್ ಚೋರಿ’ ಅಭಿಯಾನದ ಬಗ್ಗೆ ಒಮರ್ ಅಬ್ದುಲ್ಲಾ

ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಕಾಂಗ್ರೆಸ್‌ನ "ಮತ ಚೋರಿ" ಅಭಿಯಾನದಿಂದ ದೂರ ಉಳಿದಿದ್ದಾರೆ, ಈ ವಿಷಯವು ಒಟ್ಟಾರೆಯಾಗಿ ವಿರೋಧ ಪಕ್ಷದ ಇಂಡಿಯಾ ಬಣದ ನಿಲುವನ್ನು ಪ್ರತಿಬಿಂಬಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸೋಮವಾರ...

ಇಂಡಿಗೋ ವಿಮಾನ ರದ್ದತಿಗೆ ಸಂಬಂಧಿಸಿದ ಪಿಐಎಲ್ ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್

ನೂರಾರು ಇಂಡಿಗೋ ವಿಮಾನಗಳ ರದ್ದತಿಗೆ ನ್ಯಾಯಾಂಗ ಹಸ್ತಕ್ಷೇಪ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸೋಮವಾರ ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಅರ್ಜಿದಾರರು ತಮ್ಮ ದೂರುಗಳೊಂದಿಗೆ ದೆಹಲಿ ಹೈಕೋರ್ಟ್ ಅನ್ನು...

ಹಣ ಅಕ್ರಮ ವರ್ಗಾವಣೆ ಪ್ರಕರಣ : ಪತ್ರಕರ್ತ ಮಹೇಶ್ ಲಾಂಗಾಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು

ವಂಚನೆ ಆರೋಪದ ಮೇಲೆ ದಾಖಲಾಗಿರುವ ಎರಡು ಎಫ್‌ಐಆರ್‌ಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಪತ್ರಕರ್ತ ಮಹೇಶ್ ಲಾಂಗಾ ಅವರಿಗೆ ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ (ಡಿ.15) ಮಧ್ಯಂತರ ಜಾಮೀನು ನೀಡಿದೆ. ಜಿಎಸ್‌ಟಿ ವಂಚನೆ...

‘ಮಹಿಳೆಯರು ಗಂಡಂದಿರ ಜೊತೆ ಮಲಗಲು ಮಾತ್ರ’: ಸಿಪಿಎಂ ನಾಯಕನ ಅಸೂಕ್ಷ್ಮ ಹೇಳಿಕೆಗೆ ವ್ಯಾಪಕ ಆಕ್ರೋಶ

ಮಲಪ್ಪುರಂ ಜಿಲ್ಲೆಯಲ್ಲಿ ಸಿಪಿಎಂ ಪ್ರಾದೇಶಿಕ ನಾಯಕ ಸಯೀದ್ ಅಲಿ ಮಜೀದ್ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡುವಾಗ ಸ್ತ್ರೀದ್ವೇಷದ ಹೇಳಿಕೆಗಳನ್ನು ನೀಡಿದ ನಂತರ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.  ಸಯೀದ್ ಅಲಿ ಮಜೀದ್, ತೆನ್ನೆಲಾ ಪಂಚಾಯತ್ ವಾರ್ಡ್ ಅನ್ನು...

ಅಖ್ಲಾಕ್ ಹತ್ಯೆ ಪ್ರಕರಣ ಹಿಂತೆಗೆದುಕೊಳ್ಳುವುದು ನ್ಯಾಯಾಂಗ ಪ್ರಕ್ರಿಯೆ ಹಳಿತಪ್ಪಿಸುವ ಪ್ರಯತ್ನ: ಬೃಂದಾ ಕಾರಟ್

ರಾಜ್ಯಪಾಲರ ಅನುಮತಿಯೊಂದಿಗೆ ಮೊಹಮ್ಮದ್ ಅಖ್ಲಾಕ್ ಅವರ ಕೊಲೆ ಮತ್ತು ಗುಂಪು ಹತ್ಯೆಗೆ ಸಂಬಂಧಿಸಿದ ಪ್ರಕರಣವನ್ನು ಹಿಂತೆಗೆದುಕೊಳ್ಳುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರ ಖಂಡಿಸಿ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್‌ವಾದಿ) ಹಿರಿಯ ನಾಯಕಿ ಬೃಂದಾ ಕಾರಟ್...

ಮತ್ತೆ ಮುನ್ನೆಲೆಗೆ ಬಂದ ‘Avalkoppam’: ದಿಲೀಪ್ ಖುಲಾಸೆ ಬಳಿಕ ಕೇರಳದಾದ್ಯಂತ ಪ್ರತಿಭಟನೆ

ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿರುವ ನ್ಯಾಯಾಲಯದ ತೀರ್ಪಿಗೆ ಕೇರಳದಾದ್ಯಂತ ದೊಡ್ಡ ಮಟ್ಟದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. 2017ರಲ್ಲಿ ನಟಿ ಮೇಲೆ ದೌರ್ಜನ್ಯ ನಡೆದಾಗ...

‘ಮನರೇಗಾ’ ಯೋಜನೆಯಿಂದ ಮಹಾತ್ಮಾ ಗಾಂಧಿ ಹೆಸರು ಕೈಬಿಡಲು ಮುಂದಾದ ಮೋದಿ ನೇತೃತ್ವದ ಬಿಜೆಪಿ ಸರ್ಕಾರ

ಹೆಸರು ಬದಲಾವಣೆಗೆ ಹೆಸರುವಾಸಿಯಾಗಿರುವ ಮೋದಿ ಮೋದಿ ನೇತೃತ್ವದ ಆಡಳಿತ, ವಿಶ್ವದ ಅತಿದೊಡ್ಡ ಗ್ರಾಮೀಣ ಉದ್ಯೋಗ ಯೋಜನೆಯನ್ನು ಮರುನಾಮಕರಣ ಮಾಡಲು ಸಜ್ಜಾಗಿದೆ. ಮಹತ್ತರ ಯೋಜನೆಯಿಂದ ಮಹಾತ್ಮ ಗಾಂಧಿಯವರ ಹೆಸರನ್ನು ತೆಗೆದುಹಾಲು ಮುಂದಾಗಿದೆ ಎಂದು 'ದಿ...