Homeಮುಖಪುಟಕೇರಳದ ‘ಆರೋಗ್ಯ’ ಮತ್ತೆ ಮಹಿಳೆಯ ಕೈಗೇ!: ಟೀಚರ್ ಜಾಗಕ್ಕೆ ಬಂದರು ಪತ್ರಕರ್ತೆ....

ಕೇರಳದ ‘ಆರೋಗ್ಯ’ ಮತ್ತೆ ಮಹಿಳೆಯ ಕೈಗೇ!: ಟೀಚರ್ ಜಾಗಕ್ಕೆ ಬಂದರು ಪತ್ರಕರ್ತೆ….

- Advertisement -
- Advertisement -

ಕೇರಳದ ಹೊಸ ಸಚಿವ ಸಂಪುಟದಲ್ಲಿ ಆರೋಗ್ಯ ಖಾತೆ ಮತ್ತೆ ಮಹಿಳೆಯ ಕೈಗೇ ಬಂದಿದೆ. ಈ ಸಲ ಟೀಚರ್ ಜಾಗದಲ್ಲಿ ಪತ್ರಕರ್ತೆ ಇದ್ದಾರೆ. ಟೀಚರ್ ಅವರಷ್ಟೇ ಇವರೂ ತುಂಬ ಕ್ರಿಯಾಶೀಲರು ಎನ್ನಲಾಗಿದೆ.

ಅರಣ್ಮುಲ ಕ್ಷೇತ್ರದ ಶಾಸಕಿ ವೀಣಾ ಜಾರ್ಜ್ ಅವರನ್ನು ಆರೋಗ್ಯ ಸಚಿವರಾಗಿ ಆಯ್ಕೆ ಮಾಡಲಾಗಿದೆ. ಹೊಸ ಹುದ್ದೆಯ ನಿರ್ಧಾರಕ್ಕೆ ಪ್ರತಿಕ್ರಿಯಿಸಿದ ವೀಣಾ ಜಾರ್ಜ್, ಪಕ್ಷವು ವಹಿಸಿದ ಕರ್ತವ್ಯಗಳನ್ನು ಪೂರೈಸಲು ತನ್ನ ಅತ್ಯುತ್ತಮ ಪ್ರಯತ್ನ ಮಾಡುತ್ತೇನೆ ಎಂದು ಕೇರಳದ ಮಾತೃಭೂಮಿ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಮೇ 18 ರಂದು, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಎಂ) ನಾಯಕ ಪಿಣರಾಯಿ ವಿಜಯನ್ ತಮ್ಮ ಸಂಪುಟವನ್ನು ಆಯ್ಕೆ ಮಾಡಿದರು. ಆದರೆ ಆರೋಗ್ಯ ಸಚಿವರಾಗಿದ್ದ ಅವಧಿಯಲ್ಲಿ ನಿಪಾ ಮತ್ತು ಕೋವಿಡ್ ವಿರುದ್ಧ ಕೇರಳದ ಹೋರಾಟದ ಮುಖವಾದ ಶೈಲಜಾ ‘ಟೀಚರ್’ ಅವರನ್ನು ಕೈಬಿಟ್ಟರು. ಬದಲಾಗಿ, ಅವರನ್ನು ಪಕ್ಷದ ವಿಪ್ ಆಗಿ ನೇಮಿಸಲಾಗುತ್ತಿದೆ.

ಶೈಲಜಾರೇ ಆರೋಗ್ಯ ಸಚಿವೆಯಾಗಿ ಮುಂದುವರೆಯಬೇಕಿತ್ತು ಎಂಬ ವಾದಗಳ ನಡುವೆಯೇ, ಪಿಣರಾಯಿ ಅವರನ್ನು ಹೊರತುಪಡಿಸಿ ಎಲ್ಲ ಹೊಸಮುಖಗಳಿಗೆ ಸಚಿವ ಸ್ಥಾನ ನೀಡಿರುವ ಎಲ್‌ಡಿಎಫ್ ಆರೋಗ್ಯ ಖಾತೆಗೆ ಶಾಸಕಿ ವೀಣಾ ಜಾರ್ಜ್ ಅವರನ್ನು ಆಯ್ಕೆ ಮಾಡಿದೆ.
ವೀಣಾ ಜಾರ್ಜ್ ಶಾಸಕಿಯಾಗುವ ಮೊದಲು ವಿವಿಧ ಮಲಯಾಳಂ ಮಾಧ್ಯಮಗಳಲ್ಲಿ ಪತ್ರಕರ್ತೆಯಾಗಿ ಮತ್ತು ಸುದ್ದಿ ನಿರೂಪಕರಾಗಿ ಕೆಲಸ ಮಾಡಿದ್ದಾರೆ ಎಂದು ದಿ ಕ್ವಿಂಟ್ ವರದಿ ಮಾಡಿದೆ.

21 ಸದಸ್ಯರ ಕೇರಳ ಕ್ಯಾಬಿನೆಟ್ ಮೇ 20 ರ ಗುರುವಾರ ಪ್ರಮಾಣ ವಚನ ಸ್ವೀಕರಿಸಲಿದೆ.
ಬೇಪುರ ಸ್ಥಾನದಿಂದ ಮೊದಲ ಬಾರಿಗೆ ಶಾಸಕರಾಗಿರುವ ಸಿ.ಎಂ ವಿಜಯನ್ ಅವರ ಅಳಿಯ ಪಿ.ಎ. ಮೊಹಮ್ಮದ್ ರಿಯಾಜ್ ಲೋಕೋಪಯೋಗಿ ಇಲಾಖೆ ಸಚಿವರಾಗಲಿದ್ದರೆ, ಕೆ.ಎನ್. ಬಾಲಗೋಪಾಲ್ ಅವರು ಹೊಸ ಹಣಕಾಸು ಸಚಿವರಾಗಲಿದ್ದಾರೆ.

ಮತ್ತೊಬ್ಬ ಮಹಿಳಾ ಶಾಸಕಿ ಆರ್. ಬಿಂದು ಕೇರಳದ ಹೊಸ ಉನ್ನತ ಶಿಕ್ಷಣ ಸಚಿವರಾಗಲಿದ್ದಾರೆ.
ಪಕ್ಷದ ತೀರ್ಮಾನಗಳಿಗೆ ಆದ್ಯತೆ ನೀಡುವ ಎಡಪಕ್ಷಗಳಲ್ಲಿ ಶೈಲಜಾ ಟೀಚರ್ ಸೇರಿದಂತೆ ಎಲ್ಲರೂ ಪಕ್ಷದ ತೀರ್ಮಾನಕ್ಕೆ ಬದ್ಧರಾಗಿದ್ದಾರೆ ಎನ್ನಲಾಗಿದೆ.

ಸ್ಥಳೀಯ ಸಂಸ್ಥೆ ಮತ್ತು ಪಂಚಾಯತ್ ಚುನಾವಣೆಗಳಲ್ಲಿ ಕೇರಳದ ಎಡ ಪಕ್ಷಗಳು ಹೊಸಬರಿಗೆ, ಯುವಕರಿಗೆ ಮತ್ತು ಮಹಿಳೆಯರಿಗೆ ಹೆಚ್ಚಿನ ಅವಕಾಶ ನೀಡಿದ್ದವು ಮತ್ತು ಹಲವಾರು ಕಡೆ ಮಹಿಳೆಯರಿಗೇ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಸ್ಥಾನ ಅಥವಾ ಮೇಯರ್ ಸ್ಥಾನ ನೀಡಿದ್ದವು.
ಈಗ ಶೈಲಜಾ ಟೀಚರ್ ಜಾಗಕ್ಕೆ ವೀಣಾ ಜರ್ನಲಿಸ್ಟ್ ಬಂದಿದ್ದಾರೆ. ಅದು ಸಿಪಿಎಂ ಪಕ್ಷದ ನೀತಿಯೂ ಆಗಿದೆ. ಟೀಚರ್ ಈಗ ಚೀಫ್ ವಿಪ್ ಆಗಲಿದ್ದಾರೆ ಎನ್ನಲಾಗಿದೆ.


ಇದನ್ನೂ ಓದಿ; ಕೇರಳ ಸಂಪುಟದಿಂದ ಶೈಲಜಾ ಟೀಚರ್ ಕೈಬಿಟ್ಟಿದ್ದು ಏಕೆ? ಅವರೇ ಸಿಎಂ ಆಗಬೇಕಿತ್ತಲ್ಲವೆ?: ಜಾಲತಾಣದಲ್ಲಿ ಭಾರೀ ಚರ್ಚೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...