Homeಮುಖಪುಟಕೇರಳದ ‘ಆರೋಗ್ಯ’ ಮತ್ತೆ ಮಹಿಳೆಯ ಕೈಗೇ!: ಟೀಚರ್ ಜಾಗಕ್ಕೆ ಬಂದರು ಪತ್ರಕರ್ತೆ....

ಕೇರಳದ ‘ಆರೋಗ್ಯ’ ಮತ್ತೆ ಮಹಿಳೆಯ ಕೈಗೇ!: ಟೀಚರ್ ಜಾಗಕ್ಕೆ ಬಂದರು ಪತ್ರಕರ್ತೆ….

- Advertisement -
- Advertisement -

ಕೇರಳದ ಹೊಸ ಸಚಿವ ಸಂಪುಟದಲ್ಲಿ ಆರೋಗ್ಯ ಖಾತೆ ಮತ್ತೆ ಮಹಿಳೆಯ ಕೈಗೇ ಬಂದಿದೆ. ಈ ಸಲ ಟೀಚರ್ ಜಾಗದಲ್ಲಿ ಪತ್ರಕರ್ತೆ ಇದ್ದಾರೆ. ಟೀಚರ್ ಅವರಷ್ಟೇ ಇವರೂ ತುಂಬ ಕ್ರಿಯಾಶೀಲರು ಎನ್ನಲಾಗಿದೆ.

ಅರಣ್ಮುಲ ಕ್ಷೇತ್ರದ ಶಾಸಕಿ ವೀಣಾ ಜಾರ್ಜ್ ಅವರನ್ನು ಆರೋಗ್ಯ ಸಚಿವರಾಗಿ ಆಯ್ಕೆ ಮಾಡಲಾಗಿದೆ. ಹೊಸ ಹುದ್ದೆಯ ನಿರ್ಧಾರಕ್ಕೆ ಪ್ರತಿಕ್ರಿಯಿಸಿದ ವೀಣಾ ಜಾರ್ಜ್, ಪಕ್ಷವು ವಹಿಸಿದ ಕರ್ತವ್ಯಗಳನ್ನು ಪೂರೈಸಲು ತನ್ನ ಅತ್ಯುತ್ತಮ ಪ್ರಯತ್ನ ಮಾಡುತ್ತೇನೆ ಎಂದು ಕೇರಳದ ಮಾತೃಭೂಮಿ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಮೇ 18 ರಂದು, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಎಂ) ನಾಯಕ ಪಿಣರಾಯಿ ವಿಜಯನ್ ತಮ್ಮ ಸಂಪುಟವನ್ನು ಆಯ್ಕೆ ಮಾಡಿದರು. ಆದರೆ ಆರೋಗ್ಯ ಸಚಿವರಾಗಿದ್ದ ಅವಧಿಯಲ್ಲಿ ನಿಪಾ ಮತ್ತು ಕೋವಿಡ್ ವಿರುದ್ಧ ಕೇರಳದ ಹೋರಾಟದ ಮುಖವಾದ ಶೈಲಜಾ ‘ಟೀಚರ್’ ಅವರನ್ನು ಕೈಬಿಟ್ಟರು. ಬದಲಾಗಿ, ಅವರನ್ನು ಪಕ್ಷದ ವಿಪ್ ಆಗಿ ನೇಮಿಸಲಾಗುತ್ತಿದೆ.

ಶೈಲಜಾರೇ ಆರೋಗ್ಯ ಸಚಿವೆಯಾಗಿ ಮುಂದುವರೆಯಬೇಕಿತ್ತು ಎಂಬ ವಾದಗಳ ನಡುವೆಯೇ, ಪಿಣರಾಯಿ ಅವರನ್ನು ಹೊರತುಪಡಿಸಿ ಎಲ್ಲ ಹೊಸಮುಖಗಳಿಗೆ ಸಚಿವ ಸ್ಥಾನ ನೀಡಿರುವ ಎಲ್‌ಡಿಎಫ್ ಆರೋಗ್ಯ ಖಾತೆಗೆ ಶಾಸಕಿ ವೀಣಾ ಜಾರ್ಜ್ ಅವರನ್ನು ಆಯ್ಕೆ ಮಾಡಿದೆ.
ವೀಣಾ ಜಾರ್ಜ್ ಶಾಸಕಿಯಾಗುವ ಮೊದಲು ವಿವಿಧ ಮಲಯಾಳಂ ಮಾಧ್ಯಮಗಳಲ್ಲಿ ಪತ್ರಕರ್ತೆಯಾಗಿ ಮತ್ತು ಸುದ್ದಿ ನಿರೂಪಕರಾಗಿ ಕೆಲಸ ಮಾಡಿದ್ದಾರೆ ಎಂದು ದಿ ಕ್ವಿಂಟ್ ವರದಿ ಮಾಡಿದೆ.

21 ಸದಸ್ಯರ ಕೇರಳ ಕ್ಯಾಬಿನೆಟ್ ಮೇ 20 ರ ಗುರುವಾರ ಪ್ರಮಾಣ ವಚನ ಸ್ವೀಕರಿಸಲಿದೆ.
ಬೇಪುರ ಸ್ಥಾನದಿಂದ ಮೊದಲ ಬಾರಿಗೆ ಶಾಸಕರಾಗಿರುವ ಸಿ.ಎಂ ವಿಜಯನ್ ಅವರ ಅಳಿಯ ಪಿ.ಎ. ಮೊಹಮ್ಮದ್ ರಿಯಾಜ್ ಲೋಕೋಪಯೋಗಿ ಇಲಾಖೆ ಸಚಿವರಾಗಲಿದ್ದರೆ, ಕೆ.ಎನ್. ಬಾಲಗೋಪಾಲ್ ಅವರು ಹೊಸ ಹಣಕಾಸು ಸಚಿವರಾಗಲಿದ್ದಾರೆ.

ಮತ್ತೊಬ್ಬ ಮಹಿಳಾ ಶಾಸಕಿ ಆರ್. ಬಿಂದು ಕೇರಳದ ಹೊಸ ಉನ್ನತ ಶಿಕ್ಷಣ ಸಚಿವರಾಗಲಿದ್ದಾರೆ.
ಪಕ್ಷದ ತೀರ್ಮಾನಗಳಿಗೆ ಆದ್ಯತೆ ನೀಡುವ ಎಡಪಕ್ಷಗಳಲ್ಲಿ ಶೈಲಜಾ ಟೀಚರ್ ಸೇರಿದಂತೆ ಎಲ್ಲರೂ ಪಕ್ಷದ ತೀರ್ಮಾನಕ್ಕೆ ಬದ್ಧರಾಗಿದ್ದಾರೆ ಎನ್ನಲಾಗಿದೆ.

ಸ್ಥಳೀಯ ಸಂಸ್ಥೆ ಮತ್ತು ಪಂಚಾಯತ್ ಚುನಾವಣೆಗಳಲ್ಲಿ ಕೇರಳದ ಎಡ ಪಕ್ಷಗಳು ಹೊಸಬರಿಗೆ, ಯುವಕರಿಗೆ ಮತ್ತು ಮಹಿಳೆಯರಿಗೆ ಹೆಚ್ಚಿನ ಅವಕಾಶ ನೀಡಿದ್ದವು ಮತ್ತು ಹಲವಾರು ಕಡೆ ಮಹಿಳೆಯರಿಗೇ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಸ್ಥಾನ ಅಥವಾ ಮೇಯರ್ ಸ್ಥಾನ ನೀಡಿದ್ದವು.
ಈಗ ಶೈಲಜಾ ಟೀಚರ್ ಜಾಗಕ್ಕೆ ವೀಣಾ ಜರ್ನಲಿಸ್ಟ್ ಬಂದಿದ್ದಾರೆ. ಅದು ಸಿಪಿಎಂ ಪಕ್ಷದ ನೀತಿಯೂ ಆಗಿದೆ. ಟೀಚರ್ ಈಗ ಚೀಫ್ ವಿಪ್ ಆಗಲಿದ್ದಾರೆ ಎನ್ನಲಾಗಿದೆ.


ಇದನ್ನೂ ಓದಿ; ಕೇರಳ ಸಂಪುಟದಿಂದ ಶೈಲಜಾ ಟೀಚರ್ ಕೈಬಿಟ್ಟಿದ್ದು ಏಕೆ? ಅವರೇ ಸಿಎಂ ಆಗಬೇಕಿತ್ತಲ್ಲವೆ?: ಜಾಲತಾಣದಲ್ಲಿ ಭಾರೀ ಚರ್ಚೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...