Homeಕರ್ನಾಟಕದಿವಂಗತ ಆರ್‌.ಧ್ರುವನಾರಾಯಣ ಅವರ ಪತ್ನಿ ವೀಣಾ ನಿಧನ

ದಿವಂಗತ ಆರ್‌.ಧ್ರುವನಾರಾಯಣ ಅವರ ಪತ್ನಿ ವೀಣಾ ನಿಧನ

- Advertisement -
- Advertisement -

ಮಾರ್ಚ್ 11ರಂದು ನಿಧನರಾಗಿದ್ದ ಕಾಂಗ್ರೆಸ್ ನಾಯಕ, ಮಾಜಿ ಸಂಸದ ಆರ್‌.ಧ್ರುವ ನಾರಾಯಣ ಅವರ ಪತ್ನಿ ವೀಣಾ ಧ್ರುವನಾರಾಯಣ ಅವರು ಇಂದು (ಏ.7) ನಿಧನರಾಗಿದ್ದಾರೆ. ಕೇವಲ ಒಂದು ತಿಂಗಳ ಅಂತರದಲ್ಲೇ ಪತಿ-ಪತ್ನಿ ಇಬ್ಬರೂ ಇಹಲೋಕ ತ್ಯಜಿಸಿರುವುದು ಅವರ ಕುಟುಂಬಕ್ಕೆ ಭಾರೀ ದುಃಖ ತಂದಿದೆ.

ಬ್ರೈನ್ ಟ್ಯೂಮರ್‌‌ನಿಂದ ಬಳಲುತ್ತಿದ್ದ ವೀಣಾ (50) ಅವರು ಸುಮಾರು 16 ವರ್ಷಗಳಿಂದ ಹಾಸಿಗೆ ಹಿಡಿದಿದ್ದರು. ಇತ್ತೀಚೆಗೆ, ಪತಿ ಧ್ರುವನಾರಾಯಣ ಅವರ ಅಕಾಲಿಕ ಸಾವಿನಿಂದಾಗಿ ಶಾಕ್ ಗೆ ಒಳಗಾಗಿದ್ದ ಅವರ ಆರೋಗ್ಯ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿತ್ತು. ಹಾಗಾಗಿ, ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಶುಕ್ರವಾರ ನಿಧನರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದೀರ್ಘಕಾಲದಿಂದ ಅನಾರೋಗ್ಯದಲ್ಲಿದ್ದರಿಂದಾಗಿ, ಮೃತರ ಅಂತ್ಯಕ್ರಿಯೆನ್ನು ಶುಕ್ರವಾರ ಸಂಜೆಯೇ ಧ್ರುವನಾರಾಯಣ ಹುಟ್ಟೂರಾದ ಚಾಮರಾಜ ತಾಲೂಕಿನ ಹೆಗ್ಗವಾಡಿ ಗ್ರಾಮದಲ್ಲಿ ನಡೆಸಲು ನಿರ್ಧರಿಸಲಾಗಿದೆ. ಮಾ. 11ರಂದು ನಿಧನರಾಗಿದ್ದ ಧ್ರುವನಾರಾಯಣ ಅವರ ಅಂತ್ಯಕ್ರಿಯೆಯನ್ನು ಮಾ. 12ರಂದು ಹೆಗ್ಗವಾಡಿಯಲ್ಲೇ ನಡೆಸಲಾಗಿತ್ತು. ಅವರ ಸಮಾಧಿಯ ಪಕ್ಕದಲ್ಲೇ ವೀಣಾ ಅವರ ಅಂತ್ಯಕ್ರಿಯೆಯನ್ನೂ ನಡೆಸಲು ತೀರ್ಮಾನಿಸಿದೆ ಎಂದು ಅವರ ಕುಟುುಂಬದ ಮೂಲಗಳು ತಿಳಿಸಿವೆ.

ಕಳೆದ ಫೆಬ್ರುವರಿ ತಿಂಗಳು ವೀಣಾ ಅವರ ಆರೋಗ್ಯ ತೀವ್ರ ಹದಗೆಟ್ಟಿತ್ತು. ಚುನಾವಣೆ ಒತ್ತಡಗಳ ನಡುವೆಯೇ ಧ್ರುವ ಅವರು ತಮ್ಮ ಪತ್ನಿಯನ್ನು ಚೆನ್ನೈಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದರು. ನಂತರ ಧ್ರುವ ಅವರು ತೀರಿಕೊಂಡ ಮಾರನೇ ದಿನವೇ ಆಸ್ಪತ್ರೆಗೆ ವೀಣಾ ಅವರು ದಾಖಲಾಗಿದ್ದರು. ಅಂದಿನಿಂದಲೂ ಆಸ್ಪತ್ರೆಯಲ್ಲೇ ಇದ್ದರು. ಕಳೆದ ನಾಲ್ಕೈದು ದಿನಗಳಿಂದ ಆಹಾರವನ್ನೂ ತ್ಯಜಿಸಿದ್ದರು.

ನಿವೃತ್ತ ಆರ್‌ಎಫ್‌ಒ, ನಂಜನಗೂಡು ಗ್ರಾಮದ ಬದನವಾಳು ನಿವಾಸಿ ರಾಮಯ್ಯ ಅವರು ಧ್ರುವನಾರಾಯಣ ಅವರ ಸೋದರ ಮಾವ. ರಾಮಯ್ಯ ಅವರ ಮಗಳಾದ ವೀಣಾ ಅವರನ್ನು ಧ್ರುವ ವಿವಾಹವಾಗಿದ್ದರು. ವೀಣಾ ಅವರು ಬಿಎಸ್‌ಸಿ ಕಂಪ್ಯೂಟರ್‌ ಸೈನ್ಸ್‌ ಪದವೀಧರರಾಗಿದ್ದರು. ವೀಣಾ ಹಾಗೂ ಧ್ರುವ ದಂಪತಿಗೆ ಇಬ್ಬರು ಮಕ್ಕಳು (ದರ್ಶನ್‌ ಮತ್ತು ಬೀರನ್‌).

ಮಾ. 11ರಂದು ಧ್ರುವನಾರಾಯಣ್ ಅವರು ನಿಧನರಾಗಿದ್ದರು. ಅಂದು ಬೆಳಗಿನ ಜಾವದಲ್ಲಿ ಅವರಿಗೆ ಹೃದಯಾಘಾತವಾಗಿತ್ತು. ಮೈಸೂರಿನ ತಮ್ಮ ನಿವಾಸದಲ್ಲಿದ್ದ ಧ್ರುವನಾರಾಯಣ ಅವರನ್ನು, ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ನಿಧನರಾಗಿದ್ದರು. ಹೃದಯಾಘಾತ ಸಂಭವಿಸಿದಾಗಲೇ ಅವರು ತಮ್ಮ ಕಾರು ಚಾಲಕನಿಗೆ ಕರೆ ಮಾಡಿ, ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದರು.

ಕಾರಿನ ಚಾಲಕ ತಕ್ಷಣವೇ ಬಂದು ಅವರನ್ನು ಕಾರಿನಲ್ಲಿ ಕರೆದುಕೊಂಡು ಆಸ್ಪತ್ರೆಯನ್ನು ತಲುಪುವಷ್ಟರಲ್ಲಿ ತೀವ್ರವಾಗಿ ಅಸ್ವಸ್ಥರಾಗಿದ್ದ ಧ್ರುವನಾರಾಯಣ ಅವರು ಪ್ರಜ್ಞಾಶೂನ್ಯರಾಗಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆಗೆ ಒಳಪಡಿಸಲಾಗಿತ್ತಾದರೂ ಅವರನ್ನು ಉಳಿಸಲಾಗಿರಲಿಲ್ಲ. ತಪಾಸಣೆ ನಡೆಸಿದ್ದ ವೈದ್ಯರು, ಧ್ರುವನಾರಾಯಣ ಅವರಿಗೆ ಹೃದಯಾಘಾತದಿಂದಾಗಿ ತೀವ್ರವಾಗಿ ಆಂತರಿಕ ರಕ್ತಸ್ರಾವವಾಗಿತ್ತು. ಉಸಿರಾಡಲೂ ಕಷ್ಟಪಡುತ್ತಿದ್ದ ಅವರು ಒಮ್ಮೆ ದೀರ್ಘವಾಗಿ ಉಸಿರು ಎಳೆದುಕೊಂಡಾಗ ರಕ್ತವು ಶ್ವಾಸಕೋಶದೊಳಕ್ಕೆ ನುಗ್ಗಿರುವುದರಿಂದ ಅವರ ಸಾವಿಗೆ ಕಾರಣ ಎಂದು ಹೇಳಿದ್ದರು.

ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ ಧ್ರುವನಾರಾಯಣ ಅವರಿಗೆ ಟಿಕೆಟ್ ನೀಡಲು ಕಾಂಗ್ರೆಸ್ ಬಹುತೇಕ ನಿರ್ಧರಿಸಿತ್ತು. ಆದರೆ ಅವರ ಹಠಾತ್‌ ನಿರ್ಗಮನದಿಂದಾಗಿ ಕಾಂಗ್ರೆಸ್‌ ನಲುಗಿ ಹೋಗಿತ್ತು. ಹೀಗಾಗಿ ನಂಜನಗೂಡು ಕ್ಷೇತ್ರದಿಂದ ಸ್ಪರ್ಧಿಸಲು ಧ್ರುವ ನಾರಾಯಣ ಅವರ ಪುತ್ರ ದರ್ಶನ್ ಧ್ರುವನಾರಾಯಣ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು. ತಂದೆಯ ಸಾವಿನ ಆಘಾತದಿಂದ ಹಂತಹಂತವಾಗಿ ಹೊರಬಂದಿದ್ದ ದರ್ಶನ್, ಏ. 3ರಿಂದ ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಶುರು ಮಾಡಿದ್ದರು. ಹಳ್ಳಿಹಳ್ಳಿಗಳಿಗೂ ತೆರಳಿ ಮತಯಾಚನೆ ಮಾಡಿದ್ದರು. ಆದರೆ, ಪ್ರಚಾರ ಆರಂಭಿಸಿದ ಮೂರನೇ ದಿನಗಳಲ್ಲಿ ತಾಯಿಯ ಸಾವಿನ ಬರಸಿಡಿಲು ಅವರಿಗೆ ತಟ್ಟಿದೆ. ಮಾ. 11ರಂದು ಧ್ರುವನಾರಾಯಣ ಅವರು ನಿಧನರಾಗಿದ್ದು, ಅದಾಗಿ ಒಂದು ತಿಂಗಳೊಳಗೇ ಈಗ ತಾಯಿಯನ್ನೂ ಕಳೆದುಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...