Homeಕರ್ನಾಟಕದಿವಂಗತ ಆರ್‌.ಧ್ರುವನಾರಾಯಣ ಅವರ ಪತ್ನಿ ವೀಣಾ ನಿಧನ

ದಿವಂಗತ ಆರ್‌.ಧ್ರುವನಾರಾಯಣ ಅವರ ಪತ್ನಿ ವೀಣಾ ನಿಧನ

- Advertisement -
- Advertisement -

ಮಾರ್ಚ್ 11ರಂದು ನಿಧನರಾಗಿದ್ದ ಕಾಂಗ್ರೆಸ್ ನಾಯಕ, ಮಾಜಿ ಸಂಸದ ಆರ್‌.ಧ್ರುವ ನಾರಾಯಣ ಅವರ ಪತ್ನಿ ವೀಣಾ ಧ್ರುವನಾರಾಯಣ ಅವರು ಇಂದು (ಏ.7) ನಿಧನರಾಗಿದ್ದಾರೆ. ಕೇವಲ ಒಂದು ತಿಂಗಳ ಅಂತರದಲ್ಲೇ ಪತಿ-ಪತ್ನಿ ಇಬ್ಬರೂ ಇಹಲೋಕ ತ್ಯಜಿಸಿರುವುದು ಅವರ ಕುಟುಂಬಕ್ಕೆ ಭಾರೀ ದುಃಖ ತಂದಿದೆ.

ಬ್ರೈನ್ ಟ್ಯೂಮರ್‌‌ನಿಂದ ಬಳಲುತ್ತಿದ್ದ ವೀಣಾ (50) ಅವರು ಸುಮಾರು 16 ವರ್ಷಗಳಿಂದ ಹಾಸಿಗೆ ಹಿಡಿದಿದ್ದರು. ಇತ್ತೀಚೆಗೆ, ಪತಿ ಧ್ರುವನಾರಾಯಣ ಅವರ ಅಕಾಲಿಕ ಸಾವಿನಿಂದಾಗಿ ಶಾಕ್ ಗೆ ಒಳಗಾಗಿದ್ದ ಅವರ ಆರೋಗ್ಯ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿತ್ತು. ಹಾಗಾಗಿ, ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಶುಕ್ರವಾರ ನಿಧನರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದೀರ್ಘಕಾಲದಿಂದ ಅನಾರೋಗ್ಯದಲ್ಲಿದ್ದರಿಂದಾಗಿ, ಮೃತರ ಅಂತ್ಯಕ್ರಿಯೆನ್ನು ಶುಕ್ರವಾರ ಸಂಜೆಯೇ ಧ್ರುವನಾರಾಯಣ ಹುಟ್ಟೂರಾದ ಚಾಮರಾಜ ತಾಲೂಕಿನ ಹೆಗ್ಗವಾಡಿ ಗ್ರಾಮದಲ್ಲಿ ನಡೆಸಲು ನಿರ್ಧರಿಸಲಾಗಿದೆ. ಮಾ. 11ರಂದು ನಿಧನರಾಗಿದ್ದ ಧ್ರುವನಾರಾಯಣ ಅವರ ಅಂತ್ಯಕ್ರಿಯೆಯನ್ನು ಮಾ. 12ರಂದು ಹೆಗ್ಗವಾಡಿಯಲ್ಲೇ ನಡೆಸಲಾಗಿತ್ತು. ಅವರ ಸಮಾಧಿಯ ಪಕ್ಕದಲ್ಲೇ ವೀಣಾ ಅವರ ಅಂತ್ಯಕ್ರಿಯೆಯನ್ನೂ ನಡೆಸಲು ತೀರ್ಮಾನಿಸಿದೆ ಎಂದು ಅವರ ಕುಟುುಂಬದ ಮೂಲಗಳು ತಿಳಿಸಿವೆ.

ಕಳೆದ ಫೆಬ್ರುವರಿ ತಿಂಗಳು ವೀಣಾ ಅವರ ಆರೋಗ್ಯ ತೀವ್ರ ಹದಗೆಟ್ಟಿತ್ತು. ಚುನಾವಣೆ ಒತ್ತಡಗಳ ನಡುವೆಯೇ ಧ್ರುವ ಅವರು ತಮ್ಮ ಪತ್ನಿಯನ್ನು ಚೆನ್ನೈಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದರು. ನಂತರ ಧ್ರುವ ಅವರು ತೀರಿಕೊಂಡ ಮಾರನೇ ದಿನವೇ ಆಸ್ಪತ್ರೆಗೆ ವೀಣಾ ಅವರು ದಾಖಲಾಗಿದ್ದರು. ಅಂದಿನಿಂದಲೂ ಆಸ್ಪತ್ರೆಯಲ್ಲೇ ಇದ್ದರು. ಕಳೆದ ನಾಲ್ಕೈದು ದಿನಗಳಿಂದ ಆಹಾರವನ್ನೂ ತ್ಯಜಿಸಿದ್ದರು.

ನಿವೃತ್ತ ಆರ್‌ಎಫ್‌ಒ, ನಂಜನಗೂಡು ಗ್ರಾಮದ ಬದನವಾಳು ನಿವಾಸಿ ರಾಮಯ್ಯ ಅವರು ಧ್ರುವನಾರಾಯಣ ಅವರ ಸೋದರ ಮಾವ. ರಾಮಯ್ಯ ಅವರ ಮಗಳಾದ ವೀಣಾ ಅವರನ್ನು ಧ್ರುವ ವಿವಾಹವಾಗಿದ್ದರು. ವೀಣಾ ಅವರು ಬಿಎಸ್‌ಸಿ ಕಂಪ್ಯೂಟರ್‌ ಸೈನ್ಸ್‌ ಪದವೀಧರರಾಗಿದ್ದರು. ವೀಣಾ ಹಾಗೂ ಧ್ರುವ ದಂಪತಿಗೆ ಇಬ್ಬರು ಮಕ್ಕಳು (ದರ್ಶನ್‌ ಮತ್ತು ಬೀರನ್‌).

ಮಾ. 11ರಂದು ಧ್ರುವನಾರಾಯಣ್ ಅವರು ನಿಧನರಾಗಿದ್ದರು. ಅಂದು ಬೆಳಗಿನ ಜಾವದಲ್ಲಿ ಅವರಿಗೆ ಹೃದಯಾಘಾತವಾಗಿತ್ತು. ಮೈಸೂರಿನ ತಮ್ಮ ನಿವಾಸದಲ್ಲಿದ್ದ ಧ್ರುವನಾರಾಯಣ ಅವರನ್ನು, ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ನಿಧನರಾಗಿದ್ದರು. ಹೃದಯಾಘಾತ ಸಂಭವಿಸಿದಾಗಲೇ ಅವರು ತಮ್ಮ ಕಾರು ಚಾಲಕನಿಗೆ ಕರೆ ಮಾಡಿ, ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದರು.

ಕಾರಿನ ಚಾಲಕ ತಕ್ಷಣವೇ ಬಂದು ಅವರನ್ನು ಕಾರಿನಲ್ಲಿ ಕರೆದುಕೊಂಡು ಆಸ್ಪತ್ರೆಯನ್ನು ತಲುಪುವಷ್ಟರಲ್ಲಿ ತೀವ್ರವಾಗಿ ಅಸ್ವಸ್ಥರಾಗಿದ್ದ ಧ್ರುವನಾರಾಯಣ ಅವರು ಪ್ರಜ್ಞಾಶೂನ್ಯರಾಗಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆಗೆ ಒಳಪಡಿಸಲಾಗಿತ್ತಾದರೂ ಅವರನ್ನು ಉಳಿಸಲಾಗಿರಲಿಲ್ಲ. ತಪಾಸಣೆ ನಡೆಸಿದ್ದ ವೈದ್ಯರು, ಧ್ರುವನಾರಾಯಣ ಅವರಿಗೆ ಹೃದಯಾಘಾತದಿಂದಾಗಿ ತೀವ್ರವಾಗಿ ಆಂತರಿಕ ರಕ್ತಸ್ರಾವವಾಗಿತ್ತು. ಉಸಿರಾಡಲೂ ಕಷ್ಟಪಡುತ್ತಿದ್ದ ಅವರು ಒಮ್ಮೆ ದೀರ್ಘವಾಗಿ ಉಸಿರು ಎಳೆದುಕೊಂಡಾಗ ರಕ್ತವು ಶ್ವಾಸಕೋಶದೊಳಕ್ಕೆ ನುಗ್ಗಿರುವುದರಿಂದ ಅವರ ಸಾವಿಗೆ ಕಾರಣ ಎಂದು ಹೇಳಿದ್ದರು.

ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ ಧ್ರುವನಾರಾಯಣ ಅವರಿಗೆ ಟಿಕೆಟ್ ನೀಡಲು ಕಾಂಗ್ರೆಸ್ ಬಹುತೇಕ ನಿರ್ಧರಿಸಿತ್ತು. ಆದರೆ ಅವರ ಹಠಾತ್‌ ನಿರ್ಗಮನದಿಂದಾಗಿ ಕಾಂಗ್ರೆಸ್‌ ನಲುಗಿ ಹೋಗಿತ್ತು. ಹೀಗಾಗಿ ನಂಜನಗೂಡು ಕ್ಷೇತ್ರದಿಂದ ಸ್ಪರ್ಧಿಸಲು ಧ್ರುವ ನಾರಾಯಣ ಅವರ ಪುತ್ರ ದರ್ಶನ್ ಧ್ರುವನಾರಾಯಣ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು. ತಂದೆಯ ಸಾವಿನ ಆಘಾತದಿಂದ ಹಂತಹಂತವಾಗಿ ಹೊರಬಂದಿದ್ದ ದರ್ಶನ್, ಏ. 3ರಿಂದ ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಶುರು ಮಾಡಿದ್ದರು. ಹಳ್ಳಿಹಳ್ಳಿಗಳಿಗೂ ತೆರಳಿ ಮತಯಾಚನೆ ಮಾಡಿದ್ದರು. ಆದರೆ, ಪ್ರಚಾರ ಆರಂಭಿಸಿದ ಮೂರನೇ ದಿನಗಳಲ್ಲಿ ತಾಯಿಯ ಸಾವಿನ ಬರಸಿಡಿಲು ಅವರಿಗೆ ತಟ್ಟಿದೆ. ಮಾ. 11ರಂದು ಧ್ರುವನಾರಾಯಣ ಅವರು ನಿಧನರಾಗಿದ್ದು, ಅದಾಗಿ ಒಂದು ತಿಂಗಳೊಳಗೇ ಈಗ ತಾಯಿಯನ್ನೂ ಕಳೆದುಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...