Homeಕರ್ನಾಟಕದಿವಂಗತ ಆರ್‌.ಧ್ರುವನಾರಾಯಣ ಅವರ ಪತ್ನಿ ವೀಣಾ ನಿಧನ

ದಿವಂಗತ ಆರ್‌.ಧ್ರುವನಾರಾಯಣ ಅವರ ಪತ್ನಿ ವೀಣಾ ನಿಧನ

- Advertisement -
- Advertisement -

ಮಾರ್ಚ್ 11ರಂದು ನಿಧನರಾಗಿದ್ದ ಕಾಂಗ್ರೆಸ್ ನಾಯಕ, ಮಾಜಿ ಸಂಸದ ಆರ್‌.ಧ್ರುವ ನಾರಾಯಣ ಅವರ ಪತ್ನಿ ವೀಣಾ ಧ್ರುವನಾರಾಯಣ ಅವರು ಇಂದು (ಏ.7) ನಿಧನರಾಗಿದ್ದಾರೆ. ಕೇವಲ ಒಂದು ತಿಂಗಳ ಅಂತರದಲ್ಲೇ ಪತಿ-ಪತ್ನಿ ಇಬ್ಬರೂ ಇಹಲೋಕ ತ್ಯಜಿಸಿರುವುದು ಅವರ ಕುಟುಂಬಕ್ಕೆ ಭಾರೀ ದುಃಖ ತಂದಿದೆ.

ಬ್ರೈನ್ ಟ್ಯೂಮರ್‌‌ನಿಂದ ಬಳಲುತ್ತಿದ್ದ ವೀಣಾ (50) ಅವರು ಸುಮಾರು 16 ವರ್ಷಗಳಿಂದ ಹಾಸಿಗೆ ಹಿಡಿದಿದ್ದರು. ಇತ್ತೀಚೆಗೆ, ಪತಿ ಧ್ರುವನಾರಾಯಣ ಅವರ ಅಕಾಲಿಕ ಸಾವಿನಿಂದಾಗಿ ಶಾಕ್ ಗೆ ಒಳಗಾಗಿದ್ದ ಅವರ ಆರೋಗ್ಯ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿತ್ತು. ಹಾಗಾಗಿ, ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಶುಕ್ರವಾರ ನಿಧನರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದೀರ್ಘಕಾಲದಿಂದ ಅನಾರೋಗ್ಯದಲ್ಲಿದ್ದರಿಂದಾಗಿ, ಮೃತರ ಅಂತ್ಯಕ್ರಿಯೆನ್ನು ಶುಕ್ರವಾರ ಸಂಜೆಯೇ ಧ್ರುವನಾರಾಯಣ ಹುಟ್ಟೂರಾದ ಚಾಮರಾಜ ತಾಲೂಕಿನ ಹೆಗ್ಗವಾಡಿ ಗ್ರಾಮದಲ್ಲಿ ನಡೆಸಲು ನಿರ್ಧರಿಸಲಾಗಿದೆ. ಮಾ. 11ರಂದು ನಿಧನರಾಗಿದ್ದ ಧ್ರುವನಾರಾಯಣ ಅವರ ಅಂತ್ಯಕ್ರಿಯೆಯನ್ನು ಮಾ. 12ರಂದು ಹೆಗ್ಗವಾಡಿಯಲ್ಲೇ ನಡೆಸಲಾಗಿತ್ತು. ಅವರ ಸಮಾಧಿಯ ಪಕ್ಕದಲ್ಲೇ ವೀಣಾ ಅವರ ಅಂತ್ಯಕ್ರಿಯೆಯನ್ನೂ ನಡೆಸಲು ತೀರ್ಮಾನಿಸಿದೆ ಎಂದು ಅವರ ಕುಟುುಂಬದ ಮೂಲಗಳು ತಿಳಿಸಿವೆ.

ಕಳೆದ ಫೆಬ್ರುವರಿ ತಿಂಗಳು ವೀಣಾ ಅವರ ಆರೋಗ್ಯ ತೀವ್ರ ಹದಗೆಟ್ಟಿತ್ತು. ಚುನಾವಣೆ ಒತ್ತಡಗಳ ನಡುವೆಯೇ ಧ್ರುವ ಅವರು ತಮ್ಮ ಪತ್ನಿಯನ್ನು ಚೆನ್ನೈಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದರು. ನಂತರ ಧ್ರುವ ಅವರು ತೀರಿಕೊಂಡ ಮಾರನೇ ದಿನವೇ ಆಸ್ಪತ್ರೆಗೆ ವೀಣಾ ಅವರು ದಾಖಲಾಗಿದ್ದರು. ಅಂದಿನಿಂದಲೂ ಆಸ್ಪತ್ರೆಯಲ್ಲೇ ಇದ್ದರು. ಕಳೆದ ನಾಲ್ಕೈದು ದಿನಗಳಿಂದ ಆಹಾರವನ್ನೂ ತ್ಯಜಿಸಿದ್ದರು.

ನಿವೃತ್ತ ಆರ್‌ಎಫ್‌ಒ, ನಂಜನಗೂಡು ಗ್ರಾಮದ ಬದನವಾಳು ನಿವಾಸಿ ರಾಮಯ್ಯ ಅವರು ಧ್ರುವನಾರಾಯಣ ಅವರ ಸೋದರ ಮಾವ. ರಾಮಯ್ಯ ಅವರ ಮಗಳಾದ ವೀಣಾ ಅವರನ್ನು ಧ್ರುವ ವಿವಾಹವಾಗಿದ್ದರು. ವೀಣಾ ಅವರು ಬಿಎಸ್‌ಸಿ ಕಂಪ್ಯೂಟರ್‌ ಸೈನ್ಸ್‌ ಪದವೀಧರರಾಗಿದ್ದರು. ವೀಣಾ ಹಾಗೂ ಧ್ರುವ ದಂಪತಿಗೆ ಇಬ್ಬರು ಮಕ್ಕಳು (ದರ್ಶನ್‌ ಮತ್ತು ಬೀರನ್‌).

ಮಾ. 11ರಂದು ಧ್ರುವನಾರಾಯಣ್ ಅವರು ನಿಧನರಾಗಿದ್ದರು. ಅಂದು ಬೆಳಗಿನ ಜಾವದಲ್ಲಿ ಅವರಿಗೆ ಹೃದಯಾಘಾತವಾಗಿತ್ತು. ಮೈಸೂರಿನ ತಮ್ಮ ನಿವಾಸದಲ್ಲಿದ್ದ ಧ್ರುವನಾರಾಯಣ ಅವರನ್ನು, ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ನಿಧನರಾಗಿದ್ದರು. ಹೃದಯಾಘಾತ ಸಂಭವಿಸಿದಾಗಲೇ ಅವರು ತಮ್ಮ ಕಾರು ಚಾಲಕನಿಗೆ ಕರೆ ಮಾಡಿ, ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದರು.

ಕಾರಿನ ಚಾಲಕ ತಕ್ಷಣವೇ ಬಂದು ಅವರನ್ನು ಕಾರಿನಲ್ಲಿ ಕರೆದುಕೊಂಡು ಆಸ್ಪತ್ರೆಯನ್ನು ತಲುಪುವಷ್ಟರಲ್ಲಿ ತೀವ್ರವಾಗಿ ಅಸ್ವಸ್ಥರಾಗಿದ್ದ ಧ್ರುವನಾರಾಯಣ ಅವರು ಪ್ರಜ್ಞಾಶೂನ್ಯರಾಗಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆಗೆ ಒಳಪಡಿಸಲಾಗಿತ್ತಾದರೂ ಅವರನ್ನು ಉಳಿಸಲಾಗಿರಲಿಲ್ಲ. ತಪಾಸಣೆ ನಡೆಸಿದ್ದ ವೈದ್ಯರು, ಧ್ರುವನಾರಾಯಣ ಅವರಿಗೆ ಹೃದಯಾಘಾತದಿಂದಾಗಿ ತೀವ್ರವಾಗಿ ಆಂತರಿಕ ರಕ್ತಸ್ರಾವವಾಗಿತ್ತು. ಉಸಿರಾಡಲೂ ಕಷ್ಟಪಡುತ್ತಿದ್ದ ಅವರು ಒಮ್ಮೆ ದೀರ್ಘವಾಗಿ ಉಸಿರು ಎಳೆದುಕೊಂಡಾಗ ರಕ್ತವು ಶ್ವಾಸಕೋಶದೊಳಕ್ಕೆ ನುಗ್ಗಿರುವುದರಿಂದ ಅವರ ಸಾವಿಗೆ ಕಾರಣ ಎಂದು ಹೇಳಿದ್ದರು.

ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ ಧ್ರುವನಾರಾಯಣ ಅವರಿಗೆ ಟಿಕೆಟ್ ನೀಡಲು ಕಾಂಗ್ರೆಸ್ ಬಹುತೇಕ ನಿರ್ಧರಿಸಿತ್ತು. ಆದರೆ ಅವರ ಹಠಾತ್‌ ನಿರ್ಗಮನದಿಂದಾಗಿ ಕಾಂಗ್ರೆಸ್‌ ನಲುಗಿ ಹೋಗಿತ್ತು. ಹೀಗಾಗಿ ನಂಜನಗೂಡು ಕ್ಷೇತ್ರದಿಂದ ಸ್ಪರ್ಧಿಸಲು ಧ್ರುವ ನಾರಾಯಣ ಅವರ ಪುತ್ರ ದರ್ಶನ್ ಧ್ರುವನಾರಾಯಣ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು. ತಂದೆಯ ಸಾವಿನ ಆಘಾತದಿಂದ ಹಂತಹಂತವಾಗಿ ಹೊರಬಂದಿದ್ದ ದರ್ಶನ್, ಏ. 3ರಿಂದ ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಶುರು ಮಾಡಿದ್ದರು. ಹಳ್ಳಿಹಳ್ಳಿಗಳಿಗೂ ತೆರಳಿ ಮತಯಾಚನೆ ಮಾಡಿದ್ದರು. ಆದರೆ, ಪ್ರಚಾರ ಆರಂಭಿಸಿದ ಮೂರನೇ ದಿನಗಳಲ್ಲಿ ತಾಯಿಯ ಸಾವಿನ ಬರಸಿಡಿಲು ಅವರಿಗೆ ತಟ್ಟಿದೆ. ಮಾ. 11ರಂದು ಧ್ರುವನಾರಾಯಣ ಅವರು ನಿಧನರಾಗಿದ್ದು, ಅದಾಗಿ ಒಂದು ತಿಂಗಳೊಳಗೇ ಈಗ ತಾಯಿಯನ್ನೂ ಕಳೆದುಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಂದೆಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...