Homeಕರ್ನಾಟಕಜಾತಿಗಣತಿ ವರದಿ ವಿರುದ್ಧ ವೀರಶೈವ-ಲಿಂಗಾಯತ ಮಹಾಸಭೆ ನಿರ್ಣಯ : ಸಚಿವರು, ಶಾಸಕರಿಂದ ಸಹಿ

ಜಾತಿಗಣತಿ ವರದಿ ವಿರುದ್ಧ ವೀರಶೈವ-ಲಿಂಗಾಯತ ಮಹಾಸಭೆ ನಿರ್ಣಯ : ಸಚಿವರು, ಶಾಸಕರಿಂದ ಸಹಿ

- Advertisement -
- Advertisement -

ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ (ಜಾತಿ ಜನಗಣತಿ) ವರದಿಯನ್ನು ಸಂಪುಟ ಸಭೆಯಲ್ಲಿ ಮಂಡಿಸಿ ಅಂಗೀಕಾರ ಪಡೆಯುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಯತ್ನದ ವಿರುದ್ದ ವೀರಶೈವ-ಲಿಂಗಾಯತ ಮಹಾಸಭಾ ಕೈಗೊಂಡಿರುವ ನಿರ್ಣಯಕ್ಕೆ ಸಚಿವರು, ಶಾಸಕರು ಸಹಿ ಹಾಕಿದ್ದಾರೆ.

ಜಾತಿಗಣತಿ ವರದಿ ಅಂಗೀಕಾರ ವಿರೋಧಿಸಿ ವೀರಶೈವ-ಲಿಂಗಾಯತ ಮಹಾಸಭಾದ ನೇತೃತ್ವದಲ್ಲಿ ಸಮುದಾಯದ ರಾಜಕೀಯ ಮತ್ತು ವಿವಿಧ ಸಂಘಟನೆಗಳ ಪ್ರಮುಖ ಸಭೆ ಮಂಗಳವಾರ ಬೆಂಗಳೂರಿನಲ್ಲಿ ನಡೆಯಿತು. ಸಭೆಯಲ್ಲಿ ವರದಿ ಸ್ವೀಕರಿಸದಂತೆ ಆಗ್ರಹಿಸುವುದು ಸೇರಿದಂತೆ ಐದು ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

ವೀರಶೈವ-ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿರುವ ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದ ಸಚಿವರಾದ ಎಂ.ಬಿ ಪಾಟೀಲ್, ಈಶ್ವರ್ ಖಂಡ್ರೆ, ಶರಣಬಸಪ್ಪ ದರ್ಶನಾಪುರ, ಶಿವಾನಂದ ಪಾಟೀಲ್, ಮುಖ್ಯಮಂತ್ರಿಯ ಸಲಹೆಗಾರ ಬಿ.ಆರ್ ಪಾಟೀಲ್ ಪಾಲ್ಗೊಂಡಿದ್ದರು.

ಮಹಾಸಭಾದ ನಿರ್ಣಯಗಳು

  • ಹತ್ತು ವರ್ಷಗಳ ಹಿಂದೆ ನಡೆಸಲಾದ ಸಮೀಕ್ಷೆಯ ವರದಿಯು ಹಲವು ಲೋಪಗಳಿಂದ ಕೂಡಿದೆ. ಆದ್ದರಿಂದ ಹೊಸದಾಗಿ ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಬೇಕು.
  • ಕಾಂತರಾಜ್ ನೇತೃತ್ವದ ಆಯೋಗ ನಡೆಸಿದ ಸಮೀಕ್ಷೆಯ ವರದಿಯನ್ನು ಆಧರಿಸಿ, ಈಗ ಹಿಂದುಳಿದ ವರ್ಗಗಳ ಆಯೋಗ ಶಿಫಾರಸು ಸಲ್ಲಿಸಿದೆ. ಅದು ಅವೈಜ್ಞಾನಿಕ ಮತ್ತು ಅಸಂವಿಧಾನಿಕವಾಗಿದೆ. ಆದ್ದರಿಂದ ವರದಿಗೆ ಸಂಬಂಧಿಸಿದ ಉದ್ದೇಶಿತ ಪ್ರಕ್ರಿಯೆಯನ್ನು ಸಿಎಂ ಕೈಬಿಡಬೇಕು.
  • ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಲಿಂಗಾಯತ ಉಪ ಜಾತಿಗಳ ಹೆಸರನ್ನು ಮಾತ್ರ ನಮೂದಿಸಲಾಗಿದೆ. ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ತೀರ್ಪಿನಂತೆ ಎಲ್ಲಾ ಲಿಂಗಾಯತ ಉಪ ಪಂಗಡಗಳನ್ನು ‘ಲಿಂಗಾಯತ’ ಎಂದು ನಮೂದಿಸಲು ಅವಕಾಶ ನೀಡಬೇಕು.
  • ವೀರಶೈವ-ಲಿಂಗಾಯತ ಎಲ್ಲಾ ಉಪಪಂಗಡಗಳನ್ನು ಕೇಂದ್ರ ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಯಲ್ಲಿ ಸೇರಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿಗಳು ಶಿಫಾರಸು ಮಾಡಬೇಕು.
  • ಸಾಮಾಜಿಕ ಅಸಮಾನತೆಯ ನಿರಾಕರಣೆ ಮತ್ತು ಸಾಮಾಜಿಕ ನ್ಯಾಯ ಕುರಿತಾದ ಸರ್ಕಾರದ ಎಲ್ಲಾ ಸೈದ್ಧಾಂತಿಕ, ಆಡಳಿತಾತ್ಮಕ ಮತ್ತು ಕಾನೂನಾತ್ಮಕ ಪ್ರಕ್ರಿಯೆಗಳಲ್ಲಿ ವೀರಶೈವ ಲಿಂಗಾಯತ ಸಮುದಾಯ ಮುಂಚೂಣಿಯಲ್ಲಿ ನಿಂತು ಬೆಂಬಲಿಸುತ್ತದೆ ಎಂದು ನಮ್ಮ ಸಮುದಾಯದ ಪರವಾಗಿ ಮಹಾಸಭೆಯ ಅಧ್ಯಕ್ಷನಾಗಿ ನಾನು ತುಂಬು ಹೃದಯದಿಂದ ಆಶ್ವಾಸನೆಯನ್ನು ನೀಡುತ್ತೇನೆ ಎಂದು ಶಾಮನೂರು ಶಿವಶಂಕರಪ್ಪ ಪ್ರಕಟಿಸಿದ್ದಾರೆ.

ಇದನ್ನೂ ಓದಿ : ಚನ್ನಪಟ್ಟಣ ಉಪಕದನ | ರೋಚಕ ಘಟ್ಟ ತಲುಪಿದ ಮೈತ್ರಿ ಜಟಾಪಟಿ : ಕಾದು ನೋಡುವ ತಂತ್ರದಲ್ಲಿ ಯೋಗೇಶ್ವರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...