Homeಕರ್ನಾಟಕವೀರಶೈವ ಲಿಂಗಾಯತ, ಒಕ್ಕಲಿಗರ ನಿಗಮ ಸ್ಥಾಪನೆಯನ್ನು ಸ್ವಾಗತಿಸುತ್ತೇನೆ: ಬಜೆಟ್ ವಿಶ್ಲೇಷಣೆ ಮಾಡಿದ ಸಿದ್ದರಾಮಯ್ಯ

ವೀರಶೈವ ಲಿಂಗಾಯತ, ಒಕ್ಕಲಿಗರ ನಿಗಮ ಸ್ಥಾಪನೆಯನ್ನು ಸ್ವಾಗತಿಸುತ್ತೇನೆ: ಬಜೆಟ್ ವಿಶ್ಲೇಷಣೆ ಮಾಡಿದ ಸಿದ್ದರಾಮಯ್ಯ

- Advertisement -
- Advertisement -

‘ಆಪರೇಷನ್ ಕಮಲ’ ಎಂಬ ಅನೈತಿಕ ರಾಜಕೀಯದ ಮೂಲಕ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರ ರಾಜ್ಯವನ್ನು ದಶಕಗಳ ಹಿಂದಕ್ಕೆ ಒಯ್ಯುವ “ಆಪರೇಷನ್ ಬರ್ಬಾದ್” ಕಾರ್ಯಕ್ರಮವನ್ನು ಯಶಸ್ವಿಯಾಗಿ ಮಾಡುತ್ತಿದೆ. ಇದಕ್ಕೆ ಕಳೆದ ಮತ್ತು ಈ ವರ್ಷದ ಎರಡು ಬಜೆಟ್‍ಗಳೇ ಸಾಕ್ಷಿ ರಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾಯಿತ ಸರ್ಕಾರ ಪಾರದರ್ಶಕವಾಗಿ ಕೆಲಸ ಮಾಡಬೇಕೆನ್ನುವುದು ಸಂವಿಧಾನಬದ್ಧ ಬದ್ಧತೆ. ಆದರೆ, ಇದೊಂದು ಮುಚ್ಚುಮರೆಯ ಸರ್ಕಾರ. ಈ ಬಜೆಟ್‍ನಲ್ಲಿ ಸರ್ಕಾರ ಬಿಚ್ಚಿಟ್ಟಿದ್ದಕ್ಕಿಂತ ಮುಚ್ಚಿಟ್ಟಿದ್ದೇ ಹೆಚ್ಚು. ಆಯವ್ಯಯವನ್ನು ಇಲಾಖಾವಾರು ನೀಡದೆ ಆರು ವಲಯಗಳಾಗಿ ವಿಂಗಡಿಸಿ ಯಾವ ಇಲಾಖೆಗೆ ಎಷ್ಟು ಅನುದಾನ ನೀಡಲಾಗಿದೆ. ಇಲಾಖೆಗಳ ಕಾರ್ಯಕ್ರಮಗಳೇನು, ಕಳೆದ ವರ್ಷದ ಸಾಧನೆಗಳೇನು, ಹೊಸ ಯೋಜನೆಗಳೇನು ಎಂಬ ವಿವರಗಳೇ ಇಲ್ಲ ಎಂದು ಆರೋಪಿಸಿದರು.

ಬಿ.ಎಸ್.ಯಡಿಯೂರಪ್ಪನವರು ರಾಜ್ಯದ ಬಜೆಟ್‍ಗೆ ಇದ್ದ ಮಹತ್ವ ಮತ್ತು ಪಾವಿತ್ರ್ಯವನ್ನೇ ಹಾಳು ಮಾಡಿದ್ದಾರೆ. ರಾಜ್ಯದಲ್ಲಿರುವ 33 ಇಲಾಖೆಗಳನ್ನು ಆರು ವಲಯಗಳನ್ನಾಗಿ ಮಾಡಿ ಗೊಂದಲ ಸೃಷ್ಟಿಸಲಾಗಿದೆ. ಈ ಆರೂ ವಲಯಗಳಿಗೆ ಕಳೆದ ಬಜೆಟ್‍ನಲ್ಲಿ ನಿಗದಿಪಡಿಸಲಾಗಿದ್ದ ಅನುದಾನಕ್ಕಿಂತ ಕಡಿಮೆ ಹಣ ನಿಗದಿಪಡಿಸಲಾಗಿದೆ. ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ ರೂ 1231 ಕೋಟಿ , ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ ವಲಯಕ್ಕೆ ರೂ 9943 ಕೋಟಿ, ಆರ್ಥಿಕ ಅಭಿವೃದ್ಧಿ ಪ್ರಚೋದನೆ ವಲಯಕ್ಕೆ ರೂ 3203 ಕೋಟಿ, ಬೆಂಗಳೂರು ಸಮಗ್ರ ಅಭಿವೃದ್ಧಿಗೆ ರೂ 997 ಕೋಟಿ, ಸಂಸ್ಕೃತಿ – ಪರಂಪರೆ ಹಾಗೂ ನೈಸರ್ಗಿಕ ಸಂಪನ್ಮೂಲ ವಲಯಕ್ಕೆ 1907 ಕೋಟಿ ಕಡಿಮೆ ಅನುದಾನವನ್ನು ನಿಗದಿಪಡಿಸಲಾಗಿದೆ. ಆಡಳಿತ ಸುಧಾರಣಾ ವಲಯಕ್ಕೆ ಮಾತ್ರ ರೂ.42,325 ಕೋಟಿಯಷ್ಟು ಅನುದಾವನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಈ ಹೆಚ್ಚುವರಿ ಅನುದಾನಕ್ಕೆ ಯಾವ ಹೊಸ ಯೋಜನೆಗಳನ್ನೂ ಪ್ರಕಟಮಾಡಿಲ್ಲ ಎಂದು ಆರೋಪಿಸಿದರು.

ಸಂಕಷ್ಟಗಳ ಸರಮಾಲೆಗೆ ಸಿಲುಕಿರುವ ರೈತರು ದೇಶಾದ್ಯಂತ ಬೀದಿಗಿಳಿದಿದ್ದಾರೆ. ಕೃಷಿ ವಿರೋಧಿ ಕಾಯ್ದೆಗಳ ಮೂಲಕ ರೈತರನ್ನು ದಿವಾಳಿ ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ಜೊತೆ ಸೇರಿರುವ ರಾಜ್ಯ ಸರ್ಕಾರ ತನ್ನ ಬಜೆಟ್‍ನಲ್ಲೂ ಕೃಷಿ ಕ್ಷೇತ್ರವನ್ನು ನಿರ್ಲಕ್ಷಿಸಿದೆ. ಕಳೆದ ವಿಧಾನಸಭಾ ಚುನಾವಣೆಯ ಪೂರ್ವದಲ್ಲೂ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ‘ಒಂದು ಲಕ್ಷದವರೆಗಿನ ರಾಷ್ಟ್ರೀಕೃತ ಬ್ಯಾಂಕ್ ಮತ್ತು ಸಹಕಾರ ಬ್ಯಾಂಕ್‍ಗಳಲ್ಲಿನ ಕೃಷಿ ಸಾಲವನ್ನು ಮನ್ನಾ ಮಾಡುತ್ತೇವೆ’ ಎಂದು ಭರವಸೆ ನೀಡಿತ್ತು. ಈ ಸರಕಾರ ಅಧಿಕಾರಕ್ಕೆ ಬಂದ ನಂತರ ಮಂಡಿಸಿದ ಎರಡೂ ಬಜೆಟ್‍ಗಳಲ್ಲೂ ರೈತರ ಸಾಲ ಮನ್ನಾದ ಪ್ರಸ್ತಾಪವೇ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೃಷಿ, ತೋಟಗಾರಿಕೆ, ಜಲಸಂಪನ್ಮೂಲ, ಸಹಕಾರ, ಮೀನುಗಾರಿಕೆ, ರೇಷ್ಮೆ ಮೊದಲಾದ ಕೃಷಿ ಸಂಬಂಧಿತ ಇಲಾಖೆಗಳಿಗೆ ಕಳೆದ ಬಜೆಟ್‍ನಲ್ಲಿ ರೂ. 32,259 ಕೋಟಿ ಅನುದಾನ ನೀಡಿದ್ದರೆ ಪ್ರಸಕ್ತ ಬಜೆಟ್‍ನಲ್ಲಿ ರೂ 31,028 ಕೋಟಿ ಅನುದಾನ ಒದಗಿಸಲಾಗಿದೆ. ಅಂದರೆ, ರೂ 1,231 ಕೋಟಿ ಅನುದಾನ ಕಡಿಮೆ ಮಾಡಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ತನ್ನ ಎರಡನೇ ಬಜೆಟ್‍ನಲ್ಲಿ ಕೂಡ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಜಾತಿ ಹಾಗೂ ಅಲ್ಪಸಂಖ್ಯಾತ ವರ್ಗಗಳನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಗಂಗೂಲಿ ಕ್ಯಾಚ್ ಮಾಡಲು ಹೋಗಿ ‘ಕೋಬ್ರಾ’ ಹಿಡಿದ ಬಿಜೆಪಿ

2020-21 ನೇ ಸಾಲಿನಲ್ಲಿ ಎಸ್‍ಸಿಎಸ್‍ಪಿ/ಟಿಎಸ್‍ಪಿ ಯೋಜನೆಗೆ 26,930 ಕೋಟಿ ಅನುದಾನ ಒದಗಿಸಲಾಗಿತ್ತು. ಈ ಬಾರಿ ಬಜೆಟ್ ಗಾತ್ರ ಹೆಚ್ಚಳಕ್ಕೆ ಅನುಗುಣವಾಗಿ ಈ ಯೋಜನೆಗೆ ಅನುದಾನವನ್ನು ಹೆಚ್ಚಿಸಬೇಕಿತ್ತು. ಆದರೆ ಈ ವರ್ಷದ ಬಜೆಟ್‍ನಲ್ಲಿ ನೀಡಲಾಗಿರುವ ಅನುದಾನ ರೂ 26,005 ಕೋಟಿ ಮಾತ್ರ. ವೀರಶೈವ ಲಿಂಗಾಯತ ಮತ್ತು ಒಕ್ಕಲಿಗ ಸಮಾಜದ ಅಭಿವೃದ್ಧಿಗಾಗಿ ನಿಗಮವನ್ನು ಸ್ಥಾಪಿಸಿ ತಲಾ ರೂ.500 ಕೋಟಿ ಅನುದಾನ ನಿಗದಿಪಡಿಸಿರುವುದನ್ನು ನಾನು ಸ್ವಾಗತಿಸುತ್ತೇನೆ. ಅಂಬೇಡ್ಕರ್, ವಾಲ್ಮೀಕಿ, ಆದಿಜಾಂಬವ, ಬೋವಿ, ವಿಶ್ವಕರ್ಮ, ಕಾಡುಗೊಲ್ಲರ, ಅಂಬಿಗರ ಚೌಡಯ್ಯ, ಸವಿತಾ ಸಮಾಜ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಗಳಿಗೆ ಒಟ್ಟು ಕೇವಲ 500 ಕೋಟಿ ಅನುದಾನ ನೀಡುವ ಮೂಲಕ ತಳಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿಗಳು ಆರ್ಥಿಕತೆ ಸಕಾರಾತ್ಮಕ ಹಾದಿಯಲ್ಲಿ ಇದೆ ಎಂದು ಬಜೆಟ್‍ನಲ್ಲಿ ಹೇಳಿದ್ದಾರೆ. ಆದರೆ ಶೇ.14 ರಷ್ಟು ಪ್ರಗತಿಯಲ್ಲಿದ್ದ ರಾಜ್ಯದ ಆರ್ಥಿಕತೆ ಈ ಬಾರಿಯ ಬಜೆಟ್‌ನಲ್ಲಿರುವ ಅಂಕಿಅಂಶಗಳನ್ನು ನೋಡಿದರೆ ಗಾಬರಿ ಹುಟ್ಟಿಸುವಂತೆ ಇವೆ. ರಾಜ್ಯ ಆದಾಯ ಎಂದು ಹೇಳುತ್ತಿರುವುದು ಬರಿ ಸಾಲವನ್ನು. ತೆರಿಗೆ ಸಂಗ್ರಹವು ಮುಖ್ಯಮಂತ್ರಿಗಳ ಭಾಷಣದ ಪ್ರಕಾರ ಕರ್ನಾಟಕದಲ್ಲಿ ತುಸು ಸಮಾಧಾನಕರವಾಗಿದ್ದರೂ ಕೇಂದ್ರ ಸರ್ಕಾರ ರಾಜ್ಯಕ್ಕೆ ನ್ಯಾಯಯುತವಾಗಿ ನೀಡಬೇಕಾದ ಪ್ರಮಾಣದಲ್ಲಿ ನೀಡದೆ ಹೋದ ಕಾರಣಕ್ಕೆ ರಾಜ್ಯವು ಭೀಕರ ಹಣಕಾಸಿನ ಸಮಸ್ಯೆಯನ್ನು ಎದುರಿಸುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ರಾಜ್ಯದ ಇತ್ತೀಚಿನ ವರ್ಷಗಳಲ್ಲಿಯೆ ಪ್ರಥಮ ಬಾರಿ ರೂ.19,485.84 ಕೋಟಿ ರಾಜಸ್ವ ಕೊರತೆ 2020-21 ರಲ್ಲಿ ಎದುರಾಗಿದೆ. 2021-22 ಕ್ಕೆ ರೂ.15,133 ಕೋಟಿ ರಾಜಸ್ವದ ಕೊರತೆ ಆಗುವುದೆಂದು ಬಜೆಟ್‍ನಲ್ಲಿ ತಿಳಿಸಿದ್ದಾರೆ. 2020-21 ರಲ್ಲಿ ಬಜೆಟ್ ಮಂಡಿಸಿದಾಗ ರೂ.143 ಕೋಟಿ ರಾಜಸ್ವ ಉಳಿಕೆ ಇರುತ್ತದೆ ಎಂದು ಅಂದಾಜಿಸಲಾಗಿತ್ತು ನಂತರದ ಪರಿಷ್ಕೃತ ಬಜೆಟ್‌ನಲ್ಲಿ ರಾಜಸ್ವ ಕೊರತೆ ಎದುರಾಯಿತು. 5 ವರ್ಷದ ನಮ್ಮ ಸರ್ಕಾರದಲ್ಲಿ ರಾಜಸ್ವದ ಕೊರತೆ ಎಂದೂ ಆಗಿಲ್ಲ. ಬಜೆಟ್‍ನ ಅಂದಾಜಿನ ಪ್ರಕಾರ ವಿತ್ತೀಯ ಕೊರತೆ ಜಿ.ಎಸ್.ಡಿ.ಪಿ.ಯ ಶೇ.3.48 ರಷ್ಟು ಇರುತ್ತದೆ. ಇದರ ಪ್ರಕಾರ 2021-22 ರಲ್ಲಿ ವಿತ್ತೀಯ ಕೊರತೆ ರೂ.59,240 ಕೋಟಿ ಇರುತ್ತದೆ. ಈ ವರ್ಷ ರೂ.71,332 ಕೋಟಿಗಳಷ್ಟು ರಾಜ್ಯ ಸರ್ಕಾರ ಸಾಲ ಪಡೆಯುವುದಾಗಿ ಘೋಷಿಸಿದೆ. ಇದರಿಂದ ಸರ್ಕಾರದ ಮೇಲೆ ಬಹಳಷ್ಟು ಹೊರೆಯಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಎಫ್.ಆರ್.ಬಿ.ಎಂ. ಕಾಯ್ದೆ ಪ್ರಕಾರ ವಿತ್ತೀಯ ಕೊರತೆಯು ಜಿ.ಡಿ.ಪಿ.ಯ ಶೇ.3 ಕ್ಕಿಂತ ಕಡಿಮೆ ಇರಬೇಕೆಂದು ನಿಯಮವಿದೆ. ಆದರೆ ಸರ್ಕಾರವು ಕೊರೋನಾ ಸಂದರ್ಭದಲ್ಲಿ ಸರಿಯಾದ ಆಡಳಿತವನ್ನು ನಡೆಸದೇ ಸರ್ಕಾರದ ವೈಫಲ್ಯವನ್ನು ಮುಚ್ಚಿ ಹಾಕಲು ಜಿ.ಎಸ್.ಡಿ.ಪಿ.ಯ ಶೇ.4 ರಷ್ಟು ಹೆಚ್ಚಿಗೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಿಕೊಳ್ಳಲಾಗಿದೆ. ಇದು ಒಳ್ಳೆಯ ಆರ್ಥಿಕ ನೀತಿಯ ಲಕ್ಷಣವಲ್ಲ.
5 ವರ್ಷದ ನಮ್ಮ ಸರ್ಕಾರದಲ್ಲಿ ವಿತ್ತೀಯ ಕೊರತೆಯು ಜಿ.ಎಸ್.ಡಿ.ಪಿಯ. ಶೇ.2.5 ರ ಆಸುಪಾಸಿನಲ್ಲೇ ಇತ್ತು. 2020-21 ರಲ್ಲಿ ಬಿಡುಗಡೆ ಮಾಡಿದ ಮಧ್ಯಮಾವಧಿ ವಿತ್ತೀಯ ಯೋಜನೆ – 2020-2024 ರ ಪ್ರಕಾರ ಹೆಚ್ಚುವರಿ ರಾಜಸ್ವ ನಿರೀಕ್ಷೆಯಲ್ಲಿದ್ದ ರಾಜ್ಯ 2020-21 ರಲ್ಲೇ ದೊಡ್ಡ ಮಟ್ಟದ ರಾಜಸ್ವ ಕೊರತೆಯನ್ನು ಎದುರಿಸುತ್ತಿದೆ ಎಂದು ಹೇಳಿದರು.

2022-23 ರಿಂದ ಜಿ.ಎಸ್.ಟಿ. ಪರಿಹಾರ ಸ್ಥಗಿತಗೊಳ್ಳುವುದರಿಂದ ಇದರ ಜೊತೆಗೆ ರೂ.30,743 ಕೋಟಿ ರಾಜಸ್ವ ಕೊರತೆಯಾಗಲಿದೆ ಎಂದು ಅಂದಾಜು ಮಾಡಲಾಗಿದೆ. 2023-24 ರಲ್ಲಿ ಈ ರಾಜಸ್ವ ಕೊರತೆಯು ರೂ.46,831 ಕೋಟಿಯಾಗಲಿದೆ. 2020-21 ರಲ್ಲಿ ರೂ.70,411 ಕೋಟಿ ಸಾಲ ಮಾಡಿದೆ. 2019-20 ರವರೆಗೆ ರೂ.3,27,209 ಕೋಟಿ ಸಾಲ ರಾಜ್ಯದ ಮೇಲಿತ್ತು. ನಮ್ಮ ಸರ್ಕಾರದ ಅಂತಿಮ ವರ್ಷದಲ್ಲಿ (2017-18)ರಲ್ಲಿ ರೂ.2,42,420 ಕೋಟಿ ಸಾಲ ಮಾಡಲಾಗಿತ್ತು. ಜಿ.ಎಸ್.ಡಿ.ಪಿಯ ಮೇಲೆ ಸಾಲದ ಪ್ರಮಾಣ ಶೇ.18.93 ಇತ್ತು. 2020-21 ರ ಫೆಬ್ರವರಿ ಅಂತ್ಯಕ್ಕೆ ರಾಜ್ಯದ ಸಾಲ ರೂ.3,97,881 ಕೋಟಿ ಇದೆ. ಮುಂದಿನ ವರ್ಷಕ್ಕೆ ರೂ.4,57,889 ಕೋಟಿಗಳಷ್ಟು ಸಾಲ ರಾಜ್ಯದ ಜನರ ಮೇಲೆ ಇರುತ್ತದೆ ಎಂದು ಅಂದಾಜಿಸಲಾಗಿದೆ. ಇದು ಜಿ.ಎಸ್.ಡಿ.ಪಿ.ಯ ಶೇ.26.9 ರಷ್ಟು ಆಗಿದೆ. ಎಫ್.ಆರ್.ಬಿ.ಎಂ. ಕಾಯ್ದೆಯ ನಿಯಮದ ಪ್ರಕಾರ ಜಿ.ಎಸ್.ಡಿ.ಪಿಯ ಶೇ.25 ರಷ್ಟು ಕಡಿಮೆ ಇರಬೇಕು. 5 ವರ್ಷದ ನಮ್ಮ ಸರ್ಕಾರವು ಅದು ಶೇ.20 ರ ಆಸುಪಾಸಿನಲ್ಲಿ ಇತ್ತು ಎಂದು ವಿವರಿಸಿದರು.

ಇದನ್ನೂ ಓದಿ: ಮಹಿಳಾ ದಿನಾಚರಣೆಯ ದಿನವೇ ಪೊದೆಯಲ್ಲಿ ಪತ್ತೆಯಾದ ನವಜಾತ ಹೆಣ್ಣುಮಗು!

ರಾಜಸ್ವ ಆದಾಯವು ಕಳೆದ ಬಜೆಟ್ ಅಂದಾಜಿಗಿಂತ ಈ ವರ್ಷದ ಅಂದಾಜಿನಲ್ಲಿ ಸುಮಾರು ರೂ.7,000 ಕೋಟಿಯಷ್ಟು ಕಡಿಮೆಯಾಗಿದೆ. ಕಳೆದ ಬಜೆಟ್‍ನ ಅಂದಾಜು ಮತ್ತು ಪರಿಷ್ಕೃತ ರಾಜಸ್ವ ಸ್ವೀಕೃತಿಯಲ್ಲಿ ರೂ.20,000 ಕೋಟಿಯಷ್ಟು ಕಡಿಮೆಯಾಗಿದೆ. ಕೇಂದ್ರ ಸರ್ಕಾರದ ತೆರಿಗೆ ಹಂಚಿಕೆ ಮತ್ತು ಅನುದಾನದ ಕೊರತೆಯೇ ಇದಕ್ಕೆ ಹೊಣೆ. 2020-21 ರ ಪರಿಷ್ಕೃತ ವೆಚ್ಚವು ರೂ.2,29,924.73 ಕೋಟಿ ಇರುತ್ತದೆ ಎಂದು ಅಂದಾಜಿಸಲಾಗಿದೆ. ಇದು ಬಜೆಟ್‍ನ ಅಂದಾಜಿಗಿಂತ ರೂ.8,000 ಕೋಟಿಯಷ್ಟು ಕಡಿಮೆಯಾಗಿದೆ ಎಂದು ಹೇಳಿದರು.

2020-21 ರಲ್ಲಿ ರೂ.2,37,893 ಕೋಟಿಗಳಷ್ಟು ಬಜೆಟ್ ಅನ್ನು ಮಂಡಿಸಿದ್ದರೂ ಕಡೆಯದಾಗಿ ಇಲಾಖೆಗಳಿಗೆ ನೀಡಲು ಉದ್ದೇಶಿಸಿದ್ದ ಮೊತ್ತ ರೂ.1,96,369.2 ಕೋಟಿ. ಅದರಲ್ಲಿ ಹಳೆಯ ಬಾಕಿ ರೂ.13,491.7 ಕೋಟಿ. ಒಟ್ಟಿಗೆ ಸೇರಿ ಖರ್ಚು ಮಾಡಲು ಲಭ್ಯವಿದ್ದ ಅನುದಾನ ರೂ.2,09,860 ಕೋಟಿ. ಇಲಾಖೆಗಳಿಗೆ ಜನವರಿಯವರೆಗೆ ಬಿಡುಗಡೆ ಮಾಡಿದ್ದು ರೂ.1,42,851 ಕೋಟಿ. ಖರ್ಚಾಗಿರುವುದು ರೂ.1,30,998 ಕೋಟಿ ಮಾತ್ರ. 2020-21 ರಲ್ಲಿ ರೂ.2,37,893 ಕೋಟಿಯನ್ನು ಪರಿಷ್ಕರಿಸಿ ರೂ.2,29,925 ಕೋಟಿಗಳಿಗೆ ಇಳಿಸಿಕೊಂಡರು ಎಂದು ಹೇಳಿದ್ದಾರೆ.

ಕೊರೋನಾ ನಿರ್ವಹಣೆಗಾಗಿ ರೂ.5,372 ಕೋಟಿ ಖರ್ಚು ಮಾಡಿಯೂ ಒಟ್ಟು ಖರ್ಚು ಅವರ ಬಜೆಟ್ ಅಂದಾಜಿಗಿಂತ ಕಡಿಮೆಯಿದೆ. ಇದರಲ್ಲಿ ಇಲಾಖೆಗಳಿಗೆ ಖರ್ಚು ಮಾಡಲು ಸಿಕ್ಕಿದ್ದು ರೂ.1,96,369 ಕೋಟಿ. ಇನ್ನು ಉಳಿದ ರೂ.33,556 ಕೋಟಿಗಳು ಸಾಲ ಮರುಪಾವತಿ ಮತ್ತು ಬಡ್ಡಿ ಪಾವತಿಗೆ ಖರ್ಚಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು 2021-22 ರಲ್ಲಿ ಜಿ.ಡಿ.ಪಿ.ಯು ಶೇ.11 ರಷ್ಟು ಬೆಳವಣಿಗೆ ಕಾಣುವುದಾಗಿ ಹೇಳಿಕೊಳ್ಳುತ್ತಿದ್ದಾರೆ. ಆದರೆ ರಾಜ್ಯದ ಸ್ವಂತ ತೆರಿಗೆಗಳ ಸಂಗ್ರಹಗಳ ಗುರಿಯು 2020-21 ರ ಮೂಲ ಬಜೆಟ್‍ಗೆ ಹೋಲಿಸಿದರೆ ಶೇ.3.12 ರಷ್ಟು ಕಡಿಮೆಯಾಗಿದೆ ಎಂದು ಆರೋಪಿಸಿದ್ದಾರೆ.

ಕೇಂದ್ರದ ತೆರಿಗೆ ಪಾಲು 2020-21ರ ಮೂಲ ಬಜೆಟ್‍ನಲ್ಲಿ ರೂ.28,591.23 ಕೋಟಿ ನಿರೀಕ್ಷೆ ಮಾಡಲಾಗಿತ್ತು. 2021-22 ರ ಆಯವ್ಯಯದಲ್ಲಿ ಇದು ರೂ.24,273.6 ಕೋಟಿಗೆ ಇಳಿಯಲಿದೆ. ರೂ.4,318 ಕೋಟಿಗಳಷ್ಟು ಕಡಿಮೆಯಾಗಿದೆ. ಅಂದರೆ ಶೇ.15 ರಷ್ಟು ಕಡಿಮೆಯಾಗಿದೆ. ದೇಶದ ಜಿ.ಡಿ.ಪಿ.ಯು ಶೇ.11 ಕ್ಕೂ ಹೆಚ್ಚು ಪ್ರಗತಿಯಾಗುವುದಾದರೆ ನಮಗೆ ನೀಡಬೇಕಾದ ತೆರಿಗೆ ಹಂಚಿಕೆಯೂ ಅಷ್ಟೇ ಪ್ರಮಾಣದಲ್ಲಿ ಹೆಚ್ಚಾಗಿ ರಾಜ್ಯಕ್ಕೆ ದೊಡ್ಡ ಪ್ರಮಾಣದಲ್ಲಿ ಆದಾಯ ಬರಬೇಕಿತ್ತು ಅಲ್ಲವೇ? ಕೇಂದ್ರ ಮತ್ತು ರಾಜ್ಯಗಳಲ್ಲಿನ ಎರಡೂ ಬಿ.ಜೆ.ಪಿ. ಸರ್ಕಾರಗಳು ಜನರ ತಲೆಗೆ ಟೋಪಿ ಹಾಕುತ್ತಿವೆ ಎಂದು ವ್ಯಂಗ್ಯವಾಡಿದ್ದಾರೆ.

ರಾಜ್ಯ ಬಜೆಟ್‌ನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್‌ ಮೇಲೆ ವಿಧಿಸಲಾಗುತ್ತಿದ್ದ ಮಾರಾಟ ತೆರಿಗೆಯನ್ನು ಕಡಿಮೆ ಮಾಡುವ ಮೂಲಕ ಜನರಿಗೆ ನೆರವಾಗಬೇಕಿತ್ತು ಹಾಗೂ ಕೇಂದ್ರ ಸರ್ಕಾರದ ಮೇಲೆ ತೆರಿಗೆ ಕಡಿತಗೊಳಿಸುವಂತೆ ಒತ್ತಡ ಹೇರಬೇಕಿತ್ತು. ಈ ಅಂಶಗಳೇ ಇಂದಿನ ಬಜೆಟ್‌ನಲ್ಲಿ ಇಲ್ಲ ಎಂದು ಹೇಳಿದ್ದಾರೆ.


ಇದನ್ನೂ ಓದಿ: ‘ಜಿಹಾದ್’‌ಗೆ ಕಾರಣವಾಗುವ ಎಲ್ಲ ‘ಲವ್‌’ಗೂ ವಿರೋಧ: ಮಧ್ಯಪ್ರದೇಶ ಗೃಹ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...