Homeಕರ್ನಾಟಕಉತ್ತರ ಕನ್ನಡದಲ್ಲಿ ತರಕಾರಿ ದುಬಾರಿ; ಕೃಷಿಕ-ಗ್ರಾಹಕ ಕಂಗಾಲು

ಉತ್ತರ ಕನ್ನಡದಲ್ಲಿ ತರಕಾರಿ ದುಬಾರಿ; ಕೃಷಿಕ-ಗ್ರಾಹಕ ಕಂಗಾಲು

- Advertisement -
- Advertisement -

ಅಕಾಲಿಕ ಮಳೆಯಿಂದ ಭತ್ತ, ಗೋವಿನಜೋಳ, ಹತ್ತಿ, ಕಬ್ಬು, ಅಡಿಕೆ ನೀರುಪಾಲಾಗಿ ರೈತರ ಬದುಕು ಮೂರಾಬಟ್ಟೆಯಾಗಿದ್ದರೆ, ಮತ್ತೊಂದೆಡೆ ತರಕಾರಿ ಬಳೆದು ಬದುಕತ್ತಿದ್ದ ಕೃಷಿಕರ ಕೈಗೆ ಫಸಲು ಸಿಗದಂತಾಗಿದೆ. ನಿರಂತರ ಮಳೆಯ ಮಧ್ಯೆ ಅಳಿದುಳಿದ ತರಕಾರಿ ಮಾರುಕಟ್ಟೆಗೆ ಬರುತ್ತಿದ್ದು ಗಣಮಟ್ಟ ಇಲ್ಲದಾಗಿದೆ. ಇದರಿಂದಾಗಿ ಸಾಮಾನ್ಯವಾಗಿ ಎಲ್ಲ ತರಕಾರಿ ವಿಪರೀತ ತುಟ್ಟಿಯಾಗಿದ್ದು, ಕೃಷಿಕ ಮತ್ತು ಗ್ರಾಹಕ ಇಬ್ಬರ ಕಣ್ಣಲ್ಲೂ ನೀರು ತರಿಸುತ್ತಿದೆ!

ಅನಾಹುತಕಾರಿ ಮಳೆಗೆ ವಿಶೇಷವಾಗಿ ಟೊಮೊಟೊ ಬೆಳೆ ನೆಲ ಕಚ್ಚಿದ್ದು, ಇದ್ದರಿಂದಾಗಿ ಒಂದು ಕೆಜಿ.ಗೆ 80 ರಿಂದ 100ರೂ ಕೊಡಬೇಕಾಗಿದೆ. ಟೊಮೇಟೊದಂತೆ ಉಳಿದ ಕಾಯಿ-ಪಲ್ಲೆ ದರವೂ ಏರಿಕೆಯಾಗಿದೆ. ಇದು ಮಧ್ಯಮ ವರ್ಗದ ಬದುಕನ್ನು ದುರ್ಬರಗೊಳಿಸಿಬಿಟ್ಟಿದೆ. ಉತ್ತರ ಕನ್ನಡಕ್ಕೆ ಪಕ್ಕದ ಧಾರವಾಡ, ಬೆಳಗಾವಿ, ಹಾವೇರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಂದ ತರಕಾರಿ-ಟೊಮೇಟೊ ಸರಬರಾಜಾಗುತ್ತದೆ. ಅಲ್ಲೆಲ್ಲ ಮಳೆಯ ಹೊಡೆತಕ್ಕೆ ತರಕಾರಿ ಬೆಳೆ ನಾಶವಾಗಿದೆ. ಇದರಿಂದಾಗಿ ಜಿಲ್ಲೆಯ ತರಕಾರಿ ಮಾರುಕಟ್ಟೆ ಮೇಲೆ ವ್ಯತಿರಿಕ್ತ ಪರಿಣಾಮವಾಗಿದ್ದು, ಗ್ರಾಹಕ ತರಕಾರಿ ಬೆಲೆಯೇರಿಕೆಗೆ ಬೆಚ್ಚಿಬಿದ್ದಿದ್ದಾನೆ!

ಎರಡು ವಾರದ ಹಿಂದೆ ಇದ್ದಕ್ಕಿದಂತೆ ಟೊಮೊಟೊ ದರ ಕೆಜಿಗೆ 100 ರೂ.ದಾಟಿತ್ತು. ನಂತರದ ವಾರದಲ್ಲಿ 40 ರಿಂದ 60 ರೂ.ಗೆ ಇಳಿದಿತ್ತು. ಈಗ ಮತ್ತೆ 70 ರಿಂದ 80 ರೂಗೆ ಏರಿಕೆಯಾಗಿದೆ. ಜತೆಗೆ ಬೇರೆಬೇರೆ ಕಾಯಿ-ಪಲ್ಲೆಯೂ 60 ರಿಂದ 80ರ ಆಸುಪಾಸಿನಲ್ಲೆ ಗಿರಕಿ ಹೊಡೆಯುತ್ತಿರುವುದು ಎಲ್ಲ ವರ್ಗದ ಗ್ರಾಹಕರನ್ನು ದಿಕ್ಕೆಡಿಸಿದೆ. ಅಲ್ಪ-ಸ್ವಲ್ಪ ಏರಿಕೆಯಾದರೆ ಹೇಗಾದರೂ ಸಂಬಾಳಿಸಿ ಕಾಲ ಕಳೆಯಬಹುದು; ಆದರೆ ಈ ರೀತಿ 4-6 ಪಟ್ಟು ದುಬಾರಿಯಾದರೆ ಬದುಕುವುದಾದರೂ ಹೇಗೆ? ಎಂದು ಜನರು ಹೇಳುತ್ತಾರೆ. ನಮಗೇನೂ ಸಂಬಳ-ಕೂಲಿ ಹೆಚ್ಚಾಗಿಲ್ಲ. ದಿನಸಿ, ತರಕಾರಿ ಬೆಲೆ ಮಾತ್ರ ಒಂದೇ ಸಮನೆ ಗಗನಕ್ಕೆ ನೇಗೆಯುತ್ತಿದೆಯೆಂದು ಅಂದಿನ ತುತ್ತು ಅಂದು ಗಳಿಸಿ ತಿನ್ನುವ ಮಂದಿ ಗೋಗರೆಯುತ್ತಾರೆ!

ಇಷ್ಟೇಕೆ ತರಕಾರಿ ದರ ಏರಿಕೆಯಾಗುತ್ತಿದೆ. ನೀವು ಹೇಗೆ ಖರೀದಿಸಲು ಸಾಧ್ಯವಾಗುತ್ತದೆ ಎಂದು ತರಕಾರಿ ವ್ಯಾಪಾರಿಗಳನ್ನು ಕೇಳಿದರೆ, ತರಕಾರಿ ಬೆಳೆಯುವ ಹತ್ತಿರದ ಪ್ರದೇಶಗಳಲ್ಲಿನ ನಿರಂತರ ಅಕಾಲಿಕ ಮಳೆ ಹಾವಳಿಯಿಂದ ಟೊಮ್ಯಾಟೊ ಗಿಡಗಳು ಮತ್ತಿತರ ತರಕಾರಿ ಫಸಲು ಕೊಳೆತುಹೋಗಿದೆ. ದೂರದ ನಾಸಿಕ್‌ನಿಂದ ಟೊಮ್ಯಾಟೊ ತರಿಸುತ್ತಿದ್ದೇವೆ. ಹಾಗಾಗಿ ಸಾಗಾಣಿಕಾ ವೆಚ್ಚ ಮತ್ತು ದುಬಾರಿ ಖರೀದಿಯಿಂದ ತುಟ್ಟಿ ಮಾರದಿದ್ದರೆ ನಮಗೇನು ಗಿಟ್ಟುವುದಿಲ್ಲ ಎಂದು ಬೇಸರದಿಂದಲೆ ಹೇಳುತ್ತಾರೆ. ಮಹಾರಾಷ್ಟ್ರ ಕಡೆಯಿಂದ ಜಿಲ್ಲೆಗೆ ಪ್ರತಿ ದಿನ ಟನ್‌ಗಟ್ಟಲೆ ಟೊಮೇಟೊ ಬರುತ್ತಿದ್ದು ದರವೂ ಗಾಬರಿ ಹುಟ್ಟಿಸುವಂತಿದೆ.

ಉತ್ತರ ಕನ್ನಡಕ್ಕೆ ಹೊರ ಜಿಲ್ಲೆಗಳಿಂದ ಬರುವ ತರಕಾರಿ ಬೆಲೆ ಸದ್ಯಕ್ಕೆ ಚೇತರಿಸಿಕೊಳ್ಳುವ ಸಾಧ್ಯತೆ ಕಾಣಿಸುತ್ತಿಲ್ಲ. ಹಾಗಂತ ಗೋಕರ್ಣ ಸೀಮೆಯ ತರಕಾರಿ ತಾಜಾ ಮತ್ತು ಸ್ವಲ್ಪ ಕಡಿಮೆ ಬೆಲೆಗೆ ಸಿಗತ್ತಿದೆ. ಆ ಭಾಗದ ಹಾಲಕ್ಕಿ ಒಕ್ಕಲು ಬುಡಕಟ್ಟಿನ ಮಂದಿ ಮತ್ತಿತರ ಸಮುದಾಯದವರು ತರಕಾರಿ ಬೆಳೆಯುತ್ತಿದ್ದು ಅದಕ್ಕೆ ವಿಶೇಷ ಬೇಡಿಕೆಯಿದೆ. ಆದರೆ ಜಿಲ್ಲೆಯ ಬೇಡಿಕೆ ಪೂರೈಸುವಷ್ಟು ಪ್ರಮಾಣದಲ್ಲಿ ಗೋಕರ್ಣ ಸೀಮೆಯಲ್ಲಿ ತರಕಾರಿ ಬೆಳೆಯಿಲ್ಲ. ಕೃಷಿ ಮತ್ತು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳಿಯ ಶಾಸಕರು ಒಳ್ಳೆಯ ಗುಣಮಟ್ಟದ ಗೋಕರ್ಣ ಸೀಮೆ ತರಕಾರಿ ಕೃಷಿ ವಿಸ್ತರಣೆಗೆ ಯೋಚಿಸಬೇಕಿದೆಯೆಂಬ ಆಗ್ರಹ ಬಹಳ ಹಿಂದಿನದು. ಈ ದುಬಾರಿ ದಿನಮಾನದಲ್ಲಿ ಗೋಕರ್ಣ ಸೀಮೆ ತರಕಾರಿ ಕ್ಷೇತ್ರ ವಿಸ್ತರಣೆ ಪ್ರೋತ್ಸಾಹಿಸುವ ಅಗತ್ಯದ ಮಾತು ಮತ್ತೆ ಕೇಳಿ ಬರುತ್ತಿದೆ.

ಉತ್ತರ ಕನ್ನಡದ ತರಕಾರಿ ದರ (ಪ್ರತಿ ಕೆಜಿಗೆ)
ಚವಳಿ : 80ರೂ.
ತೊಂಡೆಕಾಯಿ : 30-50ರೂ
ಬೀಟ್ರೂಟ್ : 40-50ರೂ
ಬೆಂಡೆಕಾಯಿ : 60-70ರೂ
ಬೀನ್ಸ್ : 100-120ರೂ
ಹಾಗಲಕಾಯಿ : 80ರೂ.
ಹಸಿ ಮೆಣಸು : 60ರೂ
ನವಿಲುಕೋಸ್ : 60ರೂ

ನುಗ್ಗೆಕಾಯಿ : 100ರೂ
ಬದನೆಕಾಯಿ : 80ರೂ
ಟೊಮ್ಯಾಟೊ : 70-80ರೂ
ಈರುಳ್ಳಿ: 40-50ರೂ
ಬಟಾಣಿ : 30ರೂ
ಹೀರೆಕಾಯಿ : 60ರೂ
ಕ್ಯಾರೇಟ್ : 80ರೂ
ಸೌತೆಕಾಯಿ : 70ರೂ
ಹರಗಿ-1 ಕಟ್ಟು : 10ರೂ
ಬಸಳೆ-1ಕಟ್ಟು : 40ರೂ


ಇದನ್ನೂ ಓದಿ: ಟೊಮಟೊ ಟ್ರಾಲ್‌: ‘ಬೆಲೆ ಏರಿಕೆಕಂಡು ತರಹೇವಾರಿ ಮೀಮ್ಸ್ಸೃಷ್ಟಿ; ನೋಡಿ ನಕ್ಕುಬಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...