Homeಕರ್ನಾಟಕಉತ್ತರ ಕನ್ನಡದಲ್ಲಿ ತರಕಾರಿ ದುಬಾರಿ; ಕೃಷಿಕ-ಗ್ರಾಹಕ ಕಂಗಾಲು

ಉತ್ತರ ಕನ್ನಡದಲ್ಲಿ ತರಕಾರಿ ದುಬಾರಿ; ಕೃಷಿಕ-ಗ್ರಾಹಕ ಕಂಗಾಲು

- Advertisement -
- Advertisement -

ಅಕಾಲಿಕ ಮಳೆಯಿಂದ ಭತ್ತ, ಗೋವಿನಜೋಳ, ಹತ್ತಿ, ಕಬ್ಬು, ಅಡಿಕೆ ನೀರುಪಾಲಾಗಿ ರೈತರ ಬದುಕು ಮೂರಾಬಟ್ಟೆಯಾಗಿದ್ದರೆ, ಮತ್ತೊಂದೆಡೆ ತರಕಾರಿ ಬಳೆದು ಬದುಕತ್ತಿದ್ದ ಕೃಷಿಕರ ಕೈಗೆ ಫಸಲು ಸಿಗದಂತಾಗಿದೆ. ನಿರಂತರ ಮಳೆಯ ಮಧ್ಯೆ ಅಳಿದುಳಿದ ತರಕಾರಿ ಮಾರುಕಟ್ಟೆಗೆ ಬರುತ್ತಿದ್ದು ಗಣಮಟ್ಟ ಇಲ್ಲದಾಗಿದೆ. ಇದರಿಂದಾಗಿ ಸಾಮಾನ್ಯವಾಗಿ ಎಲ್ಲ ತರಕಾರಿ ವಿಪರೀತ ತುಟ್ಟಿಯಾಗಿದ್ದು, ಕೃಷಿಕ ಮತ್ತು ಗ್ರಾಹಕ ಇಬ್ಬರ ಕಣ್ಣಲ್ಲೂ ನೀರು ತರಿಸುತ್ತಿದೆ!

ಅನಾಹುತಕಾರಿ ಮಳೆಗೆ ವಿಶೇಷವಾಗಿ ಟೊಮೊಟೊ ಬೆಳೆ ನೆಲ ಕಚ್ಚಿದ್ದು, ಇದ್ದರಿಂದಾಗಿ ಒಂದು ಕೆಜಿ.ಗೆ 80 ರಿಂದ 100ರೂ ಕೊಡಬೇಕಾಗಿದೆ. ಟೊಮೇಟೊದಂತೆ ಉಳಿದ ಕಾಯಿ-ಪಲ್ಲೆ ದರವೂ ಏರಿಕೆಯಾಗಿದೆ. ಇದು ಮಧ್ಯಮ ವರ್ಗದ ಬದುಕನ್ನು ದುರ್ಬರಗೊಳಿಸಿಬಿಟ್ಟಿದೆ. ಉತ್ತರ ಕನ್ನಡಕ್ಕೆ ಪಕ್ಕದ ಧಾರವಾಡ, ಬೆಳಗಾವಿ, ಹಾವೇರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಂದ ತರಕಾರಿ-ಟೊಮೇಟೊ ಸರಬರಾಜಾಗುತ್ತದೆ. ಅಲ್ಲೆಲ್ಲ ಮಳೆಯ ಹೊಡೆತಕ್ಕೆ ತರಕಾರಿ ಬೆಳೆ ನಾಶವಾಗಿದೆ. ಇದರಿಂದಾಗಿ ಜಿಲ್ಲೆಯ ತರಕಾರಿ ಮಾರುಕಟ್ಟೆ ಮೇಲೆ ವ್ಯತಿರಿಕ್ತ ಪರಿಣಾಮವಾಗಿದ್ದು, ಗ್ರಾಹಕ ತರಕಾರಿ ಬೆಲೆಯೇರಿಕೆಗೆ ಬೆಚ್ಚಿಬಿದ್ದಿದ್ದಾನೆ!

ಎರಡು ವಾರದ ಹಿಂದೆ ಇದ್ದಕ್ಕಿದಂತೆ ಟೊಮೊಟೊ ದರ ಕೆಜಿಗೆ 100 ರೂ.ದಾಟಿತ್ತು. ನಂತರದ ವಾರದಲ್ಲಿ 40 ರಿಂದ 60 ರೂ.ಗೆ ಇಳಿದಿತ್ತು. ಈಗ ಮತ್ತೆ 70 ರಿಂದ 80 ರೂಗೆ ಏರಿಕೆಯಾಗಿದೆ. ಜತೆಗೆ ಬೇರೆಬೇರೆ ಕಾಯಿ-ಪಲ್ಲೆಯೂ 60 ರಿಂದ 80ರ ಆಸುಪಾಸಿನಲ್ಲೆ ಗಿರಕಿ ಹೊಡೆಯುತ್ತಿರುವುದು ಎಲ್ಲ ವರ್ಗದ ಗ್ರಾಹಕರನ್ನು ದಿಕ್ಕೆಡಿಸಿದೆ. ಅಲ್ಪ-ಸ್ವಲ್ಪ ಏರಿಕೆಯಾದರೆ ಹೇಗಾದರೂ ಸಂಬಾಳಿಸಿ ಕಾಲ ಕಳೆಯಬಹುದು; ಆದರೆ ಈ ರೀತಿ 4-6 ಪಟ್ಟು ದುಬಾರಿಯಾದರೆ ಬದುಕುವುದಾದರೂ ಹೇಗೆ? ಎಂದು ಜನರು ಹೇಳುತ್ತಾರೆ. ನಮಗೇನೂ ಸಂಬಳ-ಕೂಲಿ ಹೆಚ್ಚಾಗಿಲ್ಲ. ದಿನಸಿ, ತರಕಾರಿ ಬೆಲೆ ಮಾತ್ರ ಒಂದೇ ಸಮನೆ ಗಗನಕ್ಕೆ ನೇಗೆಯುತ್ತಿದೆಯೆಂದು ಅಂದಿನ ತುತ್ತು ಅಂದು ಗಳಿಸಿ ತಿನ್ನುವ ಮಂದಿ ಗೋಗರೆಯುತ್ತಾರೆ!

ಇಷ್ಟೇಕೆ ತರಕಾರಿ ದರ ಏರಿಕೆಯಾಗುತ್ತಿದೆ. ನೀವು ಹೇಗೆ ಖರೀದಿಸಲು ಸಾಧ್ಯವಾಗುತ್ತದೆ ಎಂದು ತರಕಾರಿ ವ್ಯಾಪಾರಿಗಳನ್ನು ಕೇಳಿದರೆ, ತರಕಾರಿ ಬೆಳೆಯುವ ಹತ್ತಿರದ ಪ್ರದೇಶಗಳಲ್ಲಿನ ನಿರಂತರ ಅಕಾಲಿಕ ಮಳೆ ಹಾವಳಿಯಿಂದ ಟೊಮ್ಯಾಟೊ ಗಿಡಗಳು ಮತ್ತಿತರ ತರಕಾರಿ ಫಸಲು ಕೊಳೆತುಹೋಗಿದೆ. ದೂರದ ನಾಸಿಕ್‌ನಿಂದ ಟೊಮ್ಯಾಟೊ ತರಿಸುತ್ತಿದ್ದೇವೆ. ಹಾಗಾಗಿ ಸಾಗಾಣಿಕಾ ವೆಚ್ಚ ಮತ್ತು ದುಬಾರಿ ಖರೀದಿಯಿಂದ ತುಟ್ಟಿ ಮಾರದಿದ್ದರೆ ನಮಗೇನು ಗಿಟ್ಟುವುದಿಲ್ಲ ಎಂದು ಬೇಸರದಿಂದಲೆ ಹೇಳುತ್ತಾರೆ. ಮಹಾರಾಷ್ಟ್ರ ಕಡೆಯಿಂದ ಜಿಲ್ಲೆಗೆ ಪ್ರತಿ ದಿನ ಟನ್‌ಗಟ್ಟಲೆ ಟೊಮೇಟೊ ಬರುತ್ತಿದ್ದು ದರವೂ ಗಾಬರಿ ಹುಟ್ಟಿಸುವಂತಿದೆ.

ಉತ್ತರ ಕನ್ನಡಕ್ಕೆ ಹೊರ ಜಿಲ್ಲೆಗಳಿಂದ ಬರುವ ತರಕಾರಿ ಬೆಲೆ ಸದ್ಯಕ್ಕೆ ಚೇತರಿಸಿಕೊಳ್ಳುವ ಸಾಧ್ಯತೆ ಕಾಣಿಸುತ್ತಿಲ್ಲ. ಹಾಗಂತ ಗೋಕರ್ಣ ಸೀಮೆಯ ತರಕಾರಿ ತಾಜಾ ಮತ್ತು ಸ್ವಲ್ಪ ಕಡಿಮೆ ಬೆಲೆಗೆ ಸಿಗತ್ತಿದೆ. ಆ ಭಾಗದ ಹಾಲಕ್ಕಿ ಒಕ್ಕಲು ಬುಡಕಟ್ಟಿನ ಮಂದಿ ಮತ್ತಿತರ ಸಮುದಾಯದವರು ತರಕಾರಿ ಬೆಳೆಯುತ್ತಿದ್ದು ಅದಕ್ಕೆ ವಿಶೇಷ ಬೇಡಿಕೆಯಿದೆ. ಆದರೆ ಜಿಲ್ಲೆಯ ಬೇಡಿಕೆ ಪೂರೈಸುವಷ್ಟು ಪ್ರಮಾಣದಲ್ಲಿ ಗೋಕರ್ಣ ಸೀಮೆಯಲ್ಲಿ ತರಕಾರಿ ಬೆಳೆಯಿಲ್ಲ. ಕೃಷಿ ಮತ್ತು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳಿಯ ಶಾಸಕರು ಒಳ್ಳೆಯ ಗುಣಮಟ್ಟದ ಗೋಕರ್ಣ ಸೀಮೆ ತರಕಾರಿ ಕೃಷಿ ವಿಸ್ತರಣೆಗೆ ಯೋಚಿಸಬೇಕಿದೆಯೆಂಬ ಆಗ್ರಹ ಬಹಳ ಹಿಂದಿನದು. ಈ ದುಬಾರಿ ದಿನಮಾನದಲ್ಲಿ ಗೋಕರ್ಣ ಸೀಮೆ ತರಕಾರಿ ಕ್ಷೇತ್ರ ವಿಸ್ತರಣೆ ಪ್ರೋತ್ಸಾಹಿಸುವ ಅಗತ್ಯದ ಮಾತು ಮತ್ತೆ ಕೇಳಿ ಬರುತ್ತಿದೆ.

ಉತ್ತರ ಕನ್ನಡದ ತರಕಾರಿ ದರ (ಪ್ರತಿ ಕೆಜಿಗೆ)
ಚವಳಿ : 80ರೂ.
ತೊಂಡೆಕಾಯಿ : 30-50ರೂ
ಬೀಟ್ರೂಟ್ : 40-50ರೂ
ಬೆಂಡೆಕಾಯಿ : 60-70ರೂ
ಬೀನ್ಸ್ : 100-120ರೂ
ಹಾಗಲಕಾಯಿ : 80ರೂ.
ಹಸಿ ಮೆಣಸು : 60ರೂ
ನವಿಲುಕೋಸ್ : 60ರೂ

ನುಗ್ಗೆಕಾಯಿ : 100ರೂ
ಬದನೆಕಾಯಿ : 80ರೂ
ಟೊಮ್ಯಾಟೊ : 70-80ರೂ
ಈರುಳ್ಳಿ: 40-50ರೂ
ಬಟಾಣಿ : 30ರೂ
ಹೀರೆಕಾಯಿ : 60ರೂ
ಕ್ಯಾರೇಟ್ : 80ರೂ
ಸೌತೆಕಾಯಿ : 70ರೂ
ಹರಗಿ-1 ಕಟ್ಟು : 10ರೂ
ಬಸಳೆ-1ಕಟ್ಟು : 40ರೂ


ಇದನ್ನೂ ಓದಿ: ಟೊಮಟೊ ಟ್ರಾಲ್‌: ‘ಬೆಲೆ ಏರಿಕೆಕಂಡು ತರಹೇವಾರಿ ಮೀಮ್ಸ್ಸೃಷ್ಟಿ; ನೋಡಿ ನಕ್ಕುಬಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...