Homeಕರ್ನಾಟಕಉತ್ತರ ಕನ್ನಡದಲ್ಲಿ ತರಕಾರಿ ದುಬಾರಿ; ಕೃಷಿಕ-ಗ್ರಾಹಕ ಕಂಗಾಲು

ಉತ್ತರ ಕನ್ನಡದಲ್ಲಿ ತರಕಾರಿ ದುಬಾರಿ; ಕೃಷಿಕ-ಗ್ರಾಹಕ ಕಂಗಾಲು

- Advertisement -
- Advertisement -

ಅಕಾಲಿಕ ಮಳೆಯಿಂದ ಭತ್ತ, ಗೋವಿನಜೋಳ, ಹತ್ತಿ, ಕಬ್ಬು, ಅಡಿಕೆ ನೀರುಪಾಲಾಗಿ ರೈತರ ಬದುಕು ಮೂರಾಬಟ್ಟೆಯಾಗಿದ್ದರೆ, ಮತ್ತೊಂದೆಡೆ ತರಕಾರಿ ಬಳೆದು ಬದುಕತ್ತಿದ್ದ ಕೃಷಿಕರ ಕೈಗೆ ಫಸಲು ಸಿಗದಂತಾಗಿದೆ. ನಿರಂತರ ಮಳೆಯ ಮಧ್ಯೆ ಅಳಿದುಳಿದ ತರಕಾರಿ ಮಾರುಕಟ್ಟೆಗೆ ಬರುತ್ತಿದ್ದು ಗಣಮಟ್ಟ ಇಲ್ಲದಾಗಿದೆ. ಇದರಿಂದಾಗಿ ಸಾಮಾನ್ಯವಾಗಿ ಎಲ್ಲ ತರಕಾರಿ ವಿಪರೀತ ತುಟ್ಟಿಯಾಗಿದ್ದು, ಕೃಷಿಕ ಮತ್ತು ಗ್ರಾಹಕ ಇಬ್ಬರ ಕಣ್ಣಲ್ಲೂ ನೀರು ತರಿಸುತ್ತಿದೆ!

ಅನಾಹುತಕಾರಿ ಮಳೆಗೆ ವಿಶೇಷವಾಗಿ ಟೊಮೊಟೊ ಬೆಳೆ ನೆಲ ಕಚ್ಚಿದ್ದು, ಇದ್ದರಿಂದಾಗಿ ಒಂದು ಕೆಜಿ.ಗೆ 80 ರಿಂದ 100ರೂ ಕೊಡಬೇಕಾಗಿದೆ. ಟೊಮೇಟೊದಂತೆ ಉಳಿದ ಕಾಯಿ-ಪಲ್ಲೆ ದರವೂ ಏರಿಕೆಯಾಗಿದೆ. ಇದು ಮಧ್ಯಮ ವರ್ಗದ ಬದುಕನ್ನು ದುರ್ಬರಗೊಳಿಸಿಬಿಟ್ಟಿದೆ. ಉತ್ತರ ಕನ್ನಡಕ್ಕೆ ಪಕ್ಕದ ಧಾರವಾಡ, ಬೆಳಗಾವಿ, ಹಾವೇರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಂದ ತರಕಾರಿ-ಟೊಮೇಟೊ ಸರಬರಾಜಾಗುತ್ತದೆ. ಅಲ್ಲೆಲ್ಲ ಮಳೆಯ ಹೊಡೆತಕ್ಕೆ ತರಕಾರಿ ಬೆಳೆ ನಾಶವಾಗಿದೆ. ಇದರಿಂದಾಗಿ ಜಿಲ್ಲೆಯ ತರಕಾರಿ ಮಾರುಕಟ್ಟೆ ಮೇಲೆ ವ್ಯತಿರಿಕ್ತ ಪರಿಣಾಮವಾಗಿದ್ದು, ಗ್ರಾಹಕ ತರಕಾರಿ ಬೆಲೆಯೇರಿಕೆಗೆ ಬೆಚ್ಚಿಬಿದ್ದಿದ್ದಾನೆ!

ಎರಡು ವಾರದ ಹಿಂದೆ ಇದ್ದಕ್ಕಿದಂತೆ ಟೊಮೊಟೊ ದರ ಕೆಜಿಗೆ 100 ರೂ.ದಾಟಿತ್ತು. ನಂತರದ ವಾರದಲ್ಲಿ 40 ರಿಂದ 60 ರೂ.ಗೆ ಇಳಿದಿತ್ತು. ಈಗ ಮತ್ತೆ 70 ರಿಂದ 80 ರೂಗೆ ಏರಿಕೆಯಾಗಿದೆ. ಜತೆಗೆ ಬೇರೆಬೇರೆ ಕಾಯಿ-ಪಲ್ಲೆಯೂ 60 ರಿಂದ 80ರ ಆಸುಪಾಸಿನಲ್ಲೆ ಗಿರಕಿ ಹೊಡೆಯುತ್ತಿರುವುದು ಎಲ್ಲ ವರ್ಗದ ಗ್ರಾಹಕರನ್ನು ದಿಕ್ಕೆಡಿಸಿದೆ. ಅಲ್ಪ-ಸ್ವಲ್ಪ ಏರಿಕೆಯಾದರೆ ಹೇಗಾದರೂ ಸಂಬಾಳಿಸಿ ಕಾಲ ಕಳೆಯಬಹುದು; ಆದರೆ ಈ ರೀತಿ 4-6 ಪಟ್ಟು ದುಬಾರಿಯಾದರೆ ಬದುಕುವುದಾದರೂ ಹೇಗೆ? ಎಂದು ಜನರು ಹೇಳುತ್ತಾರೆ. ನಮಗೇನೂ ಸಂಬಳ-ಕೂಲಿ ಹೆಚ್ಚಾಗಿಲ್ಲ. ದಿನಸಿ, ತರಕಾರಿ ಬೆಲೆ ಮಾತ್ರ ಒಂದೇ ಸಮನೆ ಗಗನಕ್ಕೆ ನೇಗೆಯುತ್ತಿದೆಯೆಂದು ಅಂದಿನ ತುತ್ತು ಅಂದು ಗಳಿಸಿ ತಿನ್ನುವ ಮಂದಿ ಗೋಗರೆಯುತ್ತಾರೆ!

ಇಷ್ಟೇಕೆ ತರಕಾರಿ ದರ ಏರಿಕೆಯಾಗುತ್ತಿದೆ. ನೀವು ಹೇಗೆ ಖರೀದಿಸಲು ಸಾಧ್ಯವಾಗುತ್ತದೆ ಎಂದು ತರಕಾರಿ ವ್ಯಾಪಾರಿಗಳನ್ನು ಕೇಳಿದರೆ, ತರಕಾರಿ ಬೆಳೆಯುವ ಹತ್ತಿರದ ಪ್ರದೇಶಗಳಲ್ಲಿನ ನಿರಂತರ ಅಕಾಲಿಕ ಮಳೆ ಹಾವಳಿಯಿಂದ ಟೊಮ್ಯಾಟೊ ಗಿಡಗಳು ಮತ್ತಿತರ ತರಕಾರಿ ಫಸಲು ಕೊಳೆತುಹೋಗಿದೆ. ದೂರದ ನಾಸಿಕ್‌ನಿಂದ ಟೊಮ್ಯಾಟೊ ತರಿಸುತ್ತಿದ್ದೇವೆ. ಹಾಗಾಗಿ ಸಾಗಾಣಿಕಾ ವೆಚ್ಚ ಮತ್ತು ದುಬಾರಿ ಖರೀದಿಯಿಂದ ತುಟ್ಟಿ ಮಾರದಿದ್ದರೆ ನಮಗೇನು ಗಿಟ್ಟುವುದಿಲ್ಲ ಎಂದು ಬೇಸರದಿಂದಲೆ ಹೇಳುತ್ತಾರೆ. ಮಹಾರಾಷ್ಟ್ರ ಕಡೆಯಿಂದ ಜಿಲ್ಲೆಗೆ ಪ್ರತಿ ದಿನ ಟನ್‌ಗಟ್ಟಲೆ ಟೊಮೇಟೊ ಬರುತ್ತಿದ್ದು ದರವೂ ಗಾಬರಿ ಹುಟ್ಟಿಸುವಂತಿದೆ.

ಉತ್ತರ ಕನ್ನಡಕ್ಕೆ ಹೊರ ಜಿಲ್ಲೆಗಳಿಂದ ಬರುವ ತರಕಾರಿ ಬೆಲೆ ಸದ್ಯಕ್ಕೆ ಚೇತರಿಸಿಕೊಳ್ಳುವ ಸಾಧ್ಯತೆ ಕಾಣಿಸುತ್ತಿಲ್ಲ. ಹಾಗಂತ ಗೋಕರ್ಣ ಸೀಮೆಯ ತರಕಾರಿ ತಾಜಾ ಮತ್ತು ಸ್ವಲ್ಪ ಕಡಿಮೆ ಬೆಲೆಗೆ ಸಿಗತ್ತಿದೆ. ಆ ಭಾಗದ ಹಾಲಕ್ಕಿ ಒಕ್ಕಲು ಬುಡಕಟ್ಟಿನ ಮಂದಿ ಮತ್ತಿತರ ಸಮುದಾಯದವರು ತರಕಾರಿ ಬೆಳೆಯುತ್ತಿದ್ದು ಅದಕ್ಕೆ ವಿಶೇಷ ಬೇಡಿಕೆಯಿದೆ. ಆದರೆ ಜಿಲ್ಲೆಯ ಬೇಡಿಕೆ ಪೂರೈಸುವಷ್ಟು ಪ್ರಮಾಣದಲ್ಲಿ ಗೋಕರ್ಣ ಸೀಮೆಯಲ್ಲಿ ತರಕಾರಿ ಬೆಳೆಯಿಲ್ಲ. ಕೃಷಿ ಮತ್ತು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳಿಯ ಶಾಸಕರು ಒಳ್ಳೆಯ ಗುಣಮಟ್ಟದ ಗೋಕರ್ಣ ಸೀಮೆ ತರಕಾರಿ ಕೃಷಿ ವಿಸ್ತರಣೆಗೆ ಯೋಚಿಸಬೇಕಿದೆಯೆಂಬ ಆಗ್ರಹ ಬಹಳ ಹಿಂದಿನದು. ಈ ದುಬಾರಿ ದಿನಮಾನದಲ್ಲಿ ಗೋಕರ್ಣ ಸೀಮೆ ತರಕಾರಿ ಕ್ಷೇತ್ರ ವಿಸ್ತರಣೆ ಪ್ರೋತ್ಸಾಹಿಸುವ ಅಗತ್ಯದ ಮಾತು ಮತ್ತೆ ಕೇಳಿ ಬರುತ್ತಿದೆ.

ಉತ್ತರ ಕನ್ನಡದ ತರಕಾರಿ ದರ (ಪ್ರತಿ ಕೆಜಿಗೆ)
ಚವಳಿ : 80ರೂ.
ತೊಂಡೆಕಾಯಿ : 30-50ರೂ
ಬೀಟ್ರೂಟ್ : 40-50ರೂ
ಬೆಂಡೆಕಾಯಿ : 60-70ರೂ
ಬೀನ್ಸ್ : 100-120ರೂ
ಹಾಗಲಕಾಯಿ : 80ರೂ.
ಹಸಿ ಮೆಣಸು : 60ರೂ
ನವಿಲುಕೋಸ್ : 60ರೂ

ನುಗ್ಗೆಕಾಯಿ : 100ರೂ
ಬದನೆಕಾಯಿ : 80ರೂ
ಟೊಮ್ಯಾಟೊ : 70-80ರೂ
ಈರುಳ್ಳಿ: 40-50ರೂ
ಬಟಾಣಿ : 30ರೂ
ಹೀರೆಕಾಯಿ : 60ರೂ
ಕ್ಯಾರೇಟ್ : 80ರೂ
ಸೌತೆಕಾಯಿ : 70ರೂ
ಹರಗಿ-1 ಕಟ್ಟು : 10ರೂ
ಬಸಳೆ-1ಕಟ್ಟು : 40ರೂ


ಇದನ್ನೂ ಓದಿ: ಟೊಮಟೊ ಟ್ರಾಲ್‌: ‘ಬೆಲೆ ಏರಿಕೆಕಂಡು ತರಹೇವಾರಿ ಮೀಮ್ಸ್ಸೃಷ್ಟಿ; ನೋಡಿ ನಕ್ಕುಬಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...