Homeಕರ್ನಾಟಕಉತ್ತರ ಕನ್ನಡದಲ್ಲಿ ತರಕಾರಿ ದುಬಾರಿ; ಕೃಷಿಕ-ಗ್ರಾಹಕ ಕಂಗಾಲು

ಉತ್ತರ ಕನ್ನಡದಲ್ಲಿ ತರಕಾರಿ ದುಬಾರಿ; ಕೃಷಿಕ-ಗ್ರಾಹಕ ಕಂಗಾಲು

- Advertisement -
- Advertisement -

ಅಕಾಲಿಕ ಮಳೆಯಿಂದ ಭತ್ತ, ಗೋವಿನಜೋಳ, ಹತ್ತಿ, ಕಬ್ಬು, ಅಡಿಕೆ ನೀರುಪಾಲಾಗಿ ರೈತರ ಬದುಕು ಮೂರಾಬಟ್ಟೆಯಾಗಿದ್ದರೆ, ಮತ್ತೊಂದೆಡೆ ತರಕಾರಿ ಬಳೆದು ಬದುಕತ್ತಿದ್ದ ಕೃಷಿಕರ ಕೈಗೆ ಫಸಲು ಸಿಗದಂತಾಗಿದೆ. ನಿರಂತರ ಮಳೆಯ ಮಧ್ಯೆ ಅಳಿದುಳಿದ ತರಕಾರಿ ಮಾರುಕಟ್ಟೆಗೆ ಬರುತ್ತಿದ್ದು ಗಣಮಟ್ಟ ಇಲ್ಲದಾಗಿದೆ. ಇದರಿಂದಾಗಿ ಸಾಮಾನ್ಯವಾಗಿ ಎಲ್ಲ ತರಕಾರಿ ವಿಪರೀತ ತುಟ್ಟಿಯಾಗಿದ್ದು, ಕೃಷಿಕ ಮತ್ತು ಗ್ರಾಹಕ ಇಬ್ಬರ ಕಣ್ಣಲ್ಲೂ ನೀರು ತರಿಸುತ್ತಿದೆ!

ಅನಾಹುತಕಾರಿ ಮಳೆಗೆ ವಿಶೇಷವಾಗಿ ಟೊಮೊಟೊ ಬೆಳೆ ನೆಲ ಕಚ್ಚಿದ್ದು, ಇದ್ದರಿಂದಾಗಿ ಒಂದು ಕೆಜಿ.ಗೆ 80 ರಿಂದ 100ರೂ ಕೊಡಬೇಕಾಗಿದೆ. ಟೊಮೇಟೊದಂತೆ ಉಳಿದ ಕಾಯಿ-ಪಲ್ಲೆ ದರವೂ ಏರಿಕೆಯಾಗಿದೆ. ಇದು ಮಧ್ಯಮ ವರ್ಗದ ಬದುಕನ್ನು ದುರ್ಬರಗೊಳಿಸಿಬಿಟ್ಟಿದೆ. ಉತ್ತರ ಕನ್ನಡಕ್ಕೆ ಪಕ್ಕದ ಧಾರವಾಡ, ಬೆಳಗಾವಿ, ಹಾವೇರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಂದ ತರಕಾರಿ-ಟೊಮೇಟೊ ಸರಬರಾಜಾಗುತ್ತದೆ. ಅಲ್ಲೆಲ್ಲ ಮಳೆಯ ಹೊಡೆತಕ್ಕೆ ತರಕಾರಿ ಬೆಳೆ ನಾಶವಾಗಿದೆ. ಇದರಿಂದಾಗಿ ಜಿಲ್ಲೆಯ ತರಕಾರಿ ಮಾರುಕಟ್ಟೆ ಮೇಲೆ ವ್ಯತಿರಿಕ್ತ ಪರಿಣಾಮವಾಗಿದ್ದು, ಗ್ರಾಹಕ ತರಕಾರಿ ಬೆಲೆಯೇರಿಕೆಗೆ ಬೆಚ್ಚಿಬಿದ್ದಿದ್ದಾನೆ!

ಎರಡು ವಾರದ ಹಿಂದೆ ಇದ್ದಕ್ಕಿದಂತೆ ಟೊಮೊಟೊ ದರ ಕೆಜಿಗೆ 100 ರೂ.ದಾಟಿತ್ತು. ನಂತರದ ವಾರದಲ್ಲಿ 40 ರಿಂದ 60 ರೂ.ಗೆ ಇಳಿದಿತ್ತು. ಈಗ ಮತ್ತೆ 70 ರಿಂದ 80 ರೂಗೆ ಏರಿಕೆಯಾಗಿದೆ. ಜತೆಗೆ ಬೇರೆಬೇರೆ ಕಾಯಿ-ಪಲ್ಲೆಯೂ 60 ರಿಂದ 80ರ ಆಸುಪಾಸಿನಲ್ಲೆ ಗಿರಕಿ ಹೊಡೆಯುತ್ತಿರುವುದು ಎಲ್ಲ ವರ್ಗದ ಗ್ರಾಹಕರನ್ನು ದಿಕ್ಕೆಡಿಸಿದೆ. ಅಲ್ಪ-ಸ್ವಲ್ಪ ಏರಿಕೆಯಾದರೆ ಹೇಗಾದರೂ ಸಂಬಾಳಿಸಿ ಕಾಲ ಕಳೆಯಬಹುದು; ಆದರೆ ಈ ರೀತಿ 4-6 ಪಟ್ಟು ದುಬಾರಿಯಾದರೆ ಬದುಕುವುದಾದರೂ ಹೇಗೆ? ಎಂದು ಜನರು ಹೇಳುತ್ತಾರೆ. ನಮಗೇನೂ ಸಂಬಳ-ಕೂಲಿ ಹೆಚ್ಚಾಗಿಲ್ಲ. ದಿನಸಿ, ತರಕಾರಿ ಬೆಲೆ ಮಾತ್ರ ಒಂದೇ ಸಮನೆ ಗಗನಕ್ಕೆ ನೇಗೆಯುತ್ತಿದೆಯೆಂದು ಅಂದಿನ ತುತ್ತು ಅಂದು ಗಳಿಸಿ ತಿನ್ನುವ ಮಂದಿ ಗೋಗರೆಯುತ್ತಾರೆ!

ಇಷ್ಟೇಕೆ ತರಕಾರಿ ದರ ಏರಿಕೆಯಾಗುತ್ತಿದೆ. ನೀವು ಹೇಗೆ ಖರೀದಿಸಲು ಸಾಧ್ಯವಾಗುತ್ತದೆ ಎಂದು ತರಕಾರಿ ವ್ಯಾಪಾರಿಗಳನ್ನು ಕೇಳಿದರೆ, ತರಕಾರಿ ಬೆಳೆಯುವ ಹತ್ತಿರದ ಪ್ರದೇಶಗಳಲ್ಲಿನ ನಿರಂತರ ಅಕಾಲಿಕ ಮಳೆ ಹಾವಳಿಯಿಂದ ಟೊಮ್ಯಾಟೊ ಗಿಡಗಳು ಮತ್ತಿತರ ತರಕಾರಿ ಫಸಲು ಕೊಳೆತುಹೋಗಿದೆ. ದೂರದ ನಾಸಿಕ್‌ನಿಂದ ಟೊಮ್ಯಾಟೊ ತರಿಸುತ್ತಿದ್ದೇವೆ. ಹಾಗಾಗಿ ಸಾಗಾಣಿಕಾ ವೆಚ್ಚ ಮತ್ತು ದುಬಾರಿ ಖರೀದಿಯಿಂದ ತುಟ್ಟಿ ಮಾರದಿದ್ದರೆ ನಮಗೇನು ಗಿಟ್ಟುವುದಿಲ್ಲ ಎಂದು ಬೇಸರದಿಂದಲೆ ಹೇಳುತ್ತಾರೆ. ಮಹಾರಾಷ್ಟ್ರ ಕಡೆಯಿಂದ ಜಿಲ್ಲೆಗೆ ಪ್ರತಿ ದಿನ ಟನ್‌ಗಟ್ಟಲೆ ಟೊಮೇಟೊ ಬರುತ್ತಿದ್ದು ದರವೂ ಗಾಬರಿ ಹುಟ್ಟಿಸುವಂತಿದೆ.

ಉತ್ತರ ಕನ್ನಡಕ್ಕೆ ಹೊರ ಜಿಲ್ಲೆಗಳಿಂದ ಬರುವ ತರಕಾರಿ ಬೆಲೆ ಸದ್ಯಕ್ಕೆ ಚೇತರಿಸಿಕೊಳ್ಳುವ ಸಾಧ್ಯತೆ ಕಾಣಿಸುತ್ತಿಲ್ಲ. ಹಾಗಂತ ಗೋಕರ್ಣ ಸೀಮೆಯ ತರಕಾರಿ ತಾಜಾ ಮತ್ತು ಸ್ವಲ್ಪ ಕಡಿಮೆ ಬೆಲೆಗೆ ಸಿಗತ್ತಿದೆ. ಆ ಭಾಗದ ಹಾಲಕ್ಕಿ ಒಕ್ಕಲು ಬುಡಕಟ್ಟಿನ ಮಂದಿ ಮತ್ತಿತರ ಸಮುದಾಯದವರು ತರಕಾರಿ ಬೆಳೆಯುತ್ತಿದ್ದು ಅದಕ್ಕೆ ವಿಶೇಷ ಬೇಡಿಕೆಯಿದೆ. ಆದರೆ ಜಿಲ್ಲೆಯ ಬೇಡಿಕೆ ಪೂರೈಸುವಷ್ಟು ಪ್ರಮಾಣದಲ್ಲಿ ಗೋಕರ್ಣ ಸೀಮೆಯಲ್ಲಿ ತರಕಾರಿ ಬೆಳೆಯಿಲ್ಲ. ಕೃಷಿ ಮತ್ತು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳಿಯ ಶಾಸಕರು ಒಳ್ಳೆಯ ಗುಣಮಟ್ಟದ ಗೋಕರ್ಣ ಸೀಮೆ ತರಕಾರಿ ಕೃಷಿ ವಿಸ್ತರಣೆಗೆ ಯೋಚಿಸಬೇಕಿದೆಯೆಂಬ ಆಗ್ರಹ ಬಹಳ ಹಿಂದಿನದು. ಈ ದುಬಾರಿ ದಿನಮಾನದಲ್ಲಿ ಗೋಕರ್ಣ ಸೀಮೆ ತರಕಾರಿ ಕ್ಷೇತ್ರ ವಿಸ್ತರಣೆ ಪ್ರೋತ್ಸಾಹಿಸುವ ಅಗತ್ಯದ ಮಾತು ಮತ್ತೆ ಕೇಳಿ ಬರುತ್ತಿದೆ.

ಉತ್ತರ ಕನ್ನಡದ ತರಕಾರಿ ದರ (ಪ್ರತಿ ಕೆಜಿಗೆ)
ಚವಳಿ : 80ರೂ.
ತೊಂಡೆಕಾಯಿ : 30-50ರೂ
ಬೀಟ್ರೂಟ್ : 40-50ರೂ
ಬೆಂಡೆಕಾಯಿ : 60-70ರೂ
ಬೀನ್ಸ್ : 100-120ರೂ
ಹಾಗಲಕಾಯಿ : 80ರೂ.
ಹಸಿ ಮೆಣಸು : 60ರೂ
ನವಿಲುಕೋಸ್ : 60ರೂ

ನುಗ್ಗೆಕಾಯಿ : 100ರೂ
ಬದನೆಕಾಯಿ : 80ರೂ
ಟೊಮ್ಯಾಟೊ : 70-80ರೂ
ಈರುಳ್ಳಿ: 40-50ರೂ
ಬಟಾಣಿ : 30ರೂ
ಹೀರೆಕಾಯಿ : 60ರೂ
ಕ್ಯಾರೇಟ್ : 80ರೂ
ಸೌತೆಕಾಯಿ : 70ರೂ
ಹರಗಿ-1 ಕಟ್ಟು : 10ರೂ
ಬಸಳೆ-1ಕಟ್ಟು : 40ರೂ


ಇದನ್ನೂ ಓದಿ: ಟೊಮಟೊ ಟ್ರಾಲ್‌: ‘ಬೆಲೆ ಏರಿಕೆಕಂಡು ತರಹೇವಾರಿ ಮೀಮ್ಸ್ಸೃಷ್ಟಿ; ನೋಡಿ ನಕ್ಕುಬಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...