Homeಕರ್ನಾಟಕಉತ್ತರ ಕನ್ನಡದಲ್ಲಿ ತರಕಾರಿ ದುಬಾರಿ; ಕೃಷಿಕ-ಗ್ರಾಹಕ ಕಂಗಾಲು

ಉತ್ತರ ಕನ್ನಡದಲ್ಲಿ ತರಕಾರಿ ದುಬಾರಿ; ಕೃಷಿಕ-ಗ್ರಾಹಕ ಕಂಗಾಲು

- Advertisement -
- Advertisement -

ಅಕಾಲಿಕ ಮಳೆಯಿಂದ ಭತ್ತ, ಗೋವಿನಜೋಳ, ಹತ್ತಿ, ಕಬ್ಬು, ಅಡಿಕೆ ನೀರುಪಾಲಾಗಿ ರೈತರ ಬದುಕು ಮೂರಾಬಟ್ಟೆಯಾಗಿದ್ದರೆ, ಮತ್ತೊಂದೆಡೆ ತರಕಾರಿ ಬಳೆದು ಬದುಕತ್ತಿದ್ದ ಕೃಷಿಕರ ಕೈಗೆ ಫಸಲು ಸಿಗದಂತಾಗಿದೆ. ನಿರಂತರ ಮಳೆಯ ಮಧ್ಯೆ ಅಳಿದುಳಿದ ತರಕಾರಿ ಮಾರುಕಟ್ಟೆಗೆ ಬರುತ್ತಿದ್ದು ಗಣಮಟ್ಟ ಇಲ್ಲದಾಗಿದೆ. ಇದರಿಂದಾಗಿ ಸಾಮಾನ್ಯವಾಗಿ ಎಲ್ಲ ತರಕಾರಿ ವಿಪರೀತ ತುಟ್ಟಿಯಾಗಿದ್ದು, ಕೃಷಿಕ ಮತ್ತು ಗ್ರಾಹಕ ಇಬ್ಬರ ಕಣ್ಣಲ್ಲೂ ನೀರು ತರಿಸುತ್ತಿದೆ!

ಅನಾಹುತಕಾರಿ ಮಳೆಗೆ ವಿಶೇಷವಾಗಿ ಟೊಮೊಟೊ ಬೆಳೆ ನೆಲ ಕಚ್ಚಿದ್ದು, ಇದ್ದರಿಂದಾಗಿ ಒಂದು ಕೆಜಿ.ಗೆ 80 ರಿಂದ 100ರೂ ಕೊಡಬೇಕಾಗಿದೆ. ಟೊಮೇಟೊದಂತೆ ಉಳಿದ ಕಾಯಿ-ಪಲ್ಲೆ ದರವೂ ಏರಿಕೆಯಾಗಿದೆ. ಇದು ಮಧ್ಯಮ ವರ್ಗದ ಬದುಕನ್ನು ದುರ್ಬರಗೊಳಿಸಿಬಿಟ್ಟಿದೆ. ಉತ್ತರ ಕನ್ನಡಕ್ಕೆ ಪಕ್ಕದ ಧಾರವಾಡ, ಬೆಳಗಾವಿ, ಹಾವೇರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಂದ ತರಕಾರಿ-ಟೊಮೇಟೊ ಸರಬರಾಜಾಗುತ್ತದೆ. ಅಲ್ಲೆಲ್ಲ ಮಳೆಯ ಹೊಡೆತಕ್ಕೆ ತರಕಾರಿ ಬೆಳೆ ನಾಶವಾಗಿದೆ. ಇದರಿಂದಾಗಿ ಜಿಲ್ಲೆಯ ತರಕಾರಿ ಮಾರುಕಟ್ಟೆ ಮೇಲೆ ವ್ಯತಿರಿಕ್ತ ಪರಿಣಾಮವಾಗಿದ್ದು, ಗ್ರಾಹಕ ತರಕಾರಿ ಬೆಲೆಯೇರಿಕೆಗೆ ಬೆಚ್ಚಿಬಿದ್ದಿದ್ದಾನೆ!

ಎರಡು ವಾರದ ಹಿಂದೆ ಇದ್ದಕ್ಕಿದಂತೆ ಟೊಮೊಟೊ ದರ ಕೆಜಿಗೆ 100 ರೂ.ದಾಟಿತ್ತು. ನಂತರದ ವಾರದಲ್ಲಿ 40 ರಿಂದ 60 ರೂ.ಗೆ ಇಳಿದಿತ್ತು. ಈಗ ಮತ್ತೆ 70 ರಿಂದ 80 ರೂಗೆ ಏರಿಕೆಯಾಗಿದೆ. ಜತೆಗೆ ಬೇರೆಬೇರೆ ಕಾಯಿ-ಪಲ್ಲೆಯೂ 60 ರಿಂದ 80ರ ಆಸುಪಾಸಿನಲ್ಲೆ ಗಿರಕಿ ಹೊಡೆಯುತ್ತಿರುವುದು ಎಲ್ಲ ವರ್ಗದ ಗ್ರಾಹಕರನ್ನು ದಿಕ್ಕೆಡಿಸಿದೆ. ಅಲ್ಪ-ಸ್ವಲ್ಪ ಏರಿಕೆಯಾದರೆ ಹೇಗಾದರೂ ಸಂಬಾಳಿಸಿ ಕಾಲ ಕಳೆಯಬಹುದು; ಆದರೆ ಈ ರೀತಿ 4-6 ಪಟ್ಟು ದುಬಾರಿಯಾದರೆ ಬದುಕುವುದಾದರೂ ಹೇಗೆ? ಎಂದು ಜನರು ಹೇಳುತ್ತಾರೆ. ನಮಗೇನೂ ಸಂಬಳ-ಕೂಲಿ ಹೆಚ್ಚಾಗಿಲ್ಲ. ದಿನಸಿ, ತರಕಾರಿ ಬೆಲೆ ಮಾತ್ರ ಒಂದೇ ಸಮನೆ ಗಗನಕ್ಕೆ ನೇಗೆಯುತ್ತಿದೆಯೆಂದು ಅಂದಿನ ತುತ್ತು ಅಂದು ಗಳಿಸಿ ತಿನ್ನುವ ಮಂದಿ ಗೋಗರೆಯುತ್ತಾರೆ!

ಇಷ್ಟೇಕೆ ತರಕಾರಿ ದರ ಏರಿಕೆಯಾಗುತ್ತಿದೆ. ನೀವು ಹೇಗೆ ಖರೀದಿಸಲು ಸಾಧ್ಯವಾಗುತ್ತದೆ ಎಂದು ತರಕಾರಿ ವ್ಯಾಪಾರಿಗಳನ್ನು ಕೇಳಿದರೆ, ತರಕಾರಿ ಬೆಳೆಯುವ ಹತ್ತಿರದ ಪ್ರದೇಶಗಳಲ್ಲಿನ ನಿರಂತರ ಅಕಾಲಿಕ ಮಳೆ ಹಾವಳಿಯಿಂದ ಟೊಮ್ಯಾಟೊ ಗಿಡಗಳು ಮತ್ತಿತರ ತರಕಾರಿ ಫಸಲು ಕೊಳೆತುಹೋಗಿದೆ. ದೂರದ ನಾಸಿಕ್‌ನಿಂದ ಟೊಮ್ಯಾಟೊ ತರಿಸುತ್ತಿದ್ದೇವೆ. ಹಾಗಾಗಿ ಸಾಗಾಣಿಕಾ ವೆಚ್ಚ ಮತ್ತು ದುಬಾರಿ ಖರೀದಿಯಿಂದ ತುಟ್ಟಿ ಮಾರದಿದ್ದರೆ ನಮಗೇನು ಗಿಟ್ಟುವುದಿಲ್ಲ ಎಂದು ಬೇಸರದಿಂದಲೆ ಹೇಳುತ್ತಾರೆ. ಮಹಾರಾಷ್ಟ್ರ ಕಡೆಯಿಂದ ಜಿಲ್ಲೆಗೆ ಪ್ರತಿ ದಿನ ಟನ್‌ಗಟ್ಟಲೆ ಟೊಮೇಟೊ ಬರುತ್ತಿದ್ದು ದರವೂ ಗಾಬರಿ ಹುಟ್ಟಿಸುವಂತಿದೆ.

ಉತ್ತರ ಕನ್ನಡಕ್ಕೆ ಹೊರ ಜಿಲ್ಲೆಗಳಿಂದ ಬರುವ ತರಕಾರಿ ಬೆಲೆ ಸದ್ಯಕ್ಕೆ ಚೇತರಿಸಿಕೊಳ್ಳುವ ಸಾಧ್ಯತೆ ಕಾಣಿಸುತ್ತಿಲ್ಲ. ಹಾಗಂತ ಗೋಕರ್ಣ ಸೀಮೆಯ ತರಕಾರಿ ತಾಜಾ ಮತ್ತು ಸ್ವಲ್ಪ ಕಡಿಮೆ ಬೆಲೆಗೆ ಸಿಗತ್ತಿದೆ. ಆ ಭಾಗದ ಹಾಲಕ್ಕಿ ಒಕ್ಕಲು ಬುಡಕಟ್ಟಿನ ಮಂದಿ ಮತ್ತಿತರ ಸಮುದಾಯದವರು ತರಕಾರಿ ಬೆಳೆಯುತ್ತಿದ್ದು ಅದಕ್ಕೆ ವಿಶೇಷ ಬೇಡಿಕೆಯಿದೆ. ಆದರೆ ಜಿಲ್ಲೆಯ ಬೇಡಿಕೆ ಪೂರೈಸುವಷ್ಟು ಪ್ರಮಾಣದಲ್ಲಿ ಗೋಕರ್ಣ ಸೀಮೆಯಲ್ಲಿ ತರಕಾರಿ ಬೆಳೆಯಿಲ್ಲ. ಕೃಷಿ ಮತ್ತು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳಿಯ ಶಾಸಕರು ಒಳ್ಳೆಯ ಗುಣಮಟ್ಟದ ಗೋಕರ್ಣ ಸೀಮೆ ತರಕಾರಿ ಕೃಷಿ ವಿಸ್ತರಣೆಗೆ ಯೋಚಿಸಬೇಕಿದೆಯೆಂಬ ಆಗ್ರಹ ಬಹಳ ಹಿಂದಿನದು. ಈ ದುಬಾರಿ ದಿನಮಾನದಲ್ಲಿ ಗೋಕರ್ಣ ಸೀಮೆ ತರಕಾರಿ ಕ್ಷೇತ್ರ ವಿಸ್ತರಣೆ ಪ್ರೋತ್ಸಾಹಿಸುವ ಅಗತ್ಯದ ಮಾತು ಮತ್ತೆ ಕೇಳಿ ಬರುತ್ತಿದೆ.

ಉತ್ತರ ಕನ್ನಡದ ತರಕಾರಿ ದರ (ಪ್ರತಿ ಕೆಜಿಗೆ)
ಚವಳಿ : 80ರೂ.
ತೊಂಡೆಕಾಯಿ : 30-50ರೂ
ಬೀಟ್ರೂಟ್ : 40-50ರೂ
ಬೆಂಡೆಕಾಯಿ : 60-70ರೂ
ಬೀನ್ಸ್ : 100-120ರೂ
ಹಾಗಲಕಾಯಿ : 80ರೂ.
ಹಸಿ ಮೆಣಸು : 60ರೂ
ನವಿಲುಕೋಸ್ : 60ರೂ

ನುಗ್ಗೆಕಾಯಿ : 100ರೂ
ಬದನೆಕಾಯಿ : 80ರೂ
ಟೊಮ್ಯಾಟೊ : 70-80ರೂ
ಈರುಳ್ಳಿ: 40-50ರೂ
ಬಟಾಣಿ : 30ರೂ
ಹೀರೆಕಾಯಿ : 60ರೂ
ಕ್ಯಾರೇಟ್ : 80ರೂ
ಸೌತೆಕಾಯಿ : 70ರೂ
ಹರಗಿ-1 ಕಟ್ಟು : 10ರೂ
ಬಸಳೆ-1ಕಟ್ಟು : 40ರೂ


ಇದನ್ನೂ ಓದಿ: ಟೊಮಟೊ ಟ್ರಾಲ್‌: ‘ಬೆಲೆ ಏರಿಕೆಕಂಡು ತರಹೇವಾರಿ ಮೀಮ್ಸ್ಸೃಷ್ಟಿ; ನೋಡಿ ನಕ್ಕುಬಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...