Homeಮುಖಪುಟವೆಂಗೈವಾಯಲ್‌ ಟ್ಯಾಂಕ್ ಮಲೀನ ಪ್ರಕರಣ: ಸಿಬಿ-ಸಿಐಡಿಯ ಚಾರ್ಜ್‌ ಶೀಟ್‌ ವಿರುದ್ಧದ ಅರ್ಜಿ ವಿಚಾರಣೆ ಮುಂದೂಡಿಕೆ

ವೆಂಗೈವಾಯಲ್‌ ಟ್ಯಾಂಕ್ ಮಲೀನ ಪ್ರಕರಣ: ಸಿಬಿ-ಸಿಐಡಿಯ ಚಾರ್ಜ್‌ ಶೀಟ್‌ ವಿರುದ್ಧದ ಅರ್ಜಿ ವಿಚಾರಣೆ ಮುಂದೂಡಿಕೆ

- Advertisement -
- Advertisement -

ಸಿಬಿ-ಸಿಐಡಿ ಪೊಲೀಸರು ಸಲ್ಲಿಸಿದ ಆರೋಪಪಟ್ಟಿಯನ್ನು ಸ್ವೀಕರಿಸಬಾರದು ಎಂದು ಕೋರಿ ವೆಂಗೈವಾಯಲ್ ನೀರು ಮಾಲಿನ್ಯ ಪ್ರಕರಣದ ದೂರುದಾರರು ಸಲ್ಲಿಸಿದ್ದ ಅರ್ಜಿಯನ್ನು ಬುಧವಾರ ಕೈಗೆತ್ತಿಕೊಂಡ ಎಸ್‌ಸಿ/ಎಸ್‌ಟಿ (ಪಿಒಎ) ಕಾಯ್ದೆಯಡಿ ಪ್ರಕರಣಗಳ ವಿಚಾರಣೆಗಾಗಿ ವಿಶೇಷ ನ್ಯಾಯಾಲಯವು ಈ ವಿಷಯದ ವಿಚಾರಣೆಯನ್ನು ಫೆಬ್ರವರಿ 1 ಕ್ಕೆ ಮುಂದೂಡಿದೆ.

ಕೆಲವು ದಿನಗಳ ಹಿಂದೆ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ ಆರೋಪಪಟ್ಟಿಯಲ್ಲಿ ಸಿಬಿ-ಸಿಐಡಿ ಡಿಸೆಂಬರ್ 2022 ರಲ್ಲಿ ವೆಂಗೈವಾಯಲ್‌ನ ಓವರ್‌ಹೆಡ್ ನೀರಿನ ಟ್ಯಾಂಕ್‌ನಲ್ಲಿ ಮಲ ಮಿಶ್ರಣಕ್ಕೆ ಮೂವರು ದಲಿತರನ್ನು ಹೊಣೆಗಾರರನ್ನಾಗಿ ಮಾಡಿದೆ.

ಯಾರ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆಯೋ ಆ ಗ್ರಾಮದ ನಿವಾಸಿ ಕನಗರಾಜ್, ಜನವರಿ 27, 2025 ರಂದು ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ, ತನಿಖಾ ಸಂಸ್ಥೆ ಅಂದರೆ ಸಿಬಿ-ಸಿಐಡಿ ತನಗೆ ತಿಳಿಯದೆ ಪ್ರಕರಣದ ಆರೋಪಪಟ್ಟಿಯನ್ನು ನ್ಯಾಯಾಲಯದಲ್ಲಿ ಸಲ್ಲಿಸಿದೆ ಎಂದು ಹೇಳಿದ್ದಾರೆ.

2022 ರ ಪ್ರಕರಣವನ್ನು ಎಸ್‌ಸಿ/ಎಸ್‌ಸಿ (ಪಿಒಎ) ಕಾಯ್ದೆಯಡಿಯಲ್ಲಿ ದಾಖಲಿಸಲಾದ ದೂರಿನ ಆಧಾರದ ಮೇಲೆ ಮೊದಲ ಅರ್ಜಿದಾರರು ತಾವು ಎಂದು ವಾದಿಸಿದ ಕನಕರಾಜ್, ಸಿಬಿ-ಸಿಐಡಿಯ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬಾರದು ಎಂದು ಒತ್ತಾಯಿಸಿದರು. ಪ್ರಕರಣದ ಆರೋಪಿಗಳ ವಿರುದ್ಧ ಎಸ್‌ಸಿ/ಎಸ್‌ಸಿ (ಪಿಒಎ) ಕಾಯ್ದೆಯಡಿಯಲ್ಲಿ ಆರೋಪಗಳನ್ನು ತೆಗೆದುಹಾಕಿರುವ ಬಗ್ಗೆ ತನಗೆ ತಿಳಿಸಲಾಗಿಲ್ಲ ಎಂದು ಅವರು ಹೇಳಿದರು.

ಜನವರಿ 29 ರಂದು, ನ್ಯಾಯಾಧೀಶ ವಸಂತಿ ಅರ್ಜಿಗೆ ಪ್ರತಿಕ್ರಿಯಿಸಲು ಸಿಬಿ-ಸಿಐಡಿಗೆ ಸೂಚಿಸಿದರು. ಬುಧವಾರ, ಸಿಬಿ-ಸಿಐಡಿ ಪರವಾಗಿ ಹಾಜರಾದ ಪಬ್ಲಿಕ್ ಪ್ರಾಸಿಕ್ಯೂಟರ್ ಕುಮಾರ್, ದೂರುದಾರರಿಗೆ ಎಸ್‌ಸಿ/ಎಸ್‌ಸಿ (ಪಿಒಎ) ಕಾಯ್ದೆಯಡಿಯಲ್ಲಿನ ವಿಭಾಗಗಳನ್ನು ತೆಗೆದುಹಾಕಿರುವ ಬಗ್ಗೆ ತಿಳಿಸುವ ಅಗತ್ಯವಿಲ್ಲ, ಅವರ ನಿಲುವಿನ ಕುರಿತು ನ್ಯಾಯಾಲಯಕ್ಕೆ ಲಿಖಿತ ಸಲ್ಲಿಕೆ ಮಾಡಲಾಗುವುದು ಎಂದು ವಾದಿಸಿದರು. ನಂತರ ವಿಚಾರಣೆಯನ್ನು ಫೆಬ್ರವರಿ 1 ಕ್ಕೆ ಮುಂದೂಡಲಾಯಿತು.

ಈ ಮಧ್ಯೆ, ಸಿಬಿ-ಸಿಐಡಿ ಬುಧವಾರ ಕನಕರಾಜ್ ಅವರಿಗೆ ನೋಟಿಸ್ ಕಳುಹಿಸಿದ್ದು, ಮೂವರು ಆರೋಪಿಗಳ ವಿರುದ್ಧ ಎಸ್‌ಸಿ/ಎಸ್‌ಸಿ (ಪಿಒಎ) ಕಾಯ್ದೆಯಡಿಯಲ್ಲಿ ವಿಧಿಸಲಾದ ಆರೋಪಗಳನ್ನು ತೆಗೆದುಹಾಕಲಾಗಿದೆ. ಉಳಿದ ಸೆಕ್ಷನ್‌ಗಳನ್ನು ಹಾಗೆ ಉಳಿಸಲಾಗಿದೆ ಎಂದು ತಿಳಿಸಿದೆ. ಕನಕರಾಜ್ ಅವರನ್ನು ಪ್ರತಿನಿಧಿಸುವ ವಿಸಿಕೆ ಕಾನೂನು ವಿಭಾಗದ ರಾಜ್ಯ ಕಾರ್ಯದರ್ಶಿ ಪರ್ವೆಂತನ್ ಅವರೊಂದಿಗೆ ವಕೀಲ ಮಲರ್ಮನ್ನನ್, ನೋಟಿಸ್‌ನ ಸಮಯವನ್ನು ಪ್ರಶ್ನಿಸಿದರು. ಸಿಬಿ-ಸಿಐಡಿ ಆರೋಪಪಟ್ಟಿ ಸಲ್ಲಿಸಿದ ನಂತರ ಅದನ್ನು ಕಳುಹಿಸಲಾಗಿದೆ ಎಂದು ಹೇಳಿದರು.

ಸಿಬಿ-ಸಿಐಡಿ ವರದಿಯ ವಿರುದ್ಧ ವೆಂಗೈವಾಯಲ್ ನಿವಾಸಿಗಳ ಒಂದು ಭಾಗದ ಪ್ರತಿಭಟನೆ ಗುರುವಾರ ಸತತ ಆರನೇ ದಿನಕ್ಕೆ ಕಾಲಿಟ್ಟಿದೆ.

ಇದನ್ನೂ ಓದಿ; ನೀರಿನ ಟ್ಯಾಂಕ್‌ ಮಲೀನ ಪ್ರಕರಣ: ಸಿಬಿಐ ತನಿಖೆಗೆ ಆಗ್ರಹಿಸಿ ವೆಂಗೈವಾಯಲ್‌ನಲ್ಲಿ ದಲಿತರಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...