Homeಮುಖಪುಟವೆಂಗೈವಾಯಲ್‌ ಟ್ಯಾಂಕ್ ಮಲೀನ ಪ್ರಕರಣ: ಸಿಬಿ-ಸಿಐಡಿಯ ಚಾರ್ಜ್‌ ಶೀಟ್‌ ವಿರುದ್ಧದ ಅರ್ಜಿ ವಿಚಾರಣೆ ಮುಂದೂಡಿಕೆ

ವೆಂಗೈವಾಯಲ್‌ ಟ್ಯಾಂಕ್ ಮಲೀನ ಪ್ರಕರಣ: ಸಿಬಿ-ಸಿಐಡಿಯ ಚಾರ್ಜ್‌ ಶೀಟ್‌ ವಿರುದ್ಧದ ಅರ್ಜಿ ವಿಚಾರಣೆ ಮುಂದೂಡಿಕೆ

- Advertisement -
- Advertisement -

ಸಿಬಿ-ಸಿಐಡಿ ಪೊಲೀಸರು ಸಲ್ಲಿಸಿದ ಆರೋಪಪಟ್ಟಿಯನ್ನು ಸ್ವೀಕರಿಸಬಾರದು ಎಂದು ಕೋರಿ ವೆಂಗೈವಾಯಲ್ ನೀರು ಮಾಲಿನ್ಯ ಪ್ರಕರಣದ ದೂರುದಾರರು ಸಲ್ಲಿಸಿದ್ದ ಅರ್ಜಿಯನ್ನು ಬುಧವಾರ ಕೈಗೆತ್ತಿಕೊಂಡ ಎಸ್‌ಸಿ/ಎಸ್‌ಟಿ (ಪಿಒಎ) ಕಾಯ್ದೆಯಡಿ ಪ್ರಕರಣಗಳ ವಿಚಾರಣೆಗಾಗಿ ವಿಶೇಷ ನ್ಯಾಯಾಲಯವು ಈ ವಿಷಯದ ವಿಚಾರಣೆಯನ್ನು ಫೆಬ್ರವರಿ 1 ಕ್ಕೆ ಮುಂದೂಡಿದೆ.

ಕೆಲವು ದಿನಗಳ ಹಿಂದೆ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ ಆರೋಪಪಟ್ಟಿಯಲ್ಲಿ ಸಿಬಿ-ಸಿಐಡಿ ಡಿಸೆಂಬರ್ 2022 ರಲ್ಲಿ ವೆಂಗೈವಾಯಲ್‌ನ ಓವರ್‌ಹೆಡ್ ನೀರಿನ ಟ್ಯಾಂಕ್‌ನಲ್ಲಿ ಮಲ ಮಿಶ್ರಣಕ್ಕೆ ಮೂವರು ದಲಿತರನ್ನು ಹೊಣೆಗಾರರನ್ನಾಗಿ ಮಾಡಿದೆ.

ಯಾರ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆಯೋ ಆ ಗ್ರಾಮದ ನಿವಾಸಿ ಕನಗರಾಜ್, ಜನವರಿ 27, 2025 ರಂದು ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ, ತನಿಖಾ ಸಂಸ್ಥೆ ಅಂದರೆ ಸಿಬಿ-ಸಿಐಡಿ ತನಗೆ ತಿಳಿಯದೆ ಪ್ರಕರಣದ ಆರೋಪಪಟ್ಟಿಯನ್ನು ನ್ಯಾಯಾಲಯದಲ್ಲಿ ಸಲ್ಲಿಸಿದೆ ಎಂದು ಹೇಳಿದ್ದಾರೆ.

2022 ರ ಪ್ರಕರಣವನ್ನು ಎಸ್‌ಸಿ/ಎಸ್‌ಸಿ (ಪಿಒಎ) ಕಾಯ್ದೆಯಡಿಯಲ್ಲಿ ದಾಖಲಿಸಲಾದ ದೂರಿನ ಆಧಾರದ ಮೇಲೆ ಮೊದಲ ಅರ್ಜಿದಾರರು ತಾವು ಎಂದು ವಾದಿಸಿದ ಕನಕರಾಜ್, ಸಿಬಿ-ಸಿಐಡಿಯ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬಾರದು ಎಂದು ಒತ್ತಾಯಿಸಿದರು. ಪ್ರಕರಣದ ಆರೋಪಿಗಳ ವಿರುದ್ಧ ಎಸ್‌ಸಿ/ಎಸ್‌ಸಿ (ಪಿಒಎ) ಕಾಯ್ದೆಯಡಿಯಲ್ಲಿ ಆರೋಪಗಳನ್ನು ತೆಗೆದುಹಾಕಿರುವ ಬಗ್ಗೆ ತನಗೆ ತಿಳಿಸಲಾಗಿಲ್ಲ ಎಂದು ಅವರು ಹೇಳಿದರು.

ಜನವರಿ 29 ರಂದು, ನ್ಯಾಯಾಧೀಶ ವಸಂತಿ ಅರ್ಜಿಗೆ ಪ್ರತಿಕ್ರಿಯಿಸಲು ಸಿಬಿ-ಸಿಐಡಿಗೆ ಸೂಚಿಸಿದರು. ಬುಧವಾರ, ಸಿಬಿ-ಸಿಐಡಿ ಪರವಾಗಿ ಹಾಜರಾದ ಪಬ್ಲಿಕ್ ಪ್ರಾಸಿಕ್ಯೂಟರ್ ಕುಮಾರ್, ದೂರುದಾರರಿಗೆ ಎಸ್‌ಸಿ/ಎಸ್‌ಸಿ (ಪಿಒಎ) ಕಾಯ್ದೆಯಡಿಯಲ್ಲಿನ ವಿಭಾಗಗಳನ್ನು ತೆಗೆದುಹಾಕಿರುವ ಬಗ್ಗೆ ತಿಳಿಸುವ ಅಗತ್ಯವಿಲ್ಲ, ಅವರ ನಿಲುವಿನ ಕುರಿತು ನ್ಯಾಯಾಲಯಕ್ಕೆ ಲಿಖಿತ ಸಲ್ಲಿಕೆ ಮಾಡಲಾಗುವುದು ಎಂದು ವಾದಿಸಿದರು. ನಂತರ ವಿಚಾರಣೆಯನ್ನು ಫೆಬ್ರವರಿ 1 ಕ್ಕೆ ಮುಂದೂಡಲಾಯಿತು.

ಈ ಮಧ್ಯೆ, ಸಿಬಿ-ಸಿಐಡಿ ಬುಧವಾರ ಕನಕರಾಜ್ ಅವರಿಗೆ ನೋಟಿಸ್ ಕಳುಹಿಸಿದ್ದು, ಮೂವರು ಆರೋಪಿಗಳ ವಿರುದ್ಧ ಎಸ್‌ಸಿ/ಎಸ್‌ಸಿ (ಪಿಒಎ) ಕಾಯ್ದೆಯಡಿಯಲ್ಲಿ ವಿಧಿಸಲಾದ ಆರೋಪಗಳನ್ನು ತೆಗೆದುಹಾಕಲಾಗಿದೆ. ಉಳಿದ ಸೆಕ್ಷನ್‌ಗಳನ್ನು ಹಾಗೆ ಉಳಿಸಲಾಗಿದೆ ಎಂದು ತಿಳಿಸಿದೆ. ಕನಕರಾಜ್ ಅವರನ್ನು ಪ್ರತಿನಿಧಿಸುವ ವಿಸಿಕೆ ಕಾನೂನು ವಿಭಾಗದ ರಾಜ್ಯ ಕಾರ್ಯದರ್ಶಿ ಪರ್ವೆಂತನ್ ಅವರೊಂದಿಗೆ ವಕೀಲ ಮಲರ್ಮನ್ನನ್, ನೋಟಿಸ್‌ನ ಸಮಯವನ್ನು ಪ್ರಶ್ನಿಸಿದರು. ಸಿಬಿ-ಸಿಐಡಿ ಆರೋಪಪಟ್ಟಿ ಸಲ್ಲಿಸಿದ ನಂತರ ಅದನ್ನು ಕಳುಹಿಸಲಾಗಿದೆ ಎಂದು ಹೇಳಿದರು.

ಸಿಬಿ-ಸಿಐಡಿ ವರದಿಯ ವಿರುದ್ಧ ವೆಂಗೈವಾಯಲ್ ನಿವಾಸಿಗಳ ಒಂದು ಭಾಗದ ಪ್ರತಿಭಟನೆ ಗುರುವಾರ ಸತತ ಆರನೇ ದಿನಕ್ಕೆ ಕಾಲಿಟ್ಟಿದೆ.

ಇದನ್ನೂ ಓದಿ; ನೀರಿನ ಟ್ಯಾಂಕ್‌ ಮಲೀನ ಪ್ರಕರಣ: ಸಿಬಿಐ ತನಿಖೆಗೆ ಆಗ್ರಹಿಸಿ ವೆಂಗೈವಾಯಲ್‌ನಲ್ಲಿ ದಲಿತರಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...