Homeಚಳವಳಿನ್ಯಾಯಕ್ಕಾಗಿ ಎದೆಯುಬ್ಬಿಸಿ ನಿಲ್ಲುವ ವರ್ನನ್ ಗೊನ್ಸಾಲ್ವೆಸ್ ಜೈಲಿನಲ್ಲಿ...

ನ್ಯಾಯಕ್ಕಾಗಿ ಎದೆಯುಬ್ಬಿಸಿ ನಿಲ್ಲುವ ವರ್ನನ್ ಗೊನ್ಸಾಲ್ವೆಸ್ ಜೈಲಿನಲ್ಲಿ…

ವರ್ನನ್ ಅವರ ಬರಹಗಳಲ್ಲಿ ಅವರ ಕಾಣ್ಕೆ ಸ್ಪಷ್ಟವಾಗಿ ಕಂಡುಬರುತ್ತದೆ. ವರ್ಗ, ಜಾತಿ, ಜನಾಂಗದ ಭೇದಗಳಿಲ್ಲದ, ಲೈಂಗಿಕ ಸಮಾನತೆಯ ತತ್ವಗಳನ್ನೊಳಗೊಂಡ ಹಾಗೂ ನ್ಯಾಯಯುತವಾದ ಸಮಾಜದ ಅವರ ನೋಟ ಅವರ ಬರಹಗಳನ್ನು ಓದಿದರೆ ಸ್ಪಷ್ಟವಾಗುತ್ತದೆ.

- Advertisement -
- Advertisement -

ಯಾವಾಗಲೂ ಅರ್ಧ ತೋಳಿನ ಕಾಟನ್ ಅಂಗಿ, ದೊಗಳೆ ಪ್ಯಾಂಟು, ಕನ್ನಡಕ, ಬಗಲಿಗೆ ಒಂದು ಚೀಲ ಹಾಗೂ ಹೃದಯಪೂರ್ವಕ ನಗುವಿನೊಂದಿಗೆ ಕಾಣಿಸಿಕೊಳ್ಳುವ ವರ್ನನ್ ಗೊನ್ಸಾಲ್ವೆಸ್ ಒಬ್ಬ ಕ್ರಿಯಾಶೀಲ ಬುದ್ಧಿವಂತನಾಗಿ ಕಂಡುಬರುತ್ತಾರೆ. ಆರು ವರ್ಷದ ಮಗುವಿನಿಂದ ಹಿಡಿದು 60 ವರ್ಷದವರೊಂದಿಗೂ ಅವರು ಸಲೀಸಾಗಿ ಬೆರೆಯುತ್ತಾರೆ. ಅವರ ಬಾಹ್ಯನೋಟ ಅವರ ಹೃದಯದಲ್ಲಿ ಸದಾಕಾಲ ಹುದುಗಿರುವ ಸಂತೋಷವನ್ನು ಪ್ರತಿಫಲಿಸುತ್ತದೆ. ಅವರು ಕಾಲೇಜಿನಲ್ಲಿದ್ದಾಗ ಒಂದು ಬ್ಯಾಂಡ್ ಶುರು ಮಾಡಿದ್ದರು. ಆದರೆ ಜನಚಳವಳಿಯ ಭಾಗವಾದ ನಂತರ ಅದನ್ನು ಬಿಟ್ಟರು. ಈಗಲೂ ಅವರು ಹಾಡಿದಾಗ 70ರ ದಶಕದ ರಾಕ್ ಸಂಗೀತದ ರುಚಿಕಟ್ಟು ಅದಕ್ಕಿದೆ.

ವರ್ನನ್ ಅವರ ಬರಹಗಳಲ್ಲಿ ಅವರ ಕಾಣ್ಕೆ ಸ್ಪಷ್ಟವಾಗಿ ಕಂಡುಬರುತ್ತದೆ. ವರ್ಗ, ಜಾತಿ, ಜನಾಂಗದ ಭೇದಗಳಿಲ್ಲದ, ಲೈಂಗಿಕ ಸಮಾನತೆಯ ತತ್ವಗಳನ್ನೊಳಗೊಂಡ ಹಾಗೂ ನ್ಯಾಯಯುತವಾದ ಸಮಾಜದ ಅವರ ನೋಟ ಅವರ ಬರಹಗಳನ್ನು ಓದಿದರೆ ಸ್ಪಷ್ಟವಾಗುತ್ತದೆ. ರಾಜಕೀಯ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುವ ಅವರು ಕ್ಲಿಷ್ಟ ಸಾಮಾಜಿಕ, ರಾಜಕೀಯ, ಆರ್ಥಿಕ ವಿಷಯಗಳ ಬಗ್ಗೆ ಸೂಕ್ಷ್ಮ ಮತ್ತು ಸಮತೋಲನದ ವಾದಗಳನ್ನು ಮುಂದಿಸುತ್ತಾರೆ. ವರ್ನನ್ ಪ್ರಗತಿಪರ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಅರ್ಥ ಮಾಡಿಕೊಳ್ಳಲು ಸದಾ ಉತ್ಸುಕರಾಗಿರುತ್ತಾರೆ.

ಮುಂಬಯಿಯ ಭಾಯಕಲ್ಲಾದ ಒಂದು ಚಾಳನಲ್ಲಿ ಬೆಳೆದ ವರ್ನನ್ ಅವರ ತಂದೆತಾಯಿ ಮಂಗಳೂರು ಮೂಲದ ಕ್ಯಾಥೊಲಿಕ್ಕರು. ಓದಿನಲ್ಲಿ ಯಾವಾಗಲೂ ಮುಂದಿದ್ದ ವರ್ನನ್, ಮುಂಬಯಿ ವಿಶ್ವವಿದ್ಯಾಲಯದಲ್ಲಿ ವಾಣಿಜ್ಯ ವಿಭಾಗದಲ್ಲಿ ಸ್ವರ್ಣ ಪದಕ ಪಡೆದವರು. ಶಿಕ್ಷಣ ಮುಗಿಸಿ, ಸೀಮೆನ್ಸ್ ಕಂಪನಿಯಲ್ಲಿ ಕೆಲ ದಿನ ಕಾರ್ಪೋರೇಟ್ ನೌಕರಿ ಮಾಡಿದರು. ನಂತರ ಮುಂಬಯಿಯ ಟ್ರೇಟ್ ಯುನಿಯನ್‌ಗಳು, ಸ್ಲಮ್‌ನಲ್ಲಿ ಇರುವುವರ ಹಾಗೂ ದುಡಿಯುವ ವರ್ಗದವರೊಂದಿಗೆ ಕೆಲಸ ಮಾಡಲು ತಮ್ಮ ನೌಕರಿಯನ್ನು ಬಿಟ್ಟರು. ಅದೇ ಸಮಯದಲ್ಲಿ ಮುಂಬಯಿಯ ಕೆಲವು ಪ್ರಮುಖ ಕಾಲೇಜುಗಳಾದ ರೂಪರೇಲ್ ಕಾಲೇಜು, ಎಚ್‌ಆರ್ ವಾಣಿಜ್ಯ ಮತ್ತು ಅರ್ಥಶಾಸ್ತ್ರ ಕಾಲೇಜು ಮತ್ತು ಅಕ್ಬರ್ ಪೀರ್‌ಭೋಯ್ ವಾಣಿಜ್ಯ ಮತ್ತು ಅರ್ಥಶಾಸ್ತ್ರ ಕಾಲೇಜುಗಳಲ್ಲಿ ಅಧ್ಯಾಪಕರಾಗಿ ಕೆಲಸ ಮಾಡಿದರು.

1983ರ ಹೊತ್ತಿಗೆ ಅವರು ನಾಗಪುರ ಸಮೀಪದ ಚಂದ್ರಪುರದಲ್ಲಿ ಬಂದು ನೆಲಸಿದರು. ಅಲ್ಲಿ ಕಲ್ಲಿದ್ದಲು ಗಣಿ ಕಾರ್ಮಿಕರನ್ನು ಒಳಗೊಂಡು ಇತರ ಅಸಂಘಟಿತ ವಲಯದ ಕಾರ್ಮಿಕರೊಂದಿಗೆ ಕೆಲಸ ಮಾಡಲು ಪ್ರಾರಂಭಿಸಿದರು. 1984ರಲ್ಲಿ ತಮ್ಮೊಂದಿಗೆ ಕೆಲಸ ಮಾಡುತ್ತಿದ್ದ ಸಾಮಾಜಿಕ ಕಾರ್ಯಕರ್ತೆ ಸೂಸಾನ್ ಅಬ್ರಾಹಮ್ ಜೊತೆಗೆ ಲಗ್ನವಾದರು. ಅದು ಎರಡು ವಿಶಿಷ್ಟ ಹಾಗೂ ತೀವ್ರ ಸ್ವತಂತ್ರ ಮನಸ್ಸುಗಳ ಮಿಲನವಾಗಿತ್ತು. ಚಂದ್ರಪುರದಲ್ಲಿ ಒಂದು ದಶಕ ಕೆಲಸ ಮಾಡಿ, 1994ರಲ್ಲಿ ಮಗ ಸಾಗರ್ ಹುಟ್ಟಿದ ನಂತರ ಮುಂಬಯಿಗೆ ಮರಳಿದರು.

2007ರ ಆಗಸ್ಟ್ 19ರಂದು ಮಹಾರಾಷ್ಟ್ರ ಎಟಿಎಸ್ ವರ್ನನ್ ಅವರನ್ನು ಮುಂಬಯಿಯ ಅಂಧೇರಿಯ ಮನೆಯಿಂದ ಬಂಧಿಸಿದರು. ಆದರೆ ಅವರ ಬಂಧನವನ್ನು ಇನ್ನೊಬ್ಬ ಸಹ ಆರೋಪಿ ಎಸ್ ಶ್ರೀಧರ್ ಅವರ ಗೋವಂಡಿಯ ಮನೆಯಲ್ಲಿ ಮಾಡಲಾಯಿತು ಎಂದು ಸುಳ್ಳಾಗಿ ತೋರಿಸಲಾಯಿತು. ಅವರ ಮೇಲೆ ಸ್ಫೋಟಕ ವಸ್ತುಗಳನ್ನು ಇಟ್ಟುಕೊಂಡ ಟಾಪ್ ಲೆವೆಲ್ ನಕ್ಸಲೈಟ್ ಎಂಬ ಆಪಾದನೆಯನ್ನು ಹೊರೆಸಲಾಯಿತು. ಅದಕ್ಕೆ ಕೆಲ ತಿಂಗಳು ಮುಂಚೆ, ವರ್ನನ್ ಅವರು ಮಹಾರಾಷ್ಟ್ರದ ಚಂದ್ರಪುರ ಜಿಲ್ಲೆಯ ಆದಿವಾಸಿ ಸಮುದಾಯಗಳ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿದ್ದರು. ಅವರ ಮೇಲೆ 20 ಪ್ರಕರಣಗಳನ್ನು ದಾಖಲಿಸಲಾಯಿತು. ವಿಚಾರಣಾಧೀನ ಕೈದಿಯಾಗಿ ಸುಮಾರು 6 ವರ್ಷ ಜೈಲಿನಲಿದ್ದರು. 20 ರಲ್ಲಿ 18 ಪ್ರಕರಣಗಳಲ್ಲಿ ನಿರ್ದೋಷಿ ಎಂದು ತೀರ್ಪು ಬಂತು. ಒಂದು ಪ್ರಕರಣದಲ್ಲಿ ದೋಷಿ ಎಂದು ತೀರ್ಪು ಬಂದು, ಈಗ ನಾಗಪುರ ಹೈಕೋರ್ಟ್‌ನಲ್ಲಿ ಅದರ ವಿರುದ್ಧ ಅಪೀಲ್ ಸಲ್ಲಿಸಲಾಗಿದೆ. ಹಾಗೂ ಕೊನೆಯ ಪ್ರಕರಣದಲ್ಲಿ ಬಿಡುಗಡೆ ಮಾಡಬೇಕು ಎನ್ನುವ ಅರ್ಜಿ ಗುಜರಾತ್ ಹೈಕೋರ್ಟ್ ಮುಂದಿದೆ.

ಜೈಲಿನಲ್ಲಿ ವಿಚಾಣಾಧೀನ ಕೈದಿಯಾಗಿ ವರ್ನನ್ ತಮ್ಮ ಬಹುತೇಕ ಸಮಯವನ್ನು ಬರೆಯುವುದರಲ್ಲಿ ಕಳೆದರು. ಸದ್ಯಕ್ಕೆ ಸೆರೆವಾಸದ ಬಗ್ಗೆಯ ಬರಹಗಳ ಸಂಗ್ರಹದ ಮೇಲೆ ಕೆಲಸ ಮಾಡುತ್ತಿದ್ದಾರೆ. ಜೈಲಿನಲ್ಲಿದ್ದುಕೊಂಡೇ, ಸಣ್ಣ ಕಥೆಗಳ ಸಂಗ್ರಹವನ್ನು ಸಂಪಾದಿಸಿದರು, ಅದರಲ್ಲಿಯ ಒಂದು ಕಥೆ, ಜೈಲ್‌ಬರ್ಡ್ ಜಬ್ಬಾರ್ ಎಂಬುದನ್ನು ಪಕ್ಕಾ ಬಂಬಯ್ಯಾ ಶೈಲಿಯಲ್ಲಿ ಬರೆಯಲಾಗಿದೆ. ಅದರೊಂದಿಗೆ ಮರಾಠಿ ಲೇಖಕ ಅಣ್ಣಾಭಾವು ಸಾಠೆ ಅವರ ಕಥೆಗಳನ್ನು ಇಂಗ್ಲೀಷಿಗೆ ಅನುವಾದ ಮಾಡಿದರು. ಅದನ್ನು ಅ ಕ್ಲಚ್ ಆಫ್ ಶಾರ್ಟ್ ಸ್ಟೋರೀಸ್ ಎಂಬ ಶೀರ್ಷಿಕೆಯಲ್ಲಿ ಅಲೆಫ್ ಪ್ರಕಾಶನ ಪ್ರಕಟಿಸಿತು. ಜೈಲಿನಿಂದ ಬಿಡುಗಡೆಯಾದ ನಂತರ ಅನೇಕ ಲೇಖನಗಳನ್ನು ಬರೆದಿದ್ದಾರೆ. ಅದರಲ್ಲಿ ಯುಎಪಿಎ ಕಾನೂನನ್ನು ಕೊನೆಗೊಳಿಸುವುದರ ಬಗ್ಗೆ, ದಲಿತ ಮತ್ತು ಆದಿವಾಸಿ ಸಮುದಾಯ ಹಕ್ಕುಗಳು, ಪ್ರಸಕ್ತ ಕಾನೂನುಗಳು, ಅಂಚಿನಲ್ಲಿರುವ ದುರ್ಬಲ ಸಮುದಾಯಗಳ ವಿರುದ್ಧ ಸರಕಾರವು ಕ್ರಿಮಿನಲ್ ನ್ಯಾಯ ವ್ಯವಸ್ಥೆಯನ್ನು ಹೇಗೆ ದುರ್ಬಳಿಕೆ ಮಾಡುತ್ತಿದೆ, ಕಾರ್ಪೋರೆಟ್‌ಗಳು ಮತ್ತು ಸರ್ಕಾರದ ನೆಕ್ಸಸ್‌ನಿಂದ ಆಗುವ ಭೂಕಬಳಿಕೆ ಹೀಗೆ ಹಲವು ವಿಷಯಗಳ ಬಗ್ಗೆ ಬರೆದಿದ್ದಾರೆ. ಇತ್ತೀಚಿಗೆ ಪ್ರಕಟಗೊಂಡ ಹಾರ್ಷರ್ ಪನಿಷ್‌ಮೆಂಟ್ಸ್ ಆಂಡ್ ರಿಟ್ರಿಬ್ಯೂಟಿವ್ ಕ್ರಿಮಿನಲ್ ಜಸ್ಟಿಸ್ (ಕಠಿಣ ಶಿಕ್ಷೆಗಳು ಮತ್ತು ಪ್ರತೀಕಾರದ ಕ್ರಿಮಿನಲ್ ನ್ಯಾಯ) ಎಂಬ ಲೇಖನವು ಅಪರಾಧ ನಿಯಂತ್ರಣದ ಒಟ್ಟಾರೆ ಗತಿ ಮತ್ತು ನ್ಯಾಯಾಂಗ ವ್ಯವಸ್ಥೆಯ ಬಗ್ಗೆಯ ವಿಶ್ಲೇಷಣೆಯು ಆ ವಿಷಯದಲ್ಲಿ ಒಂದು ಮೈಲಿಗಲ್ಲಾಗಿದೆ.

ವರ್ನನ್ ಅವರ ಮಗ ಸಾಗರ್, ತನ್ನ ತಂದೆಯ ಬಗ್ಗೆ ಹತ್ತಿರದ ಎಲ್ಲರೂ ಏನನ್ನುತ್ತಾರೆ ಎಂಬುದನ್ನು ಹೀಗೆ ವಿವರಿಸುತ್ತಾರೆ.

ನನ್ನ ತಂದೆಯ ಅನೇಕ ಗುಣಗಳಲ್ಲಿ ನಾನು ಮೆಚ್ಚುವುದು, ತಮ್ಮ ನಂಬಿಕೆ ಮತ್ತು ಆದರ್ಶಗಳ ಬಗ್ಗೆ ಅವರಿಗಿರುವ ಬದ್ಧತೆ. ನ್ಯಾಯದ ಕೆಲಸಕ್ಕೆ ಎದೆಯುಬ್ಬಿಸಿ ನಿಲ್ಲುವುದು ಹಾಗೂ ತಮ್ಮ ಮೂಲಭೂತ ಹಕ್ಕುಗಳಿಂದ ವಂಚಿತರಾದವರ ಜೊತೆಗೆ ನಿಂತು, ಅವರಿಗೆ ಸಹಾಯ ಮಾಡುವುದು. ಇದನ್ನು ಅವರು ಮುಂಚೆಯಿಂದಲೂ ಮಾಡಿಕೊಂಡು ಬಂದಿದ್ದಾರೆ ಹಾಗೂ ಅದನ್ನೇ ಮುಂದುವರೆಸಲಿದ್ದಾರೆ. ಮುಂಚೆಯೂ ಅವರು ಧೈರ್ಯಗುಂದಲಿಲ್ಲ ಹಾಗೂ ಈಗಲೂ ಅವರು ಧೈರ್ಯಗುಂದದೆ ಮುಂದುವರೆಯುವರು. ತಮ್ಮ ನಂಬಿಕೆಗಳಿಗೆ ಎಂದಿಗೂ ಬದ್ಧರಾಗಿರುವ ಅವರ ಅನನ್ಯತೆಯನ್ನು ಕಟ್ಟಿಹಾಕಲು ಸಾಧ್ಯವಿಲ್ಲ”

(ಕೃಪೆ: ಮುಂಬೈ ರೈಸಸ್ ಟು ಸೇವ್ ಡೆಮಾಕ್ರಸಿ)

ಅನುವಾದ: ರಾಜಶೇಖರ ಅಕ್ಕಿ


ಇದನ್ನೂ ಓದಿ: ವಿದ್ಯಾರ್ಥಿಗಳ ನೆಚ್ಚಿನ, ಜನಪ್ರಿಯ ಪ್ರಾಧ್ಯಾಪಕ ಡಾ. ಹನಿ ಬಾಬು ಬಂಧನದಲ್ಲಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...