Homeಚಳವಳಿನ್ಯಾಯಕ್ಕಾಗಿ ಎದೆಯುಬ್ಬಿಸಿ ನಿಲ್ಲುವ ವರ್ನನ್ ಗೊನ್ಸಾಲ್ವೆಸ್ ಜೈಲಿನಲ್ಲಿ...

ನ್ಯಾಯಕ್ಕಾಗಿ ಎದೆಯುಬ್ಬಿಸಿ ನಿಲ್ಲುವ ವರ್ನನ್ ಗೊನ್ಸಾಲ್ವೆಸ್ ಜೈಲಿನಲ್ಲಿ…

ವರ್ನನ್ ಅವರ ಬರಹಗಳಲ್ಲಿ ಅವರ ಕಾಣ್ಕೆ ಸ್ಪಷ್ಟವಾಗಿ ಕಂಡುಬರುತ್ತದೆ. ವರ್ಗ, ಜಾತಿ, ಜನಾಂಗದ ಭೇದಗಳಿಲ್ಲದ, ಲೈಂಗಿಕ ಸಮಾನತೆಯ ತತ್ವಗಳನ್ನೊಳಗೊಂಡ ಹಾಗೂ ನ್ಯಾಯಯುತವಾದ ಸಮಾಜದ ಅವರ ನೋಟ ಅವರ ಬರಹಗಳನ್ನು ಓದಿದರೆ ಸ್ಪಷ್ಟವಾಗುತ್ತದೆ.

- Advertisement -
- Advertisement -

ಯಾವಾಗಲೂ ಅರ್ಧ ತೋಳಿನ ಕಾಟನ್ ಅಂಗಿ, ದೊಗಳೆ ಪ್ಯಾಂಟು, ಕನ್ನಡಕ, ಬಗಲಿಗೆ ಒಂದು ಚೀಲ ಹಾಗೂ ಹೃದಯಪೂರ್ವಕ ನಗುವಿನೊಂದಿಗೆ ಕಾಣಿಸಿಕೊಳ್ಳುವ ವರ್ನನ್ ಗೊನ್ಸಾಲ್ವೆಸ್ ಒಬ್ಬ ಕ್ರಿಯಾಶೀಲ ಬುದ್ಧಿವಂತನಾಗಿ ಕಂಡುಬರುತ್ತಾರೆ. ಆರು ವರ್ಷದ ಮಗುವಿನಿಂದ ಹಿಡಿದು 60 ವರ್ಷದವರೊಂದಿಗೂ ಅವರು ಸಲೀಸಾಗಿ ಬೆರೆಯುತ್ತಾರೆ. ಅವರ ಬಾಹ್ಯನೋಟ ಅವರ ಹೃದಯದಲ್ಲಿ ಸದಾಕಾಲ ಹುದುಗಿರುವ ಸಂತೋಷವನ್ನು ಪ್ರತಿಫಲಿಸುತ್ತದೆ. ಅವರು ಕಾಲೇಜಿನಲ್ಲಿದ್ದಾಗ ಒಂದು ಬ್ಯಾಂಡ್ ಶುರು ಮಾಡಿದ್ದರು. ಆದರೆ ಜನಚಳವಳಿಯ ಭಾಗವಾದ ನಂತರ ಅದನ್ನು ಬಿಟ್ಟರು. ಈಗಲೂ ಅವರು ಹಾಡಿದಾಗ 70ರ ದಶಕದ ರಾಕ್ ಸಂಗೀತದ ರುಚಿಕಟ್ಟು ಅದಕ್ಕಿದೆ.

ವರ್ನನ್ ಅವರ ಬರಹಗಳಲ್ಲಿ ಅವರ ಕಾಣ್ಕೆ ಸ್ಪಷ್ಟವಾಗಿ ಕಂಡುಬರುತ್ತದೆ. ವರ್ಗ, ಜಾತಿ, ಜನಾಂಗದ ಭೇದಗಳಿಲ್ಲದ, ಲೈಂಗಿಕ ಸಮಾನತೆಯ ತತ್ವಗಳನ್ನೊಳಗೊಂಡ ಹಾಗೂ ನ್ಯಾಯಯುತವಾದ ಸಮಾಜದ ಅವರ ನೋಟ ಅವರ ಬರಹಗಳನ್ನು ಓದಿದರೆ ಸ್ಪಷ್ಟವಾಗುತ್ತದೆ. ರಾಜಕೀಯ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುವ ಅವರು ಕ್ಲಿಷ್ಟ ಸಾಮಾಜಿಕ, ರಾಜಕೀಯ, ಆರ್ಥಿಕ ವಿಷಯಗಳ ಬಗ್ಗೆ ಸೂಕ್ಷ್ಮ ಮತ್ತು ಸಮತೋಲನದ ವಾದಗಳನ್ನು ಮುಂದಿಸುತ್ತಾರೆ. ವರ್ನನ್ ಪ್ರಗತಿಪರ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಅರ್ಥ ಮಾಡಿಕೊಳ್ಳಲು ಸದಾ ಉತ್ಸುಕರಾಗಿರುತ್ತಾರೆ.

ಮುಂಬಯಿಯ ಭಾಯಕಲ್ಲಾದ ಒಂದು ಚಾಳನಲ್ಲಿ ಬೆಳೆದ ವರ್ನನ್ ಅವರ ತಂದೆತಾಯಿ ಮಂಗಳೂರು ಮೂಲದ ಕ್ಯಾಥೊಲಿಕ್ಕರು. ಓದಿನಲ್ಲಿ ಯಾವಾಗಲೂ ಮುಂದಿದ್ದ ವರ್ನನ್, ಮುಂಬಯಿ ವಿಶ್ವವಿದ್ಯಾಲಯದಲ್ಲಿ ವಾಣಿಜ್ಯ ವಿಭಾಗದಲ್ಲಿ ಸ್ವರ್ಣ ಪದಕ ಪಡೆದವರು. ಶಿಕ್ಷಣ ಮುಗಿಸಿ, ಸೀಮೆನ್ಸ್ ಕಂಪನಿಯಲ್ಲಿ ಕೆಲ ದಿನ ಕಾರ್ಪೋರೇಟ್ ನೌಕರಿ ಮಾಡಿದರು. ನಂತರ ಮುಂಬಯಿಯ ಟ್ರೇಟ್ ಯುನಿಯನ್‌ಗಳು, ಸ್ಲಮ್‌ನಲ್ಲಿ ಇರುವುವರ ಹಾಗೂ ದುಡಿಯುವ ವರ್ಗದವರೊಂದಿಗೆ ಕೆಲಸ ಮಾಡಲು ತಮ್ಮ ನೌಕರಿಯನ್ನು ಬಿಟ್ಟರು. ಅದೇ ಸಮಯದಲ್ಲಿ ಮುಂಬಯಿಯ ಕೆಲವು ಪ್ರಮುಖ ಕಾಲೇಜುಗಳಾದ ರೂಪರೇಲ್ ಕಾಲೇಜು, ಎಚ್‌ಆರ್ ವಾಣಿಜ್ಯ ಮತ್ತು ಅರ್ಥಶಾಸ್ತ್ರ ಕಾಲೇಜು ಮತ್ತು ಅಕ್ಬರ್ ಪೀರ್‌ಭೋಯ್ ವಾಣಿಜ್ಯ ಮತ್ತು ಅರ್ಥಶಾಸ್ತ್ರ ಕಾಲೇಜುಗಳಲ್ಲಿ ಅಧ್ಯಾಪಕರಾಗಿ ಕೆಲಸ ಮಾಡಿದರು.

1983ರ ಹೊತ್ತಿಗೆ ಅವರು ನಾಗಪುರ ಸಮೀಪದ ಚಂದ್ರಪುರದಲ್ಲಿ ಬಂದು ನೆಲಸಿದರು. ಅಲ್ಲಿ ಕಲ್ಲಿದ್ದಲು ಗಣಿ ಕಾರ್ಮಿಕರನ್ನು ಒಳಗೊಂಡು ಇತರ ಅಸಂಘಟಿತ ವಲಯದ ಕಾರ್ಮಿಕರೊಂದಿಗೆ ಕೆಲಸ ಮಾಡಲು ಪ್ರಾರಂಭಿಸಿದರು. 1984ರಲ್ಲಿ ತಮ್ಮೊಂದಿಗೆ ಕೆಲಸ ಮಾಡುತ್ತಿದ್ದ ಸಾಮಾಜಿಕ ಕಾರ್ಯಕರ್ತೆ ಸೂಸಾನ್ ಅಬ್ರಾಹಮ್ ಜೊತೆಗೆ ಲಗ್ನವಾದರು. ಅದು ಎರಡು ವಿಶಿಷ್ಟ ಹಾಗೂ ತೀವ್ರ ಸ್ವತಂತ್ರ ಮನಸ್ಸುಗಳ ಮಿಲನವಾಗಿತ್ತು. ಚಂದ್ರಪುರದಲ್ಲಿ ಒಂದು ದಶಕ ಕೆಲಸ ಮಾಡಿ, 1994ರಲ್ಲಿ ಮಗ ಸಾಗರ್ ಹುಟ್ಟಿದ ನಂತರ ಮುಂಬಯಿಗೆ ಮರಳಿದರು.

2007ರ ಆಗಸ್ಟ್ 19ರಂದು ಮಹಾರಾಷ್ಟ್ರ ಎಟಿಎಸ್ ವರ್ನನ್ ಅವರನ್ನು ಮುಂಬಯಿಯ ಅಂಧೇರಿಯ ಮನೆಯಿಂದ ಬಂಧಿಸಿದರು. ಆದರೆ ಅವರ ಬಂಧನವನ್ನು ಇನ್ನೊಬ್ಬ ಸಹ ಆರೋಪಿ ಎಸ್ ಶ್ರೀಧರ್ ಅವರ ಗೋವಂಡಿಯ ಮನೆಯಲ್ಲಿ ಮಾಡಲಾಯಿತು ಎಂದು ಸುಳ್ಳಾಗಿ ತೋರಿಸಲಾಯಿತು. ಅವರ ಮೇಲೆ ಸ್ಫೋಟಕ ವಸ್ತುಗಳನ್ನು ಇಟ್ಟುಕೊಂಡ ಟಾಪ್ ಲೆವೆಲ್ ನಕ್ಸಲೈಟ್ ಎಂಬ ಆಪಾದನೆಯನ್ನು ಹೊರೆಸಲಾಯಿತು. ಅದಕ್ಕೆ ಕೆಲ ತಿಂಗಳು ಮುಂಚೆ, ವರ್ನನ್ ಅವರು ಮಹಾರಾಷ್ಟ್ರದ ಚಂದ್ರಪುರ ಜಿಲ್ಲೆಯ ಆದಿವಾಸಿ ಸಮುದಾಯಗಳ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿದ್ದರು. ಅವರ ಮೇಲೆ 20 ಪ್ರಕರಣಗಳನ್ನು ದಾಖಲಿಸಲಾಯಿತು. ವಿಚಾರಣಾಧೀನ ಕೈದಿಯಾಗಿ ಸುಮಾರು 6 ವರ್ಷ ಜೈಲಿನಲಿದ್ದರು. 20 ರಲ್ಲಿ 18 ಪ್ರಕರಣಗಳಲ್ಲಿ ನಿರ್ದೋಷಿ ಎಂದು ತೀರ್ಪು ಬಂತು. ಒಂದು ಪ್ರಕರಣದಲ್ಲಿ ದೋಷಿ ಎಂದು ತೀರ್ಪು ಬಂದು, ಈಗ ನಾಗಪುರ ಹೈಕೋರ್ಟ್‌ನಲ್ಲಿ ಅದರ ವಿರುದ್ಧ ಅಪೀಲ್ ಸಲ್ಲಿಸಲಾಗಿದೆ. ಹಾಗೂ ಕೊನೆಯ ಪ್ರಕರಣದಲ್ಲಿ ಬಿಡುಗಡೆ ಮಾಡಬೇಕು ಎನ್ನುವ ಅರ್ಜಿ ಗುಜರಾತ್ ಹೈಕೋರ್ಟ್ ಮುಂದಿದೆ.

ಜೈಲಿನಲ್ಲಿ ವಿಚಾಣಾಧೀನ ಕೈದಿಯಾಗಿ ವರ್ನನ್ ತಮ್ಮ ಬಹುತೇಕ ಸಮಯವನ್ನು ಬರೆಯುವುದರಲ್ಲಿ ಕಳೆದರು. ಸದ್ಯಕ್ಕೆ ಸೆರೆವಾಸದ ಬಗ್ಗೆಯ ಬರಹಗಳ ಸಂಗ್ರಹದ ಮೇಲೆ ಕೆಲಸ ಮಾಡುತ್ತಿದ್ದಾರೆ. ಜೈಲಿನಲ್ಲಿದ್ದುಕೊಂಡೇ, ಸಣ್ಣ ಕಥೆಗಳ ಸಂಗ್ರಹವನ್ನು ಸಂಪಾದಿಸಿದರು, ಅದರಲ್ಲಿಯ ಒಂದು ಕಥೆ, ಜೈಲ್‌ಬರ್ಡ್ ಜಬ್ಬಾರ್ ಎಂಬುದನ್ನು ಪಕ್ಕಾ ಬಂಬಯ್ಯಾ ಶೈಲಿಯಲ್ಲಿ ಬರೆಯಲಾಗಿದೆ. ಅದರೊಂದಿಗೆ ಮರಾಠಿ ಲೇಖಕ ಅಣ್ಣಾಭಾವು ಸಾಠೆ ಅವರ ಕಥೆಗಳನ್ನು ಇಂಗ್ಲೀಷಿಗೆ ಅನುವಾದ ಮಾಡಿದರು. ಅದನ್ನು ಅ ಕ್ಲಚ್ ಆಫ್ ಶಾರ್ಟ್ ಸ್ಟೋರೀಸ್ ಎಂಬ ಶೀರ್ಷಿಕೆಯಲ್ಲಿ ಅಲೆಫ್ ಪ್ರಕಾಶನ ಪ್ರಕಟಿಸಿತು. ಜೈಲಿನಿಂದ ಬಿಡುಗಡೆಯಾದ ನಂತರ ಅನೇಕ ಲೇಖನಗಳನ್ನು ಬರೆದಿದ್ದಾರೆ. ಅದರಲ್ಲಿ ಯುಎಪಿಎ ಕಾನೂನನ್ನು ಕೊನೆಗೊಳಿಸುವುದರ ಬಗ್ಗೆ, ದಲಿತ ಮತ್ತು ಆದಿವಾಸಿ ಸಮುದಾಯ ಹಕ್ಕುಗಳು, ಪ್ರಸಕ್ತ ಕಾನೂನುಗಳು, ಅಂಚಿನಲ್ಲಿರುವ ದುರ್ಬಲ ಸಮುದಾಯಗಳ ವಿರುದ್ಧ ಸರಕಾರವು ಕ್ರಿಮಿನಲ್ ನ್ಯಾಯ ವ್ಯವಸ್ಥೆಯನ್ನು ಹೇಗೆ ದುರ್ಬಳಿಕೆ ಮಾಡುತ್ತಿದೆ, ಕಾರ್ಪೋರೆಟ್‌ಗಳು ಮತ್ತು ಸರ್ಕಾರದ ನೆಕ್ಸಸ್‌ನಿಂದ ಆಗುವ ಭೂಕಬಳಿಕೆ ಹೀಗೆ ಹಲವು ವಿಷಯಗಳ ಬಗ್ಗೆ ಬರೆದಿದ್ದಾರೆ. ಇತ್ತೀಚಿಗೆ ಪ್ರಕಟಗೊಂಡ ಹಾರ್ಷರ್ ಪನಿಷ್‌ಮೆಂಟ್ಸ್ ಆಂಡ್ ರಿಟ್ರಿಬ್ಯೂಟಿವ್ ಕ್ರಿಮಿನಲ್ ಜಸ್ಟಿಸ್ (ಕಠಿಣ ಶಿಕ್ಷೆಗಳು ಮತ್ತು ಪ್ರತೀಕಾರದ ಕ್ರಿಮಿನಲ್ ನ್ಯಾಯ) ಎಂಬ ಲೇಖನವು ಅಪರಾಧ ನಿಯಂತ್ರಣದ ಒಟ್ಟಾರೆ ಗತಿ ಮತ್ತು ನ್ಯಾಯಾಂಗ ವ್ಯವಸ್ಥೆಯ ಬಗ್ಗೆಯ ವಿಶ್ಲೇಷಣೆಯು ಆ ವಿಷಯದಲ್ಲಿ ಒಂದು ಮೈಲಿಗಲ್ಲಾಗಿದೆ.

ವರ್ನನ್ ಅವರ ಮಗ ಸಾಗರ್, ತನ್ನ ತಂದೆಯ ಬಗ್ಗೆ ಹತ್ತಿರದ ಎಲ್ಲರೂ ಏನನ್ನುತ್ತಾರೆ ಎಂಬುದನ್ನು ಹೀಗೆ ವಿವರಿಸುತ್ತಾರೆ.

ನನ್ನ ತಂದೆಯ ಅನೇಕ ಗುಣಗಳಲ್ಲಿ ನಾನು ಮೆಚ್ಚುವುದು, ತಮ್ಮ ನಂಬಿಕೆ ಮತ್ತು ಆದರ್ಶಗಳ ಬಗ್ಗೆ ಅವರಿಗಿರುವ ಬದ್ಧತೆ. ನ್ಯಾಯದ ಕೆಲಸಕ್ಕೆ ಎದೆಯುಬ್ಬಿಸಿ ನಿಲ್ಲುವುದು ಹಾಗೂ ತಮ್ಮ ಮೂಲಭೂತ ಹಕ್ಕುಗಳಿಂದ ವಂಚಿತರಾದವರ ಜೊತೆಗೆ ನಿಂತು, ಅವರಿಗೆ ಸಹಾಯ ಮಾಡುವುದು. ಇದನ್ನು ಅವರು ಮುಂಚೆಯಿಂದಲೂ ಮಾಡಿಕೊಂಡು ಬಂದಿದ್ದಾರೆ ಹಾಗೂ ಅದನ್ನೇ ಮುಂದುವರೆಸಲಿದ್ದಾರೆ. ಮುಂಚೆಯೂ ಅವರು ಧೈರ್ಯಗುಂದಲಿಲ್ಲ ಹಾಗೂ ಈಗಲೂ ಅವರು ಧೈರ್ಯಗುಂದದೆ ಮುಂದುವರೆಯುವರು. ತಮ್ಮ ನಂಬಿಕೆಗಳಿಗೆ ಎಂದಿಗೂ ಬದ್ಧರಾಗಿರುವ ಅವರ ಅನನ್ಯತೆಯನ್ನು ಕಟ್ಟಿಹಾಕಲು ಸಾಧ್ಯವಿಲ್ಲ”

(ಕೃಪೆ: ಮುಂಬೈ ರೈಸಸ್ ಟು ಸೇವ್ ಡೆಮಾಕ್ರಸಿ)

ಅನುವಾದ: ರಾಜಶೇಖರ ಅಕ್ಕಿ


ಇದನ್ನೂ ಓದಿ: ವಿದ್ಯಾರ್ಥಿಗಳ ನೆಚ್ಚಿನ, ಜನಪ್ರಿಯ ಪ್ರಾಧ್ಯಾಪಕ ಡಾ. ಹನಿ ಬಾಬು ಬಂಧನದಲ್ಲಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ಧಗಳಿಂದ ಬೆದರಿಕೆ: ಕಾಂಗ್ರೆಸ್ ನಿಂದ ರಾಜೀವ್ ಗೌಡ ಅಮಾನತು

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್ ಅಭಿನಯದ ಕಲ್ಟ್ ಚಿತ್ರದ ಬ್ಯಾನರ್ ತೆರವು ಮಾಡಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಕರೆ ಮಾಡಿ ಅಸಭ್ಯವಾಗಿ ನಿಂದಿಸಿ,...

ಭೀಮಾ ಕೋರೆಗಾಂವ್ ಪ್ರಕರಣ: ನಾಲ್ಕು ವರ್ಷಗಳ ನಂತರ ಇಬ್ಬರಿಗೆ ಬಾಂಬೆ ಹೈಕೋರ್ಟ್‌ನಿಂದ ಜಾಮೀನು

ಎಲ್ಗರ್ ಪರಿಷತ್ ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧನಕ್ಕೊಳಗಾದ ನಾಲ್ಕು ವರ್ಷಗಳ ನಂತರ, ಸಾಮಾಜಿಕ ಕಾರ್ಯಕರ್ತರಾದ ಸಾಗರ್ ಗೋರ್ಖೆ ಮತ್ತು ರಮೇಶ್ ಗೈಚೋರ್ ಅವರಿಗೆ ಬಾಂಬೆ ಹೈಕೋರ್ಟ್ ಶುಕ್ರವಾರ ಜಾಮೀನು ನೀಡಿದೆ. ಈಗಾಗಲೇ ಬಿಡುಗಡೆಯಾದ...

‘ಗುಜರಾತ್‌ನಂತೆಯೇ ಕೇರಳವೂ ಈಗ ಬಿಜೆಪಿಯ ಮೇಲೆ ನಂಬಿಕೆ ಇಟ್ಟಿದೆ’: ಪ್ರಧಾನಿ ನರೇಂದ್ರ ಮೋದಿ 

ತಿರುವನಂತಪುರಂ: ಕೇರಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ, ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ತಿರುವನಂತಪುರಂ ಕಾರ್ಪೊರೇಷನ್ ಚುನಾವಣೆಯಲ್ಲಿ ಬಿಜೆಪಿಯ ಐತಿಹಾಸಿಕ ವಿಜಯವನ್ನು "ಬದಲಾವಣೆಗೆ ಮಹತ್ವದ ಜನಾದೇಶ" ಎಂದು ಶ್ಲಾಘಿಸಿದ್ದಾರೆ.  ಇದೇ ವೇಳೆ "ಜನಪರ ಮತ್ತು...

ರಾಜಸ್ಥಾನ: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ನಡುವೆ ಪ್ರೀತಿ: ಮದುವೆಗಾಗಿ ಪೆರೋಲ್ ಮೇಲೆ ಹೊರ ಬಂದ ಕೊಲೆ ಅಪರಾಧಿಗಳು

ಜೈಪುರದ ಸಂಗನೇರ್ ಓಪನ್ ಜೈಲಿನಲ್ಲಿ(ಮುಕ್ತ ಜೈಲು) ಪ್ರಾರಂಭವಾದ ಇಬ್ಬರು ಕೊಲೆ ಅಪರಾಧಿಗಳ ನಡುವಿನ ಪ್ರಣಯವು ಸಾರ್ವಜನಿಕ ಜೀವನಕ್ಕೂ ಕಾಲಿರಿಸಿದೆ. ಕೊಲೆ ಪ್ರಕರಣಗಳಲ್ಲಿ ಜೀವಾವಧಿಗೆ ಒಳಗಾಗಿರುವ ಇಬ್ಬರು ಕೈದಿಗಳು ಮದುವೆಯಾಗಲು ಪೆರೋಲ್ ಮೇಲೆ ಹೊರಬಂದಿದ್ದಾರೆ. ಅಪರಾಧ...

‘ಅತ್ಯಾಚಾರ-ಕೊಲೆ ಸಣ್ಣ ಘಟನೆ’: ಸಂಸದ ರಾಜಶೇಖರ್ ಹಿಟ್ನಾಳ್ ವಿವಾದಾತ್ಮಕ ಹೇಳಿಕೆ: ಸಂಸದರ ಹೇಳಿಕೆಗೆ ವ್ಯಾಪಕ ಖಂಡನೆ 

ಕೊಪ್ಪಳ: ಒಂದು ವರ್ಷದ ಹಿಂದೆ ಸಾಣಾಪುರದಲ್ಲಿ ವಿದೇಶಿ ಮಹಿಳೆ ಮೇಲೆ ನಡೆದ ಅತ್ಯಾಚಾರ ಹಾಗೂ ವ್ಯಕ್ತಿಯ ಕೊಲೆ ಪ್ರಕರಣ ಸಣ್ಣದಾಗಿದ್ದರೂ ಮಾಧ್ಯಮಗಳು ವೈಭವೀಕರಿಸಿದ್ದರಿಂದ ಪ್ರವಾಸೋದ್ಯಮಕ್ಕೆ ವ್ಯಾಪಕ ಪೆಟ್ಟು ಬಿದ್ದಿದೆ ಎಂದು ಸಂಸದ ರಾಜಶೇಖರ...

ರಾಹುಲ್ ಕಡೆಗಣನೆ ಆರೋಪ: ಅಸಮಾಧಾನಗೊಂಡ ಶಶಿ ತರೂರ್, ಕೇರಳ ಕಾಂಗ್ರೆಸ್ ಕಾರ್ಯತಂತ್ರದ ಸಭೆಗೆ ಗೈರಾಗುವ ಸಾಧ್ಯತೆ!

ನವದೆಹಲಿ: ಕೇರಳ ಕಾಂಗ್ರೆಸ್ ಘಟಕದಲ್ಲಿ ಹೊಸ ಬಿಕ್ಕಟ್ಟು ಉಂಟಾಗಿದ್ದು, ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಪಕ್ಷದ ಕಾರ್ಯಕ್ರಮವೊಂದರಲ್ಲಿ ತಮ್ಮನ್ನು ಕಡೆಗಣಿಸಿದ್ದರಿಂದ ಅಸಮಾಧಾನಗೊಂಡಿರುವ ಹಿರಿಯ ಸಂಸದ ಶಶಿ ತರೂರ್, ಚುನಾವಣಾ...

ಒಡಿಶಾ| ಮದುವೆ ಪ್ರಸ್ತಾಪ ತಿರಸ್ಕರಿಸಿದ ಮಹಿಳೆ ಮೇಲೆ ಸೇಡು; ನಕಲಿ ಖಾತೆ ತೆರೆದು ಜಗನ್ನಾಥ ದೇಗುಲ ಸ್ಪೋಟಿಸುವ ಬೆದರಿಕೆ

ಮಹಿಳೆಯ ಹೆಸರಿನಲ್ಲಿ ನಕಲಿ ಸಾಮಾಜಿಕ ಮಾಧ್ಯಮ ಖಾತೆಯನ್ನು ರಚಿಸಿ ಒಡಿಶಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆ...

ಬೈಕ್ ಟ್ಯಾಕ್ಸಿ ನಿಷೇಧ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್, ಪರ್ಮಿಟ್ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಜನವರಿ 23 ರಂದು ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ಅನುಮತಿ ನೀಡಿದ್ದು, ಬೈಕ್ ಟ್ಯಾಕ್ಸಿ ಸಂಗ್ರಾಹಕರು, ವೈಯಕ್ತಿಕ ಬೈಕ್ ಟ್ಯಾಕ್ಸಿ ಮಾಲೀಕರು ಮತ್ತು ಇತರರು ಸಲ್ಲಿಸಿದ ಮೇಲ್ಮನವಿಗಳನ್ನು ಅಂಗೀಕರಿಸಿದೆ. ಮುಖ್ಯ...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 22 ಮಂದಿ ಅಸ್ವಸ್ಥ

ಮಧ್ಯಪ್ರದೇಶದ ಇಂದೋರ್‌ನಲ್ಲಿ ಕಲುಷಿತ ನೀರು ಸೇವಿಸಿ ಕನಿಷ್ಠ 22 ಜನರು ಅಸ್ವಸ್ಥರಾಗಿದ್ದಾರೆ. ಕೆಲವೇ ವಾರಗಳ ಹಿಂದೆ ಕಲುಷಿತ ನೀರಿನಿಂದ ಹರಡುವ ರೋಗಗಳಿಂದ ಕನಿಷ್ಠ 23 ಜನರು ಸಾವನ್ನಪ್ಪಿದ್ದು, ಹಲವಾರು ಜನರು ಆಸ್ಪತ್ರೆಗೆ ದಾಖಲಾಗಿದ್ದರು....

ರಾಜ್ಯಪಾಲರ ಭಾಷಣ ಪದ್ಧತಿ ಕೊನೆಗೊಳಿಸುವ ಸಮಯ ಬಂದಿದೆ: ಮುಖ್ಯಮಂತ್ರಿ ಸ್ಟಾಲಿನ್

ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಹೆಹ್ಲೋಟ್ ಸದನವನ್ನು ಉದ್ದೇಶಿಸಿ ಸಂಪೂರ್ಣ ಸಾಂಪ್ರದಾಯಿಕ ಭಾಷಣವನ್ನು ಓದದೆ ವಿಧಾನಸಭೆಯಿಂದ ನಿರ್ಗಮಿಸಿರುವುದು ಇದೀಗ ರಾಷ್ಟ್ರಮಟ್ಟದ ಗಮನ ಸೆಳೆದಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ತಮಿಳುನಾಡು ಮುಖ್ಯಮಂತ್ರಿ ಎಂಕೆ...