Homeಚಳವಳಿನ್ಯಾಯಕ್ಕಾಗಿ ಎದೆಯುಬ್ಬಿಸಿ ನಿಲ್ಲುವ ವರ್ನನ್ ಗೊನ್ಸಾಲ್ವೆಸ್ ಜೈಲಿನಲ್ಲಿ...

ನ್ಯಾಯಕ್ಕಾಗಿ ಎದೆಯುಬ್ಬಿಸಿ ನಿಲ್ಲುವ ವರ್ನನ್ ಗೊನ್ಸಾಲ್ವೆಸ್ ಜೈಲಿನಲ್ಲಿ…

ವರ್ನನ್ ಅವರ ಬರಹಗಳಲ್ಲಿ ಅವರ ಕಾಣ್ಕೆ ಸ್ಪಷ್ಟವಾಗಿ ಕಂಡುಬರುತ್ತದೆ. ವರ್ಗ, ಜಾತಿ, ಜನಾಂಗದ ಭೇದಗಳಿಲ್ಲದ, ಲೈಂಗಿಕ ಸಮಾನತೆಯ ತತ್ವಗಳನ್ನೊಳಗೊಂಡ ಹಾಗೂ ನ್ಯಾಯಯುತವಾದ ಸಮಾಜದ ಅವರ ನೋಟ ಅವರ ಬರಹಗಳನ್ನು ಓದಿದರೆ ಸ್ಪಷ್ಟವಾಗುತ್ತದೆ.

- Advertisement -
- Advertisement -

ಯಾವಾಗಲೂ ಅರ್ಧ ತೋಳಿನ ಕಾಟನ್ ಅಂಗಿ, ದೊಗಳೆ ಪ್ಯಾಂಟು, ಕನ್ನಡಕ, ಬಗಲಿಗೆ ಒಂದು ಚೀಲ ಹಾಗೂ ಹೃದಯಪೂರ್ವಕ ನಗುವಿನೊಂದಿಗೆ ಕಾಣಿಸಿಕೊಳ್ಳುವ ವರ್ನನ್ ಗೊನ್ಸಾಲ್ವೆಸ್ ಒಬ್ಬ ಕ್ರಿಯಾಶೀಲ ಬುದ್ಧಿವಂತನಾಗಿ ಕಂಡುಬರುತ್ತಾರೆ. ಆರು ವರ್ಷದ ಮಗುವಿನಿಂದ ಹಿಡಿದು 60 ವರ್ಷದವರೊಂದಿಗೂ ಅವರು ಸಲೀಸಾಗಿ ಬೆರೆಯುತ್ತಾರೆ. ಅವರ ಬಾಹ್ಯನೋಟ ಅವರ ಹೃದಯದಲ್ಲಿ ಸದಾಕಾಲ ಹುದುಗಿರುವ ಸಂತೋಷವನ್ನು ಪ್ರತಿಫಲಿಸುತ್ತದೆ. ಅವರು ಕಾಲೇಜಿನಲ್ಲಿದ್ದಾಗ ಒಂದು ಬ್ಯಾಂಡ್ ಶುರು ಮಾಡಿದ್ದರು. ಆದರೆ ಜನಚಳವಳಿಯ ಭಾಗವಾದ ನಂತರ ಅದನ್ನು ಬಿಟ್ಟರು. ಈಗಲೂ ಅವರು ಹಾಡಿದಾಗ 70ರ ದಶಕದ ರಾಕ್ ಸಂಗೀತದ ರುಚಿಕಟ್ಟು ಅದಕ್ಕಿದೆ.

ವರ್ನನ್ ಅವರ ಬರಹಗಳಲ್ಲಿ ಅವರ ಕಾಣ್ಕೆ ಸ್ಪಷ್ಟವಾಗಿ ಕಂಡುಬರುತ್ತದೆ. ವರ್ಗ, ಜಾತಿ, ಜನಾಂಗದ ಭೇದಗಳಿಲ್ಲದ, ಲೈಂಗಿಕ ಸಮಾನತೆಯ ತತ್ವಗಳನ್ನೊಳಗೊಂಡ ಹಾಗೂ ನ್ಯಾಯಯುತವಾದ ಸಮಾಜದ ಅವರ ನೋಟ ಅವರ ಬರಹಗಳನ್ನು ಓದಿದರೆ ಸ್ಪಷ್ಟವಾಗುತ್ತದೆ. ರಾಜಕೀಯ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುವ ಅವರು ಕ್ಲಿಷ್ಟ ಸಾಮಾಜಿಕ, ರಾಜಕೀಯ, ಆರ್ಥಿಕ ವಿಷಯಗಳ ಬಗ್ಗೆ ಸೂಕ್ಷ್ಮ ಮತ್ತು ಸಮತೋಲನದ ವಾದಗಳನ್ನು ಮುಂದಿಸುತ್ತಾರೆ. ವರ್ನನ್ ಪ್ರಗತಿಪರ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಅರ್ಥ ಮಾಡಿಕೊಳ್ಳಲು ಸದಾ ಉತ್ಸುಕರಾಗಿರುತ್ತಾರೆ.

ಮುಂಬಯಿಯ ಭಾಯಕಲ್ಲಾದ ಒಂದು ಚಾಳನಲ್ಲಿ ಬೆಳೆದ ವರ್ನನ್ ಅವರ ತಂದೆತಾಯಿ ಮಂಗಳೂರು ಮೂಲದ ಕ್ಯಾಥೊಲಿಕ್ಕರು. ಓದಿನಲ್ಲಿ ಯಾವಾಗಲೂ ಮುಂದಿದ್ದ ವರ್ನನ್, ಮುಂಬಯಿ ವಿಶ್ವವಿದ್ಯಾಲಯದಲ್ಲಿ ವಾಣಿಜ್ಯ ವಿಭಾಗದಲ್ಲಿ ಸ್ವರ್ಣ ಪದಕ ಪಡೆದವರು. ಶಿಕ್ಷಣ ಮುಗಿಸಿ, ಸೀಮೆನ್ಸ್ ಕಂಪನಿಯಲ್ಲಿ ಕೆಲ ದಿನ ಕಾರ್ಪೋರೇಟ್ ನೌಕರಿ ಮಾಡಿದರು. ನಂತರ ಮುಂಬಯಿಯ ಟ್ರೇಟ್ ಯುನಿಯನ್‌ಗಳು, ಸ್ಲಮ್‌ನಲ್ಲಿ ಇರುವುವರ ಹಾಗೂ ದುಡಿಯುವ ವರ್ಗದವರೊಂದಿಗೆ ಕೆಲಸ ಮಾಡಲು ತಮ್ಮ ನೌಕರಿಯನ್ನು ಬಿಟ್ಟರು. ಅದೇ ಸಮಯದಲ್ಲಿ ಮುಂಬಯಿಯ ಕೆಲವು ಪ್ರಮುಖ ಕಾಲೇಜುಗಳಾದ ರೂಪರೇಲ್ ಕಾಲೇಜು, ಎಚ್‌ಆರ್ ವಾಣಿಜ್ಯ ಮತ್ತು ಅರ್ಥಶಾಸ್ತ್ರ ಕಾಲೇಜು ಮತ್ತು ಅಕ್ಬರ್ ಪೀರ್‌ಭೋಯ್ ವಾಣಿಜ್ಯ ಮತ್ತು ಅರ್ಥಶಾಸ್ತ್ರ ಕಾಲೇಜುಗಳಲ್ಲಿ ಅಧ್ಯಾಪಕರಾಗಿ ಕೆಲಸ ಮಾಡಿದರು.

1983ರ ಹೊತ್ತಿಗೆ ಅವರು ನಾಗಪುರ ಸಮೀಪದ ಚಂದ್ರಪುರದಲ್ಲಿ ಬಂದು ನೆಲಸಿದರು. ಅಲ್ಲಿ ಕಲ್ಲಿದ್ದಲು ಗಣಿ ಕಾರ್ಮಿಕರನ್ನು ಒಳಗೊಂಡು ಇತರ ಅಸಂಘಟಿತ ವಲಯದ ಕಾರ್ಮಿಕರೊಂದಿಗೆ ಕೆಲಸ ಮಾಡಲು ಪ್ರಾರಂಭಿಸಿದರು. 1984ರಲ್ಲಿ ತಮ್ಮೊಂದಿಗೆ ಕೆಲಸ ಮಾಡುತ್ತಿದ್ದ ಸಾಮಾಜಿಕ ಕಾರ್ಯಕರ್ತೆ ಸೂಸಾನ್ ಅಬ್ರಾಹಮ್ ಜೊತೆಗೆ ಲಗ್ನವಾದರು. ಅದು ಎರಡು ವಿಶಿಷ್ಟ ಹಾಗೂ ತೀವ್ರ ಸ್ವತಂತ್ರ ಮನಸ್ಸುಗಳ ಮಿಲನವಾಗಿತ್ತು. ಚಂದ್ರಪುರದಲ್ಲಿ ಒಂದು ದಶಕ ಕೆಲಸ ಮಾಡಿ, 1994ರಲ್ಲಿ ಮಗ ಸಾಗರ್ ಹುಟ್ಟಿದ ನಂತರ ಮುಂಬಯಿಗೆ ಮರಳಿದರು.

2007ರ ಆಗಸ್ಟ್ 19ರಂದು ಮಹಾರಾಷ್ಟ್ರ ಎಟಿಎಸ್ ವರ್ನನ್ ಅವರನ್ನು ಮುಂಬಯಿಯ ಅಂಧೇರಿಯ ಮನೆಯಿಂದ ಬಂಧಿಸಿದರು. ಆದರೆ ಅವರ ಬಂಧನವನ್ನು ಇನ್ನೊಬ್ಬ ಸಹ ಆರೋಪಿ ಎಸ್ ಶ್ರೀಧರ್ ಅವರ ಗೋವಂಡಿಯ ಮನೆಯಲ್ಲಿ ಮಾಡಲಾಯಿತು ಎಂದು ಸುಳ್ಳಾಗಿ ತೋರಿಸಲಾಯಿತು. ಅವರ ಮೇಲೆ ಸ್ಫೋಟಕ ವಸ್ತುಗಳನ್ನು ಇಟ್ಟುಕೊಂಡ ಟಾಪ್ ಲೆವೆಲ್ ನಕ್ಸಲೈಟ್ ಎಂಬ ಆಪಾದನೆಯನ್ನು ಹೊರೆಸಲಾಯಿತು. ಅದಕ್ಕೆ ಕೆಲ ತಿಂಗಳು ಮುಂಚೆ, ವರ್ನನ್ ಅವರು ಮಹಾರಾಷ್ಟ್ರದ ಚಂದ್ರಪುರ ಜಿಲ್ಲೆಯ ಆದಿವಾಸಿ ಸಮುದಾಯಗಳ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿದ್ದರು. ಅವರ ಮೇಲೆ 20 ಪ್ರಕರಣಗಳನ್ನು ದಾಖಲಿಸಲಾಯಿತು. ವಿಚಾರಣಾಧೀನ ಕೈದಿಯಾಗಿ ಸುಮಾರು 6 ವರ್ಷ ಜೈಲಿನಲಿದ್ದರು. 20 ರಲ್ಲಿ 18 ಪ್ರಕರಣಗಳಲ್ಲಿ ನಿರ್ದೋಷಿ ಎಂದು ತೀರ್ಪು ಬಂತು. ಒಂದು ಪ್ರಕರಣದಲ್ಲಿ ದೋಷಿ ಎಂದು ತೀರ್ಪು ಬಂದು, ಈಗ ನಾಗಪುರ ಹೈಕೋರ್ಟ್‌ನಲ್ಲಿ ಅದರ ವಿರುದ್ಧ ಅಪೀಲ್ ಸಲ್ಲಿಸಲಾಗಿದೆ. ಹಾಗೂ ಕೊನೆಯ ಪ್ರಕರಣದಲ್ಲಿ ಬಿಡುಗಡೆ ಮಾಡಬೇಕು ಎನ್ನುವ ಅರ್ಜಿ ಗುಜರಾತ್ ಹೈಕೋರ್ಟ್ ಮುಂದಿದೆ.

ಜೈಲಿನಲ್ಲಿ ವಿಚಾಣಾಧೀನ ಕೈದಿಯಾಗಿ ವರ್ನನ್ ತಮ್ಮ ಬಹುತೇಕ ಸಮಯವನ್ನು ಬರೆಯುವುದರಲ್ಲಿ ಕಳೆದರು. ಸದ್ಯಕ್ಕೆ ಸೆರೆವಾಸದ ಬಗ್ಗೆಯ ಬರಹಗಳ ಸಂಗ್ರಹದ ಮೇಲೆ ಕೆಲಸ ಮಾಡುತ್ತಿದ್ದಾರೆ. ಜೈಲಿನಲ್ಲಿದ್ದುಕೊಂಡೇ, ಸಣ್ಣ ಕಥೆಗಳ ಸಂಗ್ರಹವನ್ನು ಸಂಪಾದಿಸಿದರು, ಅದರಲ್ಲಿಯ ಒಂದು ಕಥೆ, ಜೈಲ್‌ಬರ್ಡ್ ಜಬ್ಬಾರ್ ಎಂಬುದನ್ನು ಪಕ್ಕಾ ಬಂಬಯ್ಯಾ ಶೈಲಿಯಲ್ಲಿ ಬರೆಯಲಾಗಿದೆ. ಅದರೊಂದಿಗೆ ಮರಾಠಿ ಲೇಖಕ ಅಣ್ಣಾಭಾವು ಸಾಠೆ ಅವರ ಕಥೆಗಳನ್ನು ಇಂಗ್ಲೀಷಿಗೆ ಅನುವಾದ ಮಾಡಿದರು. ಅದನ್ನು ಅ ಕ್ಲಚ್ ಆಫ್ ಶಾರ್ಟ್ ಸ್ಟೋರೀಸ್ ಎಂಬ ಶೀರ್ಷಿಕೆಯಲ್ಲಿ ಅಲೆಫ್ ಪ್ರಕಾಶನ ಪ್ರಕಟಿಸಿತು. ಜೈಲಿನಿಂದ ಬಿಡುಗಡೆಯಾದ ನಂತರ ಅನೇಕ ಲೇಖನಗಳನ್ನು ಬರೆದಿದ್ದಾರೆ. ಅದರಲ್ಲಿ ಯುಎಪಿಎ ಕಾನೂನನ್ನು ಕೊನೆಗೊಳಿಸುವುದರ ಬಗ್ಗೆ, ದಲಿತ ಮತ್ತು ಆದಿವಾಸಿ ಸಮುದಾಯ ಹಕ್ಕುಗಳು, ಪ್ರಸಕ್ತ ಕಾನೂನುಗಳು, ಅಂಚಿನಲ್ಲಿರುವ ದುರ್ಬಲ ಸಮುದಾಯಗಳ ವಿರುದ್ಧ ಸರಕಾರವು ಕ್ರಿಮಿನಲ್ ನ್ಯಾಯ ವ್ಯವಸ್ಥೆಯನ್ನು ಹೇಗೆ ದುರ್ಬಳಿಕೆ ಮಾಡುತ್ತಿದೆ, ಕಾರ್ಪೋರೆಟ್‌ಗಳು ಮತ್ತು ಸರ್ಕಾರದ ನೆಕ್ಸಸ್‌ನಿಂದ ಆಗುವ ಭೂಕಬಳಿಕೆ ಹೀಗೆ ಹಲವು ವಿಷಯಗಳ ಬಗ್ಗೆ ಬರೆದಿದ್ದಾರೆ. ಇತ್ತೀಚಿಗೆ ಪ್ರಕಟಗೊಂಡ ಹಾರ್ಷರ್ ಪನಿಷ್‌ಮೆಂಟ್ಸ್ ಆಂಡ್ ರಿಟ್ರಿಬ್ಯೂಟಿವ್ ಕ್ರಿಮಿನಲ್ ಜಸ್ಟಿಸ್ (ಕಠಿಣ ಶಿಕ್ಷೆಗಳು ಮತ್ತು ಪ್ರತೀಕಾರದ ಕ್ರಿಮಿನಲ್ ನ್ಯಾಯ) ಎಂಬ ಲೇಖನವು ಅಪರಾಧ ನಿಯಂತ್ರಣದ ಒಟ್ಟಾರೆ ಗತಿ ಮತ್ತು ನ್ಯಾಯಾಂಗ ವ್ಯವಸ್ಥೆಯ ಬಗ್ಗೆಯ ವಿಶ್ಲೇಷಣೆಯು ಆ ವಿಷಯದಲ್ಲಿ ಒಂದು ಮೈಲಿಗಲ್ಲಾಗಿದೆ.

ವರ್ನನ್ ಅವರ ಮಗ ಸಾಗರ್, ತನ್ನ ತಂದೆಯ ಬಗ್ಗೆ ಹತ್ತಿರದ ಎಲ್ಲರೂ ಏನನ್ನುತ್ತಾರೆ ಎಂಬುದನ್ನು ಹೀಗೆ ವಿವರಿಸುತ್ತಾರೆ.

ನನ್ನ ತಂದೆಯ ಅನೇಕ ಗುಣಗಳಲ್ಲಿ ನಾನು ಮೆಚ್ಚುವುದು, ತಮ್ಮ ನಂಬಿಕೆ ಮತ್ತು ಆದರ್ಶಗಳ ಬಗ್ಗೆ ಅವರಿಗಿರುವ ಬದ್ಧತೆ. ನ್ಯಾಯದ ಕೆಲಸಕ್ಕೆ ಎದೆಯುಬ್ಬಿಸಿ ನಿಲ್ಲುವುದು ಹಾಗೂ ತಮ್ಮ ಮೂಲಭೂತ ಹಕ್ಕುಗಳಿಂದ ವಂಚಿತರಾದವರ ಜೊತೆಗೆ ನಿಂತು, ಅವರಿಗೆ ಸಹಾಯ ಮಾಡುವುದು. ಇದನ್ನು ಅವರು ಮುಂಚೆಯಿಂದಲೂ ಮಾಡಿಕೊಂಡು ಬಂದಿದ್ದಾರೆ ಹಾಗೂ ಅದನ್ನೇ ಮುಂದುವರೆಸಲಿದ್ದಾರೆ. ಮುಂಚೆಯೂ ಅವರು ಧೈರ್ಯಗುಂದಲಿಲ್ಲ ಹಾಗೂ ಈಗಲೂ ಅವರು ಧೈರ್ಯಗುಂದದೆ ಮುಂದುವರೆಯುವರು. ತಮ್ಮ ನಂಬಿಕೆಗಳಿಗೆ ಎಂದಿಗೂ ಬದ್ಧರಾಗಿರುವ ಅವರ ಅನನ್ಯತೆಯನ್ನು ಕಟ್ಟಿಹಾಕಲು ಸಾಧ್ಯವಿಲ್ಲ”

(ಕೃಪೆ: ಮುಂಬೈ ರೈಸಸ್ ಟು ಸೇವ್ ಡೆಮಾಕ್ರಸಿ)

ಅನುವಾದ: ರಾಜಶೇಖರ ಅಕ್ಕಿ


ಇದನ್ನೂ ಓದಿ: ವಿದ್ಯಾರ್ಥಿಗಳ ನೆಚ್ಚಿನ, ಜನಪ್ರಿಯ ಪ್ರಾಧ್ಯಾಪಕ ಡಾ. ಹನಿ ಬಾಬು ಬಂಧನದಲ್ಲಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...