Homeಮುಖಪುಟಸಂಸತ್ತಿನಲ್ಲಿ ಸಿಎಜಿ ವರದಿಗಳ ಮಂಡನೆಯಲ್ಲಿ ಗಣನೀಯ ಇಳಿಕೆ!

ಸಂಸತ್ತಿನಲ್ಲಿ ಸಿಎಜಿ ವರದಿಗಳ ಮಂಡನೆಯಲ್ಲಿ ಗಣನೀಯ ಇಳಿಕೆ!

- Advertisement -
- Advertisement -

ಸಂಸತ್ತಿನಲ್ಲಿ ಸಿಎಜಿ ವರದಿಗಳ ಮಂಡನೆ ಗಣನೀಯವಾಗಿ ಇಳಿಕೆಯಾಗಿದೆ. 2023ರಲ್ಲಿ ಸಂಸತ್ತಿನಲ್ಲಿ ಕೇವಲ 18 ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ಲೆಕ್ಕಪರಿಶೋಧನೆಯ ವರದಿಗಳನ್ನು ಮಂಡಿಸಲಾಗಿದೆ. ಇದು ಇತ್ತೀಚಿನ ವರ್ಷಗಳಲ್ಲಿ ಮಂಡನೆಯಾದ ಅತ್ಯಂತ ಕಡಿಮೆ ಸಂಖ್ಯೆಯ ವರದಿಯಾಗಿದೆ ಎಂದು ದಿ ಹಿಂದೂ ವಿಶ್ಲೇಷಣೆಯು ಬಹಿರಂಗಪಡಿಸಿದೆ.

ದಿ ಹಿಂದೂ ಈ ಕುರಿತು ವಿಶ್ಲೇಷಣೆಯನ್ನು ನಡೆಸಿದ್ದು, ಕಳೆದ ಕೆಲವು ವರ್ಷಗಳಿಂದ ಸಿಎಜಿ ವರದಿ ಮಂಡನೆಯ ಸಂಖ್ಯೆಯು ಸ್ಥಿರವಾಗಿ ಕಡಿಮೆಯಾಗುತ್ತಿದೆ ಎಂದು ಬಹಿರಂಗಪಡಿಸಿದೆ. 2019 ಮತ್ತು 2023ರ ನಡುವೆ ಸರಾಸರಿ 22 ಸಿಎಜಿ ವರದಿಗಳನ್ನು ಮಂಡಿಸಲಾಗಿದೆ. ಆದರೆ 2014 ಮತ್ತು 2018ರ ನಡುವೆ 40 ವರದಿಯನ್ನು ಮಂಡಿಸಲಾಗಿತ್ತು. ಈ ವರದಿಯನ್ನು 2010 ಮತ್ತು 2023ರ ನಡುವೆ CAG ವೆಬ್‌ಸೈಟ್‌ನಲ್ಲಿ ಪ್ರಕಟವಾದ 400 ಕ್ಕೂ ಹೆಚ್ಚು ಆಡಿಟ್ ವರದಿಗಳ ವಿಶ್ಲೇಷಣೆ ಮಾಡಿ ಸಿದ್ದಪಡಿಸಲಾಗಿತ್ತು.

ಉದಾಹರಣೆಗೆ ರೈಲ್ವೆ ಇಲಾಖೆಯ 14 ಆಡಿಟ್ ವರದಿಗಳನ್ನು ಕಳೆದ ಐದು ವರ್ಷಗಳಲ್ಲಿ ಮಂಡಿಸಲಾಗಿದೆ. ಆದಕ್ಕೂ ಹಿಂದಿನ ಐದು ವರ್ಷಗಳ ಅವಧಿಯಲ್ಲಿ 27 ವರದಿಯನ್ನು ಮಂಡನೆ ಮಾಡಲಾಗಿತ್ತು. ಇನ್ನು ಏಪ್ರಿಲ್, ಜುಲೈ ಮತ್ತು ಆಗಸ್ಟ್‌ನಲ್ಲಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ 3 ಸಿಎಜಿ ವರದಿಗಳು ಇನ್ನೂ ಸಂಸತ್ತಿನಲ್ಲಿ ಮಂಡನೆಯಾಗಿಲ್ಲ ಎನ್ನುವುದು ಬಯಲಾಗಿದೆ.

ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ನಿಕಟವರ್ತಿಯಾಗಿದ್ದ ಈಗಿನ ಸಿಎಜಿ ಗಿರೀಶ್‌ ಚಂದ್ರ ಮುರ್ಮು, ಇತ್ತೀಚೆಗೆ ಮೂವರು ಭಾರತೀಯ ಆಡಿಟ್ ಮತ್ತು ಅಕೌಂಟ್ಸ್ ಸರ್ವೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದರು. ಅವರು ಆಯುಷ್ಮಾನ್ ಭಾರತ್ ಮತ್ತು ದ್ವಾರಕಾ ಎಕ್ಸ್‌ಪ್ರೆಸ್‌ವೇ ಯೋಜನೆಯ ವರದಿಗಳನ್ನು ಸಲ್ಲಿಸಿದ್ದರು. ಈ ವರದಿಗಳಿಂದ ಮೋದಿ ಸರ್ಕಾರಕ್ಕೆ ಹಿನ್ನೆಡೆಯಾಗಿತ್ತು. ಈ ವರದಿಯ ಬಳಿಕ ನವದೆಹಲಿಯ ಸಿಎಜಿ ಕಚೇರಿಯಿಂದ ಎಲ್ಲಾ ಪೀಲ್ಡ್‌ ವರ್ಕ್‌ಗಳನ್ನು ನಿಲ್ಲಿಸುವಂತೆ ಮೌಖಿಕ ಆದೇಶಗಳನ್ನು ರವಾನಿಸಲಾಗಿದೆ ಎಂದು ಹೇಳಲಾಗಿತ್ತು. ಅದರೆ ಈ ಆರೋಪಗಳನ್ನು ಸಿಎಜಿ ಕಚೇರಿ ನಿರಾಕರಿಸಿದ್ದು, ಇಂತಹ ಯಾವುದೇ ಆದೇಶವನ್ನು ನೀಡಲಾಗಿಲ್ಲ ಎಂದು ಹೇಳಿತ್ತು.

ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮಂಡಿಸಲಾದ ಸಿಎಜಿಯ 12 ವರದಿಗಳು ಕೇಂದ್ರ ಸರ್ಕಾರದ ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿನ ಹಣಕಾಸು ಮತ್ತು ಇತರ ಅಕ್ರಮಗಳ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದರಿಂದ ಬಿಜೆಪಿಗೆ ಅನಾನುಕೂಲ ಉಂಟುಮಾಡಿತ್ತು.

ಸಿಎಜಿ(CAG) ಇಂಡಿಯಾ:

ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಸುಪ್ರೀಂ ಆಡಿಟ್‌ ಸಂಸ್ಥೆ. ಇದನ್ನು ಸಂವಿಧಾನದ 148ನೇ ವಿಧಿಯಡಿಯಲ್ಲಿ ಸ್ಥಾಪಿಸಲಾಗಿದೆ. ಇದೊಂದು ಸ್ವತಂತ್ರ ಸಂಸ್ಥೆಯಾಗಿದೆ. ಕೇಂದ್ರ ಮತ್ತು ರಾಜ್ಯದ ಸರ್ಕಾರಿ ಪ್ರಾಧಿಕಾರಗಳ ಲೆಕ್ಕಪರಿಶೋಧನೆ ಮಾಡುವ ಅಧಿಕಾರವನ್ನು ಸಿಎಜಿ ಹೊಂದಿದೆ. 1971ರಲ್ಲಿ ಕೇಂದ್ರ ಸರ್ಕಾರವು ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಆಫ್ ಇಂಡಿಯಾ (ಕರ್ತವ್ಯಗಳು, ಅಧಿಕಾರಗಳು ಮತ್ತು ಸೇವಾ ಷರತ್ತುಗಳು) ಕಾಯಿದೆ-1971ನ್ನು ಜಾರಿಗೆ ತಂದಿದ್ದು, ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಅವರ ಪಾತ್ರಗಳು ಮತ್ತು ಜವಾಬ್ದಾರಿಗಳನ್ನು ಉಲ್ಲೇಖಿಸಿದೆ.

ಇದನ್ನು ಓದಿ: ರಾಮಮಂದಿರ ಉದ್ಘಾಟನೆಗೆ ಅಡ್ವಾಣಿ, ಜೋಷಿಗಿಲ್ಲ ಪ್ರವೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...