Homeಮುಖಪುಟಸಂಸತ್ತಿನಲ್ಲಿ ಸಿಎಜಿ ವರದಿಗಳ ಮಂಡನೆಯಲ್ಲಿ ಗಣನೀಯ ಇಳಿಕೆ!

ಸಂಸತ್ತಿನಲ್ಲಿ ಸಿಎಜಿ ವರದಿಗಳ ಮಂಡನೆಯಲ್ಲಿ ಗಣನೀಯ ಇಳಿಕೆ!

- Advertisement -
- Advertisement -

ಸಂಸತ್ತಿನಲ್ಲಿ ಸಿಎಜಿ ವರದಿಗಳ ಮಂಡನೆ ಗಣನೀಯವಾಗಿ ಇಳಿಕೆಯಾಗಿದೆ. 2023ರಲ್ಲಿ ಸಂಸತ್ತಿನಲ್ಲಿ ಕೇವಲ 18 ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ಲೆಕ್ಕಪರಿಶೋಧನೆಯ ವರದಿಗಳನ್ನು ಮಂಡಿಸಲಾಗಿದೆ. ಇದು ಇತ್ತೀಚಿನ ವರ್ಷಗಳಲ್ಲಿ ಮಂಡನೆಯಾದ ಅತ್ಯಂತ ಕಡಿಮೆ ಸಂಖ್ಯೆಯ ವರದಿಯಾಗಿದೆ ಎಂದು ದಿ ಹಿಂದೂ ವಿಶ್ಲೇಷಣೆಯು ಬಹಿರಂಗಪಡಿಸಿದೆ.

ದಿ ಹಿಂದೂ ಈ ಕುರಿತು ವಿಶ್ಲೇಷಣೆಯನ್ನು ನಡೆಸಿದ್ದು, ಕಳೆದ ಕೆಲವು ವರ್ಷಗಳಿಂದ ಸಿಎಜಿ ವರದಿ ಮಂಡನೆಯ ಸಂಖ್ಯೆಯು ಸ್ಥಿರವಾಗಿ ಕಡಿಮೆಯಾಗುತ್ತಿದೆ ಎಂದು ಬಹಿರಂಗಪಡಿಸಿದೆ. 2019 ಮತ್ತು 2023ರ ನಡುವೆ ಸರಾಸರಿ 22 ಸಿಎಜಿ ವರದಿಗಳನ್ನು ಮಂಡಿಸಲಾಗಿದೆ. ಆದರೆ 2014 ಮತ್ತು 2018ರ ನಡುವೆ 40 ವರದಿಯನ್ನು ಮಂಡಿಸಲಾಗಿತ್ತು. ಈ ವರದಿಯನ್ನು 2010 ಮತ್ತು 2023ರ ನಡುವೆ CAG ವೆಬ್‌ಸೈಟ್‌ನಲ್ಲಿ ಪ್ರಕಟವಾದ 400 ಕ್ಕೂ ಹೆಚ್ಚು ಆಡಿಟ್ ವರದಿಗಳ ವಿಶ್ಲೇಷಣೆ ಮಾಡಿ ಸಿದ್ದಪಡಿಸಲಾಗಿತ್ತು.

ಉದಾಹರಣೆಗೆ ರೈಲ್ವೆ ಇಲಾಖೆಯ 14 ಆಡಿಟ್ ವರದಿಗಳನ್ನು ಕಳೆದ ಐದು ವರ್ಷಗಳಲ್ಲಿ ಮಂಡಿಸಲಾಗಿದೆ. ಆದಕ್ಕೂ ಹಿಂದಿನ ಐದು ವರ್ಷಗಳ ಅವಧಿಯಲ್ಲಿ 27 ವರದಿಯನ್ನು ಮಂಡನೆ ಮಾಡಲಾಗಿತ್ತು. ಇನ್ನು ಏಪ್ರಿಲ್, ಜುಲೈ ಮತ್ತು ಆಗಸ್ಟ್‌ನಲ್ಲಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ 3 ಸಿಎಜಿ ವರದಿಗಳು ಇನ್ನೂ ಸಂಸತ್ತಿನಲ್ಲಿ ಮಂಡನೆಯಾಗಿಲ್ಲ ಎನ್ನುವುದು ಬಯಲಾಗಿದೆ.

ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ನಿಕಟವರ್ತಿಯಾಗಿದ್ದ ಈಗಿನ ಸಿಎಜಿ ಗಿರೀಶ್‌ ಚಂದ್ರ ಮುರ್ಮು, ಇತ್ತೀಚೆಗೆ ಮೂವರು ಭಾರತೀಯ ಆಡಿಟ್ ಮತ್ತು ಅಕೌಂಟ್ಸ್ ಸರ್ವೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದರು. ಅವರು ಆಯುಷ್ಮಾನ್ ಭಾರತ್ ಮತ್ತು ದ್ವಾರಕಾ ಎಕ್ಸ್‌ಪ್ರೆಸ್‌ವೇ ಯೋಜನೆಯ ವರದಿಗಳನ್ನು ಸಲ್ಲಿಸಿದ್ದರು. ಈ ವರದಿಗಳಿಂದ ಮೋದಿ ಸರ್ಕಾರಕ್ಕೆ ಹಿನ್ನೆಡೆಯಾಗಿತ್ತು. ಈ ವರದಿಯ ಬಳಿಕ ನವದೆಹಲಿಯ ಸಿಎಜಿ ಕಚೇರಿಯಿಂದ ಎಲ್ಲಾ ಪೀಲ್ಡ್‌ ವರ್ಕ್‌ಗಳನ್ನು ನಿಲ್ಲಿಸುವಂತೆ ಮೌಖಿಕ ಆದೇಶಗಳನ್ನು ರವಾನಿಸಲಾಗಿದೆ ಎಂದು ಹೇಳಲಾಗಿತ್ತು. ಅದರೆ ಈ ಆರೋಪಗಳನ್ನು ಸಿಎಜಿ ಕಚೇರಿ ನಿರಾಕರಿಸಿದ್ದು, ಇಂತಹ ಯಾವುದೇ ಆದೇಶವನ್ನು ನೀಡಲಾಗಿಲ್ಲ ಎಂದು ಹೇಳಿತ್ತು.

ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮಂಡಿಸಲಾದ ಸಿಎಜಿಯ 12 ವರದಿಗಳು ಕೇಂದ್ರ ಸರ್ಕಾರದ ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿನ ಹಣಕಾಸು ಮತ್ತು ಇತರ ಅಕ್ರಮಗಳ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದರಿಂದ ಬಿಜೆಪಿಗೆ ಅನಾನುಕೂಲ ಉಂಟುಮಾಡಿತ್ತು.

ಸಿಎಜಿ(CAG) ಇಂಡಿಯಾ:

ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಸುಪ್ರೀಂ ಆಡಿಟ್‌ ಸಂಸ್ಥೆ. ಇದನ್ನು ಸಂವಿಧಾನದ 148ನೇ ವಿಧಿಯಡಿಯಲ್ಲಿ ಸ್ಥಾಪಿಸಲಾಗಿದೆ. ಇದೊಂದು ಸ್ವತಂತ್ರ ಸಂಸ್ಥೆಯಾಗಿದೆ. ಕೇಂದ್ರ ಮತ್ತು ರಾಜ್ಯದ ಸರ್ಕಾರಿ ಪ್ರಾಧಿಕಾರಗಳ ಲೆಕ್ಕಪರಿಶೋಧನೆ ಮಾಡುವ ಅಧಿಕಾರವನ್ನು ಸಿಎಜಿ ಹೊಂದಿದೆ. 1971ರಲ್ಲಿ ಕೇಂದ್ರ ಸರ್ಕಾರವು ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಆಫ್ ಇಂಡಿಯಾ (ಕರ್ತವ್ಯಗಳು, ಅಧಿಕಾರಗಳು ಮತ್ತು ಸೇವಾ ಷರತ್ತುಗಳು) ಕಾಯಿದೆ-1971ನ್ನು ಜಾರಿಗೆ ತಂದಿದ್ದು, ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಅವರ ಪಾತ್ರಗಳು ಮತ್ತು ಜವಾಬ್ದಾರಿಗಳನ್ನು ಉಲ್ಲೇಖಿಸಿದೆ.

ಇದನ್ನು ಓದಿ: ರಾಮಮಂದಿರ ಉದ್ಘಾಟನೆಗೆ ಅಡ್ವಾಣಿ, ಜೋಷಿಗಿಲ್ಲ ಪ್ರವೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...