Homeಮುಖಪುಟಸಂಸತ್ತಿನಲ್ಲಿ ಸಿಎಜಿ ವರದಿಗಳ ಮಂಡನೆಯಲ್ಲಿ ಗಣನೀಯ ಇಳಿಕೆ!

ಸಂಸತ್ತಿನಲ್ಲಿ ಸಿಎಜಿ ವರದಿಗಳ ಮಂಡನೆಯಲ್ಲಿ ಗಣನೀಯ ಇಳಿಕೆ!

- Advertisement -
- Advertisement -

ಸಂಸತ್ತಿನಲ್ಲಿ ಸಿಎಜಿ ವರದಿಗಳ ಮಂಡನೆ ಗಣನೀಯವಾಗಿ ಇಳಿಕೆಯಾಗಿದೆ. 2023ರಲ್ಲಿ ಸಂಸತ್ತಿನಲ್ಲಿ ಕೇವಲ 18 ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ಲೆಕ್ಕಪರಿಶೋಧನೆಯ ವರದಿಗಳನ್ನು ಮಂಡಿಸಲಾಗಿದೆ. ಇದು ಇತ್ತೀಚಿನ ವರ್ಷಗಳಲ್ಲಿ ಮಂಡನೆಯಾದ ಅತ್ಯಂತ ಕಡಿಮೆ ಸಂಖ್ಯೆಯ ವರದಿಯಾಗಿದೆ ಎಂದು ದಿ ಹಿಂದೂ ವಿಶ್ಲೇಷಣೆಯು ಬಹಿರಂಗಪಡಿಸಿದೆ.

ದಿ ಹಿಂದೂ ಈ ಕುರಿತು ವಿಶ್ಲೇಷಣೆಯನ್ನು ನಡೆಸಿದ್ದು, ಕಳೆದ ಕೆಲವು ವರ್ಷಗಳಿಂದ ಸಿಎಜಿ ವರದಿ ಮಂಡನೆಯ ಸಂಖ್ಯೆಯು ಸ್ಥಿರವಾಗಿ ಕಡಿಮೆಯಾಗುತ್ತಿದೆ ಎಂದು ಬಹಿರಂಗಪಡಿಸಿದೆ. 2019 ಮತ್ತು 2023ರ ನಡುವೆ ಸರಾಸರಿ 22 ಸಿಎಜಿ ವರದಿಗಳನ್ನು ಮಂಡಿಸಲಾಗಿದೆ. ಆದರೆ 2014 ಮತ್ತು 2018ರ ನಡುವೆ 40 ವರದಿಯನ್ನು ಮಂಡಿಸಲಾಗಿತ್ತು. ಈ ವರದಿಯನ್ನು 2010 ಮತ್ತು 2023ರ ನಡುವೆ CAG ವೆಬ್‌ಸೈಟ್‌ನಲ್ಲಿ ಪ್ರಕಟವಾದ 400 ಕ್ಕೂ ಹೆಚ್ಚು ಆಡಿಟ್ ವರದಿಗಳ ವಿಶ್ಲೇಷಣೆ ಮಾಡಿ ಸಿದ್ದಪಡಿಸಲಾಗಿತ್ತು.

ಉದಾಹರಣೆಗೆ ರೈಲ್ವೆ ಇಲಾಖೆಯ 14 ಆಡಿಟ್ ವರದಿಗಳನ್ನು ಕಳೆದ ಐದು ವರ್ಷಗಳಲ್ಲಿ ಮಂಡಿಸಲಾಗಿದೆ. ಆದಕ್ಕೂ ಹಿಂದಿನ ಐದು ವರ್ಷಗಳ ಅವಧಿಯಲ್ಲಿ 27 ವರದಿಯನ್ನು ಮಂಡನೆ ಮಾಡಲಾಗಿತ್ತು. ಇನ್ನು ಏಪ್ರಿಲ್, ಜುಲೈ ಮತ್ತು ಆಗಸ್ಟ್‌ನಲ್ಲಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ 3 ಸಿಎಜಿ ವರದಿಗಳು ಇನ್ನೂ ಸಂಸತ್ತಿನಲ್ಲಿ ಮಂಡನೆಯಾಗಿಲ್ಲ ಎನ್ನುವುದು ಬಯಲಾಗಿದೆ.

ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ನಿಕಟವರ್ತಿಯಾಗಿದ್ದ ಈಗಿನ ಸಿಎಜಿ ಗಿರೀಶ್‌ ಚಂದ್ರ ಮುರ್ಮು, ಇತ್ತೀಚೆಗೆ ಮೂವರು ಭಾರತೀಯ ಆಡಿಟ್ ಮತ್ತು ಅಕೌಂಟ್ಸ್ ಸರ್ವೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದರು. ಅವರು ಆಯುಷ್ಮಾನ್ ಭಾರತ್ ಮತ್ತು ದ್ವಾರಕಾ ಎಕ್ಸ್‌ಪ್ರೆಸ್‌ವೇ ಯೋಜನೆಯ ವರದಿಗಳನ್ನು ಸಲ್ಲಿಸಿದ್ದರು. ಈ ವರದಿಗಳಿಂದ ಮೋದಿ ಸರ್ಕಾರಕ್ಕೆ ಹಿನ್ನೆಡೆಯಾಗಿತ್ತು. ಈ ವರದಿಯ ಬಳಿಕ ನವದೆಹಲಿಯ ಸಿಎಜಿ ಕಚೇರಿಯಿಂದ ಎಲ್ಲಾ ಪೀಲ್ಡ್‌ ವರ್ಕ್‌ಗಳನ್ನು ನಿಲ್ಲಿಸುವಂತೆ ಮೌಖಿಕ ಆದೇಶಗಳನ್ನು ರವಾನಿಸಲಾಗಿದೆ ಎಂದು ಹೇಳಲಾಗಿತ್ತು. ಅದರೆ ಈ ಆರೋಪಗಳನ್ನು ಸಿಎಜಿ ಕಚೇರಿ ನಿರಾಕರಿಸಿದ್ದು, ಇಂತಹ ಯಾವುದೇ ಆದೇಶವನ್ನು ನೀಡಲಾಗಿಲ್ಲ ಎಂದು ಹೇಳಿತ್ತು.

ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮಂಡಿಸಲಾದ ಸಿಎಜಿಯ 12 ವರದಿಗಳು ಕೇಂದ್ರ ಸರ್ಕಾರದ ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿನ ಹಣಕಾಸು ಮತ್ತು ಇತರ ಅಕ್ರಮಗಳ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದರಿಂದ ಬಿಜೆಪಿಗೆ ಅನಾನುಕೂಲ ಉಂಟುಮಾಡಿತ್ತು.

ಸಿಎಜಿ(CAG) ಇಂಡಿಯಾ:

ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಸುಪ್ರೀಂ ಆಡಿಟ್‌ ಸಂಸ್ಥೆ. ಇದನ್ನು ಸಂವಿಧಾನದ 148ನೇ ವಿಧಿಯಡಿಯಲ್ಲಿ ಸ್ಥಾಪಿಸಲಾಗಿದೆ. ಇದೊಂದು ಸ್ವತಂತ್ರ ಸಂಸ್ಥೆಯಾಗಿದೆ. ಕೇಂದ್ರ ಮತ್ತು ರಾಜ್ಯದ ಸರ್ಕಾರಿ ಪ್ರಾಧಿಕಾರಗಳ ಲೆಕ್ಕಪರಿಶೋಧನೆ ಮಾಡುವ ಅಧಿಕಾರವನ್ನು ಸಿಎಜಿ ಹೊಂದಿದೆ. 1971ರಲ್ಲಿ ಕೇಂದ್ರ ಸರ್ಕಾರವು ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಆಫ್ ಇಂಡಿಯಾ (ಕರ್ತವ್ಯಗಳು, ಅಧಿಕಾರಗಳು ಮತ್ತು ಸೇವಾ ಷರತ್ತುಗಳು) ಕಾಯಿದೆ-1971ನ್ನು ಜಾರಿಗೆ ತಂದಿದ್ದು, ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಅವರ ಪಾತ್ರಗಳು ಮತ್ತು ಜವಾಬ್ದಾರಿಗಳನ್ನು ಉಲ್ಲೇಖಿಸಿದೆ.

ಇದನ್ನು ಓದಿ: ರಾಮಮಂದಿರ ಉದ್ಘಾಟನೆಗೆ ಅಡ್ವಾಣಿ, ಜೋಷಿಗಿಲ್ಲ ಪ್ರವೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...