Homeಮುಖಪುಟತೆಲುಗು ಚಿತ್ರರಂಗದ ಹಿರಿಯ ನಟ ಕೋಟಾ ಶ್ರೀನಿವಾಸ ರಾವ್ ನಿಧನ

ತೆಲುಗು ಚಿತ್ರರಂಗದ ಹಿರಿಯ ನಟ ಕೋಟಾ ಶ್ರೀನಿವಾಸ ರಾವ್ ನಿಧನ

- Advertisement -
- Advertisement -

ತೆಲುಗು ಚಿತ್ರರಂಗದ ಹಿರಿಯ ನಟ ಕೋಟಾ ಶ್ರೀನಿವಾಸ ರಾವ್ ಭಾನುವಾರ (ಜು.13) ಮುಂಜಾನೆ 4 ಗಂಟೆಯ ಸುಮಾರಿಗೆ ಹೈದರಾಬಾದ್‌ನ ಫಿಲ್ಮ್‌ನಗರದಲ್ಲಿರುವ ತಮ್ಮ ಮನೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.

ಕೋಟಾ ಶ್ರೀನಿವಾಸ ರಾವ್ ಅವರು ಹಲವು ದಿನಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ದಕ್ಷಿಣ ಭಾರತದ ಅಗ್ರಗಣ್ಯ ನಟರಲ್ಲಿ ಒಬ್ಬರಾದ ಕೋಟಾ ಶ್ರೀನಿವಾಸ ರಾವ್ ಅವರು, ರಂಗಭೂಮಿಯಿಂದ ಬೆಳೆದು ಬಂದು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದವರು. ವೃತ್ತಿ ಜೀವನದಲ್ಲಿ ಅವರು ವಿವಿಧ ಭಾಷೆಗಳ 750ಕ್ಕೂ ಹೆಚ್ಚು ಚಿತ್ರಗಳಲ್ಲಿ ಖಳನಾಯಕ, ಹಾಸ್ಯ ಮತ್ತು ಪೋಷಕ ಪಾತ್ರಗಳನ್ನು ನಿರ್ವಹಿಸಿ ಖ್ಯಾತಿಯನ್ನು ಗಳಿಸಿದ್ದರು. ರಾಜಕೀಯಕ್ಕೆ ಕಾಲಿಟ್ಟು ಶಾಸಕರಾಗಿಯೂ ಸೇವೆ ಸಲ್ಲಿಸಿದ್ದರು.

ಜುಲೈ 10, 1942ರಂದು ಆಂಧ್ರ ಪ್ರದೇಶದ ಕೃಷ್ಣ ಜಿಲ್ಲೆಯ ಕಂಕಿಪಡುವಿನಲ್ಲಿ ಜನಿಸಿದ ಕೋಟಾ ಶ್ರೀನಿವಾಸ ರಾವ್, 1978ರಲ್ಲಿ ಬಿಡುಗಡೆಯಾದ ‘ಪ್ರಾಣಂ ಖರೀಧು’ ಚಿತ್ರದ ಮೂಲಕ ಸಿನಿಮಾ ಜಗತ್ತಿನಲ್ಲಿ ತಮ್ಮ ಪ್ರಯಾಣವನ್ನು ಪ್ರಾರಂಭಿಸಿದ್ದರು.

ಸಿನಿಮಾ ರಂಗಕ್ಕೆ ಪಾದಾರ್ಪಣೆ ಮಾಡುವ ಮೊದಲು, ಅವರು ಮೆಚ್ಚುಗೆ ಪಡೆದ ರಂಗಭೂಮಿ ಕಲಾವಿದರಾಗಿದ್ದರು. ಅವರ ಕಮಾಂಡಿಂಗ್ ಧ್ವನಿ ಮತ್ತು ಅಭಿವ್ಯಕ್ತಿಶೀಲ ನಟನೆ ಜನರ ಸೆಳೆಯುವಲ್ಲಿ ಯಶಸ್ವಿಯಾಗಿತ್ತು. 2013ರಲ್ಲಿ ಬಿಡುಗಡೆಯಾದ ರಾಮ್ ಚರಣ್ ಅವರ ಹಿಟ್ ಚಿತ್ರಗಳಲ್ಲಿ ಒಂದಾದ ‘ನಾಯಕ್‌’ನಲ್ಲಿ ನಿರ್ವಹಿಸಿದ ಪಾತ್ರದಿಂದ ಶ್ರಿನಿವಾಸ ರಾವ್ ಅವರ ಖ್ಯಾತಿ ಇನ್ನಷ್ಟು ಹೆಚ್ಚಾಗಿತ್ತು.

ಶ್ರೀನಿವಾಸ ರಾವ್ ಅವರು ತೆಲುಗಿನ ಪ್ರಮುಖ ನಟರಾದ ಕೃಷ್ಣ, ಚಿರಂಜೀವಿ, ಬಾಲಕೃಷ್ಣ, ನಾಗಾರ್ಜುನ, ವೆಂಕಟೇಶ್, ಮಹೇಶ್ ಬಾಬು, ಪವನ್ ಕಲ್ಯಾಣ್, ಅಲ್ಲು ಅರ್ಜುನ್ ಮತ್ತು ಸಾಯಿ ಧರಮ್ ತೇಜ್ ಸೇರಿದಂತೆ ಹಲವರ ಜೊತೆ ನಟಿಸಿದ್ದರು.

“ಅಹನಾ ಪೆಲ್ಲಂಟಾ”, “ಪ್ರತಿಘಾತನಾ”, “ಯಮುದಿಕಿ ಮೊಗುಡು”, “ಖೈದಿ ನಂ.786”, “ಶಿವ”, “ಬೊಬ್ಬಿಲಿ ರಾಜ”, “ಯಮಲೀಲಾ”, “ಸಂತೋಷಂ”, “ಬೊಮ್ಮರಿಲ್ಲು”, “ಅತ್ತಾಡು”, ಮತ್ತು “ರೇಸ್ ಗುರ್ರಂ” ಶ್ರೀನಿವಾಸ ರಾವ್ ನಟಿಸಿದ ಪ್ರಮುಖ ಚಿತ್ರಗಳು.

ರಾಜಕೀಯದಲ್ಲೂ ಚಾಪು ಮೂಡಿಸಿದ್ದ ಶ್ರೀನಿವಾಸ ರಾವ್ 1999 ರಿಂದ 2004ರ ನಡುವೆ ವಿಜಯವಾಡ ಪೂರ್ವ ಕ್ಷೇತ್ರದ ಶಾಸಕರಾಗಿದ್ದರು. ತೆರೆಯ ಮೇಲಿಯೂ ರಾಜಕಾರಣಿಯಾಗಿ ನಟಿಸಿ ಮೆಚ್ಚುಗೆ ಪಡೆದಿದ್ದರು. ಅಲ್ಲು ಅರ್ಜುನ್ ಮುಖ್ಯ ಪಾತ್ರದಲ್ಲಿ ನಟಿಸಿದ ‘ಜುಲಾಯಿ’ ಅಂತಹ ಒಂದು ಚಿತ್ರವಾಗಿದ್ದು, ಇದರಲ್ಲಿ ರಾವ್ ಶಾಸಕನ ಪಾತ್ರವನ್ನು ನಿರ್ವಹಿಸಿದ್ದರು. ಕನ್ನಡದ “ನಮ್ಮ ಬಸವ”, “ಕಬ್ಜ” ಸೇರಿದಂತೆ ಕೆಲ ಸಿನಿಮಾಗಳಲ್ಲಿ ಶ್ರೀನಿವಾಸ ರಾವ್ ನಟಿಸಿದ್ದರು.

ಕೋಟಾ ಶ್ರೀನಿವಾಸ ರಾವ್ ಅವರು ಪದ್ಮಶ್ರೀ, ನಂದಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ರಾವ್ ನಿಧನಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸೇರಿದಂತೆ ತೆಲುಗು ಚಿತ್ರರಂಗದ ಗಣ್ಯರು, ಅಭಿಮಾನಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕಂಬನಿ ಮಿಡಿದಿದ್ದಾರೆ.

ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣವನ್ನು ಮರು ತನಿಖೆ ನಡೆಸಲಾಗುವುದು: ತೆಲಂಗಾಣ ಉಪ ಮುಖ್ಯಮಂತ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...