Homeಮುಖಪುಟಬಿಜೆಪಿ ಬಿಟ್ಟು ಮತ್ತೆ ಟಿಎಂಸಿ ಸೇರಲಿರುವ ಮುಕುಲ್ ರಾಯ್: ಮತ್ತಷ್ಟು ಜನ ಬರಲಿದ್ದಾರೆ ಎಂದ ಮಮತಾ...

ಬಿಜೆಪಿ ಬಿಟ್ಟು ಮತ್ತೆ ಟಿಎಂಸಿ ಸೇರಲಿರುವ ಮುಕುಲ್ ರಾಯ್: ಮತ್ತಷ್ಟು ಜನ ಬರಲಿದ್ದಾರೆ ಎಂದ ಮಮತಾ ಬ್ಯಾನರ್ಜಿ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಈಗ ಪಕ್ಷಾಂತರ ಪರ್ವ ಆರಂಭವಾಗಿದೆ. ಒಂದಾದ ಮೇಲೊಂದರಂತೆ ವಲಸೆ ಹಕ್ಕಿಗಳು ತಮ್ಮ ಹಳೆಯ ಗೂಡುಗಳಿಗೆ ಮರಳಲಾರಾಂಭಿಸಿವೆ. ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲುತ್ತಿದ್ದಂತೆ ಹಿಂದೆ ತೃಣಮೂಲ ಕಾಂಗ್ರೆಸ್ ತೊರೆದು ಬಿಜೆಪಿ ಸೆರಿದ್ದ ನಾಯಕರು ಮತ್ತೆ ತಮ್ಮ ಹಳೆಯ ಪಕ್ಷಗಳಿಗೆ ಮರಳುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ನಾಯಕರ ದೊಡ್ಡ ಹಿಂಡೇ ಈಗ ತೃಣಮೂಲ ಕಾಂಗ್ರೆಸ್ ಪಕ್ಷದ ಕದ ತಟ್ಟುತ್ತಿದೆ. ಅದರ ಮೊದಲ ಭಾಗವಾಗಿ ಪಶ್ಚಿಮ ಬಂಗಾಳ ಬಿಜೆಪಿಯ ಹಿರಿಯ ನಾಯಕ ಮುಕುಲ್ ರಾಯ್ ಇಂದು ತಮ್ಮ ಪುತ್ರ ಸುಭ್ರಾಂಶು ರೊಯ್ ಅವರೊಂದಿಗೆ ತೃಣಮೂಲ್ ಕಾಂಗ್ರೆಸ್ ನ ಕೇಂದ್ರ ಕಚೇರಿಯಲ್ಲಿ ಸಿಎಂ ಮಮತಾ ಬ್ಯಾನರ್ಜಿಯವರನ್ನು ಭೇಟಿಯಾಗಿ ಪಕ್ಷ ಸೇರುವುದಾಗಿ ಘೋಷಿಸಿದ್ದಾರೆ.

ಇಷ್ಟುದಿನ ಮುಕುಲ್ ರಾಯ್ ಬಿಜೆಪಿ ತೊರೆಯಲಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿದ್ದವು. ಜೊತೆಗೆ ಅನಾರೋಗ್ಯದಿಂದ ಬಳಲುತ್ತಿದ್ದ ಮುಕುಲ್ ರಾಯ್ ಈ ಕುರಿತು ಸ್ಪಷ್ಟನೆ ನೀಡಿರಲಿಲ್ಲ. ಅದು ಪಶ್ಚಿಮ ಬಂಗಾಳ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿತ್ತು. ಇಂದು ಮುಕುಲ್ ರಾಯ್ ಎಲ್ಲಾ ಕುತೂಹಲಗಳಿಗೆ ಮತ್ತು ವದಂತಿಗಳಿಗೆ ತೆರೆ ಎಳೆದಿದ್ದಾರೆ. ತೃಣಮೂಲ ಕಾಂಗ್ರೆಸ್ ಸೇರ್ಪಡೆ ಕುರಿತು ಅಧಿಕೃತವಾಗಿ ತಮ್ಮ ನಡೆಯನ್ನು ಬಹಿರಂಗಗೊಳಿಸಿದ್ದಾರೆ.

ಇನ್ನು ಮಮತಾ ಬ್ಯಾನರ್ಜಿಯವರು “ಮುಕುಲ್ ರಾಯ್ ವಾಪಸ್ ಬಂದಿದ್ದಾರೆ. ಅವರು ಎಂದಿಗೂ ಇತರರಂತೆ ದ್ರೋಹವೆಸಗಲಿಲ್ಲ” ಎಂದಿದ್ದಾರೆ. ಅಲ್ಲದೇ ಮತ್ತಷ್ಟು ಜನರು ಬಿಜೆಪಿಯಿಂದ ಬರಲಿದ್ದಾರೆ ಎಂದು ಹೇಳಿದ್ದಾರೆ.

ಮುಕುಲ್ ರಾಯ್ ಮಾತನಾಡಿ “ಬಿಜೆಪಿಯನ್ನು ತೊರೆದ ನಂತರ ನನ್ನ ಹಳೆಯ ಸಹೋದ್ಯೋಗಿಗಳನ್ನು ನೋಡುವುದರಲ್ಲಿ ನನಗೆ ತುಂಬಾ ಖುಷಿ ಇದೆ. ನಾನು ಬಿಜೆಪಿಯಲ್ಲಿ ಇರಲು ಸಾಧ್ಯವಿಲ್ಲ. ಮಮತಾ ಬ್ಯಾನರ್ಜಿ ಬಂಗಾಳದ ಮತ್ತು ಭಾರತದ ಏಕೈಕ ನಾಯಕಿ” ಎಂದು ಬಣ್ಣಿಸಿದ್ದಾರೆ.

ಮುಕುಲ್ ರಾಯ್ ಬಿಜೆಪಿ ತೊರೆಯಲು ಕಾರಣಗಳೇನು?

ತೃಣಮೂಲ ಕಾಂಗ್ರೆಸ್ ನಿಂದ ಮೊಟ್ಟ ಮೊದಲ ಬಾರಿಗೆ‌ ಬಿಜೆಪಿ ಸೇರಿದ ನಾಯಕರೆಂದರೆ ಅದು ಮುಕುಲ್ ರಾಯ್. 2017 ರಲ್ಲಿ ಮುಕುಲ್ ರಾಯ್ TMC ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದರು. ಅದಾದನಂತರ ಮುಕುಲ್ ರಾಯ್ ಅವರನ್ನು ಬಿಜೆಪಿ ಪಶ್ಚಿಮ ಬಂಗಾಳದ ರಾಜ್ಯಾಧ್ಯಕ್ಷರನ್ನಾಗಿಯೂ ನೇಮಿಸಿತ್ತು. ಆದರೆ ದಿನ ಕಳೆದಂತೆ ಮುಕುಲ್ ರಾಯ್ ಅವರಿಗೆ ಬಿಜೆಪಿಯಲ್ಲಿ ಮೊದಲಿದ್ದ ಸ್ಥಾನಮಾನ ಮತ್ತು ಗೌರವ ಉಳಿಯಲಿಲ್ಲ.

ಬಿಜೆಪಿ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಸೋತ ಕಾರಣಕ್ಕಾಗಿ ಮಾತ್ರ ಮುಕುಲ್ ರಾಯ್ ಬಿಜೆಪಿಯನ್ನು ತೊರೆಯುತ್ತಿಲ್ಲ. ಪಶ್ಚಿಮ ಬಂಗಾಳ ಚುನಾವಣೆಗೂ ಮುನ್ನ ತೃಣಮೂಲ ತೊರೆದು ಬಿಜೆಪಿ ಸೇರಿದ ನಾಯಕರ ದಂಡಿನ ಪ್ರಭಾವವೂ ಮುಕುಲ್ ರಾಯ್ ಅವರನ್ನು ಬಿಜೆಪಿಯಲ್ಲಿ ಮೂಲೆಗುಂಪಾಗಿಸಿದೆ. ಮುಖ್ಯವಾಗಿ ಒಂದು ಕಾಲದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆತ್ಮೀಯರಾಗಿದ್ದ ಸುವೇಂಧು ಅಧಿಕಾರಿ ಬಿಜೆಪಿ ಸೇರಿ ರಾಜ್ಯದ ಅಗ್ರ ನಾಯಕರಾಗಿ ಬೆಳೆದಿರುವುದು ಮುಕುಲ್ ರಾಯ್ ಅವರಿಗೆ ಇರಿಸು ಮುರುಸು ಉಂಟುಮಾಡಿದೆ. ಈ ಕುರಿತು ಅವರು ತಮ್ಮ ಆಪ್ತರಲ್ಲಿ ಹೇಳಿಕೊಂಡಿದ್ದಾರೆ. ಬಿಜೆಪಿಯಲ್ಲಿನ ಉಸಿರುಕಟ್ಟಿಸುವ ವಾತಾವರಣದಿಂದಾಗಿ ಪಕ್ಷ ತೊರೆಯುವ ನಿರ್ಧಾರ ಮಾಡಿದ್ದೇನೆ ಎಂದು ಮುಕುಲ್ ರಾಯ್ ಹೇಳಿಕೊಂಡಿದ್ದಾರೆ.

ಇನ್ನೊಂದು ಮುಖ್ಯ ವಿಚಾರವೆಂದರೆ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿಯ ಭರ್ಜರಿ ಗೆಲುವಿನ ನಂತರ ಬಿಜೆಪಿಯ ಇತರ ನಾಯಕರಂತೆ ಮುಕುಲ್ ರಾಯ್ ಅವರಿಗೂ ತಮ್ಮ ರಾಜಕೀಯ ಭವಿಷ್ಯದ ಕುರಿತು ಅನಿಶ್ಚಿತತೆ ಕಾಡಲು ಆರಂಭವಾಗಿದೆ. ಮಮತಾ ಬ್ಯಾನರ್ಜಿಯವರಿಗೆ ಬಂಗಾಳದ ನಾಡಿ ಮಿಡಿತ ಗೊತ್ತಿದೆ. ಬಿಜೆಪಿ ಎಷ್ಟು ದೊಡ್ಡ ಪಕ್ಷವಾದರೂ ಬಂಗಾಳಕ್ಕೆ ಹೊರಗಿನ ಪಕ್ಷವೇ. ಬೆಂಗಾಳಿಗಳು ಬಿಜೆಪಿಯನ್ನು ಒಪ್ಪಲು ತಯಾರಿಲ್ಲ ಎಂಬ ಭಾವನೆ  ಮುಕುಲ್ ರಾಯ್ ಸೇರಿ ಪಕ್ಷ ತೊರೆಯಲು ಸಿದ್ಧರಾಗಿರುವ ಬಿಜೆಪಿಯ ಹಿರಿಯ ನಾಯಕರಲ್ಲಿ ಬೆಳೆಯತೊಡಗಿದೆ. ಈ ಎಲ್ಲ ಕಾರಣಗಳಿಂದ ಮುಕುಲ್ ರೊಯ್ ಬಿಜೆಪಿ ತೊರೆದು ತೃಣಮೂಲ ಕಾಂಗ್ರೆಸ್ ಕದತಟ್ಟಲು ಕಾರಣಗಳೆಂದು ಹೇಳಲಾಗುತ್ತಿದೆ.

ಕಳೆದ ವಾರ ಮುಕುಲ್ ರಾಯ್ ಕೊಲ್ಕತ್ತಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮಮತಾ ಬ್ಯಾನರ್ಜಿ ಅವರ ಸಂಬಂಧಿ ಮತ್ತು ತೃಣಮೂಲ ಕಾಂಗ್ರೆಸ್ ನಾಯಕ ಅಭಿಷೇಕ್ ಬ್ಯಾನರ್ಜಿ ಮುಕುಲ್ ರಾಯ್ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು. ಆಗಲೇ ಮುಕುಲ್ ರಾಯ್ ಬಿಜೆಪಿ ತೊರೆಯುವ ನಿರ್ಧಾರಕ್ಕೆ ಬಂದಿದ್ದರೆಂದು ಹೇಳಲಾಗುತ್ತಿದೆ. ಮಾರನೇ ದಿನ ಪ್ರಧಾನಿ ಮೋದಿಯವರು ರಾಯ್ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದಾಗ ಮುಕುಲ್ ರಾಯ್ ಬಿಜೆಪಿ ತೊರೆಯುವ ಕುರಿತು ಸಂದೇಹಗಳು ಹುಟ್ಟಿಕೊಂಡಿದ್ದವು. ಇಂದು ಮುಕುಲ್ ರೊಯ್ ತಮ್ಮ ಪುತ್ರ  ಸುಭ್ರಾಂಶು ರೊಯ್ ಅವರೊಂದಿಗೆ ತೃಣಮೂಲ ರಾಜ್ಯ ಕಚೇರಿಗೆ ಭೇಟಿ ನೀಡುವ ಮೂಲಕ ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಎದ್ದಿರುವ ಎಲ್ಲಾ ವದಂತಿಗಳಿಗೆ ತೆರೆ ಎಳೆದಿದ್ದಾರೆ.


ಇದನ್ನೂ ಓದಿ : ಬಹುಶಃ ಸಚಿನ್ ತೆಂಡೂಲ್ಕರ್ ಜೊತೆ ಮಾತನಾಡಿರಬಹುದು: ಸಚಿನ್ ಪೈಲಟ್ ಗರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...